ಬೇಸಿಗೆಯಲ್ಲೂ ನೀರಿಗಿಲ್ಲ ಕೊರತೆ

ನಿರಂತರ ಕುಡಿವ ನೀರಿನ ಯೋಜನೆಯಿಂದ ಸಮಸ್ಯೆ ಪರಿಹಾರ

Team Udayavani, May 27, 2020, 3:56 PM IST

ಬೇಸಿಗೆಯಲ್ಲೂ ನೀರಿಗಿಲ್ಲ ಕೊರತೆ

ಗದಗ: ಕೋವಿಡ್  ನಿಯಂತ್ರಣಕ್ಕಾಗಿ ಲಾಕ್‌ಡೌನ್‌ ವಿಧಿಸಿದ್ದರಿಂದ ಸಾಮಾನ್ಯವಾಗಿ ಜನರು ಮನೆಗಳಲ್ಲೇ ಉಳಿದಿದ್ದರು. ಹೀಗಾಗಿ ನೀರಿನ ಬೇಡಿಕೆ ತುಸು ಹೆಚ್ಚಾಗಿತ್ತು. ಆದರೆ ಜಿಲ್ಲೆಯಲ್ಲಿ ಅನುಷ್ಠಾನದಲ್ಲಿರುವ ಡಿಬಿಒಟಿ ಹಾಗೂ ನಿರಂತರ ಕುಡಿಯುವ ನೀರಿನ ಯೋಜನೆಗಳಿಂದಾಗಿ ಜಿಲ್ಲೆಯಲ್ಲಿ ನೀರಿನ ಸಮಸ್ಯೆ ಕಡಿಮೆಯಾಗಿದೆ. ಜಲಕ್ಷಾಮಕ್ಕೆ ತಿಲಾಂಜಲಿ ಹಾಡಿದೆ.

ಬಹುಮುಖ್ಯವಾಗಿ ಗ್ರಾಪಂ ಸಿಬ್ಬಂದಿ ಕೋವಿಡ್ ವಾರಿಯರ್ಸ್ ಗಳಂತೆ ಶ್ರಮಿಸಿದ್ದರಿಂದ ಜಿಲ್ಲೆಯಲ್ಲಿ ನೀರಿನ ಸಮಸ್ಯೆ ಎದುರಾಗಲಿಲ್ಲ. ಬೇಸಿಗೆ ದಿನಗಳು ಆರಂಭವಾಗುತ್ತಿದ್ದಂತೆ ಬಯಲುಸೀಮೆ ಗದಗ ಜಿಲ್ಲೆಯಲ್ಲಿ ಜಲಕ್ಷಾಮ ಆವರಿಸುತ್ತಿತ್ತು. ಜಿಲ್ಲೆಯ ಎಲ್ಲ ಗ್ರಾಮಗಳಿಗೆ ತುಂಗಭದ್ರಾ ಮತ್ತು ಮಲಪ್ರಭೆ ನದಿಯಿಂದ ಡಿಬಿಒಟಿ ಯೋಜನೆಯಡಿ ನದಿ ನೀರು ಪೂರೈಸಲಾಗುತ್ತಿದೆ. ಪ್ಯಾಕೇಜ್‌-1ರಲ್ಲಿ ಮಲಪ್ರಭಾ ನದಿಯಿಂದ ನರಗುಂದ ಮತ್ತು ರೋಣ ತಾಲೂಕಿನ 131 ಹಾಗೂ ಪ್ಯಾಕೇಜ್‌-2ರಲ್ಲಿ ತುಂಗಭದ್ರಾ ನದಿಯಿಂದ ಮುಂಡರಗಿ, ಗದಗ ಹಾಗೂ ಶಿರಹಟ್ಟಿ ಸೇರಿದಂತೆ 343 ಜನವಸತಿ ಪ್ರದೇಶಗಳಿಗೆ ನೀರಿನ ಸಂಪರ್ಕ ಕಲ್ಪಿಸಲಾಗಿದೆ. ಗದಗ ಸೇರಿದಂತೆ ವಿವಿಧ ಪಟ್ಟಣಗಳಿಗೆ ಪ್ರತ್ಯೇಕ ಕುಡಿಯುವ ನೀರಿನ ಸೌಕರ್ಯ ಕಲ್ಪಿಸಲಾಗಿದೆ. ಇದರಿಂದ ಕಳೆದ ಒಂದು ವರ್ಷದಿಂದ ಅಷ್ಟಾಗಿ ನೀರಿನ ಸಮಸ್ಯೆ ಕಾಡುತ್ತಿಲ್ಲ. ಆದರೆ ಈ ಬಾರಿ ಬೇಸಿಗೆ ಅವ ಧಿಯಲ್ಲೇ ಲಾಕ್‌ ಡೌನ್‌ ಜಾರಿಗೊಂಡಿದ್ದರಿಂದ ನೀರಿನ ಬೇಡಿಕೆ ಹೆಚ್ಚಾಗಿದ್ದರೂ, ಅದನ್ನು ನಿಭಾಯಿಸುವಲ್ಲಿ ಸ್ಥಳೀಯ ಸಂಸ್ಥೆಗಳು ಯಶಸ್ವಿಯಾಗಿವೆ.

ನಿತ್ಯ ನೀರು ಪೂರೈಕೆ: ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಮನೆ ಮಂದಿಯಲ್ಲ ಮನೆಯಲ್ಲೇ ಠಿಕಾಣಿ ಹೂಡಿದ್ದರಿಂದ ನೀರಿನ ಬಳಕೆ ಹೆಚ್ಚಾಗಿತ್ತು. ಮನೆಯಲ್ಲಿ ಎಂದಿನಂತೆ ತುಂಬಿಕೊಳ್ಳುತ್ತಿದ್ದ ನೀರು ಮರುದಿನಕ್ಕೆ ಇರುತ್ತಿರಲಿಲ್ಲ. ಇದರಿಂದ ರಾತ್ರಿ ಖಾಲಿ ಕೊಡಗಳೊಂದಿಗೆ ಜನರು ಬೋರ್‌ವೆಲ್‌ ಹಾಗೂ ನೀರಿನ ಟ್ಯಾಂಕ್‌ನತ್ತ ಹೆಜ್ಜೆ ಹಾಕುವಂತಾಗಿತ್ತು. ಗ್ರಾಮೀಣ ಭಾಗದಲ್ಲಿ ಲಾಕ್‌ ಡೌನ್‌ ಆರಂಭಿಕ ದಿನಗಳಲ್ಲಿ ಜನ ಸಂಚಾರವನ್ನು ನಿಯತ್ರಿಸುವುದು ಕಷ್ಟಸಾಧ್ಯವೆನಿಸುತ್ತಿತ್ತು. ಇದರ ಗಂಭೀರತೆಯನ್ನು ಅರಿತಿದ್ದ ಜಿಲ್ಲೆಯ ಹುಲಕೋಟಿ, ಕುರ್ತಕೋಟಿ, ಕಳಸಾಪುರ, ನಾಗಾವಿ, ಡಂಬಳ, ಸಂದಿಗವಾಡ, ನಿಡಗುಂದಿ, ಹೊಳೆಆಲೂರು ಮತ್ತಿತರೆ ಗ್ರಾಪಂ ಆಡಳಿತಗಳು ಪ್ರತಿನಿತ್ಯ ನೀರು ಪೂರೈಕೆ ಆರಂಭಿಸಿದವು.

ಡಿಬಿಒಟಿ ಸಂಪರ್ಕವಿದ್ದರೂ, ನೀರಿನ ಅಭಾವ ಕಾಣಿಸಿದ್ದಲ್ಲಿ ಖಾಸಗಿ ಬೋರ್‌ವೆಲ್‌ಗ‌ಳನ್ನು ಬಾಡಿಗೆ ಪಡೆದು, ನೀರು ಪೂರೈಕೆಗೆ ಕ್ರಮ ಜರುಗಿಸಲಾಗಿದೆ. ಸ್ಥಳೀಯ ಬೇಡಿಕೆಗೆ ಅನುಗುಣವಾಗಿ ಆಯಾ ಗ್ರಾಪಂ ವಾಟರ್‌ ಮ್ಯಾನ್‌ಗಳು ಅಚ್ಚುಕಟ್ಟಾಗಿ ಸೇವೆ ಸಲ್ಲಿಸಿದ್ದಾರೆ. ಇದರಿಂದಾಗಿ ಯಾವುದೇ ಭಾಗದಲ್ಲಿ ನೀರಿನ ಸಮಸ್ಯೆ ಅಷ್ಟಾಗಿ ಕಂಡು ಬರಲಿಲ್ಲ ಎನ್ನುತ್ತಾರೆ ಜಿಪಂ ಅಧಿಕಾರಿಗಳು.

ಪಟ್ಟಣದಲ್ಲಿ ನಾಲ್ಕೈದು ದಿನಕ್ಕೆ ನೀರು: ಕಳೆದ ಹಿಂಗಾರಿನಲ್ಲಿ ಉತ್ತಮ ಮಳೆಯಾಗಿದ್ದರಿಂದ ಇಲ್ಲಿನ ಹಮ್ಮಿಗಿ ಬ್ಯಾರೇಜ್‌ನಲ್ಲಿ ಜೂನ್‌ ತಿಂಗಳವರೆಗೆ ಸಾಕಾಗುಷ್ಟು ನೀರಿನ ಸಂಗ್ರಹವಿತ್ತು. ಆದರೆ ಗದಗ-ಬೆಟಗೇರಿ ಮತ್ತು ಮುಂಡರಗಿ ಪಟ್ಟಣಕ್ಕೆ ಮೂರು ದಿನಗಳಿಗೊಮ್ಮೆ ನೀರು ಹರಿಸಿದ್ದರಿಂದ ಬ್ಯಾರೇಜ್‌ನಲ್ಲಿ ನೀರಿನ ಸಂಗ್ರಹ ಕಡಿಮೆಯಾಗಿತ್ತು. ಆದರೆ ಅಧಿಕಾರಿಗಳು ತಿಂಗಳ ಹಿಂದೆ ಭದ್ರಾ ಜಲಾಶಯದಿಂದ ನೀರು ಬಿಡುಗಡೆ ಮಾಡಿಸಿದ್ದಾರೆ. ಇದರಿಂದಾಗಿ ತುಂಗಭದ್ರಾ ನದಿಯಿಂದ ನೀರು ಪೂರೈಕೆಯಾಗುವ ಪ್ರದೇಶಗಳಿಗೆ ಸದ್ಯಕ್ಕೆ ನೀರಿನ ಸಮಸ್ಯೆ ಎದುರಾಗದು ಎನ್ನಲಾಗಿದೆ.

ಪ್ರತಿ ಬಾರಿ ಬೋರ್‌ವೆಲ್‌ಗ‌ಳು ಬತ್ತಿಹೋಗುತಿದ್ದವು. ಆದರೆ ಡಿಬಿಒಟಿ ಸಂಪರ್ಕದ ಬಳಿಕ ನೀರಿನ ಸಮಸ್ಯೆ ಬಹುತೇಕ ನಿವಾರಣೆಯಾಗಿದೆ. ಜನರು ಗುಂಪು ಸೇರುವುದನ್ನು ತಪ್ಪಿಸಲು ಪ್ರತಿ ಮನೆಗೆ ನೀರು ಪೂರೈಕೆ ಕ್ರಮ ಕೈಗೊಳ್ಳಲಾಗಿದೆ. ಪ್ರತಿದಿನ ಸತತ 2-3 ಗಂಟೆಗಳ ಕಾಲ ನೀರು ಹರಿಸಲಾಗಿದೆ. –ಸಾವಿತ್ರಿ ಕೃಷ್ಣಾ ಚವ್ಹಾಣ, ಕಳಸಾಪುರ ಗ್ರಾಪಂ ಅಧ್ಯಕ್ಷೆ

ನಮ್ಮ ಗ್ರಾಮದಲ್ಲಿ ಪ್ರತಿನಿತ್ಯ ಎರಡು ಬಾರಿ ನಳದ ನೀರು ಬರುತ್ತಿತ್ತು. ಇದರಿಂದ ಲಾಕ್‌ಡೌನ್‌ ವೇಳೆ ನೀರಿನ ಸಮಸ್ಯೆ ಎದುರಾಗಲಿಲ್ಲ. ಈ ನಿಟ್ಟಿನಲ್ಲಿ ಸ್ಥಳೀಯ ಗ್ರಾಪಂ ಅಧಿಕಾರಿಗಳು ಒಳ್ಳೆಯ ಕ್ರಮ ಕೈಗೊಂಡಿದ್ದಾರೆ. –ಮಹದೇವಪ್ಪಗೌಡ ಪಾಟೀಲ, ಸಂದಿಗವಾಡ

 

– ವೀರೇಂದ್ರ ನಾಗಲದಿನ್ನಿ

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ

Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ

Gajendragad; ದಕ್ಷಿಣ ಕಾಶಿ ಕಾಲಕಾಲೇಶ್ವರ ಅದ್ದೂರಿ ರಥೋತ್ಸವ

Gajendragad; ದಕ್ಷಿಣ ಕಾಶಿ ಕಾಲಕಾಲೇಶ್ವರ ಅದ್ದೂರಿ ರಥೋತ್ಸವ

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

1-gadaga

Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ

Gadag; ಮನೆ ಮಗನಿಂದಲೇ ಸುಪಾರಿ; ನಾಲ್ವರ ಹತ್ಯೆ ಪ್ರಕರಣ ಬೇಧಿಸಿದ ಪೊಲೀಸರು; 8 ಜನರ ಬಂಧನ

Gadag; ಮನೆ ಮಗನಿಂದಲೇ ಸುಪಾರಿ; ನಾಲ್ವರ ಹತ್ಯೆ ಪ್ರಕರಣ ಬೇಧಿಸಿದ ಪೊಲೀಸರು; 8 ಜನರ ಬಂಧನ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.