ಬದುಕು ಭದ್ರಗೊಳಿಸಿದ ಮಹಿಳಾ ಸಂಘ
Team Udayavani, Mar 7, 2020, 3:47 PM IST
ಲಕ್ಷ್ಮೇಶ್ವರ: ಜಿಲ್ಲೆಯ ಶಿರಹಟ್ಟಿ ತಾಲೂಕಿನ ಮಾಗಡಿ ಗ್ರಾಮದ ಮಹಿಳಾ ಸ್ವ-ಸಹಾಯ ಸಂಘದ ಸದಸ್ಯರು ರಾಷ್ಟ್ರಮಟ್ಟದ ಪ್ರಶಸ್ತಿಗೆ ಭಾಜನ ರಾಗಿದ್ದಾರೆ. ಮಾಗಡಿಯ ರೇಣುಕಾದೇವಿ ಮಹಿಳಾ ಸ್ವ-ಸಹಾಯ ಸಂಘವು ಗ್ರಾಪಂ ಒಕ್ಕೂಟದ ನಿಧಿಯಿಂದ ಶೇ. 1, ಸ್ಥಳೀಯ ಬ್ಯಾಂಕ್ ಶೇ. 0.70 ಮತ್ತು ತಮ್ಮದೇ ಸಂಘದ ಉಳಿತಾಯ ನಿಧಿಯಿಂದ ಶೇ. 2 ನಂತೆ ಸಬ್ಸಿಡಿ ರಹಿತ ಸಾಲರೂಪದಲ್ಲಿ ಪಡೆದು ಸ್ವಯಂ ಉದ್ಯೋಗ ಕೈಗೊಳ್ಳುವ ಮೂಲಕ ಆರ್ಥಿಕ ಸ್ವಾವಲಂಬನೆ ಸಾಧಿಸಿ ರಾಷ್ಟ್ರ ಮಟ್ಟದ ಗಮನ ಸೆಳೆದಿದ್ದಾರೆ.
2012ಕ್ಕೆ ಪ್ರಾರಂಭವಾದ ರೇಣುಕಾದೇವಿ ಮಹಿಳಾ ಸ್ವ-ಸಹಾಯ ಸಂಘದಲ್ಲಿ ಒಟ್ಟು 12 ಜನ ಸದಸ್ಯರಿದ್ದು, ಬಹುತೇಕ ಹಿಂದುಳಿದ ವರ್ಗದವರೇ ಆಗಿದ್ದಾರೆ. ರೇಖಾ ತಳವಾರ, ಗೌರವ್ವ ಹೆಳವರ, ರತ್ನವ್ವ ತಳವಾರ, ದ್ಯಾಮವ್ವ ಶಿರುಂದ, ಗಿರಿಜವ್ವ ಮಲಗೌಡರ, ಶಿವವ್ವ ಭಜಂತ್ರಿ, ಲಕ್ಷ್ಮವ್ವ ಗುಂಜಳ, ಗೌರವ್ವ ಕಟ್ಟಿಮನಿ, ವಿಜಯಲಕ್ಷ್ಮೀ ಕುರ್ತಕೋಟಿ, ಚನ್ನಬಸವ್ವ ಹಿತ್ತಲಮನಿ, ಸುಮಾ ನಾಯಕ, ಫಕ್ಕೀರವ್ವ ವಡ್ಡರ ಇವರೇ 12 ಜನ ಸಾಧಕ ಮಹಿಳೆಯರು.
ಪ್ರಾರಂಭದಲ್ಲಿ ಪ್ರತಿ ಸದಸ್ಯರು ವಾರಕ್ಕೆ 20 ರೂ. ಗಳಂತೆ ಸೇರಿಸಿ ಸಂಘದ ಖಾತೆಗ ಜಮೆ ಮಾಡುತ್ತಾ ಕಡಿಮೆ ಮೊತ್ತದ ಸಾಲ ಸೌಲಭ್ಯ ಪಡೆದುಕೊಳ್ಳುತ್ತಿದ್ದರು. 2015ರಿಂದ ಗ್ರಾಪಂ ಮಟ್ಟದ ಒಕ್ಕೂಟದಲ್ಲಿ ಸೇರ್ಪಡೆಗೊಂಡು ಲಕ್ಷದ ವರೆಗೂ ಸಾಲ ಸೌಲಭ್ಯ ಪಡೆಯುವ ಮೂಲಕ ಟೇಲರಿಂಗ್, ಕಿರಾಣಿ ವ್ಯಾಪಾರ, ಹೋಟೆಲ್, ಕಸಬರಿಗೆ ತಯಾರಿಕೆ, ಕುರಿ ಸಾಕಾಣಿಕೆ, ಕೃಷಿ, ಹೈನುಗಾರಿಗೆ ಮಾಡುವ ಮೂಲಕ ಸ್ವಯಂ ಉದ್ಯೋಗದಲ್ಲಿ ತೊಡಗಿಸಿಕೊಂಡಿದ್ದಾರೆ.
ಕಳೆದ ಐದಾರು ವರ್ಷಗಳಿಂದ ಸಂಜೀವಿನಿ ಒಕ್ಕೂಟ, ಸ್ಥಳೀಯ ಕೆವಿಜಿ ಬ್ಯಾಂಕ್ ಮತ್ತು ಸಂಘದ ಉಳಿತಾಯ ಖಾತೆಯಿಂದ ಅನೇಕ ಬಾರಿ ಲಕ್ಷಾಂತರ ರೂ. ಸಾಲ ಪಡೆದು ಸಕಾಲಿಕ ಮರುಪಾವತಿ ಮಾಡುವ ಮೂಲಕ ಸಂಘ ಮತ್ತು ಸದಸ್ಯರು ಆರ್ಥಿಕ ಪ್ರಗತಿ ಹೊಂದುವಲ್ಲಿ ಶ್ರಮಿಸಿದ್ದಾರೆ. ಇದೀಗ ಸಂಘ ಒಟ್ಟು 50 ಲಕ್ಷದಷ್ಟು ವಹಿವಾಟು ನಡೆಸುವಷ್ಟು ಸಮರ್ಥವಾಗಿದೆ.
ಸಂಘದ ಮಹಿಳೆಯರು ಕೇವಲ ಸಾಲ ಪಡೆದು ಸ್ವಯಂ ಪ್ರಗತಿ ಹೊಂದುವುದಲ್ಲದೇ ಸರ್ಕಾರ, ಗ್ರಾಪಂ, ಸ್ಥಳೀಯ ಸಂಸ್ಥೆಗಳು ನಡೆಸುವ ಆರೋಗ್ಯ, ಶಿಕ್ಷಣ, ಮತದಾನ, ಸರ್ಕಾರದ ಯೋಜನೆಗಳ ಜಾಗೃತಿ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವ ಮೂಲಕ ಸಾಮಾಜಿಕ ಕಳಕಳಿ ಮೆರೆಯುತ್ತಿದ್ದಾರೆ. ಸಂಘದ ನಿಯಮಾವಳಿಗಳನ್ನು ಕಾಲಕಾಲಕ್ಕೆ ಅನುಸರಿಸುವ ಮೂಲಕ ಮಾಗಡಿ ಗ್ರಾಪಂ ವ್ಯಾಪ್ತಿಯಲ್ಲಿರುವ 64 ಅಷ್ಟೇ ಅಲ್ಲದೇ ಇಡೀ ರಾಜ್ಯದ ಮಹಿಳಾ ಸ್ವ-ಸಹಾಯ ಸಂಘಗಳಿಗೆ ಮಾದರಿಯಾಗಿದ್ದಾರೆ.
ಇವರ ಸೇವೆ, ಪ್ರಾಮಾಣಿಕ ಪ್ರಯತ್ನ, ಸಂಘದ ನಿರ್ವಹಣೆ, ಸರ್ಕಾರ ಉದ್ದೇಶ ಸಾಫಲ್ಯತೆಗೆ ಕಾರಣವಾಗಿರುವುದು ಸೇರಿ ಎಲ್ಲ ರೀತಿಯ ಮಾನದಂಡಗಳನ್ನು ಪರಿಗಣಿಸಿದ ಕೇಂದ್ರ ಸರ್ಕಾರ ಗ್ರಾಮೀಣಾಭಿವೃದ್ಧಿ ಮಂತ್ರಾಲಯ ದೀನದಯಾಳ್ ಅಂತ್ಯೋದಯ ಯೋಜನೆಯಡಿ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ ಮಾಗಡಿಯ ರೇಣುಕಾದೇವಿ ಮಹಿಳಾ ಸ್ವ-ಸಹಾಯ ಗುಂಪಿಗೆ ರಾಷ್ಟ್ರೀಯ ಪುರಸ್ಕಾರ ನೀಡುತ್ತಿದೆ. ಮಾ. 7ರಂದು ನವದೆಹಲಿಯ ವಿಜ್ಞಾನ ಭವನದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಕೇಂದ್ರ ಗ್ರಾಮೀಣಾಭಿವೃದ್ಧಿ ಮಂತ್ರಿಗಳು ಈ ಪುರಸ್ಕಾರ ನೀಡಲಿದ್ದಾರೆ.
ಸಂಕಷ್ಟದ ಪರಿಸ್ಥಿತಿಯಲ್ಲಿದ್ದ ನಮಗೆ ನಾವೇ ಸಮಾನ ಮನಸ್ಕರು ರಚಿಸಿಕೊಂಡ ಸ್ವ-ಸಹಾಯ ಸಂಘ ಬದುಕಿಗೆ ದಾರಿ ತೋರಿತು. ಸರ್ಕಾರ, ಬ್ಯಾಂಕ್ನ ಸಹಾಯದಿಂದ ಕಡಿಮೆ ಬಡ್ಡಿಯಲ್ಲಿ ಸಾಲ ಪಡೆದು ಚಹಾ ಅಂಗಡಿ ನಡೆಸುವ ಮೂಲಕ ನನ್ನ ಮೂರು ಹೆಣ್ಣು ಮಕ್ಕಳಿಗೆ ಸುಂದರ ಬದುಕು ಕಟ್ಟಿಕೊಡಲು ಸಾಧ್ಯವಾಗಿದೆ. ಆಗ ಏನೂ ಅರಿಯದ ನಾನು ಈಗ ಎಲ್ಲ ನಿಭಾಯಿಸ ಬಲ್ಲೆ ಎಂಬ ಆತ್ಮ ವಿಶ್ವಾಸಕ್ಕೆ ಸಂಘದ ಶಕ್ತಿಯೇ ಕಾರಣವಾಗಿದೆ. –ಗಿರಿಜಮ್ಮ ಹೆಳವರ, ರೇಣುಕಾದೇವಿ ಮಹಿಳಾ ಸ್ವ-ಸಹಾಯ ಸಂಘದ ಕಾರ್ಯದರ್ಶಿ
ರೇಣುಕಾದೇವಿ ಮಹಿಳಾ ಸ್ವ-ಸಹಾಯ ಸಂಘದ ಸದಸ್ಯರು ಇದೇ ಮೊದಲ ಬಾರಿ ರಾಷ್ಟ್ರ ಮಟ್ಟದ ಪ್ರಶಸ್ತಿಗೆ ಭಾಜನರಾಗಿರುವುದು ನಮ್ಮ ಜಿಲ್ಲೆಯ ಹೆಮ್ಮೆಯಾಗಿದೆ. ಜಿಲ್ಲೆಯಲ್ಲಿ 5,770 ಸಂಘಗಳಿದ್ದರೂ ಈ ಪುರಸ್ಕಾರ ಲಭಿಸಲು ಈ ಸಂಘ ಅನುಸರಿಸಿದ ಸೂತ್ರಗಳು, ಕೈಗೊಂಡ ಜೀವನೋಪಾಯ ಚಟುವಟಿಕೆಗಳು, ಅವರ ಸಾರ್ಥಕ ಬದುಕಿಗೆ ಮಾರ್ಗದರ್ಶನ ಮಾಡಿದ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಕಾರಣರಾಗಿದ್ದಾರೆ. -ಡಾ| ಕೆ. ಆನಂದ್, ಜಿಪಂ ಸಿಇಒ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು
Honeybee Attack: ಹೆಜ್ಜೇನು ದಾಳಿ: ಓರ್ವ ಮೃತ್ಯು, ಏಳು ಮಂದಿಗೆ ಗಾಯ
ಮತ್ತೆ ಎಲ್ಲೆಡೆ ಕಾಂಗ್ರೆಸ್ ಬಾವುಟ ರಾರಾಜಿಸುವುದು ಸೂರ್ಯ ಚಂದ್ರರಷ್ಟೇ ಸತ್ಯ: ಎಚ್.ಕೆ. ಪಾಟೀಲ
Gadag; ಬಸವರಾಜ ಬೊಮ್ಮಾಯಿ ಹಿಂದೆ ದೊಡ್ಡದೊಂದು ಲಗೇಜ್ ಇದೆ: ಎಚ್.ಕೆ.ಪಾಟೀಲ್
Gadag; ಹಾವೇರಿ ಲೋಕಸಭಾ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಅವರಿಂದ ಟೆಂಪಲ್ ರನ್
MUST WATCH
ಹೊಸ ಸೇರ್ಪಡೆ
Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್
Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ
AAP ‘ಮಹಾರ್ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್
Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ
Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’