ತಿಪ್ಪೆ ಕೊಂಪೆಯಲ್ಲಿ ವಾಚನಾಲಯ!


Team Udayavani, Oct 21, 2019, 2:55 PM IST

GADAGA-TDY-2

ರೋಣ: ಬಯಲು ಶೌಚದ ದುರ್ವಾಸನೆ, ಮುರಿದ ಕುರ್ಚಿಗಳು, ಕಿಟಕಿಗೆ ದನ-ಕರುಗಳನ್ನು ಕಟ್ಟುವ ಪರಿಸ್ಥಿತಿ, ಕೊಳೆಯುತ್ತ ಬಿದ್ದಿರುವ ಪುಸ್ತಕಗಳು, ಪಕ್ಕದಲ್ಲಿ ಬಿದ್ದ ಸಾರಾಯಿ ಬಾಟಲಿ ಡಬ್ಬಿಗಳು.. ಇದು ಬದಾಮಿ ಬನಶಂಕರಿ ದೇವಿ ತವರೂರಾದ ಮಾಡಲಗೇರಿ ಗ್ರಾಮದ ಸಾರ್ವಜನಿಕ ಗ್ರಂಥಾಲಯದ ದುಸ್ಥಿತಿ.

ಗ್ರಂಥಾಲಯ ಪಕ್ಕದಲ್ಲಿ ಗಿಡಗಂಟಿಗಳು ಬೆಳೆದು ಓದಲು ಪ್ರಶಾಂತವಾದ ವಾತಾವರಣವಿಲ್ಲ. ಇದರಿಂದ ಓದುಗರು ತುಂಬ ಕಿರಿಕಿರಿ ಅನುಭವಿಸುತ್ತಿದ್ದಾರೆ. 2006ರಲ್ಲಿ ಅಂದಿನ ರಾಜ್ಯಸಭಾ ಸದಸ್ಯ ವಿಜಯ ಮಲ್ಯ ವಿಶೇಷ ಕಾಳಜಿ ವಹಿಸಿ ಮಾಡಲಗೇರಿ ಗ್ರಾಮದ ಗ್ರಂಥಾಲಯಕ್ಕೆ 2 ಲಕ್ಷ ರೂ. ಹಣ ಖರ್ಚು ಮಾಡಿ ಕಟ್ಟಡ ನಿರ್ಮಾಣ ಮಾಡಲಾಗಿದೆ. ಆದರೆ ಅಲ್ಲಿ ಓದುಗರಿಗೆ ಪ್ರಶಾಂತ ವಾತಾವರಣವಿಲ್ಲದಿರುವುದು ನೋವಿನ ಸಂಗತಿ.

ಪುಸ್ತಕಗಳಿಗಿಲ್ಲ ಕಿಮ್ಮತ್ತು :  ಗ್ರಂಥಾಲಯದಲ್ಲಿ ಸೂಕ್ತ ನಿರ್ವಹಣೆ ಕೊರತೆಯಿಂದ ಮಂಜೂರಾಗಿ ಬಂದ ಪುಸ್ತಕಗಳು ಕೊಳೆತು (ಗೊರಲಿ ಹತ್ತಿವೆ) ಹೋಗಿವೆ. ಪುಸ್ತಕವಿರುವ ಕೊಠಡಿ ಬಾಗಿಲು ಒಮ್ಮೆಯೂ ತೆರೆದಿಲ್ಲ ಎನ್ನುತ್ತಾರೆ ಗ್ರಾಮದ ಯುವಕರು. ಈ ವಾಚನಾಲಯಕ್ಕೆ ವಾರ ಪತ್ರಿಕೆಗಳು, ಮಾಸ ಪತ್ರಿಕೆಗಳು ಒಂದು ಬರುತ್ತಿಲ್ಲ. ದಿನ ಪತ್ರಿಕೆಗಳ ಬಿಲ್‌ನ್ನು ಸಹ ಪಾವತಿಸುವುದಿಲ್ಲವಂತೆ. ಇಷ್ಟಾದರೂ ಕೆಲವು ಬುದ್ಧಿ ಜೀವಿಗಳು ತಮಗೆ ಬೇಕಾದ ಮೂರ್‍ನಾಲ್ಕು ದಿನ ಪತ್ರಿಕೆಗಳನ್ನು ತಾವೇ ಹಣ ಕೊಟ್ಟು ಗ್ರಂಥಾಲಯಕ್ಕೆ ಬರುವ ಓದುಗರಿಗೆ ಅನುಕೂಲ ಮಾಡಿದ್ದಾರೆ.

ಪಕ್ಕದಲ್ಲಿಯೇ ಅಕ್ರಮ ಸಾರಾಯಿ : ಗ್ರಾಮದಲ್ಲಿ ಬೇರೆ ಬೇರೆ ಸ್ಥಳಗಳಲ್ಲಿ ಅಕ್ರಮ ಸಾರಾಯಿ ಮಾರಾಟ ಮಾಡುವುದು ಒಂದೆಡೆಯಾದರೆ ಗ್ರಂಥಾಲಯ ಪಕ್ಕದಲ್ಲಿಯೇ ಅಕ್ರಮ ಸಾರಾಯಿ ಮಾರುವುದು ಕಂಡುಬರುತ್ತಿದೆ. ಬೆಳಗ್ಗೆ ಗ್ರಂಥಾಲಯದೊಂದಿಗೆ ಇಲ್ಲಿನ ಅಕ್ರಮ ಸಾರಾಯಿ ಮಾರಾಟವೂ ಪ್ರಾರಂಭವಾಗುತ್ತದೆ. ಇದರಿಂದ ಓದಲು ಬರುವ ಯುವಕರಿಗೆ ಈ ದೃಶ್ಯ ಬೆಳ್ಳಂ ಬೆಳಗ್ಗೆ ಎದುರಾಗುತ್ತಿರುವುದು ದುರಂತ. ಜೊತೆಗೆ ಇಲ್ಲಿಯೇ ತಿಪ್ಪೆಗಳನ್ನು ಹಾಕಿದ್ದರಿಂದ ದುರ್ವಾಸನೆ ಓದುಗರಿಗೆ ತುಂಬ ತೊಂದರೆಯಾಗುತ್ತಿದೆ ಎನ್ನುತ್ತಾರೆ ಓದುಗರು. ಗ್ರಂಥಾಲಯ ಕಿಟಕಿಗೆ ಜಾನುವಾರುಗಳನ್ನು ಕಟ್ಟುವುದು ಸರ್ವೇ ಸಾಮಾನ್ಯವಾಗಿದೆ. ಮಾಡಲಗೇರಿ ಗ್ರಾಮೀಣ ಪ್ರದೇಶ ಜೊತೆಗೆ ಕೃಷಿಯೇ ಪ್ರಧಾನ ಉದ್ಯೋಗ. ಹೀಗಾಗಿ ಎತ್ತು, ಎಮ್ಮೆ ಸೇರಿದಂತೆ ಸಾಕು ಪ್ರಾಣಿಗಳಿರುವುದು ಸಹಜ. ಗ್ರಂಥಾಲಯ ಹತ್ತಿರದ ರೈತರು ಜಾನುವಾರುಗಳನ್ನು ಕಿಟಕಿಗಳಿಗೆ ಕಟ್ಟುತ್ತಿದ್ದು ಹಾಳು ಕೊಂಪೆ ಎನಿಸಿದೆ. ಇಲ್ಲಿ ಮೇಲ್ವಿಚಾರಕರು ಸರಿಯಾಗಿ ಬಂದು ಕೆಲಸ ಮಾಡಿದರೆ ಮಾತ್ರ ರೈತರಿಗೆ ತಿಳಿ ಹೇಳಲು ಸಾಧ್ಯ ಎನ್ನುತ್ತಾರೆ ಓದುಗರು

ಸಾಯಂಕಾಲ ಬಂದ್‌ :  ಬೆಳಗ್ಗೆ 8 ಗಂಟೆಯಿಂದ 12 ಗಂಟೆಯವರೆಗೆ ಕಾರ್ಯನಿರ್ವಹಿಸಬೇಕು. ನಂತರ ಸಾಯಂಕಾಲ 4 ರಿಂದ 6 ರ ಗಂಟೆಯವರೆಗೆ ಬಾಗಿಲು ತೆರೆಯಬೇಕು. ಆದರೆ ಇಲ್ಲಿನ ಗ್ರಂಥಪಾಲಕ ಒಮ್ಮೆಯೂ ಸಾಯಂಕಾಲ ಗ್ರಂಥಾಲಯದ ಬಾಗಿಲು ತೆರೆದಿಲ್ಲ. ಇದರ ಮೇಲುಸ್ತುವರಿ ಮಾಡುವ ಅಧಿಕಾರಿಗಳು ಇತ್ತ ಕಡೆ ಗಮನ ಹರಿಸದಿರುವುದು ವಿಪರ್ಯಾಸ.

ಮೇಲ್ವಿಚಾರಕರು ಎರಡೇ ದಿನ ಪತ್ರಿಕೆಗಳನ್ನು ತರಿಸುತ್ತಾರೆ. ಇಲಾಖೆ ಇನ್ನಷ್ಟು ಅನುದಾನ ನೀಡಿ, ಇನ್ನೊಂದು ಕನ್ನಡ ಮತ್ತು ಇಂಗ್ಲಿಷ್‌ ಪತ್ರಿಕೆ ಕಳುಹಿಸಿದರೆ ಓದುಗರು, ಸ್ಫರ್ಧಾತ್ಮಕ ಪರೀಕ್ಷೆಗೆ ತಯಾರಿ ಮಾಡಿಕೊಳ್ಳುವ ವಿದ್ಯಾರ್ಥಿಗಳಿಗೆ ಹೆಚ್ಚಿನ ಅನುಕೂಲವಾಗಲಿದೆ. -ಕುಮಾರ ಅಸೂಟಿ, ಯುವಕ

 

-ಯಚ್ಚರಗೌಡ ಗೋವಿಂದಗೌಡ್ರ

ಟಾಪ್ ನ್ಯೂಸ್

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

1-gadaga

Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ

Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ

Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

6-fusion

Yugadi: ಯುಗಾದಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.