ಹಸರೀಕರಣ ಯೋಜನೆ ಪುನರುತ್ಥಾನವಾದೀತೇ?

ಗದಗ-ಬೆಟಗೇರಿ ಅವಳಿ ನಗರದಲ್ಲಿ ನಗರಸಭೆ ನೆಟ್ಟಿದ್ದ ಸಸಿ-ಹೂ ಗಿಡಗಳ ನಿರ್ವಹಣೆಯಲ್ಲಿ ನಿರ್ಲಕ್ಷ

Team Udayavani, Mar 27, 2022, 3:48 PM IST

16

ಗದಗ: ಗದಗ-ಬೆಟಗೇರಿ ಅವಳಿ ನಗರದ ಪ್ರಮುಖ ಮಾರ್ಗಗಳಲ್ಲಿ ನಗರಸಭೆಯಿಂದ ವರ್ಷಗಳ ಹಿಂದೆ ನೆಟ್ಟಿದ್ದ ಸಸಿ, ಹೂ ಗಿಡಗಳು ನಿರ್ವಹಣೆ ಇಲ್ಲದೇ ಹಾನಿಗೀಡಾಗಿವೆ. ಆದರೆ, ಅವಳಿ ನಗರದ ರಸ್ತೆ ವಿಭಜಕಗಳು ಹಾಗೂ ಪ್ರಮುಖ ಬೀದಿಗಳಲ್ಲಿ ಹೂ ಗಿಡಗಳೊಂದಿಗೆ ನೆರಳು ನೀಡುವ ಮರಗಳನ್ನು ಬೆಳೆಸುವ ಮೂಲಕ ಹಸಿರೀಕರಣಕ್ಕೆ ಒತ್ತು ನೀಡಬೇಕಿದೆ.

ಈ ನಿಟ್ಟಿನಲ್ಲಿ ಗದಗ-ಬೆಟಗೇರಿ ನಗರಸಭೆಯ ಮುಂಬರುವ ಬಜೆಟ್‌ನಲ್ಲಿ ಅಗತ್ಯ ಅನುದಾನ ಮೀಸಲಿಡಬೇಕಿದೆ. ಕಳೆದ ಅವಧಿಯಲ್ಲಿ ನಗರಸಭೆ ಅಧ್ಯಕ್ಷರಾಗಿದ್ದ ಪೀರಸಾಬ ಕೌತಾಳ ಹಾಗೂ ಬಿ.ಬಿ.ಅಸೂಟಿ ಅವರ ಅವಧಿಯಲ್ಲಿ ನಗರದ ಸೌಂದರ್ಯೀಕರಣ ಹಾಗೂ ಹಸಿರೀಕರಣಕ್ಕೆ ಒತ್ತು ನೀಡಲಾಗಿತ್ತು. ನಗರದ ಕಾರ್ಯಪ್ಪ ವೃತ್ತದಿಂದ ರಾಣಿ ಚೆನ್ನಮ್ಮ ವೃತ್ತ, ಚೆನ್ನಮ್ಮ ವೃತ್ತದಿಂದ ಮುಳಗುಂದ ನಾಕಾ ಮಾರ್ಗವಾಗಿ ಬಿಂಕದಕಟ್ಟಿ ಮೃಗಾಲಯದ ಕ್ರಾಸ್‌ ವರೆಗೆ ಹಾಗೂ ಗಂಗಿಮಡಿ ಸರ್ಕಲ್‌ನಿಂದ ಮುಂಡರಗಿ ರಸ್ತೆಯಲ್ಲಿರುವ ತೋಂಟದಾರ್ಯ ಎಂಜಿನಿಯರಿಂಗ್‌ ಕಾಲೇಜು ವೃತ್ತದವರೆಗೆ ಹಾಗೂ ಮುಂಡರಗಿ ಕ್ರಾಸ್‌ ನಿಂದ ಪುನಃ ಕಾರ್ಯಪ್ಪ ವೃತ್ತ(ಹಳೇ ಡಿಸಿ ಆಫೀಸ್‌) ವರೆಗೆ ಸೇರಿದಂತೆ 11 ದ್ವಿಪಥ ರಸ್ತೆಗಳಲ್ಲಿ 14 ಕಿ.ಮೀ. ಉದ್ದದಷ್ಟು ರಸ್ತೆಗಳಲ್ಲಿ 80 ಲಕ್ಷ ರೂ. ಹಸಿರೀಕರಣ ಕಾಮಗಾರಿ ಕೈಗೊಳ್ಳಲಾಗಿತ್ತು.

ನಗರದ ಭೀಷ್ಮಕೆರೆಗೆ ಹೊಂದಿಕೊಂಡಿರುವ ಕಾರ್ಯಪ್ಪ ವೃತ್ತದಿಂದ ರಾಣಿ ಚೆನ್ನಮ್ಮ ವೃತ್ತದವರೆಗೆ ಹಾಗೂ ಜಿಲ್ಲಾಡಳಿತ ಭವನದಿಂದ ಬಿಂಕದ ಕಟ್ಟಿ ಸಣ್ಣ ಮೃಗಾಯಲದ ಕ್ರಾಸ್‌ ವರೆಗೆ ಈಗಾಗಲೇ ನಗರಸಭೆಯಿಂದ ಜಾನುವಾರುಗಳು ತಿನ್ನಲಾಗದ ಪೈಕಾಸ್‌, ಪಂಡಾ, ಪ್ರಿಸ್ಟಪಾಮ್‌, ವೈಟಪಾಮ್‌, ತುಳಜಾ ಹಾಗೂ ಹೆಜ್ವಾಡ ತಳಿಯ ಸುಮಾರು 500 ಸಸಿಗಳನ್ನು ನೆಡಲಾಗಿತ್ತು.

ಜನರಲ್‌ ಕಾರ್ಯಪ್ಪ ಸರ್ಕಲ್‌ನಿಂದ ಕಿತ್ತೂರು ರಾಣಿ ಚನ್ನಮ್ಮ ವೃತ್ತಕ್ಕೆ ಸಂಪರ್ಕ ಕಲ್ಪಿಸುವ ಭೀಷ್ಮಕೆರೆ ಮಾರ್ಗದಲ್ಲಿ ಮಾತ್ರ ಬೆರಳೆಣಿಕೆಯಷ್ಟು ಗಿಡಗಳು ಸಮೃದ್ಧವಾಗಿ ಬೆಳೆದು ನಿಂತಿವೆ. ಇನ್ನುಳಿದೆಡೆ ಗಿಡಗಳಿಗೆ ರಕ್ಷಣೆ ಹಾಗೂ ಸೂಕ್ತ ನಿರ್ವಹಣೆ ಇಲ್ಲದೇ ಹಾನಿಗೀಡಾಗಿವೆ. ಜೊತೆಗೆ ಹವಾಮಾನ ವೈಪರಿತ್ಯ ಹಾಗೂ ಬಿಡಾಡಿ ದನಗಳ ಹಾವಳಿಯಿಂದಾಗಿ ಸಸಿಗಳು ಹಾನಿಗೀಡಾಗಿದ್ದು, ಲಕ್ಷಾಂತರ ರೂಪಾಯಿ ಅನುದಾನ ವ್ಯರ್ಥವಾಗಿದೆ.

ತಜ್ಞರ ವರದಿಯಂತೆ ಗಿಡ ಬೆಳೆಸಿ: ಅವಳಿ ನಗರದಲ್ಲಿ ನಗರಸಭೆಯಿಂದ ನಡೆಸಿದ ಹಸಿರೀಕರಣದ ಪ್ರಯತ್ನ ನಿರೀಕ್ಷಿತ ಫಲ ನೀಡದ ಕಾರಣ ಕೆಲ ವರ್ಷಗಳಿಂದ ಶಾಸಕ ಎಚ್‌.ಕೆ.ಪಾಟೀಲ ಅವರು ತಜ್ಞರ ಮೂಲಕ ನಗರದಲ್ಲಿ ಸಮೀಕ್ಷೆ ನಡೆಸಿದ್ದರು. ನಿವೃತ್ತ ಅರಣ್ಯಾಧಿಕಾರಿಗಳು, ಸರಕಾರದ ವಿವಿಧ ಇಲಾಖೆಗಳ ನಿವೃತ್ತ ಹಾಗೂ ಸೇವಾ ನಿರತ ಅಭಿಯಂತರರು ಆ ತಂಡದಲ್ಲಿದ್ದು, ಮುಂದಿನ 50 ವರ್ಷಗಳ ದೂರದೃಷ್ಟಿಯೊಂದಿಗೆ ಅವಳಿ ನಗರದ ಪ್ರಮುಖ ರಸ್ತೆಗಳಲ್ಲಿ ವೈಜ್ಞಾನಿಕವಾಗಿ ಅಧ್ಯಯನ ನಡೆಸಿದ್ದರು.

ಅವಳಿ ನಗರದಲ್ಲಿ ಹಸಿರೀಕರಣ ಹೇಗಿರಬೇಕು ಎಂಬುದರ ಬಗ್ಗೆ ಸಮಗ್ರ ಮಾಹಿತಿಯುಳ್ಳ ವರದಿಯೊಂದನ್ನು ನಗರಸಭೆ ಅಧಿ ಕಾರಿಗಳಿಗೆ ಒದಗಿಸಿದ್ದರು ಎನ್ನಲಾಗಿದೆ. ಉತ್ತರ ಕರ್ನಾಟಕದ ಸಹ್ಯಾದ್ರಿ ಕಪ್ಪತ್ತಗುಡ್ಡದ ಕಾರಣದಿಂದಾಗಿ ದೇಶದಲ್ಲೇ ಪರಿಶುದ್ಧ ಗಾಳಿ ಹೊಂದಿರುವ ನಂ.1 ಸ್ಥಾನ ಗದಗಿಗೆ ಲಭಿಸಿದೆ. ಆದರೆ, ಅವಳಿ ನಗರ ದಲ್ಲಿ ಹಸಿರು ವನ ಹಾಗೂ ಗಿಡಗಳೂ ಇಲ್ಲ. ಈ ಹಿನ್ನೆಲೆಯಲ್ಲಿ ಅವಳಿ ನಗರದಲ್ಲಿ ವೈಜ್ಞಾನಿಕವಾಗಿ ಹಸಿರೀಕರಣಕ್ಕೆ ಒತ್ತು ನೀಡಬೇಕಿದೆ ಎಂಬುದು ಸಾರ್ವಜನಿಕರ ಒತ್ತಾಯ.

 

ಅವಳಿ ನಗರದ ಪ್ರಮುಖ ರಸ್ತೆಗಳಲ್ಲಿದ್ದ ಗಿಡಗಳನ್ನು ರಸ್ತೆ ಅಗಲೀಕರಣ, ಯುಜಿಡಿ ಹಾಗೂ 24*7 ಮತ್ತಿತರೆ ಯೋಜನೆಗಳ ಹೆಸರಲ್ಲಿ ಗಿಡಗಳನ್ನು ನಾಶಪಡಿಸಲಾಗಿದೆ. ವರ್ಷದಿಂದ ವರ್ಷಕ್ಕೆ ಮರಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಬಿರು ಬೇಸಿಗೆಯಲ್ಲಿ ರಸ್ತೆ ಬದಿಗೆ ನಿಲ್ಲಲು ಮರಗಳೇ ಇಲ್ಲದಂತಾಗಿದೆ. ಕಳೆದ ಎರಡು ವರ್ಷಗಳಿಂದ ನಗರಸಭೆಯಲ್ಲಿ ಚುನಾಯಿತ ಪ್ರತಿನಿಧಿಗಳಿಲ್ಲದೇ ಜನರ ಬೇಕು, ಬೇಡಗಳನ್ನು ಕೇಳುವವರೇ ಇಲ್ಲದಂತಾಗಿತ್ತು. ಈ ಬಾರಿಯ ಬಜೆಟ್‌ನಲ್ಲಿ ನಗರಸಭೆ ಅಗತ್ಯ ಕ್ರಮ ಕೈಗೊಳ್ಳಬೇಕು.

ಯುಸೂಫ್‌ ಎನ್‌. ಡಂಬಳ, ಸಾಮಾಜಿಕ ಕಾರ್ಯಕರ್ತ

 

ಗದಗ-ಬೆಟಗೇರಿ ನಗರಸಭೆ ಅವಳಿ ನಗರದ ಅಭಿವೃದ್ಧಿಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಗದಗ-ಬೆಟಗೇರಿಯನ್ನು ಮಾದರಿ ನಗರವನ್ನಾಗಿಸುವ ಚಿಂತನೆ ಹೊಂದಿದ್ದು, ನಗರದ ದರ್ಯೀಕರಣ ಹಾಗೂ ಹಸಿರೀಕರಣಕ್ಕೆ ನಗರಸಭೆ ಬಜೆಟ್‌ನಲ್ಲಿ ಅಗತ್ಯ ಅನುದಾನ ಒದಗಿಸಲಾಗುತ್ತದೆ. ಅಲ್ಲದೇ, ಯೋಜನೆಯನ್ನು ಸಮರ್ಪಕ ಅನುಷ್ಠಾನಗೊಳಿಸುವ ಪ್ರಯತ್ನಿಸಲಾಗುತ್ತದೆ.

ಉಷಾ ಮಹೇಶ ದಾಸರ, ನಗರಸಭೆ ಅಧ್ಯಕ್ಷೆ

ಟಾಪ್ ನ್ಯೂಸ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.