ಕೋವಿಡ್-19 ಚಿಕಿತ್ಸಾ ಕೇಂದ್ರ ಸ್ಥಾಪನೆಗೆ ವಿರೋಧ
Team Udayavani, Jul 19, 2020, 11:57 AM IST
ಗಜೇಂದ್ರಗಡ: ಜನವಸತಿ ಪ್ರದೇಶವಾಗಿರುವ ಪಟ್ಟಣದ ಕುಷ್ಟಗಿ ರಸ್ತೆ ಬಳಿ ಬಾಲಕಿಯರ ವಸತಿ ನಿಲಯದಲ್ಲಿ ತಾಲೂಕಾಡಳಿತ ಕೋವಿಡ್-19 ಚಿಕಿತ್ಸಾ ಕೇಂದ್ರ ತೆರೆಯಲು ಮುಂದಾಗಿರುವುದನ್ನು ವಿರೋಧಿಸಿ ಅಲ್ಲಿನ ನಿವಾಸಿಗಳು ಶನಿವಾರ ಪ್ರತಿಭಟನೆ ನಡೆಸಿದರು.
ಕುಷ್ಟಗಿ ರಸ್ತೆ ಬಳಿ ಸಮಾಜ ಕಲ್ಯಾಣ ಇಲಾಖೆ ಪರಿಶಿಷ್ಟ ಜಾತಿ-ಪಂಗಡಗಳ ಬಾಲಕಿಯರ ವಸತಿ ನಿಲಯದಲ್ಲಿ ಕೋವಿಡ್ ಸೋಂಕಿತರ ಚಿಕಿತ್ಸಾ ಕೇಂದ್ರ ಸ್ಥಾಪಿಸಲು ತಾಲೂಕಾಡಳಿತ ಮುಂದಾಗಿರುವುದು ಸುತ್ತಲಿನ ನಿವಾಸಿಗಳಿಗೆ ಭೀತಿಯನ್ನುಂಟು ಮಾಡಿದೆ. ಹೀಗಾಗಿ ಈ ಕೇಂದ್ರ ಬೇರೆಡೆ ತೆರೆಯಬೇಕೆಂದು ಒತ್ತಾಯಿಸಿದರು.
ವಸತಿ ನಿಲಯ ಸುತ್ತಲೂ ಮನೆಗಳು ಮತ್ತು ಕೃಷಿ ಚಟುವಟಿಕೆಗಳಿಗೆ ನಿತ್ಯ ರೈತರು ಇದೇ ರಸ್ತೆಯಲ್ಲಿಯೇ ಸಂಚರಿಸುತ್ತಾರೆ. ಜೊತೆಗೆ ಹೊಲಗಳಲ್ಲಿ ಮನೆ ಮಾಡಿಕೊಂಡು ವಾಸವಿದ್ದಾರೆ. ಇಂತಹ ಜನವಸತಿ ಪ್ರದೇಶದಲ್ಲಿ ಕೋವಿಡ್ -19 ಚಿಕಿತ್ಸಾ ಕೇಂದ್ರ ತೆರೆಯುವುದು ಸಮಂಜಸವಲ್ಲ. ಬದಲಾಗಿ ಚಿಕಿತ್ಸಾ ಕೇಂದ್ರವನ್ನು ನಿರ್ಜನ ಪ್ರದೇಶದಲ್ಲಿನ ಕಟ್ಟಡದಲ್ಲಿ ತೆರೆದು ಸೋಂಕಿತರಿಗೆ ಚಿಕಿತ್ಸೆ ನೀಡಬೇಕೆಂದು ಮನವಿ ಮಾಡಿದರು.
ಸ್ಥಳಕ್ಕೆ ತಹಶೀಲ್ದಾರ್ ಎ.ಬಿ. ಕಲಘಟಗಿ, ಶಿರಸ್ತೆದಾರ ವೀರಣ್ಣ ಅಡಗತ್ತಿ ಭೇಟಿ ನೀಡಿ, ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ಎಲ್ಲ ಸುರಕ್ಷತಾ ಕ್ರಮ ಕೈಗೊಳ್ಳಲಾಗುವುದು ಎಂದು ಮನವೊಲಿಸಿದರು. ಇದಕ್ಕೊಪ್ಪದ ಅಲ್ಲಿನ ನಿವಾಸಿಗಳು ಕೋವಿಡ್ ಚಿಕಿತ್ಸಾ ಕೇಂದ್ರ ಈ ವಸತಿ ನಿಲಯದಲ್ಲಿ ತೆರೆಯಲು ಮುಂದಾದರೆ, ಮುಂದಾಗುವ ಅವಘಡಗಳಿಗೆ ತಾಲೂಕಾಡಳಿತವೇ ಹೊಣೆ ಎಂದು ಎಚ್ಚರಿಸಿದರು.
ವೈದ್ಯಾಧಿಕಾರಿ ಸಂಗಮೇಶ ಬಂಕದ, ತಹಶೀಲ್ದಾರ್ ಕಚೇರಿಯ ಗಣೇಶ ಕೊಡಕೇರಿ ಸೇರಿದಂತೆ ಪೊಲೀಸರು ಸೂಕ್ತ ಬಂದೋಬಸ್ತ್ ಒದಗಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗದಗ: ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ
Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ
MUST WATCH
ಹೊಸ ಸೇರ್ಪಡೆ
Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ