ಜಮೀನಿನಲ್ಲೇ ಈರುಳ್ಳಿ ಬೆಳೆ ಕಳ್ಳತನ
Team Udayavani, Nov 30, 2019, 2:41 PM IST
ನರೇಗಲ್ಲ: ಪಟ್ಟಣದ ಹೊರವಲಯದಲ್ಲಿ ರೈತರೊಬ್ಬರು ಉತ್ತಮವಾಗಿ ಬೆಳೆದಿದ್ದ ಈರುಳ್ಳಿ ಬೆಳೆ ಹೊಲದಲ್ಲೇ ಕಳ್ಳತನವಾದ ಘಟನೆ ನಡೆದಿದೆ.
ಪಟ್ಟಣ ರೈತ ಗುರುಬಸಯ್ಯಕಳಕಯ್ಯ ಪ್ರಭುಸ್ವಾಮಿಮಠ ಎಂಬುವವರು ದ್ಯಾಮವ್ವನ ಕೆರೆರಸ್ತೆಯಲ್ಲಿ ಸ್ಥಳೀಯ ರೈತರೊಬ್ಬರ 1.5ಎಕರೆ ಜಮೀನನ್ನು 1.80 ಲಕ್ಷ ರೂ.ಗಳಿಗೆ ಬಡ್ಡಿಯಂತೆ ವ್ಯವಸಾಯ ಮಾಡಿದ್ದರು. ಸುಮಾರು 50 ಸಾವಿರ ಖರ್ಚು ಮಾಡಿ ಈರುಳ್ಳಿ ಬಿತ್ತನೆ ಮಾಡಲಾಗಿತ್ತು. ಈ ವರ್ಷ ಈರುಳ್ಳಿಯು ಉತ್ತಮವಾಗಿ ಬೆಳೆದು ಕೈತುಂಬ ಲಾಭ ಗಳಿಸುವನಿರೀಕ್ಷೆಯಲ್ಲಿದ್ದರು. ಆದರೆ ನ. 26 ಜಮೀನಿನಲ್ಲೇ ಈರುಳ್ಳಿ ಬೆಳೆಕಳ್ಳತನವಾಗಿದೆ. ರಾತ್ರೋರಾತ್ರಿ ಸುಮಾರು 5-6 ಜನರು ಈರುಳ್ಳಿ ಹಾಗೂ ಸುಮಾರು 25 ಕೆ.ಜಿ ಯಷ್ಟುಮೆಣಸಿನಕಾಯಿ ಕಳ್ಳತನ ಮಾಡಿದ್ದಾರೆ. ರಸ್ತೆಗೆ ಹೊಂದಿಕೊಂಡಿರುವ ಜಮೀನು ಆದ್ದರಿಂದ ರಸ್ತೆಯಲ್ಲಿಯೇ ವಾಹನ ನಿಲ್ಲಿಸಿ ನಾಲ್ಕೈದು ಜನರ ತಂಡ ಈರುಳ್ಳಿ ಕಿತ್ತುಕೊಂಡು ಹೋಗಿದ್ದಾರೆ.
ಎನ್ನಲಾಗುತ್ತಿದೆ. ಮಾರುಕಟ್ಟೆಯಲ್ಲಿ ಈರುಳ್ಳಿಗೆ ಉತ್ತಮ ಬೆಲೆ ಇರುವುದರಿಂದ ಈ ಕಳ್ಳತನ ನಡೆದಿದೆ ಎನ್ನಲಾಗಿದೆ.1.5 ಎಕರೆಯಲ್ಲಿ ಈರುಳ್ಳಿ ಉತ್ತಮವಾಗಿ ಬೆಳೆದಿತ್ತು. ಈರುಳ್ಳಿ ಕಿಳಲು ಕಾರ್ಮಿಕರು ಸಿಗದ ಕಾರಣ ಈರುಳ್ಳಿ ಕಿಳುವುದು ಸ್ವಲ್ಪ ವಿಳಂಬವಾಗಿತ್ತು. ಅಲ್ಲದೇ ಸ್ವಲ್ಪ ಹಸಿ ಇದ್ದ ಕಾರಣ ಇನ್ನೆರಡು ದಿನಗಳ ನಂತರಕೀಳಲು ಯೋಚಿಸಲಾಗಿತ್ತು. ಶುಕ್ರವಾರ ಜಮೀನಿಗೆ ಹೋಗಿ ಬಂದಿದ್ದೇನೆ. ನಂತರ ಮಂಗಳವಾರ ಜಮೀನಿಗೆ ಹೋದಾಗ ಈರುಳ್ಳಿ ಕಳ್ಳತನವಾದ ಬಗ್ಗೆ ತಿಳಿದಿದೆ. ಸುಮಾರು 1.5 ಲಕ್ಷ ರೂ.ಗಳ ಆದಾಯ ನಿರೀಕ್ಷಿಸಿದ್ದೆ. ಆದರೆ, ಎಲ್ಲವು ಕಳ್ಳರ ಪಾಲಾಗಿದೆ ಎಂದು ನೊಂದು ನುಡಿಯುತ್ತಾರೆ ರೈತ ಗುರುಬಸಯ್ಯ ಪ್ರಭುಸ್ವಾಮಿಮಠ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗದಗ: ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ
Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ
MUST WATCH
ಹೊಸ ಸೇರ್ಪಡೆ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು