ಶಾಲಾ ಆವರಣದಲ್ಲೇ ಬಹಿರ್ದೆಸೆ!


Team Udayavani, Dec 18, 2019, 1:04 PM IST

gadaga-tdy-2

ಗದಗ: ಶಿಕ್ಷಣ ಇಲಾಖೆ ಅಧಿಕಾರಿಗಳ ನಿಷ್ಕಾಳಜಿ ಹಾಗೂ ಸ್ಥಳೀಯರ ಬೇಜವಾಬ್ದಾರಿಯಿಂದಾಗಿ ಇಲ್ಲಿನ ಬೆಟಗೇರಿಯ ಸರಕಾರಿ ಕಿರಿಯ ಪ್ರಾಥಮಿಕ ಹೆಣ್ಣು ಮಕ್ಕಳ ಶಾಲೆ ನಂ. 4 ಸಂಜೆಯಾಗುತ್ತಿದ್ದಂತೆ ಬಯಲು ಬಹಿರ್ದೆಸೆ ಹಾಗೂ ಅನೈತಿಕ ಚಟುವಟಿಕೆ ತಾಣವಾಗುತ್ತಿದೆ. ಪರಿಣಾಮ ಒಂದೇ ಆವರಣದಲ್ಲಿರುವ ಪ್ರಾಥಮಿಕ ಶಾಲೆ ಹಾಗೂ ಎರಡು ಅಂಗನವಾಡಿ ಕೇಂದ್ರಗಳ ಕಂದಮ್ಮಗಳು ದುರ್ವಾಸನೆ ಮಧ್ಯೆಯೇ ದಿನವಿಡೀ ಕಾಲ ಕಳೆಯುವಂತಾಗಿದೆ.

ಬೆಟಗೇರಿಯ ಮಂಜುನಾಥ ನಗರದ ಸರಕಾರಿ ಕಿರಿಯ ಹೆಣ್ಣು ಮಕ್ಕಳ ಶಾಲೆ ನಂ. 4ರಲ್ಲಿ 1ರಿಂದ 5ನೇ ತರಗತಿ ವರೆಗೆ ಸುಮಾರು 43 ವಿದ್ಯಾರ್ಥಿಗಳಿದ್ದಾರೆ. ಜೊತೆಗೆ ಇದೇ ಶಾಲಾ ಆವರಣದಲ್ಲಿ ಗೌರಿ ಗಡಿ ಶಾಲಾ ಓಣಿ ಅಂಗನವಾಡಿ ಹಾಗೂ ಮಂಜುನಾಥ ನಗರದ ಅಂಗನವಾಡಿ ಕೇಂದ್ರಗಳು ಕಾರ್ಯನಿರ್ವಹಿಸುತ್ತಿದ್ದು, ಕ್ರಮವಾಗಿ 15 ಹಾಗೂ 25 ಪುಟ್ಟ ಮಕ್ಕಳು ಪ್ರತಿನಿತ್ಯ ಅಂಗನವಾಡಿಗೆ ಆಗಮಿಸುತ್ತಾರೆ. ಅದರೊಂದಿಗೆ ಮಾತೃ ವಂದನಾ ಯೋಜನೆಯಡಿ ಗರ್ಭಿಣಿಯರು ಕೂಡಾ ಅಂಗನವಾಡಿಗೆ ಆಗಮಿಸುತ್ತಾರೆ. ಆದರೆ, ಶಾಲಾ ಸಮೀಪಕ್ಕೆ ಬರುತ್ತಿದ್ದಂತೆ ದುರ್ವಾಸನೆ ಶುರುವಾಗುತ್ತಿದ್ದು, ಶಾಲಾ ಆವರಣದೊಳಗೆ ಕಾಲಿಡುತ್ತಿದ್ದಂತೆ ಉಸಿರು ಬಿಗಿ ಹಿಡಿದುಕೊಂಡೇ ಕೊಠಡಿ ಪ್ರವೇಶಿಸುವ ಅನಿವಾರ್ಯತೆ ಸೃಷ್ಟಿಯಾಗಿದೆ.

ಶಾಲಾ ಆವರಣದಲ್ಲಿ ಬಹಿರ್ದೆಸೆ: ಶಾಲಾ ಸುತ್ತಮುತ್ತಲಿನ ಪ್ರದೇಶದ ಕೆಲವರ ಮನೆಗಳಲ್ಲಿ ಶೌಚಾಲಯಗಳಿಲ್ಲ. ಇದ್ದವರೂm ಅವುಗಳನ್ನು ಬಳಕೆ ಮಾಡುತ್ತಿಲ್ಲ. ಹೀಗಾಗಿ ಕತ್ತಲು ಆವರಿಸುತ್ತಿದ್ದಂತೆ ಬಹಿರ್ದೆಸೆಗೆ ಚೆಂಬು ಹಿಡಿದು ಶಾಲಾ ಆವರಣದತ್ತ ಹೆಜ್ಜೆ ಹಾಕುತ್ತಾರೆ. ಶನಿವಾರ, ಭಾನುವಾರ ಹಾಗೂ ಸರಣಿ ರಜಾ ದಿನಗಳ ಬಳಿಕ ಶಾಲೆಗೆ ಆಗಮಿಸುವ ಅಂಗನವಾಡಿ ಕಾರ್ಯಕರ್ತರು, ಸಹಾಯಕಿಯರಿಗೆ ಆವರಣ ಸ್ವಚ್ಛಗೊಳಿಸುವುದೇ ದೊಡ್ಡ ಸವಾಲಾಗುತ್ತದೆ. ಶಾಲಾ ಆವರಣ ಪ್ರವೇಶಿಸುತ್ತಿದ್ದಂತೆ ಎಡ ಹಾಗೂ ಬಲ ಬದಿಯಲ್ಲಿ ಎರಡು ಅಂಗನವಾಡಿಗಳಿದ್ದು, ಇದೇ ಭಾಗದಲ್ಲಿ ಗಲೀಜು ಮಾಡುತ್ತಾರೆ. ಕೆಲವೊಮ್ಮೆ ಕಿಡಿಗೇಡಿಗಳು ಅಂಗನವಾಡಿ ಮೆಟ್ಟಿಲುಗಳಲ್ಲೇ ಮಲ- ಮೂರ್ತ ವಿಸರ್ಜನೆ ಮಾಡುತ್ತಾರೆ. ಶಾಲೆ- ಅಂಗನವಾಡಿ ವಾತಾವರಣವೇ ಇಷ್ಟೊಂದು ದುಸ್ಥಿತಿಯಲ್ಲಿದ್ದರೆ, ಯಾವ ಪಾಲಕರು ತಮ್ಮ ಮಕ್ಕಳನ್ನು ಕಳುಹಿಸುತ್ತಾರೆ. ನಾವು ಹೇಗೆ ಕೆಲಸ ಮಾಡಬೇಕು ಎಂದು ಪ್ರಶ್ನಿಸುತ್ತಾರೆ ಮಂಜುನಾಥ ನಗರ ಅಂಗನವಾಡಿ ಕಾರ್ಯಕರ್ತೆ ಎಂ. ಜಾಲಿಹಾಳ.

ಈ ಶಾಲೆಗೆ ಗೇಟ್‌ ಇಲ್ಲದೇ ಇರುವುದರಿಂದ ಸಂಜೆಯಾಗುತ್ತಿದ್ದಂತೆ ಅನೈತಿಕ ಚಟುವಟಿಕೆ ತಾಣವಾಗುತ್ತಿದೆ. ಮಳೆಗಾಲದಲ್ಲಿ ಮಳೆ ನೀರು ಶಾಲೆ ಆವರಣದಲ್ಲಿ ನಿಲ್ಲುವುದರಿಂದ ಮಕ್ಕಳು ಶಾಲೆಯ ಒಳಗೆ ಹೋಗಲು ತೊಂದರೆ ಪಡುತ್ತಾರೆ. ಮಕ್ಕಳ ಹಿತದೃಷ್ಟಿಯಿಂದ ಶಾಲಾ ಮುಂಭಾಗದ ವಿದ್ಯುತ್‌ ಪರಿವರ್ತಕವನ್ನು ಬೇರೆಡೆ ಸ್ಥಳಾಂತರಿಸಬೇಕು. –ಆರ್‌.ಎಲ್‌. ಮೇಳೇನವರ, ಸಾಮಾಜಿಕ ಕಾರ್ಯಕರ್ತ

 

-ವಿಶೇಷ ವರದಿ

ಟಾಪ್ ನ್ಯೂಸ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

ನಮ್ಮದು ಬಡವರಿಗೆ ಬದುಕು ಕಟ್ಟಿ ಕೊಡುವ ಪ್ರಣಾಳಿಕೆ: ಬಸವರಾಜ ಬೊಮ್ಮಾಯಿ

Gadag; ನಮ್ಮದು ಬಡವರಿಗೆ ಬದುಕು ಕಟ್ಟಿ ಕೊಡುವ ಪ್ರಣಾಳಿಕೆ: ಬಸವರಾಜ ಬೊಮ್ಮಾಯಿ

1-wqeqweqwe

Panchmasali ಸಮಾಜಕ್ಕೆ ಬಿಜೆಪಿಯಿಂದ ಅನ್ಯಾಯ: ವಚನಾನಂದ ಸ್ವಾಮೀಜಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.