ಮಲ್ಲಸಮುದ್ರದಲ್ಲಿ ಓಂಕಾರೇಶ್ವರ ಹಿರೇಮಠ ಲೋಕಾರ್ಪಣೆ


Team Udayavani, Apr 30, 2019, 2:20 PM IST

gad-2

ಗದಗ: ಮಲ್ಲಸಮುದ್ರದ ಓಂಕಾರೇಶ್ವರ ಗಿರಿಯಲ್ಲಿ ನೂತನವಾಗಿ ಸ್ಥಾಪಿಸಲ್ಪಟ್ಟ ಓಂಕಾರೇಶ್ವರ ಹಿರೇಮಠ ಲೋಕಾರ್ಪಣೆ ಹಾಗೂ ಮಠದ ಫಕ್ಕೀರೇಶ್ವರ ಸ್ವಾಮಿಗಳ ಜನ್ಮ ಸುವರ್ಣ ಮಹೋತ್ಸವ ಜರುಗಿತು.

ಸವದತ್ತಿ ಗೋರವನಕೊಳ್ಳದ ಬ್ರಹ್ಮಾನಂದ ಆಶ್ರಮದ ಶಿವಾನಂದ ಸ್ವಾಮೀಜಿ ಮಾತನಾಡಿ, ಫಕ್ಕಿರೇಶ್ವರ ಸ್ವಾಮಿಗಳು ಕಳೆದ ನಾಲ್ಕು ದಶಕಗಳಿಂದ ಆಧ್ಯಾತ್ಮಿಕ ಕ್ಷೇತ್ರಕ್ಕೆ ತಮ್ಮನ್ನು ತಾವು ಅರ್ಪಿಸಿಕೊಂಡಿದ್ದಾರೆ. ಯಾವುದೇ ಆಡಂಬರ, ಅಂತಸ್ತುಗಳಿಗೆ ಆಸೆ ಪಡದೆ, ಪರಂಪರೆಗೆ ಸೀಮಿತವಾಗದೆ, ಸರ್ವ ಜನಾಂಗದ ಪ್ರೀತಿಗೆ ಪಾತ್ರರಾದ ಸರಳತೆ ಹಾಗೂ ಜ್ಞಾನ ದೀವಿಗೆಯನ್ನು ಹೊತ್ತಿಸುವ ಮೂಲಕ ಜನರ ಪ್ರೀತಿ ಗಳಿಸಿದ್ದಾರೆ. ನಾಡಿನ ಧಾರ್ಮಿಕ ಹಾಗೂ ಸಾಮಾಜಿಕ ಕ್ಷೇತ್ರಕ್ಕೆ ಓಂಕಾರೇಶ್ವರ ಹಿರೇಮಠದ ಫಕ್ಕೀರೇಶ್ವರ ಸ್ವಾಮಿಗಳ ಕೊಡುಗೆ ಅಪಾರ ಎಂದು ಹೇಳಿದರು.

ಜಿಲ್ಲಾ ವಚನ ಸಾಹಿತ್ಯ ಹಾಗೂ ಸಾಂಸ್ಕೃತಿಕ ಪರಿಷತ್ತಿನ ಅಧ್ಯಕ್ಷ ಡಾ| ರಾಜೇಂದ್ರ ಗಡಾದ ಮಾತನಾಡಿ, ಮೃಡಗಿರಿ ಅನ್ನದಾನೇಶ್ವರ ಮಠದ ಹಿಂದಿನ ಜಗದ್ಗುರುಗಳ ವಂಶಸ್ಥರಾದ ಫಕ್ಕೀರೇಶ್ವರ ಸ್ವಾಮಿಗಳು ಈ ನಾಡಿನಲ್ಲಿ ನಡೆಯುವ ಎಲ್ಲ ಸಭೆ ಸಮಾರಂಭಗಳಲ್ಲಿ ಭಾಗವಹಿಸಿ ತಮ್ಮ ಸರಳ, ಸಜ್ಜನಿಕೆಯಿಂದ ಅಪಾರ ಸಂಖ್ಯೆಯ ಭಕ್ತರ ಮನಸ್ಸನ್ನು ಗೆದ್ದಿದ್ದಾರೆ.

ವಿಶ್ವಶಾಂತಿಗಾಗಿ ಸತತ 23 ವರ್ಷಗಳ ಕಾಲ ಅನೇಕ ಕಡೆ ಮೌನ ಅನುಷ್ಠಾನ ಮಾಡಿರುವ ಶ್ರೀಗಳು, ನಾಡಿನಲ್ಲಿಯೇ ಮೊದಲ ಬಾರಿಗೆ ಮಹಿಳೆಯರಿಗೆ ರುದ್ರಪಠಣವನ್ನು ಕಲಿಸಿದ ಕೀರ್ತಿಗೆ ಪಾತ್ರರಾಗಿದ್ದಾರೆ. ಈ ಭಾಗದಲ್ಲಿ ನಡೆದ ಕಳಸಾಬಂಡೂರಿ, ಮಹದಾಯಿ ನೀರಿನ ಹೋರಾಟ, ಕನ್ನಡ ಶಾಸ್ತ್ರೀಯ ಸ್ಥಾನಮಾನದ‌ ಹೋರಾಟ, ಪೋಸ್ಕೋ ಚಳವಳಿ, ಕಪ್ಪತ್ತಗುಡ್ಡ ಸಂರಕ್ಷಣಾ ಹೋರಾಟ, ರೈಲ್ವೆ ಚಳವಳಿಗಳಲ್ಲಿ ಸಕ್ರಿಯವಾಗಿ ಪಾಲ್ಗೊಂಡಿದ್ದಾರೆ ಎಂದರು.

ಮುದ್ರಣ ಭಾಸ್ಕರ ಬಸವರಾಜ ಶಾಬಾದಿಮಠ ಅವರು ಬರೆದ ಸುಚಿಂತನ ಹಾಗೂ ಜ್ಞಾನ ಕಲ್ಪ ವಚನ ಗ್ರಂಥಗಳನ್ನು ಬಿಡುಗಡೆ ಮಾಡಿದರು. ಓಂಕಾರೇಶ್ವರ ವನ, ಓಂಕಾರೇಶ್ವರ ಗ್ರಂಥಾಲಯ ಲೋಕಾರ್ಪಣೆಗೊಂಡವು. ಮಾಜಿ ಸೈನಿಕರಿಗೆ ಹಾಗೂ ಪ್ರಗತಿಪರ ರೈತರನ್ನು ಸನ್ಮಾನಿಸಲಾಯಿತು. ಕೆ.ಎನ್‌. ದದೇಗಲ್ಲ, ಡಾ| ರಾಜೇಂದ್ರ ಗಡಾದ, ಜಿ.ವಿ. ಹಾವಣಗಿ, ಎಚ್.ಎಸ್‌. ವೆಂಕಟಾಪುರ ಮೊದಲಾದವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

ನಮ್ಮದು ಬಡವರಿಗೆ ಬದುಕು ಕಟ್ಟಿ ಕೊಡುವ ಪ್ರಣಾಳಿಕೆ: ಬಸವರಾಜ ಬೊಮ್ಮಾಯಿ

Gadag; ನಮ್ಮದು ಬಡವರಿಗೆ ಬದುಕು ಕಟ್ಟಿ ಕೊಡುವ ಪ್ರಣಾಳಿಕೆ: ಬಸವರಾಜ ಬೊಮ್ಮಾಯಿ

1-wqeqweqwe

Panchmasali ಸಮಾಜಕ್ಕೆ ಬಿಜೆಪಿಯಿಂದ ಅನ್ಯಾಯ: ವಚನಾನಂದ ಸ್ವಾಮೀಜಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.