ವಾರದಿಂದ ಬನಹಟ್ಟಿ ಗ್ರಾಮಕ್ಕಿಲ್ಲ ಬಸ್‌ ಸಂಚಾರ


Team Udayavani, Oct 27, 2019, 1:00 PM IST

gadaga-tdy-2

ನರಗುಂದ: ಹಿರೇಹಳ್ಳದ ಸೇತುವೆ ನಿರ್ಮಾಣ ಕಾಮಗಾರಿಯಿಂದಾಗಿ ಪರ್ಯಾಯ ರಸ್ತೆಯೂ ಸುಸಜ್ಜಿತ ಇಲ್ಲದೇ ಬನಹಟ್ಟಿ ಗ್ರಾಮಕ್ಕೆ ಸಾರಿಗೆ ಸಂಸ್ಥೆ ಬಸ್‌ ಸಂಚಾರ ಸ್ಥಗಿತಗೊಂಡಿದೆ.ಹೀಗಾಗಿ ಗ್ರಾಮಸ್ಥರಿಗೆ ಟಂಟಂ ಅಥವಾ ದ್ವಿಚಕ್ರ ವಾಹನಗಳೇ ಗತಿಯಾಗಿದೆ.

ನರಗುಂದ ಕೇಂದ್ರ ಸ್ಥಾನದಿಂದ 8 ಕಿಮೀ ದೂರದ ತಾಲೂಕಿನ ಬನಹಟ್ಟಿ ಗ್ರಾಮದ ಜನ ನಿತ್ಯ ಪರದಾಡುತ್ತಿದ್ದಾರೆ. ಕಳೆದ ಒಂದು ವಾರದಿಂದ ನರಗುಂದದಿಂದ ಬನಹಟ್ಟಿ ಗ್ರಾಮಕ್ಕೆ ಸಾರಿಗೆ ಸಂಸ್ಥೆಯ ಬಸ್‌ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ.

ಬನಹಟ್ಟಿ ಗ್ರಾಮದ ಮುಂದಿನ ರಸ್ತೆಗೆ ಹೊಂದಿಕೊಂಡ ಹಿರೇಹಳ್ಳದ ಸೇತುವೆ ನಿರ್ಮಾಣ ಕಾಮಗಾರಿ ನಡೆಸಲಾಗಿದೆ. ಬೆಂಗಳೂರು ಮೂಲದ ಬಿಎಸ್‌ಆರ್‌ ಇನ್‌ ಫ್ರಾಟೆಕ್‌ ಏಜೆನ್ಸಿ 1.24 ಕೋಟಿ ರೂ. ವೆಚ್ಚದ ಸೇತುವೆ ನಿರ್ಮಾಣ ಕಾಮಗಾರಿ ಕೈಗೆತ್ತಿಕೊಂಡಿದೆ. ಕಾಮಗಾರಿ ವಿಳಂಬವಾಗಿರುವುದೇ ಈ ಸಮಸ್ಯೆಗೆ ಕಾರಣವಾಗಿದೆ. ಕಾಮಗಾರಿ ಹಿನ್ನೆಲೆಯಲ್ಲಿ ಸೇತುವೆ ಪಕ್ಕದಲ್ಲಿ ಪರ್ಯಾಯ ರಸ್ತೆ ನಿರ್ಮಿಸಲಾಗಿದೆ.

ಕಳೆದ ಒಂದು ವಾರದಿಂದ ಸುರಿದ ಮಳೆಗೆ ಹಿರೇಹಳ್ಳ ತುಂಬಿ ಹರಿದ ಪರಿಣಾಮ ಪರ್ಯಾಯ ರಸ್ತೆ ದುಸ್ತರವಾಗಿದೆ. ಸೇತುವೆ ಸಂಪರ್ಕ ರಸ್ತೆ ನಿರ್ಮಾಣವಿಲ್ಲದೇ ಒಂದು ವಾರದಿಂದ ಗ್ರಾಮಕ್ಕೆ ಬಸ್‌ ಸಂಚಾರ ಮೊಟಕುಗೊಂಡಿದೆ. ಶನಿವಾರ ಸೇತುವೆ ಸಂಪರ್ಕದ ಒಂದು ಬದಿಗೆ ಮುರಂ ಹಾಕಿ ರಸ್ತೆ ನಿರ್ಮಿಸಿದ್ದು, ಮತ್ತೂಂದು ಬದಿಗೆ ಅಲ್ಪ ಮುರಂ ಹಾಕಿದ ಪರಿಣಾಮ ಬಸ್‌ ಸೇರಿ ದೊಡ್ಡ ವಾಹನಗಳು ಸಂಚರಿಸಲಾಗದು. ಗ್ರಾಮಸ್ಥರು ನರಗುಂದ ಪಟ್ಟಣಕ್ಕೆ ಬರಲು ಟಂಟಂ, ದ್ವಿಚಕ್ರ ವಾಹನಗಳೇ ಅನಿವಾರ್ಯವಾಗಿದೆ. ಸಾರಿಗೆ ಸಂಸ್ಥೆ ಬಸ್‌ ಸಂಚಾರವಿಲ್ಲದೇ ಶಾಲಾ ಕಾಲೇಜು ವಿದ್ಯಾರ್ಥಿಗಳ ವ್ಯಾಸಂಗಕ್ಕೂ ಹಿನ್ನಡೆಯಾಗಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ರಸ್ತೆ ಅವ್ಯವಸ್ಥೆ:ಬನಹಟ್ಟಿ ಮುಖ್ಯರಸ್ತೆ ಅವ್ಯವಸ್ಥೆಗೆ ಗ್ರಾಮಸ್ಥರು ನಿತ್ಯ ಪರದಾಡುವಂತಾಗಿದೆ. ಸುಮಾರು 4, 5 ಕಿಮೀ ಅಂತರದಲ್ಲಿ ಹೆಜ್ಜೆಗೊಂದು ಗುಂಡಿಗಳು ಉದ್ಭವಿಸಿ ದ್ವಿಚಕ್ರ ವಾಹನ ಸವಾರರಂತೂ ಕೈಯಲ್ಲಿ ಜೀವ ಹಿಡಿದು ಸಾಗುವಂತಾಗಿದೆ. ನರಗುಂದ-ಬನಹಟ್ಟಿ ರಸ್ತೆ ಸುಧಾರಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕು ಎಂಬುದು ಗ್ರಾಮಸ್ಥರ ಒತ್ತಾಯವಾಗಿದೆ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

1-gadaga

Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.