ಗಜೇಂದ್ರಗಡದಲ್ಲಿ 14 ಜನರಿಂದ ನಾಮಪತ್ರ
Team Udayavani, Dec 14, 2019, 1:30 PM IST
ಗಜೇಂದ್ರಗಡ: ಕರ್ನಾಟಕ ಬೀದಿ ಬದಿ ವ್ಯಾಪಾರಿಗಳ ಜೀವನೋಪಾಯ ಸಂರಕ್ಷಣೆ ಮತ್ತು ಬೀದಿ ಬದಿ ವ್ಯಾಪಾರ ನಿಯಂತ್ರಣ ನಿಯಮಗಳ ಅನ್ವಯ ನಡೆಯುತ್ತಿರುವ ಪಟ್ಟಣ ವ್ಯಾಪಾರ ಸಮಿತಿಗೆ ಡಿ. 21ರಂದು ಚುನಾವಣೆ ನಡೆಯಲಿದ್ದು, 14 ಜನ ಸ್ಥಳೀಯ ಬೀದಿಬದಿ ವ್ಯಾಪಾರಸ್ಥರು ಶುಕ್ರವಾರ ನಾಮಪತ್ರ ಸಲ್ಲಿಸಿದರು.
ಒಟ್ಟು 10 ಪ್ರತಿನಿಧಿಗಳನ್ನು ಆಯ್ಕೆ ಮಾಡಬೇಕಾಗಿದ್ದು, ಸಾಮಾನ್ಯ ಕ್ಷೇತ್ರಕ್ಕೆ ಮಂಜುನಾಥ ವಡ್ಡರ, ರಾಜೇಸಾಬ ಕಟ್ಟಿಮನಿ, ಮಹಿಳಾ ಮೀಸಲು ಕ್ಷೇತ್ರಕ್ಕೆ ಪಾರುಬಾಯಿ ರಾಠೊಡ, ಕವಿತಾ ಹೆಬ್ಬಳ್ಳಿ, ಅಂಬಕ್ಕ ನಾಯಕ್, ಚೌಡಮ್ಮ ಯಲು, ಹಿಂದುಳಿದ ವರ್ಗ ಕ್ಷೇತ್ರಕ್ಕೆ ಯಮನಪ್ಪ ಮಾಂಡ್ರೆ, ರಾಘವೇಂದ್ರ ಹೂಗಾರ, ಅಲ್ಪಸಂಖ್ಯಾತರ ಕ್ಷೇತ್ರಕ್ಕೆ ಬಾಷೇಸಾನ ಕರ್ನಾಚಿ, ಅಲ್ಲಾಭಕ್ಷಿ ಮುಚ್ಚಾಲಿ, ಪರಿಶಿಷ್ಟ ಜಾತಿ ಕ್ಷೇತ್ರಕ್ಕೆ ಚಂದ್ರಶೇಖರ ರಾಠೊಡ, ಪರಿಶಿಷ್ಟ ಪಂಗಡ ಕ್ಷೇತ್ರಕ್ಕೆ ಹುಲ್ಲಪ್ಪ ತಳವಾರ, ವಿಕಲಚೇತನ ಕ್ಷೇತ್ರಕ್ಕೆ ಮಂಜುಳಾ ಪಮ್ಮಾರ ಉಮೇದುವಾರಿಕೆ ಸಲ್ಲಿಸಿದ್ದಾರೆ.
ಡಿ. 14ರಂದು ಬೆಳಗ್ಗೆ 11ರಿಂದ 3ರ ವರೆಗೆ ನಾಮಪತ್ರ ಪರಿಶೀಲನೆ, ಸಿಂಧುವಾದ ನಾಮಪತ್ರ ಪ್ರಕಟಿಸಲಾಗುವುದು, ಡಿ. 15ರಂದು ಸಂಜೆ 5ರ ಒಳಗೆ ನಾಮಪತ್ರ ಹಿಂತೆಗೆದುಕೊಳ್ಳಬಹುದಾಗಿದೆ. ಡಿ. 21ರಂದು ಬೆಳಗ್ಗೆ 9ರಿಂದ ಸಂಜೆ 4ರ ವರೆಗೆ ಮತದಾನ. ನಂತರ ಚುನಾವಣಾ ಪ್ರಕ್ರಿಯೆ ಪೂರ್ಣಗೊಳಿಸಿ, ಚುನಾವಣಾ ಫಲಿತಾಂಶ ಪ್ರಕಟಿಸಲಾಗುವುದು ಎಂದು ಚುನಾವಣಾ ಅಧಿಕಾರಿ ಎಚ್.ವಿ. ನಾಗೋಲಿ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಗದಗ: ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
MUST WATCH
ಹೊಸ ಸೇರ್ಪಡೆ
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ