ಪಂಚಾಕ್ಷರಿ ಗವಾಯಿಗಳ ರಾಷ್ಟ್ರೀಯ ಪ್ರಶಸ್ತಿ; ಸರ್ಕಾರಕ್ಕೆ ಅಭಿನಂದನೆ

10 ಲಕ್ಷ ರೂ. ನಗದು-ಸ್ಮರಣಿಕೆ, ಪ್ರತಿ ವರ್ಷ ಫೆ.2ರಂದು ಪ್ರದಾನ: ಡಾ| ಕಲ್ಲಯ್ಯಜ್ಜನವರು

Team Udayavani, May 20, 2022, 2:53 PM IST

13

ಗದಗ: ಅಂಧ, ಅನಾಥರ ಬಾಳಿಗೆ ಬೆಳಕಾದ ಗಾನಯೋಗಿ ಲಿಂ|ಪಂ|ಪಂಚಾಕ್ಷರಿ ಗವಾಯಿಗಳ ಸ್ಮರಣಾರ್ಥ ರಾಜ್ಯ ಸರ್ಕಾರ ರಾಷ್ಟ್ರೀಯ ಪ್ರಶಸ್ತಿ ಸ್ಥಾಪಿಸಿರುವುದು ಅತೀವ ಸಂತೋಷವನ್ನುಂಟು ಮಾಡಿದೆ ಎಂದು ವೀರೇಶ್ವರ ಪುಣ್ಯಾಶ್ರಮದ ಪೀಠಾಧಿಪತಿ ಡಾ|ಕಲ್ಲಯ್ಯಜ್ಜನವರು ಸರ್ಕಾರದ ನಿರ್ಧಾರ ಸ್ವಾಗತಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶದ ಸ್ವಾತಂತ್ರ್ಯ  ಪೂರ್ವದಲ್ಲೇ ಈ ಭಾಗದ ಅಂಧ, ಅನಾಥರ ಏಳ್ಗೆಗಾಗಿ ಹಾನಗಲ್ಲ ಶ್ರೀ ಕುಮಾರೇಶ್ವರ ಸ್ವಾಮಿಗಳ ಕೃಪಾಶೀರ್ವಾದದಿಂದ ಪಂ|ಪಂಚಾಕ್ಷರಿ ಗವಾಯಿಗಳು 1914ರಲ್ಲಿ ವೀರೇಶ್ವರ ಪುಣ್ಯಾಶ್ರಮ ಸ್ಥಾಪಿಸಿದರು.

ಲಕ್ಷಾಂತರ ಮಕ್ಕಳಿಗೆ ಆಶ್ರಯ ಕಲ್ಪಿಸಿ, ಉಚಿತ ವಸತಿ ಶಿಕ್ಷಣ, ಸಂಗೀತ ತರಬೇತಿ ನೀಡಲಾಗಿದೆ. ಅವರಲ್ಲಿ ಅನೇಕರು ಸಂಗೀತ ಕಲಾವಿದರಾಗಿ ದೇಶ-ವಿದೇಶಗಳಲ್ಲಿ ಖ್ಯಾತಿ ಪಡೆದಿದ್ದು, ವೀರೇಶ್ವರ ಪುಣ್ಯಾಶ್ರಮದ ಯಶಸ್ಸಿನ ಕೀರ್ತಿ ಪಂ|ಪಂಚಾಕ್ಷರಿ ಗವಾಯಿಗಳಿಗೆ ಸಲ್ಲುತ್ತದೆ ಎಂದರು.

ಪಂ| ಪಂಚಾಕ್ಷರಿ ಗವಾಯಿಗಳ ಹೆಸರಿನಲ್ಲಿ ಪ್ರಶಸ್ತಿ ಘೋಷಿಸಬೇಕೆಂದು ಪುಣ್ಯಾಶ್ರಮದ ಪ್ರಮುಖರ ನಿಯೋಗ ಈ ಹಿಂದೆ ಮುಖ್ಯಮಂತ್ರಿಯಾಗಿದ್ದ ಬಿ.ಎಸ್‌.ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಿತ್ತು. ಅದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿ, ಅಂದೇ ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ಶಿಫಾರಸು ಪತ್ರವನ್ನೂ ಕಳುಹಿಸಿದ್ದರು. ಕೆಲಸದ ಒತ್ತಡದ ಹಿನ್ನೆಲೆಯಲ್ಲಿ ಈ ಕಾರ್ಯ ಕೊಂಚ ವಿಳಂಬವಾಗಿದ್ದನ್ನು ಗಮನಿಸಿ ಸಾರಿಗೆ ಸಚಿವ ಶ್ರೀರಾಮುಲು, ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲ, ರೋಣ ಶಾಸಕ ಕಳಕಪ್ಪ ಬಂಡಿ ಹಾಗೂ ಬಿಜೆಪಿ ಯುವ ಮುಖಂಡ ಅನಿಲ್‌ ಮೆಣಸಿನಕಾಯಿ ಕೂಡಾ ಸರ್ಕಾರಕ್ಕೆ ಪತ್ರ ಬರೆದು, ಪ್ರಶಸ್ತಿ ಘೋಷಿಸಬೇಕೆಂದು ಮನವಿ ಮಾಡಿದ್ದರು.

ಅವರೆಲ್ಲರ ಪರಿಶ್ರಮದ ಫಲವಾಗಿ ರಾಜ್ಯ ಸರ್ಕಾರ ಲಿಂ|ಪಂ|ಗಾನಯೋಗಿ ಪಂಚಾಕ್ಷರಿ ಗವಾಯಿಗಳ ರಾಷ್ಟ್ರೀಯ ಪ್ರಶಸ್ತಿ ಸ್ಥಾಪಿಸಿ, ಮಾ.21ರಂದು ಆದೇಶ ಹೊರಡಿಸಿದೆ. ಸಿಎಂ ಬಸವರಾಜ ಬೊಮ್ಮಾಯಿ, ಕನ್ನಡ ಮತ್ತು ಸಂಸ್ಕƒತಿ ಇಲಾಖೆ ಸಚಿವ ಸುನೀಲಕುಮಾರ ಹಾಗೂ ಈ ಭಾಗದ ಜನಪ್ರತಿನಿಧಿಗಳ ಕ್ರಮ ಅಭಿನಂದನೀಯ ಎಂದರು.

ಪಂ|ಪಂಚಾಕ್ಷರಿ ಗವಾಯಿಗಳ ಜನ್ಮದಿನವಾದ ಫೆ.2ರಂದು ಈ ಪ್ರಶಸ್ತಿ ನೀಡಲು ಉದ್ದೇಶಿಸಿದ್ದು, 10 ಲಕ್ಷ ರೂ. ನಗದು ಸಹಿತ ಪ್ರಶಸ್ತಿ ಪತ್ರ, ಸ್ಮರಣಿಕೆಯನ್ನು ಹೊಂದಿರುತ್ತದೆ. 25ರಿಂದ 30 ವರ್ಷಗಳಿಗೂ ಹೆಚ್ಚು ಕಾಲ ದಕ್ಷಿಣ, ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತದಲ್ಲಿ ರಾಜ್ಯ ಮತ್ತು ರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿದ ಹಿರಿಯ ಕಲಾವಿದರಿಗೆ ಈ ಪ್ರಶಸ್ತಿ ನೀಡಲಾಗುತ್ತದೆ. ಪ್ರಶಸ್ತಿಗೆ ಆಯ್ಕೆಗೂ ಸರ್ಕಾರ ಉಪ ಸಮಿತಿ ರಚಿಸಲಿದೆ ಎಂದು ಆದೇಶ ಪತ್ರದಲ್ಲಿ ಉಲ್ಲೇಖೀಸಲಾಗಿದೆ. ಇದರಿಂದ ಪ್ರಶಸ್ತಿ ಆಯ್ಕೆಯೂ ಪಾರದರ್ಶಕವಾಗಲಿದ್ದು, ಪ್ರಶಸ್ತಿಯ ಗೌರವವೂ ಹೆಚ್ಚಲಿದೆ ಎಂದರು.

ಪಂ|ಪಂಚಾಕ್ಷರಿ ಗವಾಯಿಗಳ ಹೆಸರಲ್ಲಿ ರಾಷ್ಟ್ರೀಯ ಪ್ರಶಸ್ತಿ ಸ್ಥಾಪನೆಯಿಂದ ಪುಣ್ಯಾಶ್ರಮದ ಭಕ್ತರು ಹಾಗೂ ದೇಶ, ವಿದೇಶಗಳಲ್ಲಿರುವ ಸಂಗೀತ ಕಲಾವಿದರಲ್ಲಿ ಸಂಭ್ರಮ ಮೂಡಿದೆ. ಅದರಂತೆ ನಡೆದಾಡುವ ದೇವರು, ಅಂಧ, ಅನಾಥರ ಆಶಾಕಿರಣವಾಗಿದ್ದ ಪಂ|ಪುಟ್ಟರಾಜ ಕವಿ ಗವಾಯಿಗಳಿಗೆ ಭಾರತ ರತ್ನ ನೀಡಬೇಕು ಎಂಬುದು ಈ ಭಾಗದ ಜನರ ಬಹುದಿನಗಳ ಬೇಡಿಕೆಯಾಗಿದೆ. ಈ ನಿಟ್ಟಿನಲ್ಲಿ ಆದಷ್ಟು ಬೇಗ ಕೇಂದ್ರ ಸರ್ಕಾರ ಕ್ರಮ ಜರುಗಿಸಬೇಕೆಂದು ಒತ್ತಾಯಿಸಿದರು.

ಸುದ್ದಿಗೋಷ್ಠಿಯಲ್ಲಿ ಪಂ|ಸದಾಶಿವ ಪಾಟೀಲ, ಪಂ|ಹೇಮರಾಜ ಶಾಸ್ತ್ರೀ ಹೇಡಿಗೊಂಡ, ನಿಜಗುಣಿ ಗವಾಯಿಗಳು ದಿಂಡವಾರ, ಶಿವಲಿಂಗ ಶಾಸ್ತ್ರೀ ಸಿದ್ದಾಪೂರ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

1-gadaga

Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.