ಜನೌಷಧಿ ಕೇಂದ್ರ ಆರಂಭಿಸಿ
Team Udayavani, Sep 27, 2019, 1:00 PM IST
ಶಿರಹಟ್ಟಿ: ಬಡವರ ಮತ್ತು ಮಧ್ಯಮ ವರ್ಗದವರನ್ನು ದೃಷ್ಟಿಕೋನದಲ್ಲಿ ಇಟ್ಟುಕೊಂಡು, ಅವರಿಗೆ ಅನುಕೂಲವಾಗುವಂತೆ ಪ್ರಧಾನಮಂತ್ರಿ ಯೋಜನೆಯಾದ ಜನೌಷಧಿ ಕೇಂದ್ರವನ್ನು ಪಟ್ಟಣದಲ್ಲಿ ಆರಂಭಿಸುವಂತೆ ಜಿಪಂ ಮಾಜಿ ಅಧ್ಯಕ್ಷ ವಿಶ್ವನಾಥ ಕಪ್ಪತ್ತನವರ ಒತ್ತಾಯಿಸಿದರು.
ಗುರುವಾರ ಸರಕಾರಿ ಆರೋಗ್ಯ ಇಲಾಖೆಯ ಆರೋಗ್ಯ ಸಮಿತಿ ಸದಸ್ಯರೊಂದಿಗೆ ಕೂಡಿಕೊಂಡು ಪಟ್ಟಣದ ಸರಕಾರಿ ದವಾಖಾನೆಯ ಆಡಳಿತ ಅಧಿಕಾರಿ ಡಾ| ಚಂದ್ರು ಲಮಾಣಿ ಅವರನ್ನು ಈ ಕುರಿತು ಅವರು ಒತ್ತಾಯಿಸಿದರು. ಸುತ್ತಲು ಗ್ರಾಮಗಳಿಂದ ಮತ್ತು ಹೆಚ್ಚಾಗಿ ಕೃಷಿ ಮತ್ತು ಕಾರ್ಮಿಕ ವರ್ಗದವರಿಂದ ಕುಡಿರುವ ಶಿರಹಟ್ಟಿ ಪಟ್ಟಣಕ್ಕೆ ಜನೌಷಧಿ ಕೇಂದ್ರದ ಅವಶ್ಯಕತೆ ಎಲ್ಲೆಡೆಗಿಂತ ಹೆಚ್ಚಾಗಿದೆ. ಆದರೆ ಈ ಕೂರಿತು ಆರೋಗ್ಯ ಇಲಾಖೆ ಅಧಿಕಾರಿಗಳು ಚಿಂತಿಸದಿರುವುದು ವಿಪರ್ಯಾಸದ ಸಂಗತಿ. ಕೂಡಲೇ ಸಂಬಂಧಪಟ್ಟ ಅಧಿಕಾರಿಗಳೊಡನೆ ಚರ್ಚಿಸಿ ಇಲ್ಲಿನ ಸಾರ್ವಜನಿಕರಿಗೆ ಕಡಿಮೆ ಬೆಲೆಯಲ್ಲಿ ಔಷಧಿ ನೀಡುವ ಭಾರತಿಯ ಜನೌಷಧಿ ಕೇಂದ್ರವನ್ನು ಒದಗಿಸಿಕೊಡುವಂತೆ ಒತ್ತಾಯಿಸಿದರು.
ಆರೋಗ್ಯ ಸಮಿತಿ ಸದಸ್ಯರಾದ ನಾಗರಾಜ ಲಕ್ಕಂಡಿ, ಯಲ್ಲಪ್ಪ ಇಂಗಳಗಿ, ಸುರೇಶ ಚಿಕ್ಕತೋಟದ, ಅನಿಲ ಮಾನೆ, ಸಂತೋಷ ಕುಬೇರ, ಸುಧೀರ ಜಮಖಂಡಿ, ಜಗದೀಶ ತೇಲಿ ಮುಂತಾದವರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ
Gajendragad; ದಕ್ಷಿಣ ಕಾಶಿ ಕಾಲಕಾಲೇಶ್ವರ ಅದ್ದೂರಿ ರಥೋತ್ಸವ
Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’
Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ
Gadag; ಮನೆ ಮಗನಿಂದಲೇ ಸುಪಾರಿ; ನಾಲ್ವರ ಹತ್ಯೆ ಪ್ರಕರಣ ಬೇಧಿಸಿದ ಪೊಲೀಸರು; 8 ಜನರ ಬಂಧನ
MUST WATCH
ಹೊಸ ಸೇರ್ಪಡೆ
Shikaripur; ಸಂಭ್ರಮದ ಹುಚ್ಚರಾಯಸ್ವಾಮಿ ಬ್ರಹ್ಮ ರಥೋತ್ಸವ:ಯಡಿಯೂರಪ್ಪ ಕುಟುಂಬ ಭಾಗಿ
Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ
Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ
Dr Rajkumar: ಇಂದು ರಾಜ್ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ