ನರೇಗಾ ಕಾಯಕ ಜೀವನ ನಿರ್ವಹಣೆಗೆ ಸಹಕಾರಿ

ಜಿಲ್ಲಾ ಪಂಚಾಯಿತಿ ಸಿಇಒ ಡಾ|ಸುಶೀಲಾ ಅಭಿಮತ

Team Udayavani, May 26, 2022, 2:23 PM IST

13

ಗದಗ: ಗ್ರಾಮೀಣ ಪ್ರದೇಶಗಳಲ್ಲಿ ರೈತರಿಗೆ ಬೇಸಿಗೆಯಲ್ಲಿ ಕೃಷಿ ಕೆಲಸಗಳು ಹೆಚ್ಚಾಗಿ ಇರುವುದಿಲ್ಲ. ಹೀಗಾಗಿ, ರೈತರು ನರೇಗಾ ಕಾಮಗಾರಿಗಳಲ್ಲಿ ಕೂಲಿ ಕೆಲಸ ಪಡೆದುಕೊಳ್ಳಬೇಕು. ಇದರಿಂದ ಜೀವನ ನಿರ್ವಹಣೆಗೆ ಅನುಕೂಲವಾಗುತ್ತದೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ|ಸುಶೀಲಾ ಹೇಳಿದರು.

ತಾಲೂಕಿನ ಅಡವಿಸೋಮಾಪೂರ, ಲಕ್ಕುಂಡಿ ಹಾಗೂ ತಿಮ್ಮಾಪೂರ ಗ್ರಾಪಂ ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಪ್ರಗತಿಯಲ್ಲಿರುವ ಹಳ್ಳ ಹೊಳೆತ್ತುವ ಹಾಗೂ ಸಾಮೂಹಿಕ ಕಂದಕ, ಬದು ನಿರ್ಮಾಣ ಕಾಮಗಾರಿಗಳಲ್ಲಿ ನೂರಾರು ಅಕುಶಲ ಕೂಲಿಕಾರ್ಮಿಕರನ್ನು ಉದ್ದೇಶಿಸಿ ಅವರು ಮಾತನಾಡಿದರು.

ನರೇಗಾ ಯೋಜನೆಯಡಿ ಅನುಷ್ಠಾನ ಗೊಳಿಸುವ ಕಾಮಗಾರಿ ಹಾಗೂ ಕೂಲಿ ಕೆಲಸದಲ್ಲಿ ಪಾರದರ್ಶಕತೆ ತರಲು ಸರ್ಕಾರ ಕೆಲಸಗಾರರ ದಿನದ ಹಾಜರಾತಿ ಆನ್‌ಲೈನ್‌ ಮೂಲಕ ಕೆಲಸದ ಸ್ಥಳದಲ್ಲೇ ದಿನಕ್ಕೆ ಎರಡು ಬಾರಿ ಹಾಕಲು ಎನ್‌ ಎಂಎಂಎಸ್‌ ಆ್ಯಪ್‌ ಜಾರಿಗೆ ತಂದಿದೆ. ಹೀಗಾಗಿ, ಕೆಲಸ ಮಾಡುವವರು ಎರಡು ಬಾರಿ ಹಾಜರಾತಿ ಹಾಕುವ ವರೆಗೆ ಕಾಮಗಾರಿ ಸ್ಥಳದಲ್ಲೇ ಇರಬೇಕು. ಆಗ ಮಾತ್ರ ಕೆಲಸಗಾರರು ಕೆಲಸ ಮಾಡಿದ ಕೂಲಿ ಹಣ ಅವರ ಬ್ಯಾಂಕ್‌ ಖಾತೆಗೆ ಜಮೆಯಾಗುತ್ತದೆ ಎಂದು ತಿಳಿಸಿದರು.

ಮಳೆಗಾಲದಲ್ಲಿ ಹಳ್ಳ, ಕೊಳ್ಳಗಳ ಮೂಲಕ ಹರಿದು ನದಿ, ಸಮುದ್ರ ಸೇರಿ ವ್ಯರ್ಥವಾಗಿ ಹೋಗುವ ನೀರನ್ನು ತಡೆಯಲು ಕಂದಕ, ಬದು ನಿರ್ಮಾಣದಿಂದ ಕಂದಕಗಳಲ್ಲಿ ಇಂಗಿಸಿ ಸೆರೆ ಹಿಡಿಯಬಹುದು. ಇದರಿಂದ ಭೂಮಿಯ ಅಂತರ್ಜಲ ಮಟ್ಟ ಹೆಚ್ಚುತ್ತದೆಯಲ್ಲದೇ, ನಮ್ಮ ಮುಂದಿನ ಮನುಕೂಲಕ್ಕೆ ಜಲ ಸಂಪತ್ತನ್ನು ಉಳಿಸಿಕೊಳ್ಳಲು ಸಾಧ್ಯವಾಗುತ್ತದೆ ಎಂದರು.

ಉದ್ಯೋಗ ಖಾತ್ರಿ ಯೋಜನೆಯಡಿ ಕೂಲಿ ಕೆಲಸ ನಿರ್ವಹಿಸುವ ಕಾರ್ಮಿಕರೊಂದಿಗೆ ಸಂವಾದ ನಡೆಸಿದ ಸಿಇಒ, ಯೋಜನೆ ತಮ್ಮ ಕುಟುಂಬ ನಿರ್ವಹಣೆಗೆ ನೆರವಾಗಿರುವ ಬಗ್ಗೆ ಮಾಹಿತಿ ಪಡೆದರು. ಅಲ್ಲದೇ, ಹೆಚ್ಚು ಹೆಚ್ಚು ಕಾರ್ಮಿಕರು ಖಾತ್ರಿ ಯೋಜನೆಯಲ್ಲಿ ಪಾಲ್ಗೊಳ್ಳುವ ಮೂಲಕ ಕುಟುಂಬದ ಆರ್ಥಿಕ ಸಬಲತೆಗೆ ಮುಂದಾಗಬೇಕೆಂದರು.

ಈ ಸಂದರ್ಭದಲ್ಲಿ ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಮೌನೇಶ ಬಡಿಗೇರಿ, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು, ತಾಲೂಕು ಐಇಸಿ ಸಂಯೋಜಕರು, ನರೇಗಾ ತಾಂತ್ರಿಕ ಸಂಯೋಜಕರು, ಗ್ರಾಪಂ ತಾಂತ್ರಿಕ ಸಹಾಯಕರು, ಬಿಎಫ್‌ಟಿ ಹಾಗೂ ಗ್ರಾಮ ಕಾಯಕ ಮಿತ್ರರು ಇದ್ದರು.

ನರೇಗಾ ಯೋಜನೆಯಡಿ ಅನುಷ್ಠಾನಗೊಳಿಸುವ ಕಾಮಗಾರಿ ಹಾಗೂ ಕೂಲಿ ಕೆಲಸದಲ್ಲಿ ಪಾರದರ್ಶಕತೆ ತರಲು ಸರ್ಕಾರ ಕೆಲಸಗಾರರ ದಿನದ ಹಾಜರಾತಿಯನ್ನು ಆನ್‌ಲೈನ್‌ ಮೂಲಕ ದಿನಕ್ಕೆ ಎರಡು ಬಾರಿ ಕೆಲಸದ ಸ್ಥಳದಲ್ಲೇ ಹಾಕಲು ಎನ್‌ಎಂಎಂಎಸ್‌ ಆ್ಯಪ್‌ ಜಾರಿಗೆ ತಂದಿದೆ. ಡಾ|ಸುಶೀಲಾ, ಜಿಪಂ ಸಿಇಒ

ಟಾಪ್ ನ್ಯೂಸ್

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮದು ಬಡವರಿಗೆ ಬದುಕು ಕಟ್ಟಿ ಕೊಡುವ ಪ್ರಣಾಳಿಕೆ: ಬಸವರಾಜ ಬೊಮ್ಮಾಯಿ

Gadag; ನಮ್ಮದು ಬಡವರಿಗೆ ಬದುಕು ಕಟ್ಟಿ ಕೊಡುವ ಪ್ರಣಾಳಿಕೆ: ಬಸವರಾಜ ಬೊಮ್ಮಾಯಿ

1-wqeqweqwe

Panchmasali ಸಮಾಜಕ್ಕೆ ಬಿಜೆಪಿಯಿಂದ ಅನ್ಯಾಯ: ವಚನಾನಂದ ಸ್ವಾಮೀಜಿ

ವೀರೇಶ್ವರ ಪುಣ್ಯಾಶ್ರಮಕ್ಕೆ ಭೇಟಿ ನೀಡಿ ಗದ್ದುಗೆಯ ದರ್ಶನಾಶೀರ್ವಾದ ಪಡೆದ ಶ್ರೀರಾಮುಲು

Gadag; ವೀರೇಶ್ವರ ಪುಣ್ಯಾಶ್ರಮಕ್ಕೆ ಭೇಟಿ ನೀಡಿ ಗದ್ದುಗೆಯ ದರ್ಶನಾಶೀರ್ವಾದ ಪಡೆದ ಶ್ರೀರಾಮುಲು

Naregal; ಪ್ರೇಮಿಯೊಂದಿಗೆ ನೇಣಿಗೆ ಶರಣಾದ ನವವಿವಾಹಿತೆ!

Naregal; ಪ್ರೇಮಿಯೊಂದಿಗೆ ನೇಣಿಗೆ ಶರಣಾದ ನವವಿವಾಹಿತೆ!

ವಚನಾನಂದ ಶ್ರೀಗಳ ಮಾತನ್ನು ಗಂಭೀರವಾಗಿ ಪರಿಗಣಿಸುತ್ತೇವೆ: ಬಸವರಾಜ ಬೊಮ್ಮಾಯಿ

Gadag; ವಚನಾನಂದ ಶ್ರೀಗಳ ಮಾತನ್ನು ಗಂಭೀರವಾಗಿ ಪರಿಗಣಿಸುತ್ತೇವೆ: ಬಸವರಾಜ ಬೊಮ್ಮಾಯಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.