ಸೋಂಕು ನಿಯಂತ್ರಣಕ್ಕೆ ಅಧಿಕಾರಿಗಳ ಸಮನ್ವಯತೆ ಅಗತ್ಯ


Team Udayavani, Jul 10, 2020, 4:48 PM IST

ಸೋಂಕು ನಿಯಂತ್ರಣಕ್ಕೆ ಅಧಿಕಾರಿಗಳ ಸಮನ್ವಯತೆ ಅಗತ್ಯ

ಗದಗ: ಕೋವಿಡ್‌-19 ಸೋಂಕು ಪರಿಣಾಮಕಾರಿಯಾಗಿ ನಿಯಂತ್ರಿಸಲು ವಿವಿಧ ಇಲಾಖೆಗಳ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಎಂ. ಸುಂದರೇಶ್‌ ಬಾಬು ಕಟ್ಟುನಿಟ್ಟಿನ ಸೂಚನೆ ನೀಡಿದರು.

ಜಿಲ್ಲಾಡಳಿತ ಭವನದ ವಿಡಿಯೋ ಕಾನ್ಫೆರೆನ್ಸ್‌ ಸಭಾಂಗಣದಲ್ಲಿ ನಡೆದ ಎಲ್ಲ ತಾಲೂಕು ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು. ತಾಲೂಕು ಮಟ್ಟದಲ್ಲಿ ಸೋಂಕು ನಿಯಂತ್ರಿಸಲು ತಹಶೀಲ್ದಾರ್‌, ತಾಪಂ ಇಒ, ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳು ಹಾಗೂ ವೈದ್ಯಾಧಿಕಾರಿಗಳ ಸಮಿತಿ ರಚಿಸಿ, ವಾರಕ್ಕೆ ಎರಡು ಬಾರಿ ಸಭೆ ನಡೆಸಿ ವರದಿ ನೀಡಬೇಕು. ಸಭೆ ಜರಗುವ ಮುನ್ನ ಕ್ವಾರಂಟೈನ್‌ ಕೇಂದ್ರ ಹಾಗೂ ಪ್ರತಿಬಂಧಿತ ಪ್ರದೇಶಗಳಿಗೆ ಭೇಟಿ ನೀಡಬೇಕು. ಕ್ವಾರಂಟೈನ್‌ ಕೇಂದ್ರದಲ್ಲಿರುವವರಿಗೆ ಸರಿಯಾದ ವಸತಿ, ಊಟದ ವ್ಯವಸ್ಥೆ, ಕುಡಿಯಲು ನೀರು ಒದಗಿಸಲು ಕ್ರಮಕೈಗೊಳ್ಳಬೇಕು ಎಂದು ನಿರ್ದೇಶಿಸಿದರು.

ಮದುವೆ, ಸಭೆ, ಸಮಾರಂಭ, ಹಾಗೂ ಶವ ಸಂಸ್ಕಾರ ಕಾರ್ಯಕ್ರಮಗಳಿಗೆ ಸಂಬಂಧಿಸಿದ ಆಯಾ ತಾಲೂಕು ತಹಶೀಲ್ದಾರ್‌ರಿಂದ ಕಡ್ಡಾಯವಾಗಿ ಅನುಮತಿ ಪಡೆಯಬೇಕು. ಗ್ರಾಮೀಣ ಪ್ರದೇಶದಲ್ಲಿ ಸೋಂಕು ಹರಡದಂತೆ ಸಾರ್ವಜನಿಕ ಮುಂಜಾಗ್ರತಾ ಕ್ರಮಗೊಳ್ಳಬೇಕು. ಜನರಲ್ಲಿ ಸೋಂಕಿನ ಬಗ್ಗೆ ಕಡ್ಡಾಯವಾಗಿ ವ್ಯಾಪಕ ಜಾಗೃತಿ ಮೂಡಿಸಬೇಕು. ಕ್ವಾರಂಟೈನ್‌ ನಿಯಮ ಉಲ್ಲಂಘಿಸುವವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ವಾರ್ಡ್‌ವಾರು ಸಮಿತಿ ರಚಿಸಿ ಸೋಂಕು ತಡೆಗೆ ಅಗತ್ಯ ಕ್ರಮಗಳ ಕುರಿತು ಜಾಗೃತಿ ಮೂಡಿಸಬೇಕು. ಮಾಸ್ಕ್ ಧರಿಸದವರಿಗೆ ದಂಡ ವಿಧಿಸಿ. ಸೋಂಕಿತರ ಪ್ರಾಥಮಿಕ ಸಂಪರ್ಕಿತರನ್ನು 24 ಗಂಟೆಯೊಳಗೆ ಪತ್ತೆ ಹಚ್ಚಬೇಕು ಎಂದು ಜಿಲ್ಲಾಧಿಕಾರಿ ನಿರ್ದೇಶನ ನೀಡಿದರು.

ಜಿಪಂ ಸಿಇಒ ಡಾ| ಆನಂದ್‌ ಕೆ. ಮಾತನಾಡಿ, ದಿಗ್ಬಂಧನದಲ್ಲಿರುವರು ನಿಗದಿತ ಅವಧಿ ವರೆಗೆ ಮನೆಯಿಂದ ಹೊರಗೆ ಹೋಗದಂತೆ ನಿಗಾ ವಹಿಸಲು ಅವರಿಂದ ಸೆಲ್ಫೀ  ಛಾಯಾಚಿತ್ರ ಕಳುಹಿಸಲು ಸೂಚಿಸಬೇಕು. ನಿಯಮಿತವಾಗಿ ಭೇಟಿ ನೀಡಿ ನಿಗಾವಹಿಸಬೇಕು ಎಂದರು.

ಎಸ್‌ಪಿ ಯತೀಶ್‌ ಎನ್‌. ಮಾತನಾಡಿ, ಕ್ವಾರಂಟೈನ್‌ ನಿಯಮ ಉಲ್ಲಂಘಿಸುವವರ ವಿರುದ್ಧ ದೂರು ದಾಖಲಿಸುವ ಮುನ್ನ ಅಗತ್ಯ ಮಾಹಿತಿ ಹಾಗೂ ದಾಖಲೆ ಸಂಗ್ರಹಿಸಲು ಸೂಚಿಸಿದರು. ಮದುವೆ, ಸಮಾರಂಭ, ಶವ ಸಂಸ್ಕಾರಕ್ಕೆ ಅನುಮತಿ ನೀಡಿರುವ ವಿವರಗಳನ್ನು ಆಯಾ ಠಾಣೆಗಳಿಗೂ ಒದಗಿಸುವಂತೆ ತಿಳಿಸಿದ ಅವರು, ಸ್ಥಳೀಯ ಸಂಸ್ಥೆ ಹಾಗೂ ಪೊಲೀಸ್‌ ಇಲಾಖೆಗಳು ಸಮನ್ವಯತೆಯಿಂದ ಮಾಸ್ಕ್ ಧರಿಸದವರಿಗೆ ದಂಡ ವಿಧಿಸುವಂತೆ ಸೂಚನೆ ನೀಡಿದರು.

ಅಪರ ಜಿಲ್ಲಾಧಿಕಾರಿ ಸತೀಶ್‌ ಕುಮಾರ ಎಂ., ಉಪ ವಿಭಾಗಾಧಿ ಕಾರಿ ರಾಯಪ್ಪ ಹುಣಸಗಿ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ರುದ್ರೇಶ ಎಸ್‌. ಎನ್‌., ಗದಗ-ಬೆಟಗೇರಿ ನಗರ ಸಭೆ ಪೌರಾಯುಕ್ತ ಮನ್ಸೂರ ಅಲಿ, ತಹಶೀಲ್ದಾರ್‌ ಶ್ರೀನಿವಾಸಮೂರ್ತಿ ಕುಲಕರ್ಣಿ, ಡಿಎಚ್‌ಒ ಡಾ| ಸತೀಶ ಬಸರೀಗಡ, ಡಾ| ಎಸ್‌. ಎಸ್‌. ನೀಲಗುಂದ ಸೇರಿದಂತೆ ಜಿಲ್ಲೆಯ ಎಲ್ಲ ತಹಶೀಲ್ದಾರ್‌ರು, ಸ್ಥಳೀಯ ಸಂಸ್ಥೆ ಮುಖ್ಯಾಧಿಕಾರಿಗಳು ವಿಡಿಯೋ ಕಾನ #ರೆನ್ಸ್‌ ನಲ್ಲಿ ಭಾಗವಹಿಸಿದ್ದರು.

ಟಾಪ್ ನ್ಯೂಸ್

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

1-gadaga

Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.