ಜನಪ್ರತಿನಿಧಿಗಳಿಗೆ ಕಾದು ಸುಸ್ತಾದ ಅಧಿಕಾರಿಗಳು

•ಎರಡು ತಾಸು ತಡವಾಗಿ ಸಭೆ ಪ್ರಾರಂಭ•ಸಭೆಯಿಂದ ಹೊರ ನಡೆದ ತಾಪಂ ಇಬ್ಬರು ಸದಸ್ಯರು

Team Udayavani, Jun 20, 2019, 10:39 AM IST

gadaga-tdy-2..

ಮುಂಡರಗಿ: ತಾಲೂಕು ಪಂಚಾಯತ್‌ ಸಾಮಾನ್ಯ ಸಭೆಗೆ ಜನಪ್ರತಿನಿಧಿಗಳಿಗಾಗಿ ಅಧಿಕಾರಿಗಳು ಕಾಯುತ್ತಿರುವುದು.

ಮುಂಡರಗಿ: ಇಲ್ಲಿನ ಸಾಮರ್ಥ್ಯ ಸೌಧದಲ್ಲಿ ಹಮ್ಮಿಕೊಂಡಿದ್ದ ಸಾಮಾನ್ಯ ಸಭೆಗೆ ಜನಪ್ರತಿನಿಧಿಗಳು ನಿಗದಿತ ಸಮಯಕ್ಕೆ ಆಗಮಿಸದೇ ಇದ್ದುದ್ದರಿಂದ ಅಧಿಕಾರಿಗಳು ಸುಮಾರು 2 ಗಂಟೆ ಕಾಲ ಕಾಯ್ದು ಕಾಯ್ದು ಸುಸ್ತಾದ ಘಟನೆ ನಡೆಯಿತು.

ಪಟ್ಟಣದ ತಾಪಂ ಕಾರ್ಯಾಲಯದ ಆವರಣದಲ್ಲಿರುವ ಸಾಮರ್ಥ್ಯ ಸೌಧದಲ್ಲಿ ಸಾಮಾನ್ಯ ಸಭೆ ಬೆಳಗ್ಗೆ 10:30ಕ್ಕೆ ನಿಗದಿಯಾಗಿತ್ತು. ಆದರೆ, ಅಧಿಕಾರಿಗಳು ಸಭೆಗೆ ಬಂದರೂ ತಾಪಂ ಅಧ್ಯಕ್ಷೆ ರೇಣುಕಾ ಕೋರ್ಲಹಳ್ಳಿ, ಉಪಾಧ್ಯಕ್ಷೆ ಹೇಮಾವತಿ ಕನ್ನಾರಿ, ತಾಪಂ ಇಒ ಎಸ್‌.ಎಸ್‌. ಕಲ್ಮನಿ ಸೇರಿದಂತೆ ಉಳಿದ ಸದಸ್ಯರು ಸಭೆ ನಡೆಯುವ ಸಾಮರ್ಥ್ಯ ಸೌಧಕ್ಕೆ ಬರದೇ ಅಧ್ಯಕ್ಷರ ಕೊಠಡಿಯಲ್ಲಿಯೇ ಬಿಸಿಬಿಸಿ ಚರ್ಚೆಯಲ್ಲಿ ಪಾಲ್ಗೊಂಡಿದ್ದರು.

ನಂತರ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ತಾಪಂ ಇಒ ಸೇರಿ ಇತರರು 12:30ಕ್ಕೆ ಆಗಮಿಸಿ ಸಭೆ ಆರಂಭಿಸಿದರು. ಅಧಿಕಾರಿಗಳ ಬದಲಾಗಿ ಇಲಾಖೆಯಿಂದ ಯಾರಾದರೂ ಬಂದಿದ್ದರೆ ಸಭೆಯಿಂದ ಹೊರಹೋಗಲು ಅಧ್ಯಕ್ಷೆ ರೇಣುಕಾ ಕೋರ್ಲಹಳ್ಳಿ ಸೂಚಿಸಿದರು.

ಕೃಷಿ ಇಲಾಖೆ, ಚಿಕ್ಕ ನೀರಾವರಿ ಇಲಾಖೆ, ಕಾರ್ಮಿಕ ಇಲಾಖೆ ಅಧಿಕಾರಿಗಳು ಸಭೆಗೆ ಬಂದಿಲ್ಲ. ಬಿಸಿಎಂ ಅಧಿಕಾರಿ, ಲೋಕೋಪಯೋಗಿ ಇಲಾಖೆಯವರು ಮಾಹಿತಿ ಕೊಟ್ಟು ಹೋಗಿದ್ದಾರೆ. ಕೈಗಾರಿಕೆ, ಅಬಕಾರಿ, ತಹಶೀಲ್ದಾರರನ್ನು ಸಭೆಗೆ ಕರೆಯಿರಿ ಎಂದರು.

ತಾಪಂ ಇಒ ಎಸ್‌.ಎಸ್‌. ಕಲ್ಮನಿಯವರು ಮಾತನಾಡಿ, ತಹಶೀಲ್ದಾರರು ಪಿಡಿಒಗಳ ಜೊತೆ ಫೇ-ಕಿಸಾನ್‌ ಯೋಜನೆ ಬಗ್ಗೆ ಸಭೆ ನಡೆಸಿದ್ದು, ಉಳಿದವರಿಗೆ ದೂರವಾಣಿ ಮಾಡಲಾಗುವುದು ಎಂದರು. ಬರಗಾಲದ ಹಿನ್ನೆಲೆಯಲ್ಲಿ ಕೃಷಿಯ ಬಗ್ಗೆ ಚರ್ಚೆಯಾಗಬೇಕಿದ್ದ ವಿಷಯಗಳು ಇದ್ದರೂ, ಕೃಷಿ ಇಲಾಖೆಯ ಅಧಿಕಾರಿ ಎಸ್‌.ಬಿ. ನೆಗಳೂರು, ಕಾರ್ಮಿಕ, ಅಬಕಾರಿ ಇಲಾಖೆ ಅಧಿಕಾರಿಗಳು ಸಭೆಗೆ ಗೈರಾಗಿದ್ದರು.

ಸಭೆ ಪ್ರಾರಂಭವಾದ ನಂತರ ಬಂದ ಸದಸ್ಯ ವೆಂಕಪ್ಪ ಬಳ್ಳಾರಿಯವರಿಗೆ ಕುಳಿತುಕೊಳ್ಳಲು ಆಸನವೇ ಇಲ್ಲದ ಕಾರಣಕ್ಕೆ ವೆಂಕಪ್ಪ ಬಳ್ಳಾರಿ ಸಿಟ್ಟಿಗೆದ್ದ ಮೇಲೆಯೇ ಆಸನದ ವ್ಯವಸ್ಥೆ ಮಾಡಿದ ಘಟನೆ ನಡೆಯಿತು.

ಹೆಸ್ಕಾಂನ ಎಂ.ಬಿ. ಗೌರೋಜಿ ಮಾತನಾಡಿ, ಗಂಗಾ ಕಲ್ಯಾಣ ಯೊಜನೆಯ ಹದಿನಾರು ಸಂಪರ್ಕ ಕೊಡಬೇಕಿದೆ. ನಿರಂತರ ಜ್ಯೋತಿಯ ಕಾಮಗಾರಿಗಳು ಪ್ರಗತಿಯಲ್ಲಿವೆ ಎಂದು ಮಾಹಿತಿ ನೀಡಿದರು. ಅಧ್ಯಕ್ಷೆ ರೇಣುಕಾ ಕೋರ್ಲಹಳ್ಳಿ ಡಂಬಳದ ಹೇಸ್ಕಾಂನ ಕಾರ್ಯಾಲಯದಲ್ಲಿ ಯಾರು ಇರುವುದಿಲ್ಲ. ಅಲ್ಲಿರುವ ಸಿಬ್ಬಂದಿಗೆ ಕಚೇರಿಯಲ್ಲಿ ಸೂಚಿಸಬೇಕು ಎಂದು ತಿಳಿಸಿದರು.

ಬಿಇಒ ಎಸ್‌.ಎನ್‌. ಹಳ್ಳಿಗುಡಿ ಮಾತನಾಡಿ, ಗುರುಭವನಕ್ಕೆ ಅನುದಾನ ಬಿಡುಗಡೆಯಾಗಿದ್ದರೂ ನಿರ್ಮಿತಿ ಕೇಂದ್ರದವರು ಕಾಮಗಾರಿ ಪ್ರಾರಂಭಿಸುತ್ತಿಲ್ಲ. ನಿರ್ಮಿತಿ ಕೇಂದ್ರ ಮತ್ತು ಭೂಸೇನಾ ನಿಗಮದ ಅಧಿಕಾರಿಗಳು ಕಾಮಗಾರಿಗಳನ್ನು ಅಪೂರ್ಣಗೊಳಿಸುತ್ತಾರೆ. ಬೇರೆಯವರಿಂದ ಒತ್ತಡ ಹೇರಿ ಕಟ್ಟಡ ಪೂರ್ಣವಾಗಿರುವ ಬಗ್ಗೆ ಸಹಿ ಮಾಡಿಸಿಕೊಳ್ಳುತ್ತಾರೆ ಎಂದಾಗ ಸಭೆಯಲ್ಲಿದ್ದ ನಿರ್ಮಿತಿ ಕೇಂದ್ರದ ನೀಲಗುಂದ, ಸಂತೋಷ ಮಾಳ್ಳೋದೆಕರ ಮುಂದೆ ಹೀಗಾಗದಂತೆ ನೋಡಿಕೊಳ್ಳುತ್ತೆವೆ. ಗುರುಭವನದ ಕಾಮಗಾರಿ ಪ್ರಾರಂಭಿಸಲಾಗುವುದು ಎಂದರು.

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ವೈ.ಬಿ. ಕುದರಿ ಮಾತನಾಡಿ, ಬಂದ್‌ ಆಗಿರುವ ಶುದ್ಧ ನೀರಿನ ಘಟಕಗಳನ್ನು ಮತ್ತೆ ಆರಂಭಿಸಲು ಟೆಂಡರ್‌ ಕರೆಯಲಾಗುವುದು. ರಾಷ್ಟ್ರೀಯ ಕುಡಿಯುವ ನೀರಿನ ಯೋಜನೆಯಲ್ಲಿ 45.50 ಲಕ್ಷ ಕಾಮಗಾರಿ ಮಾಡಲಾಗಿದೆ ಎಂದರು.

ಸದಸ್ಯ ರುದ್ರಗೌಡ ಪಾಟೀಲ ಮಾತನಾಡಿ, ಟೆಂಡರ್‌ ಕರೆಯದೆ ಕಾಮಗಾರಿ ಮಾಡಿರುವುದು ಸರಿಯಲ್ಲ. ನಿಯಮ ಉಲ್ಲಂಘಿಸಲಾಗಿದೆ ಎಂದರು. ಆಗ ವೈ.ಬಿ. ಕುದರಿ ಅವರು ಶಾಸಕರ ಶಿಫಾರಸಿನ ಮೇರೆಗೆ ಕಾಮಗಾರಿ ಮಾಡಲಾಗಿದೆ ಎಂದರು. ಆಗ ರುದ್ರಗೌಡ ಪಾಟೀಲ ಶಿಫಾರಸು ಮಾಡಿದವರನ್ನೇ ಕರೆದು ಸಭೆ ನಡೆಸಿ ನಾವು ಸಭೆಗೆ ಬರುವದಿಲ್ಲವೆಂದು ಸಭೆಯಿಂದ ಹೊರ ನಡೆದಾಗ ಅವರ ಜೊತೆಗೆ ಬಸಪ್ಪ ಮಲ್ಲನಾಯ್ಕರ ಸಭೆಯಿಂದ ಹೊರ ನಡೆದರು.

ತೋಟಗಾರಿಕೆ ಇಲಾಖೆಯ ಸುರೇಶ ಕುಂಬಾರ, ಆರೋಗ್ಯ ಇಲಾಖೆಯ ಡಾ| ಕೆ. ಬಸವರಾಜ, ಅಭಿಯಂತರ ರಮೇಶ, ಪಶು ಸಂಗೋಪನೆಯ ಡಾ| ಎಸ್‌.ವಿ. ತಿಗರಿಮಠ, ಕಪ್ಪತ್ತಹಿಲ್ಸ್ನ ಎಸ್‌.ಎಂ. ಶಿವರಾತ್ರೇಶರಯ್ಯ ಸಭೆಗೆ ಮಾಹಿತಿ ನೀಡಿದರು.

ತಾಪಂ ಸದಸ್ಯರಾದ ಕುಸುಮಾ ಮೇಟಿ, ತಿಪ್ಪಮ್ಮ ಕಾರಭಾರಿ, ಪುಷ್ಪಾ ಪಾಟೀಲ, ವೆಂಕಪ್ಪ ಬಳ್ಳಾರಿ, ರುದ್ರಪ್ಪ ಬಡಿಗೇರ ಚರ್ಚೆಯಲ್ಲಿ ಪಾಲ್ಗೊಂಡಿದ್ದರು.

ವೇದಿಕೆಯಲ್ಲಿ ತಾಪಂ ಅಧ್ಯಕ್ಷೆ ರೇಣುಕಾ ಕೋರ್ಲಹಳ್ಳಿ,ಉಪಾಧ್ಯಕ್ಷೆ ಹೇಮಾವತಿ ಕನ್ನಾರಿ, ಇಒ ಎಸ್‌.ಎಸ್‌. ಕಲ್ಮನಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

ನಮ್ಮದು ಬಡವರಿಗೆ ಬದುಕು ಕಟ್ಟಿ ಕೊಡುವ ಪ್ರಣಾಳಿಕೆ: ಬಸವರಾಜ ಬೊಮ್ಮಾಯಿ

Gadag; ನಮ್ಮದು ಬಡವರಿಗೆ ಬದುಕು ಕಟ್ಟಿ ಕೊಡುವ ಪ್ರಣಾಳಿಕೆ: ಬಸವರಾಜ ಬೊಮ್ಮಾಯಿ

1-wqeqweqwe

Panchmasali ಸಮಾಜಕ್ಕೆ ಬಿಜೆಪಿಯಿಂದ ಅನ್ಯಾಯ: ವಚನಾನಂದ ಸ್ವಾಮೀಜಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

17-uv-fusion

Holi: ಹೋಳಿ ಹುಣ್ಣಿಮೆ ಹಿನ್ನೆಲೆ

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

16-fusion

UV Fusion: ಎಳೆಯರಿಗೂ ಒಂದಿಷ್ಟು ಸಮಯ ಮೀಸಲಿಡೋಣ

15-uv-fusion

Time management: ತಂತ್ರಜ್ಞಾನ ಯುಗದಲ್ಲಿ ಸಮಯ ನಿರ್ವಹಣೆ ಮುಖ್ಯ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.