102 ಹಳ್ಳಿಗಳಲ್ಲಿ ಇಲ್ಲ ರುದ್ರಭೂಮಿ..!


Team Udayavani, Jan 5, 2019, 10:42 AM IST

5-january-16.jpg

ಗದಗ: ಗದಗ ಪ್ರತ್ಯೇಕ ಜಿಲ್ಲೆಯಾಗಿ ರೂಪಗೊಂಡು 21 ವರ್ಷ ಕಳೆದರೂ ಜಿಲ್ಲೆಯ 102 ಹಳ್ಳಿಗಳಲ್ಲಿ ರುದ್ರಭೂಮಿ ಇಲ್ಲ. ಹೌದು. ಇತ್ತೀಚಿನ ದಿನಗಳಲ್ಲಿ ಬರಡು ಭೂಮಿಗೂ ಬಂಗಾರದ ಬೆಲೆ ಬರುತ್ತಿರುವುದರಿಂದ ಇಷ್ಟು ದಿನ ಶವ ಸಂಸ್ಕಾರಕ್ಕೆಂದು ನೀಡಿದ್ದ ಜಮೀನುಗಳನ್ನು ಮರಳಿ ಪಡೆಯುತ್ತಿರುವುದರಿಂದ ರುದ್ರಭೂಮಿ ಇಲ್ಲದ ಊರುಗಳಲ್ಲಿ ಯಾರಾದರೂ ಸತ್ತರೆ ಅಂತ್ಯಸಂಸ್ಕಾರದ್ದೇ ದೊಡ್ಡ ಸಮಸ್ಯೆಯಾಗಿ ಪರಿಣಮಿಸುತ್ತಿದೆ.

ಸ್ವಂತ ಜಮೀನುಗಳಿದ್ದವರು ತಮ್ಮ ಹೊಲಗಳಲ್ಲಿ ಅಂತ್ಯಕ್ರಿಯೆ ಮಾಡುತ್ತಿದ್ದರೆ, ಜಮೀನು ಇಲ್ಲದವರು ಹಾಗೂ ಮತ್ತಿತರರು ಸಂಪ್ರದಾಯದಂತೆ ಗ್ರಾಮದ ಹಿರೇಮಠ, ಪುರೋಜಿತ, ವಾಲಿಕಾರರು ಸೇರಿದಂತೆ ಊರಿನ ಮಠಗಳಿಗೆ ಸಂಬಂಧಿಸಿದ ಜಮೀನುಗಳಲ್ಲಿ ಮೃತರ ಅಂತ್ಯಸಂಸ್ಕಾರ ನಡೆಸಲಾಗುತ್ತಿತ್ತು.

ಅದರೊಂದಿಗೆ ಕೆಲ ಸಹೃದಯಿಗಳು ಗ್ರಾಮಸ್ಥರ ಅನುಕೂಲಕ್ಕಾಗಿ ಜಮೀನಿನ ಕೆಲ ಭಾಗವನ್ನು ಶವಸಂಸ್ಕಾರಕ್ಕೆ ಬಿಟ್ಟು ಕೊಟ್ಟಿದ್ದರು. ಅದಕ್ಕೆ ಪ್ರತಿಯಾಗಿ ರೈತರು ತಮ್ಮ ಜಮೀನುಗಳಲ್ಲಿ ಬೆಳೆದ ದವಸ, ಧಾನ್ಯಗಳನ್ನು ಶಕ್ತ್ಯಾನುಸಾರ ನೀಡುತ್ತಿದ್ದರು. ಆದರೆ, ಇತ್ತೀಚೆಗೆ ಕೃಷಿ ಮಾಡಲಿಕ್ಕಾಗಿಯೇ ಭೂಮಿ ಸಾಕಾಗುತ್ತಿಲ್ಲ ಎಂಬುದು ಸೇರಿದಂತೆ ನಾನಾ ಕಾರಣಗಳಿಂದ ಖಾಸಗಿ ಜಮೀನುಗಳಲ್ಲಿ ಶವ ಸಂಸ್ಕಾರಕ್ಕೆ ಮಾಲೀಕರು ವಿರೋಧಿಸುತ್ತಿರುವುದರಿಂದ ಸಮಸ್ಯೆ ಮತ್ತಷ್ಟು ಬಿಗಡಾಯಿಸಿದೆ.

ಫಲಿಸದ ದಶಕಗಳ ಪ್ರಯತ್ನ: ಪ್ರತಿ ಗ್ರಾಮಕ್ಕೊಂದು ಸ್ಮಶಾನ ಕಲ್ಪಿಸಬೇಕು ಎಂಬ ಉದ್ದೇಶದಿಂದ ಜಿಲ್ಲಾಡಳಿತ ದಶಕಗಳಿಂದ ಪ್ರಯತ್ನ ನಡೆಸುತ್ತಿದೆ. ಅದಕ್ಕಾಗಿ ಖಾಸಗಿ ವ್ಯಕ್ತಿಗಳಿಂದಲೇ ಜಮೀನು ಪಡೆಯಬೇಕೆಂಬ ಸರಕಾರದ ನಿಯಮದಿಂದ ಜಿಲ್ಲಾಡಳಿತ, ಖಾಸಗಿ ಜಮೀನುಗಳ ಹುಡುಕುವಲ್ಲಿ ಬೇಸತ್ತಿದೆ. ಸಾಮಾನ್ಯವಾಗಿ ಆಸ್ತಿ ಮಾರಾಟ- ಖರೀದಿ ವೇಳೆ ನೈಜ ಬೆಲೆಗಿಂತ ಕಡಿಮೆ ದರದಲ್ಲಿ ಉಪ ನೋಂದಣಿ ಕಚೇರಿಯಲ್ಲಿ ನೋಂದಾಯಿಸಿಕೊಳ್ಳುತ್ತಾರೆ. ಹೀಗಾಗಿ ಮಾರುಕಟ್ಟೆ ದರಕ್ಕಿಂತ ಮೂರು ಪಟ್ಟು ಹೆಚ್ಚು ಪರಿಹಾರ ನೀಡುತ್ತೇವೆ ಎಂದರೂ ರೈತರು ಜಮೀನು ಬಿಟ್ಟು ಕೊಡುವುದಿಲ್ಲ ಎನ್ನುತ್ತಾರೆ ಕಂದಾಯ ಇಲಾಖೆ ಅಧಿಕಾರಿಗಳು.

ಧೂಳು ತಿನ್ನುತ್ತಿದೆ ಪ್ರಸ್ತಾವನೆ: ಜಿಲ್ಲೆಯ ಒಟ್ಟು 327 ಗ್ರಾಮಗಳ ಪೈಕಿ ಗದಗ ತಾಲೂಕಿನಲ್ಲಿ 10, ಮುಂಡರಗಿಯಲ್ಲಿ 13, ನರಗುಂದದಲ್ಲಿ 15, ರೋಣದಲ್ಲಿ 33, ಶಿರಹಟ್ಟಿಯಲ್ಲಿ 31 ಗ್ರಾಮಗಳಲ್ಲಿ ರುದ್ರಭೂಮಿಯೇ ಇಲ್ಲ. ನರಗುಂದ ಹೊರತುಪಡಿಸಿ ಇನ್ನುಳಿದ ನಾಲ್ಕು ತಾಲೂಕುಗಳಲ್ಲಿ ತಲಾ ಒಂದು ಗ್ರಾಮದಲ್ಲಿ ಸರಕಾರಿ ಭೂಮಿಯನ್ನು ಗುರುತಿಸಲಾಗಿದೆ. 31 ಗ್ರಾಮಗಳಲ್ಲಿ ಖಾಸಗಿ ವ್ಯಕ್ತಿಗಳಿಂದ ಜಮೀನು ಖರೀದಿಗೆ ಸುಮಾರು 2 ಕೋಟಿ ರೂ. ಅನುದಾನ ಕೋರಿ ಜಿಲ್ಲಾಡಳಿತ 2017ರ ಸೆಪ್ಟೆಂಬರ್‌ನಲ್ಲಿ ಪ್ರಸ್ತಾವನೆ ಸಲ್ಲಿಸಿದ್ದು, ಈವರೆಗೆ ಸರಕಾರದಿಂದ ಪ್ರತಿಕ್ರಿಯೆಯಿಲ್ಲ.

ಒಂದೆಡೆ ರುದ್ರಭೂಮಿ ಒದಗಿಸಲು ಸರಕಾರ ಹಣ ಮಂಜೂರು ಮಾಡುತ್ತಿಲ್ಲ, ಮತ್ತೂಂದೆಡೆ ರುದ್ರಭೂಮಿ ಇಲ್ಲದ್ದರಿಂದ ಜನರು ನಡುರಸ್ತೆಯಲ್ಲೇ ಶವವಿಟ್ಟು ಪ್ರತಿಭಟನೆಗಿಳಿಯುತ್ತಿರುವುದರಿಂದ ಜಿಲ್ಲಾಡಳಿತ ಇಕ್ಕಟ್ಟಿಗೆ ಸಿಲುಕಿದೆ.

ಗ್ರಾಮದಲ್ಲಿ ಸ್ಮಶಾನಕ್ಕೆ ಭೂಮಿ ಒದಗಿಸುವಂತೆ ದಶಕಗಳಿಂದ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದರೂ, ಅಧಿಕಾರಿಗಳು ಸ್ಪಂದಿಸುತ್ತಿಲ್ಲ. ಇದೇ ರೀತಿ ಆಡಳಿತ ನಿರ್ಲಕ್ಷ್ಯ ಮುಂದುವರಿದರೆ, ಮುಂದಿನ ದಿನಗಳಲ್ಲಿ ತಹಶೀಲ್ದಾರ್‌, ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಶವ ಸಂಸ್ಕಾರ ಮಾಡುತ್ತೇವೆ.
•ಕುಬೇರಪ್ಪ, ಹಾತಲಗೇರಿ ನಿವಾಸಿ.

ಒಂದೂವರೆ ವರ್ಷದ ಹಿಂದೆಯೇ 31 ಗ್ರಾಮಗಳಲ್ಲಿ ರುದ್ರಭೂಮಿಗಾಗಿ ಖಾಸಗಿ ವ್ಯಕ್ತಿಗಳಿಂದ ಜಮೀನು ಖರೀದಿಸಲು ಉದ್ದೇಶಿಸಿ, ಅದಕ್ಕೆ ಸಂಬಂಧಿಸಿ ಸರಕಾರಕ್ಕೆ ಸುಮಾರು 2 ಕೋಟಿ ರೂ. ಅನುದಾನ ಕೋರಿ ಪ್ರಸ್ತಾವನೆ ಸಲ್ಲಿಸಲಾಗಿದೆ. ಅನುದಾನ ಬಿಡುಗಡೆಯಾದ ಕೂಡಲೇ ಮುಂದಿನ ಕ್ರಮ ಕೈಗೊಳ್ಳಲಾಗುತ್ತದೆ. •ಶಿವಾನಂದ ಕರಾಳೆ, ಅಪರ ಜಿಲ್ಲಾಧಿಕಾರಿ.

•ವೀರೇಂದ್ರ ನಾಗಲದಿನ್ನಿ

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.