ವರ್ಷವಾದರೂ ಸ್ಥಾಯಿ ಸಮಿತಿಗಿಲ್ಲ ಅಧ್ಯಕ್ಷ

2018ರಲ್ಲಿ ನಡೆದಿದೆ ಪುರಸಭೆ ಚುನಾವಣೆ ­ಎರಡು ವರ್ಷಗಳಿಂದ ಪಟ್ಟಣದ ಅಭಿವೃದ್ಧಿಗೆ ಹಿನ್ನಡೆ

Team Udayavani, Jul 17, 2021, 8:57 PM IST

16gjd1

ಡಿ.ಜಿ. ಮೋಮಿನ್‌

ಗಜೇಂದ್ರಗಡ: ಸ್ಥಳೀಯ ಪುರಸಭೆ ಆಡಳಿತ ಚುಕ್ಕಾಣೆ ಹಿಡಿದು ವರ್ಷ ಗತಿಸುತ್ತಾ ಬಂದರೂ ಪುರಸಭೆ ಸ್ಥಾಯಿ ಸಮಿತಿ ಅಧ್ಯಕ್ಷರ ಆಯ್ಕೆ ಮಾತ್ರ ನನೆಗುದಿಗೆ ಬಿದ್ದಿದೆ. ಇದರಿಂದಾಗಿ ಪಟ್ಟಣದ ಅಭಿವೃದ್ಧಿ ಕಾರ್ಯಗಳಿಗೆ ಹಿನ್ನಡೆಯಾಗುತ್ತಿದೆ.

ಜಿಲ್ಲೆಯಲ್ಲೇ ಎರಡನೇ ದೊಡ್ಡ ಪಟ್ಟಣವಾದ ಗಜೇಂದ್ರಗಡ ಪುರಸಭೆಗೆ 2018 ಸೆಪ್ಟೆಂಬರ್‌ ಚುನಾವಣೆ ನಡೆದಿದೆ. ಗಳ ನಂತರ ಆಡಳಿತ ಮಂಡಳಿ ರಚನೆಯಾಗಿದೆ. ಆದರೀಗ ಬಿಜೆಪಿ ನೇತೃತ್ವದ ಆಡಳಿತ, ಸ್ಥಾಯಿ ಸಮಿತಿ ಅಧ್ಯಕ್ಷರನ್ನು ಆಯ್ಕೆ ಮಾಡಲು ವರ್ಷಗಟ್ಟಲೇ ಕಾಯುತ್ತಿದೆ. ಇದಲ್ಲದೇ ಸದಸ್ಯರಲ್ಲಿ ಅಸಮಾಧಾನ ಮೂಡಿದೆ ಎನ್ನುವುದು ಬಿಜೆಪಿ ವಲಯದಲ್ಲಿ ಕೇಳಿ ಬರುತ್ತಿದೆ. ನನೆಗುದಿಗೆ: ಪುರಸಭೆ ಆಡಳಿತದಲ್ಲಿ ಸ್ಥಾಯಿ ಸಮಿತಿ ಪಾತ್ರ ಅತ್ಯಂತ ಮುಖ್ಯವಾಗಿದೆ. ಆದರೆ ಪಟ್ಟಣದ ಪುರಸಭೆಯಲ್ಲಿ ಸ್ಥಾಯಿ ಸಮಿತಿ ರಚನೆ ಮಾಡಿದ್ದನ್ನು ಹೊರತುಪಡಿಸಿ, ಅಧ್ಯಕ್ಷ ಯಾರಾಗಬೇಕೆನ್ನುವುದು ಮಾತ್ರ ನನೆಗುದಿಗೆ ಬಿದ್ದಿದೆ. ಪರಿಣಾಮ ಪುರಸಭೆ ಆಡಳಿತದಲ್ಲಿ ಕ್ರಿಯಾಶೀಲತೆ ಕುಂದಿದೆ.

2020 ನವೆಂಬರ್‌ ತಿಂಗಳಲ್ಲೇ ಪುರಸಭೆ ಅಧ್ಯಕ್ಷರಾಗಿ ವೀರಣ್ಣ ಪಟ್ಟಣಶೆಟ್ಟಿ, ಉಪಾಧ್ಯಕ್ಷರಾಗಿ ಲೀಲಾವತಿ ವನ್ನಾಲ ಅವರನ್ನು ಆಯ್ಕೆ ಮಾಡಲಾಗಿದೆ. ಆದರೆ ಇದುವರೆಗೂ ಸ್ಥಾಯಿ ಸಮಿತಿ ಅಧ್ಯಕ್ಷರ ಆಯ್ಕೆ ಬಗ್ಗೆ ಆಡಳಿತ ಪಕ್ಷ ಇದುವರೆಗೂ ತುಟಿ ಪಿಟಕ್‌ ಅಂದಿಲ್ಲ. ಪುರಸಭೆಯಲ್ಲಿ ಒಟ್ಟು 23 ಸದಸ್ಯರಿದ್ದು, ಅದರಲ್ಲಿ 18 ಬಿಜೆಪಿ, 5 ಕಾಂಗ್ರೆಸ್‌ ಸದಸ್ಯರಿದ್ದಾರೆ. ಬಹುಮತ ಹೊಂದಿದ್ದರು ಸಹ ಸಾಮಾನ್ಯ ಸಭೆಯಲ್ಲಿ ಈ ಕುರಿತು ಗಟ್ಟಿ ನಿರ್ಧಾರ ಕೈಗೊಳ್ಳದ ಕಾರಣ ಸ್ಥಾಯಿ ಸಮಿತಿ ಅಧ್ಯಕ್ಷರ ನೇಮಕಕ್ಕೆ ಹಿನ್ನಡೆಯಾಗಿದೆ.

ಅಭಿವೃದ್ಧಿಗೆ ಹಿನ್ನಡೆ: ಸ್ಥಾಯಿ ಸಮಿತಿ ಅಧ್ಯಕ್ಷರ ನೇಮಕ ಮಾಡಲು ಹಿಂದೇಟು ಹಾಕುತ್ತಿರುವುದು ಏಕೆ ಎಂಬುದು ಯಕ್ಷ ಪ್ರಶ್ನೆಯಾಗಿದೆ. ಹಣಕಾಸು, ತೆರಿಗೆ, ಸಾರ್ವಜನಿಕ ಆರೋಗ್ಯ, ಶಿಕ್ಷಣ ಮತ್ತು ಸಾಮಾಜಿಕ ನ್ಯಾಯ ಇನ್ನಿತರ ಕಾರ್ಯಗಳಿಗೆ ಸ್ಥಾಯಿ ಸಮಿತಿ ಸಹಕಾರ ಅಗತ್ಯ. ಆದರೆ ಸ್ಥಾಯಿ ಸಮಿತಿಗೆ ಅಧ್ಯಕ್ಷನ್ನು ಆಯ್ಕೆ ಮಾಡದೇ ಪುರಸಭೆ ಸ್ತಬ್ಧಗೊಂಡಿದ್ದರಿಂದ ಪಟ್ಟಣದ ಅಭಿವೃದ್ಧಿ ಕಾರ್ಯಗಳಿಗೆ ಹಿನ್ನಡೆಯಾಗಿದೆ. ಆಡಳಿತದಲ್ಲಿ ಸ್ಥಾಯಿ ಸಮಿತಿ ಪಾತ್ರ ಮುಖ್ಯ: ಪುರಸಭೆ ಆಡಳಿತದಲ್ಲಿ ಸ್ಥಾಯಿ ಸಮಿತಿ ಪಾತ್ರ ಮುಖ್ಯವಾಗಿದೆ. ವಿಪಕ್ಷಕ್ಕಿಂತ, ಸ್ಥಾಯಿ ಸಮಿತಿ ಅಭಿವೃದ್ಧಿಗೆ ಪೂರಕವಾಗಿದೆ. ಅಲ್ಲದೇ ಪಟ್ಟಣದ ಸಾರ್ವಜನಿಕರ ಸಮಸ್ಯೆಗಳಿಗೆ ಅಧ್ಯಕ್ಷರ ಅನುಪಸ್ಥಿತಿಯಲ್ಲಿ ಸ್ಥಾಯಿ ಸಮಿತಿಯೇ ಪರಿಹಾರ ಕಂಡುಕೊಳ್ಳಬೇಕಾಗುತ್ತದೆ.

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.