ಸಭೆಗೆ ಗೈರಾದ ಅಧಿಕಾರಿಗಳ ವಿರುದ್ಧ ನೋಟಿಸ್‌ ಜಾರಿಗೊಳಿಸಿ


Team Udayavani, Sep 26, 2018, 4:47 PM IST

26-sepctember-16.gif

ಮುಂಡರಗಿ: ಸಭೆಗೆ ಬಾರದಿರುವ ವಿವಿಧ ಇಲಾಖೆಯ ಅಧಿಕಾರಿಗಳ ವಿರುದ್ಧ ನೋಟಿಸ್‌ ಜಾರಿ ಮಾಡಬೇಕು. ಅಧಿಕಾರಿಗಳ ಪರವಾಗಿ ಬಂದಿರುವ ಇಲಾಖೆಯವರು ಸಭೆಯಿಂದ ಹೊರನಡೆಯಬೇಕು ಎಂದು ತಾಪಂ ಅಧ್ಯಕ್ಷೆ ರೇಣುಕಾ ಕೋರ್ಲಹಳ್ಳಿ ಸೂಚಿಸಿದ್ದಾರೆ. ತಾಪಂ ಸಾಮರ್ಥ್ಯ ಸೌಧದಲ್ಲಿ ನಡೆದ ತಾಪಂ ಸಾಮಾನ್ಯ ಸಭೆಯಲ್ಲಿ ಇಲಾಖಾವಾರು ಮಾಹಿತಿ ನೀಡಲು ಅಧಿಕಾರಿಗಳು ಮುಂದಾದಾಗ ಅಧ್ಯಕ್ಷೆ ರೇಣುಕಾ ಅಧಿಕಾರಿಗಳಿಗೆ ಸೂಚಿಸಿದರು.

ಕ್ರೀಡಾ ಇಲಾಖೆ, ಅಬಕಾರಿ, ಏತ ನೀರಾವರಿ, ಸಣ್ಣ ನೀರಾವರಿ, ಕೃಷಿ ಇಲಾಖೆಯವರು ಬಂದಿಲ್ಲ. ಕೃಷಿ ಇಲಾಖೆಯ ಎಸ್‌.ಬಿ. ನೆಗಳೂರು ಬದಲಾಗಿ ಬಂದಿರುವ ಅಧಿಕಾರಿಗಳು ಹೊರಗೆ ನಡೆಯಿರಿ. ತಾಲೂಕಿನಲ್ಲಿ ಬರಗಾಲವು ತಾಂಡವಾಡುತ್ತಿದೆ. ಕೃಷಿ ಇಲಾಖೆಯ ಅಧಿಕಾರಿ ಇಲ್ಲದೇ ಇದ್ದರೇ ಬೆಳೆಹಾನಿ, ರೈತರಿಗೆ ಪರಿಹಾರ ನೀಡುವ ಬಗ್ಗೆ ಚರ್ಚೆ ಮಾಡುವುದಾದರೂ ಹೇಗೆ. ಕೃಷಿ ಇಲಾಖೆಯ ಎಸ್‌.ಬಿ.ನೆಗಳೂರು ಸಭೆಗೆ ಬರಲು ಫೋನ್‌ ಮಾಡಿ ಎಂದಾಗ ಕೃಷಿ ಕೇಂದ್ರದ ಎಸ್‌.ಎನ್‌. ಕುದರಿಮೂತಿ ಸಹಾಯಕ ನಿರ್ದೇಶಕರು ಧಾರವಾಡಕ್ಕೆ ಹೋಗಿದ್ದಾರೆ ಎಂದಾಗ ಸಭೆಯಲ್ಲಿ ಇದ್ದ ತಾಪಂ ಇಒ ಎಸ್‌.ಎಸ್‌.ಕಲ್ಮನಿ ಫೋನ್‌ ಮಾಡಿದಾಗ ಸಭೆಗೆ ಹಾಜರಾಗಲು ಸೂಚನೆ ನೀಡಿದ್ದೇ, ನನ್ನ ಮಾತು ಮೀರಿ ಧಾರವಾಡಕ್ಕೆ ಹೋಗಿದ್ದಾರೆ. ಕಾರಣ ಕೇಳಿ ಎಸ್‌.ಬಿ.ನೆಗಳೂರು ನೋಟಿಸ್‌ ನೀಡುವುದಲ್ಲದೇ ಮೇಲಧಿಕಾರಿಗಳ ಗಮನಕ್ಕೂ ತರಲಾಗುತ್ತದೆ ಎಂದರು.

ಕಪ್ಪತ್ತಹಿಲ್ಸ್‌ ವಲಯ ಅರಣ್ಯಾಧಿಕಾರಿ ಎಂ.ಎಸ್‌.ನ್ಯಾಮತಿ ಸಭೆಗೆ ಬಾರದೆ ಕೆಳಗಿನ ಅಧಿಕಾರಿಯನ್ನು ಕಳುಹಿಸಿದ್ದಾರೆ. ಲೋಕೋಪಯೋಗಿ ಇಲಾಖೆಯ ಅಭಿಯಂತರ ಎ.ಎಸ್‌.ವಾಲಿ ಪರವಾಗಿ ಹಾರೋಗೇರಿ ಬಂದಿದ್ದಾರೆ. ಪ್ರತಿನಿಧಿ ಗಳು ಕಳುಹಿಸಿರುವ ಸಭೆಗೆ ಗೈರು ಹಾಜರಾದ ಅಧಿ ಕಾರಿಗಳಿಗೆ ಕಾರಣ ಕೇಳಿ ನೋಟಿಸ್‌ ಜಾರಿ ಮಾಡಲಾಗುತ್ತದೆ. ಅಧಿಕಾರಿಗಳ ಪರವಾಗಿ ಬಂದಿರುವವವರು ಸಭೆಗೆ ಮಾಹಿತಿ ನೀಡಿ, ಮುಂದಿನ ಬಾರಿ ಇಲಾಖೆಯ ಮುಖ್ಯಸ್ಥರೇ ಸಭೆಗೆ ಹಾಜರಾಗಿ ಮಾಹಿತಿ ನೀಡಬೇಕೆಂದು ಇಒ ಸೂಚಿಸಿದರು.

ತೋಟಗಾರಿಕೆ ಇಲಾಖೆಯ ಸುರೇಶ ಕುಂಬಾರ ತೋಟಗಾರಿಕೆ ಇಲಾಖೆಯಲ್ಲಿ ಬೆಳೆಗಳ ಕುರಿತು ನೂರು ಜನರಿಗೆ ತರಬೇತಿ ನೀಡಲಾಗುತ್ತಿದೆ. ಪರಿಶಿಷ್ಟ ಪಂಗಡದ ನಾಲ್ಕು ಜನರಿಗೆ ಟೆಂಗಿನತೋಟ ಮಾಡಿ ಕೊಡಲಾಗುತ್ತದೆ. ಫಲಾನುಭವಿಗಳ ಹೆಸರನ್ನು ಜನಪ್ರತಿನಿಧಿ ಗಳು ಆಯ್ಕೆ ಮಾಡಿ ಕೊಡಬೇಕು. ಉದ್ಯೋಗ ಖಾತ್ರಿಯಲ್ಲಿ ತೋಟಗಾರಿಕೆ ವತಿಯಿಂದ 13,485 ಕಾಮಗಾರಿ ಪೂರ್ಣಗೊಳಿಸಲಾಗಿದೆ. ಮೆಣಸಿನಕಾಯಿ, ಟೊಮೋಟೊ, ಬದನೆಕಾಯಿ ಬೆಳೆಗಳಿಗೆ 7.50ಲಕ್ಷ ವೆಚ್ಚದಲ್ಲಿ ರಿಯಾಯತಿಯಲ್ಲಿ ಹನಿ ನೀರಾವರಿ ಅಳವಡಿಸಿಕೊಡಲಾಗುತ್ತದೆ. ಬೆಳೆ ಸಮೀಕ್ಷೆಯ ಕಾರ್ಯ ನಡೆಯುತ್ತಿದ್ದು, ರೈತರು ಸಹಕರಿಸಬೇಕು. ತೋಟಗಾರಿಕೆಯ ಕಾರ್ಯಾಲಯದ ಕಟ್ಟಡವನ್ನು ನೂತನವಾಗಿ ನಿರ್ಮಿಸಲು ನೀಲನಕ್ಷೆ ತಯಾರಿಸಿ ಕೊಡಲಾಗಿದೆ ಎಂದರು.

ಪಟ್ಟಣದ ತಾಲೂಕಾಸ್ಪತ್ರೆಯಲ್ಲಿ ಸ್ವಚ್ಛತೆ, ಕುಡಿಯುವ ನೀರಿನ ಕೊರತೆಯ ಕುರಿತು ಸದಸ್ಯ ರುದ್ರಗೌಡ ಪಾಟೀಲ ತಾಲೂಕಾಸ್ಪತ್ರೆ ವೈದ್ಯಾಧಿಕಾರಿ ಡಾ.ಕೀರ್ತಿಹಾಸಗೆ ಪ್ರಶ್ನಿಸಿದಾಗ ಸ್ವಚ್ಛತೆ ಕಡೆಗೆ ಗಮನ ಹರಿಸಿದ್ದೇವೆ. ಪುರಸಭೆಯವರು ಕಸ ಹೇರಿಕೊಂಡು ಹೋಗುತ್ತಿಲ್ಲ ರುದ್ರಗೌಡ ಪಾಟೀಲ ಎಂದು ಆರೋಪಿಸಿದರು.

ಉಪಾಧ್ಯಕ್ಷೆ ಹೇಮಾವತಿ ಜನ್ನಾರಿ, ಸದಸ್ಯರಾದ ವೆಂಕಪ್ಪ ಬಳ್ಳಾರಿ, ಕುಸುಮಾ ಮೇಟಿ, ಪುಷ್ಪಾ ಪಾಟೀಲ, ಲಲಿತಾ ಎಲಿಗಾರ, ಬಸಪ್ಪ ಮಲ್ಲನಾಯ್ಕರ, ರುದ್ರಪ್ಪ ಬಡಿಗೇರ, ತಿಪ್ಪವ್ವ ಕಾರಬಾರಿ ಇದ್ದರು. ಬಿಇಒ ಎಸ್‌.ಎನ್‌. ಹಳ್ಳಿಗುಡಿ, ಹೆಸ್ಕಾಂನ ಎಂ.ಬಿ. ಗೌರೋಜಿ, ಬಿ.ಎನ್‌. ರಾಟಿ, ಆಕಾಶ ವಂದೆ, ಎಸ್‌.ಬಿ.ಹೊಸಳ್ಳಿ, ಎಸ್‌.ಎನ್‌. ಮಾಳ್ಳೋದೆಕರ ಮತ್ತಿತರರು ಮಾಹಿತಿ ನೀಡಿದರು.

ಟಾಪ್ ನ್ಯೂಸ್

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

1-gadaga

Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ

Gadag; ಮನೆ ಮಗನಿಂದಲೇ ಸುಪಾರಿ; ನಾಲ್ವರ ಹತ್ಯೆ ಪ್ರಕರಣ ಬೇಧಿಸಿದ ಪೊಲೀಸರು; 8 ಜನರ ಬಂಧನ

Gadag; ಮನೆ ಮಗನಿಂದಲೇ ಸುಪಾರಿ; ನಾಲ್ವರ ಹತ್ಯೆ ಪ್ರಕರಣ ಬೇಧಿಸಿದ ಪೊಲೀಸರು; 8 ಜನರ ಬಂಧನ

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

1-adsad

Gadag; ನಾಲ್ವರ ಬರ್ಬರ ಹತ್ಯೆ ಐವರು ದುಷ್ಕರ್ಮಿಗಳು ಮಾಡಿರುವ ಶಂಕೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.