ನಾಮಕೇವಾಸ್ತೆಯಾದ ಹೊಸ ತಾಲೂಕು

ವರ್ಷಗಳು ಕಳೆದರೂ ಆರಂಭಗೊಳ್ಳದ ವಿವಿಧ ಇಲಾಖೆಗಳು

Team Udayavani, May 19, 2022, 4:09 PM IST

15

ಗದಗ: ದಶಕಗಳ ಹೋರಾಟ ಮತ್ತು ಜನಸ್ನೇಹಿ ಆಡಳಿತದ ಕನಸಿನೊಂದಿಗೆ ಜನ್ಮತಳೆದ ಜಿಲ್ಲೆಯ ಲಕ್ಷ್ಮೇಶ್ವರ, ಗಜೇಂದ್ರಗಡ ನೂತನ ತಾಲೂಕುಗಳು ವರ್ಷಗಳು ಕಳೆದರೂ ಪೂರ್ಣ ಪ್ರಮಾಣದಲ್ಲಿ ಜನ ಸೇವೆಗೆ ಸಿದ್ಧಗೊಂಡಿಲ್ಲ. ಕಂದಾಯ ಸೇರಿದಂತೆ ನಾಲ್ಕೈದು ಇಲಾಖೆಗಳ ಹೊರತಗಿ ಎಲ್ಲದಕ್ಕೂ ಮಾತೃ ತಾಲೂಕಿಗೆ ಓಡುವ ಅನಿವಾರ್ಯತೆಗೆ ಪೂರ್ಣ ವಿರಾಮ ಬಿದ್ದಿಲ್ಲ. ಹೀಗಾಗಿ, ನೂತನ ತಾಲೂಕುಗಳ ತೆವಳುತ್ತ, ಕುಂಟುತ್ತಾ ಸಾಗಿರುವುದು ಸ್ಥಳೀಯರನ್ನು ಪೇಚಿಗೆ ಸಿಲುಕಿಸಿದೆ.

2017ರಲ್ಲಿ ರಾಜ್ಯ ಸರ್ಕಾರ ಘೊಷಿಸಿದ 49 ತಾಲೂಕುಗಳಲ್ಲಿ ಜಿಲ್ಲೆಯ ಲಕ್ಷ್ಮೇಶ್ವರ ಮತ್ತು ಗಜೇಂದ್ರಗಡ ಕೂಡಾ ಒಳಗೊಂಡಿವೆ. ಜಿಲ್ಲೆಯ ಪ್ರಮುಖ ವಾಣಿಜ್ಯ ಕೇಂದ್ರಗಳಾಗಿರುವ ಈ ಪಟ್ಟಣಗಳನ್ನು ತಾಲೂಕು ಕೇಂದ್ರವನ್ನಾಗಿಸಿ, ನೂತನ ತಾಲೂಕುಗಳನ್ನು ರಚಿಸಬೇಕು ಎಂಬುದು ಆ ಭಾಗದ ಜನರ ವರ್ಷಗಳ ಬೇಡಿಕೆಯಾಗಿತ್ತು. ಅದಕ್ಕಾಗಿ ನಿರಂತರ ಹೋರಾಟಗಳೂ ನಡೆದಿದ್ದವು. ಅದಕ್ಕೆ ಸ್ಪಂದಿಸಿದ್ದ ಅಂದಿನ ಸರ್ಕಾರ ಜಿಲ್ಲೆಗೆ ಎರಡು ಸ್ವತಂತ್ರ ತಾಲೂಕುಗಳನ್ನು ಘೊಷಿಸಿತ್ತು. ಅಲ್ಲದೇ, ಅವು ಒಂದೇ ವರ್ಷದಲ್ಲಿ ಪೂರ್ಣ ಪ್ರಮಾಣದಲ್ಲಿ ಕಾರ್ಯನಿರ್ವಯಿಸುವಂತೆ ಅಗತ್ಯ ಸೌಲಭ್ಯ ಕಲ್ಪಿಸಲಾಗುತ್ತದೆ ಎಂದು ಅಂದಿನ ನಾಯಕರು ಭರವಸೆ ನೀಡಿದ್ದರು.

ಹೊಸ ತಾಲೂಕುಗಳಿಗೆ ಕೋವಿಡ್‌ ಕೊಕ್ಕೆ: ಆದರೆ, ಬದಲಾದ ರಾಜಕೀಯ ವಿದ್ಯಾಮಾನ, ರಾಜ್ಯದಲ್ಲಿ ಆವರಿಸಿದ ಅತಿವೃಷ್ಟಿ ಹಾಗೂ ಮಹಾಮಾರಿ ಕೋವಿಡ್‌ ಸೋಂಕಿನಿಂದಾಗಿ ನೂತನ ತಾಲೂಕುಗಳ ಅಭಿವೃದ್ಧಿಪರ ಹೆಜ್ಜೆಗೆ ಹಿನ್ನಡೆಯಾಗಿದೆ. ಇತ್ತೀಚೆಗೆ ನೂತನ ತಾಲೂಕುಗಳಲ್ಲಿ ಮಿನಿ ವಿಧಾನಸೌಧ ನಿರ್ಮಾಣಕ್ಕೆ ರಾಜ್ಯ ಸರ್ಕಾರ ಪ್ರಸ್ತಾವನೆ ಪಡೆದಿದೆ. ಕಟ್ಟಡ ನಿರ್ಮಾಣಕ್ಕೆ ತಲಾ 10 ಕೋಟಿ ರೂ. ನಿಗದಿಪಡಿಸಿದೆಯಾದರೂ, ಇನ್ನೂ ಅನುದಾನ ಬಿಡುಗಡೆ ಮಾಡಿಲ್ಲ.

ಕಂದಾಯ ಇಲಾಖೆಗೆ ಸೀಮಿತ: ಜಿಲ್ಲೆಯ ಲಕ್ಷ್ಮೇಶ್ವರ ಹಾಗೂ ಗಜೇಂದ್ರಗಡ ತಾಲೂಕುಗಳು ಘೋಷಣೆಯಾಗಿ ಸುಮಾರು ನಾಲ್ಕೈದು ವರ್ಷಗಳು ಕಳೆಯುತ್ತಿದ್ದರೂ, ಪೂರ್ಣ ಪ್ರಮಾಣದಲ್ಲಿ ಸಜ್ಜುಗೊಂಡಿಲ್ಲ. ಲಕ್ಷ್ಮೇಶ್ವರದಲ್ಲಿ ಈ ಹಿಂದೆ ಸ್ಥಾಪನೆಗೊಂಡಿದ್ದ ಖಜಾನೆ, ಉಪನೋಂದಣಾಕಾರಿಗಳ ಕಚೇರಿ ಜೊತೆಗೆ ಭೂ ದಾಖಲೆಗಳ ಕಚೇರಿಯಲ್ಲಿ ತಾತ್ಕಾಲಿಕವಾಗಿ ತಹಶೀಲ್ದಾರ್‌ ಕಚೇರಿ ಆರಂಭಿಸಿದ್ದು, ತಾ.ಪಂ. ಕಚೇರಿಯನ್ನು ಹೊಸದಾಗಿ ನಿರ್ಮಿಸಲಾಗಿದೆ. ಜೊತೆಗೆ ಜಿ.ಪಂ. ನರೇಗಾ ವಿಭಾಗದಲ್ಲಿ ಸಹಾಯಕ ನಿರ್ದೇಶಕರನ್ನು ಲಕ್ಷ್ಮೇಶ್ವರ ತಾಪಂ ಇಒ ಹುದ್ದೆಗೆ ಪ್ರಭಾರಿಯನ್ನಾಗಿ ನೇಮಿಸಿದ್ದೇ ಈವರೆಗಿನ ಸಾಧನೆ ಎನ್ನುವಂತಾಗಿದೆ.

ತಹಶೀಲ್ದಾರ್‌ ಕಚೇರಿಯಲ್ಲಿ ತಕ್ಕಮಟ್ಟಿಗೆ ಸಿಬ್ಬಂದಿ ಇಲ್ಲ. ಜೊತೆಗೆ ನಾಲ್ಕೈದು ಗ್ರಾಮ ಲೆಕ್ಕಾ ಕಾರಿಗಳ ಹುದ್ದೆಗಳು ಖಾಲಿ ಇದ್ದು, ನೂತನ ತಾಲೂಕು ಆಡಳಿತ ನಿರ್ವಹಣೆಗೆ ತೊಡಕಾಗಿ ಪರಿಣಮಿಸಿದೆ. ಈ ಹಿನ್ನೆಲೆಯಲ್ಲಿ ಕನಿಷ್ಟ ಪಕ್ಷ ಅಗತ್ಯ ಪ್ರಮಾಣದಲ್ಲಿ ಗ್ರಾಮ ಲೆಕ್ಕಾಧಿಕಾರಿಗಳನ್ನು ಒದಗಿಸುವಂತೆ ಜಿಲ್ಲಾಡಳಿತಕ್ಕೆ ಕೋರಿಕೆ ಸಲ್ಲಿಸಲಾಗಿದೆ ಎಂದು ತಿಳಿದು ಬಂದಿದೆ.

ಗಜೇಂದ್ರಗಡದ ಪರಿಸ್ಥಿತಿಯೂ ಇದಕ್ಕಿಂತ ಭಿನ್ನವಾಗಿಲ್ಲ. ಪ್ರವಾಸಿ ಮಂದಿರದಲ್ಲಿ ತಹಶೀಲ್ದಾರ್‌ ಕಚೇರಿ ಆರಂಭಿಸಲಾಗಿದೆ. ಜೊತೆಗೆ ಹೊಸದಾಗಿ ಉಪಖಜಾನೆ, ತಾಪಂ ನೂತನ ಕಟ್ಟಡಗಳನ್ನು ನಿರ್ಮಿಸಲಾಗಿದೆ. ಆದರೆ, ಅಗತ್ಯ ಸಿಬ್ಬಂದಿ, ಕಂಪ್ಯೂಟರ್‌, ಪೀಠೊಪಕರಣಗಳ ಕೊರತೆ ಎದುರಿಸುತ್ತಿವೆ.

ಇತರೆ ಇಲಾಖೆಗಳ ಮಾತೇ ಇಲ್ಲ: ನೂತನ ತಾಲೂಕುಗಳಾಗಿ ವರ್ಷಗಳು ಕಳೆಯುತ್ತಿದ್ದರೂ, ಕಂದಾಯ ಮತ್ತು ತಾ.ಪಂ. ಹೊರತಾಗಿ ಇನ್ನಿತರೆ ಇಲಾಖೆಗಳನ್ನು ಆರಂಭಿಸುವ ಬಗ್ಗೆ ಸರ್ಕಾರ ಚಕಾರವೆತ್ತುತ್ತಿಲ್ಲ. ಹೀಗಾಗಿ, ಕೃಷಿ, ಅಗ್ನಿಶಾಮಕ, ಸಿಪಿಐ ಕಚೇರಿ, ಅರಣ್ಯ, ತೋಟಗಾರಿಕೆ, ಕಾರ್ಮಿಕ, ಶಿಕ್ಷಣ, ಆರೋಗ್ಯ ಸೇರಿದಂತೆ ಹತ್ತಾರು ಇಲಾಖೆಗಳಲ್ಲಿ ಈಗಾಗಲೇ ಸಿಬ್ಬಂದಿ ಕೊರತೆಯಿದೆ. ವಿವಿಧ ಇಲಾಖೆಗಳಲ್ಲಿ ಹಲವು ವರ್ಷಗಳಿಂದ ನೇಮಕಾತಿಯೇ ನಡೆದಿಲ್ಲ. ಇದರ ನಡುವೆ ಹೊಸ ತಾಲೂಕುಗಳಿಗೆ ಅಧಿಕಾರಿ ಮತ್ತು ಸಿಬ್ಬಂದಿಯನ್ನು ಒದಗಿಸುವುದು ಸವಾಲಿನ ಕೆಲಸವೆಂದು ಭಾವಿಸಿರುವ ಸರ್ಕಾರ, ಹಳೇ ತಾಲೂಕಿನ ಅಧಿಕಾರಿಗಳ ಮೂಲಕವೇ ಆಡಳಿತವನ್ನು ಮುಂದುವರಿಸಿದೆ. ಪರಿಣಾಮ ನೂತನ ತಾಲೂಕು ರಚನೆಯಿಂದ ಸಿಗಬಹುದಾದ ಸೇವೆ ಮತ್ತು ಸೌಲಭ್ಯಗಳಿಂದ ಸ್ಥಳೀಯರು ವಂಚಿತರಾಗುತ್ತಿದ್ದಾರೆ.

ತಾಲೂಕು ಆಸ್ಪತ್ರೆಯಾಗಿ ಉನ್ನತೀಕರಣವಾಗಬೇಕಿದ್ದ ಉಭಯ ತಾಲೂಕಿನ ಸಮುದಾಯ ಆರೋಗ್ಯ ಕೇಂದ್ರಗಳು ಯಥಾಸ್ಥಿತಿಯಲ್ಲಿ ಮುಂದುವರಿ ದಿವೆ. ಹೆಚ್ಚಿನ ಹಾಸಿಗೆ ಇಲ್ಲದೇ, ಗುಣಮಟ್ಟದ ಚಿಕಿತ್ಸೆಗಾಗಿ ಜನರು ಹಳೇ ತಾಲೂಕಿನ ಸರ್ಕಾರಿ ಆಸ್ಪತ್ರೆ ಅಥವಾ ಖಾಸಗಿ ಆಸ್ಪತ್ರೆಗಳ ಮೊರೆ ಹೋಗುವಂತಾಗಿದೆ.

ಹೊಸ ತಾಲೂಕುಗಳ ಬಗ್ಗೆ ಅಸಡ್ಡೆ? ಜಿಲ್ಲೆಯ ಲಕ್ಷ್ಮೇಶ್ವರ ಮತ್ತು ಗಜೇಂದ್ರಗಡ ಹೊಸ ತಾಲೂಕುಗಳಾಗಿ ಅಸ್ಥಿತ್ವಕ್ಕೆ ಬಂದು ವರ್ಷಗಳು ಕಳೆಯುತ್ತಿವೆ. ಮಿನಿ ವಿಧಾನಸೌಧಕ್ಕೆ ಜಾಗ ಗುರುತಿಸುವಂತೆ ಸೂಚಿಸಿರುವ ಸರ್ಕಾರ, ಇತರೆ ಇಲಾಖೆಗಳಿಂದ ತಾಲೂಕು ಕಚೇರಿಗಳ ಸ್ಥಾಪನೆ, ಸ್ವಂತ ಕಟ್ಟಡಗಳ ನಿರ್ಮಾಣಕ್ಕೆ ಜಾಗ ಗುರುತಿಸುವಂಥ ಯಾವುದೇ ಪ್ರಕ್ರಿಯೆಗಳಿಗೆ ಚಾಲನೆ ನೀಡಿಲ್ಲ. ಹಳೇ ತಾಲೂಕಿನ ಅಧಿಕಾರಿಗಳನ್ನೇ ನೆಚ್ಚಿಕೊಳ್ಳುವಂತಾಗಿದೆ.

ಭೂ ದಾಖಲೆಗಳಿಗೆ ಪರದಾಟ: ಹೊಸ ತಾಲೂಕುಗಳಲ್ಲಿ ತಹಶೀಲ್ದಾರ್‌ ಕಚೇರಿ ಮಾತ್ರ ಅಧಿಕೃತವಾಗಿ ಕಾರ್ಯನಿರ್ವಹಿಸುತ್ತಿದ್ದು, ಸದ್ಯಕ್ಕೆ ಪಹಣಿ ನೀಡುವುದು, ಜಾತಿ ಮತ್ತು ಆದಾಯ ಪ್ರಮಾಣ ಪತ್ರಗಳ ವಿಲೇವಾರಿ ಮಾಡಲಾಗುತ್ತಿದೆ. ಇನ್ನುಳಿದ ಜಮೀನುಗಳಿಗೆ ಸಂಬಂಸಿ ಅರ್ಜಿಗಳ ವಿಲೇವಾರಿಗೆ ದಾಖಲೆಗಳೇ ಲಭ್ಯವಿಲ್ಲ. ಹೀಗಾಗಿ, ಲಕ್ಷ್ಮೇಶ್ವರಕ್ಕೆ ಸಂಬಂಧಿಸಿದ ಕಡತಗಳಿಗಾಗಿ ಶಿರಹಟ್ಟಿ ಹಾಗೂ ಗಜೇಂದ್ರಗಡ ತಾಲೂಕಿನ ಕಡತಗಳಿಗಾಗಿ ರೋಣ ಕಚೇರಿಗೆ ಅಲೆದಾಟ ತಪ್ಪುತ್ತಿಲ್ಲ. ಇದರಿಂದಾಗಿ ಕೆಲವೊಮ್ಮೆ ತಹಶೀಲ್ದಾರರು ತುರ್ತು ನಿರ್ಧಾರ ಕೈಗೊಳ್ಳಲು ಸಾಧ್ಯವಾಗದು ಎಂಬುದು ರೈತರ ಅಳಲು.

ಅನುದಾನದ ಕೊರತೆ ಇಲ್ಲ: ಗಜೇಂದ್ರಗಡ ಹಾಗೂ ಲಕ್ಷ್ಮೇಶ್ವರ ತಾಲೂಕುಗಳಿಗೆ ಕಳೆದ ಒಂದು ವರ್ಷದಿಂದ ಅನುದಾನದ ಕೊರತೆ ಇಲ್ಲ. ಕಚೇರಿಗೆ ಬೇಕಿರುವ ಸ್ಟೇಷನರಿ ಮತ್ತು ತಾಲೂಕು ಮಟ್ಟದ ವಿಪತ್ತು ನಿರ್ವಹಣಾ ಖಾತೆಗೆ ಸರ್ಕಾರದಿಂದ ನೇರವಾಗಿ ಹಣ ಜಮಾ ಆಗುತ್ತಿದೆ. ಇತ್ತೀಚೆಗೆ ಲಕ್ಷ್ಮೇಶ್ವರ ತಾಲೂಕಿನಲ್ಲಿ ಸಿಡಿಲು ಬಡಿದು ಎತ್ತುಗಳು ಮೃತಪಟ್ಟಿದ್ದರಿಂದ ಮಾಲೀಕರಿಗೆ ಎರಡು ದಿನದಲ್ಲಿ ಪರಿಹಾರ ಪಾವತಿಸಲಾಗಿದೆ ಎನ್ನುತ್ತಾರೆ ಲಕ್ಷ್ಮೇಶ್ವರ ತಹಶೀಲ್ದಾರ್‌ ಪರಶುರಾಮ ಸತ್ತಿಗೇರಿ..

ಬಹುದೊಡ್ಡ ಕನಸಿನೊಂದಿಗೆ ಹೊಸ ತಾಲೂಕುಗಳು ರಚನೆಯಾಗಿವೆ. ಆದರೆ, ಇಂದಿನ ಬಿಜೆಪಿ ಸರ್ಕಾರ ಅವುಗಳ ಸಬಲೀಕರಣಕ್ಕೆ ಒತ್ತು ನೀಡುತ್ತಿಲ್ಲ. ಹೊಸ ತಾಲೂಕುಗಳು ರಚನೆಯಾದರೂ, ಹಳೇ ತಾಲೂಕು ಕೇಂದ್ರಕ್ಕೆ ಅಲೆದಾಡ ತಪ್ಪುತ್ತಿಲ್ಲ. ಕಾಟಾಚಾರಕ್ಕೆ ಮುರ್‍ನಾಲ್ಕು ಕಚೇರಿಗಳನ್ನು ಆರಂಭಿಸಿದ್ದು ಬಿಟ್ಟರೆ, ಮತ್ಯೇನೂ ಇಲ್ಲ. ಹೊಸ ತಾಲೂಕುಗಳು ಹೆಸರಿಗೆ ಸೀಮಿತವಾಗಿವೆ. –ಮಾರುತಿ ಚಿಟಗಿ, ಸಿಐಟಿಯು ಮುಖಂಡರು  

-ವೀರೇಂದ್ರ ನಾಗಲದಿನ್ನಿ

ಟಾಪ್ ನ್ಯೂಸ್

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

ನಮ್ಮದು ಬಡವರಿಗೆ ಬದುಕು ಕಟ್ಟಿ ಕೊಡುವ ಪ್ರಣಾಳಿಕೆ: ಬಸವರಾಜ ಬೊಮ್ಮಾಯಿ

Gadag; ನಮ್ಮದು ಬಡವರಿಗೆ ಬದುಕು ಕಟ್ಟಿ ಕೊಡುವ ಪ್ರಣಾಳಿಕೆ: ಬಸವರಾಜ ಬೊಮ್ಮಾಯಿ

1-wqeqweqwe

Panchmasali ಸಮಾಜಕ್ಕೆ ಬಿಜೆಪಿಯಿಂದ ಅನ್ಯಾಯ: ವಚನಾನಂದ ಸ್ವಾಮೀಜಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.