ಕೋವಿಡ್ ಕೇರ್ನಲ್ಲಿ ಲೋಪವಾದರೆ ಅಧಿಕಾರಿಗಳೇ ಹೊಣೆ: ಜಿಲ್ಲಾಧಿಕಾರಿ
Team Udayavani, Aug 8, 2020, 2:29 PM IST
ಗದಗ: ಕೆಲ ದಿನಗಳಿಂದ ಸತತವಾಗಿ ಸುರಿದ ಮಳೆಯಿಂದಾಗಿ ಮಲಪ್ರಭಾ, ತುಂಗಭದ್ರ ಹಾಗೂ ಬೆಣ್ಣೆಹಳ್ಳ ಪಾತ್ರದ ಜಿಲ್ಲೆಯ ನರಗುಂದ, ರೋಣ ಹಾಗೂ ಮುಂಡರಗಿ ತಾಲೂಕಿನ ಗ್ರಾಮಗಳಲ್ಲಿ ತೀವ್ರ ನಿಗಾವಹಿಸಬೇಕು. ಪ್ರವಾಹಕ್ಕೊಳಗಾಗಬಹುದಾದ ಗ್ರಾಮಗಳಲ್ಲಿ ಮುನೆಚ್ಚರಿಕೆ ಕ್ರಮವಾಗಿ ಗಾಮಗಳಲ್ಲಿ ಡಂಗುರ ಸಾರಬೇಕು. ಈ ಮೂಲಕ ಸಾರ್ವಜನಿಕರಿಗೆ ತಿಳಿವಳಿಕೆ ನೀಡಬೇಕು ಎಂದು ಜಿಲ್ಲಾಧಿಕಾರಿ ಎಂ. ಸುಂದರೇಶ್ ಬಾಬು ಅಧಿಕಾರಿಗಳಿಗೆ ಸೂಚಿಸಿದರು.
ಜಿಪಂ ವಿಡಿಯೋ ಕಾನ್ಫೆರೆನ್ಸ್ ಸಭಾಂಗಣದಲ್ಲಿ ಜರುಗಿದ ಜಿಲ್ಲೆಯ ತಾಲೂಕು ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು. ನೆರೆ ಸಂತ್ರಸ್ತರಿಗೆ ಗುರುತಿಸಲಾದ ಪರಿಹಾರ ಕೇಂದ್ರಗಳಿಗೆ ಅಧಿಕಾರಿಗಳು ಭೇಟಿ ನೀಡಿ ಮೂಲಭೂತ ಸೌಕರ್ಯಗಳ ಕುರಿತು ಪರಿಶೀಲಿಸಬೇಕು. ಅಲ್ಲದೇ ಇಂತಹ ಸಂದರ್ಭಲ್ಲಿ ಸಾಂಕ್ರಾಮಿಕ ರೋಗಗಳು ಹಾಗೂ ವಿಷ ಜಂತುಗಳ ಹಾವಳಿ ಹೆಚ್ಚಾಗಬಹುದಾಗಿದ್ದು ಚಿಕಿತ್ಸೆಗಾಗಿ ವೈದ್ಯಕೀಯ ಸಿಬ್ಬಂದಿ ಹಾಗೂ ಔಷಧಗಳನ್ನು ದಾಸ್ತಾನಿಟ್ಟುಕೊಳ್ಳುವಂತೆ ನಿರ್ದೇಶಿಸಿದರು. ಗೃಹ ದಿಗ್ಬಂಧನದಲ್ಲಿರುವವರ ಮೇಲೆ ನಿರಂತರ ನಿಗಾವಹಿಸಿ, ನಿಗದಿತ ಅವಧಿಯೊಳಗೆ ವರದಿ ನೀಡಬೇಕು. ಕೋವಿಡ್-19 ಸೋಂಕಿತರಿಗೆ ಖಾಸಗಿ ಆಸ್ಪತ್ರೆಗಳು ಸರ್ಕಾರ ನಿಗದಿಪಡಿಸಿದ ದರಗಳಲ್ಲಿ ಚಿಕಿತ್ಸೆ ಒದಗಿಸಬೇಕು. ನಿಗದಿಪಡಿಸಿದ ದರಕ್ಕಿಂತ ಹೆಚ್ಚಿನ ಶುಲ್ಕ ಪಡೆಯುವುದು ಹಾಗೂ ಚಿಕಿತ್ಸೆ ನಿರಾಕರಿಸುವ ಆಸ್ಪತ್ರೆಗಳ ವಿರುದ್ಧ ವಿರುದ್ಧ ಕ್ರಮ ಜರುಗಿಸಬೇಕು. ಸೋಂಕು ನಿಯಂತ್ರಣಕ್ಕಾಗಿ ಈಗಾಗಲೇ ತಾಲೂಕು ಮಟ್ಟದಲ್ಲಿ ಸಮಿತಿ ರಚಿಸಿದ್ದು, ನಿಯಮಿತವಾಗಿ ಸಭೆ ಜರುಗಿಸಿ ವರದಿ ಮಾಡದೇ ಇದ್ದರೆ ಇದನ್ನು ಗಂಭೀರವಾಗಿ ಪರಿಗಣಿಸಲಾಗುವುದು ಎಂದರು.
ಜಿಪಂ ಸಿಇಒ ಡಾ| ಆನಂದ ಕೆ. ಮಾತನಾಡಿ, ಸೋಂಕು ನಿಯಂತ್ರಣಕ್ಕಾಗಿ ಗ್ರಾಮ ಪಂಚಾಯತ್ ಮಟ್ಟದಲ್ಲಿ ಟಾಸ್ಕ್ ಫೋರ್ಸ್ ಸಮಿತಿ ರಚಿಸಿದ್ದು, ಈ ಸಮಿತಿ ಪ್ರತಿನಿತ್ಯ ಸಭೆ ನಡೆಸಬೇಕು. ಪ್ರವಾಹಕ್ಕೊಳಗಾಗಬಹುದಾದ ಜಿಲ್ಲೆಯ ಗ್ರಾಮಗಳಲ್ಲಿ ಸಾರ್ವಜನಿಕ ಜಾಗೃತಿ ಹಾಗೂ ಒದಗಿಸಬಹುದಾದ ಸೌಕರ್ಯಗಳ ಕುರಿತು ಚರ್ಚಿಸಿ ಕ್ರಮ ಕೈಗೊಳ್ಳುವಂತೆ ಸೂಚಿಸಿದರು. ಎಸ್ಪಿ ಯತೀಶ ಎನ್. ಮಾತನಾಡಿ, ಗೃಹ ದಿಗ್ಬಂಧನ ಉಲ್ಲಂಘಿಸುವವರ ವಿರುದ್ಧ ಕ್ರಮ ಜರುಗಿಸಬೇಕು. ಕೋವಿಡ್ ಕೇರ್ ಕೇಂದ್ರಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವವರು ಹೊರಬರದಂತೆ ಅಗತ್ಯದ ಪೊಲೀಸ್ ಸಿಬ್ಬಂದಿಯನ್ನು ಒದಗಿಸಲಾಗುವುದು ಎಂದರು.
ಅಪರ ಜಿಲ್ಲಾಧಿಕಾರಿ ಸತೀಶ್ ಕುಮಾರ ಎಂ., ಉಪ ವಿಭಾಗಾಧಿಕಾರಿ ರಾಯಪ್ಪ ಹುಣಸಗಿ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ರುದ್ರೇಶ ಎಸ್.ಎನ್. ನಗರ ಸಭೆ ಪೌರಾಯುಕ್ತ ಮನ್ಸೂರ ಅಲಿ, ತಹಶೀಲ್ದಾರ್ ಶ್ರೀನಿವಾಸಮೂರ್ತಿ ಕುಲಕರ್ಣಿ, ಡಿಎಚ್ಒ ಡಾ| ಸತೀಶ ಬಸರೀಗಿಡದ ಸೇರಿದಂತೆ ಇತರರಿದ್ದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಗದಗ: ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ
MUST WATCH
ಹೊಸ ಸೇರ್ಪಡೆ
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ