ವೀರರಾಣಿ ಕಿತ್ತೂರು ಚನ್ನಮ್ಮರ 199ನೇ ವಿಜಯೋತ್ಸವ-244ನೇ ಜಯಂತ್ಯುತ್ಸವ

ಡಿ.4 ರಂದು ಮಂಜುನಾಥ ಮಾಗಡಿ ಪಂಚಮಸಾಲಿ ಬೃಹತ್‌ ಜನಜಾಗೃತಿ ಸಮಾವೇಶ

Team Udayavani, Dec 2, 2022, 3:57 PM IST

18

ಲಕ್ಷ್ಮೇಶ್ವರ: ತಾಲೂಕು ವೀರಶೈವ ಲಿಂಗಾಯತ ಪಂಚಮಸಾಲಿ ಸಂಘದಿಂದ ಡಿ.4ರ ಭಾನುವಾರ ಬೆಳಿಗ್ಗೆ 10.30ಕ್ಕೆ ಪಟ್ಟಣದ ಶ್ರೀ ಸೋಮೇಶ್ವರ ತೇರಿನ ಮನೆ ಆವರಣದಲ್ಲಿ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ, ಕೇಂದ್ರದ ಓಬಿಸಿ ಮೀಸಲಾತಿಗೆ ಆಗ್ರಹಿಸಿ, ಜಿಲ್ಲಾಮಟ್ಟದ ಬೃಹತ್‌ ಜನಜಾಗೃತಿ ಸಮಾವೇಶ ಹಾಗೂ ವೀರರಾಣಿ ಕಿತ್ತೂರು ಚನ್ನಮ್ಮನವರ 199ನೇ ವಿಜಯೋತ್ಸವ, 244ನೇ ಜಯಂತ್ಯುತ್ಸವ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ತಾಲೂಕು ಅಧ್ಯಕ್ಷ ಮಂಜುನಾಥ ಮಾಗಡಿ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಮಾವೇಶದ ಸಾನ್ನಿಧ್ಯವನ್ನು ಹರಿಹರ ಪಂಚಮ ಸಾಲಿ ಪೀಠದ ಜಗದ್ಗುರು ಶ್ರೀ ವಚನಾನಂದ ಮಹಾಸ್ವಾಮೀಜಿ ವಹಿಸುವರು. ಅಂದು ಬೆಳಿಗ್ಗೆ 8ಕ್ಕೆ ಪಟ್ಟಣದ ಹಳೆ ಬಸ್‌ ನಿಲ್ದಾಣದ ಬಳಿಯ ಚನ್ನಮ್ಮನವರ ಮೂರ್ತಿಗೆ ಪೂಜೆ ಸಲ್ಲಿಸುವುದ ರೊಂದಿಗೆ ಕಿತ್ತೂರ ರಾಣಿ ಚನ್ನಮ್ಮಾಜಿ ಭಾವಚಿತ್ರದ ಮೆರವಣಿಗೆಗೆ ಚಾಲನೆ ನೀಡಲಾಗುವುದು. 10 ಜಾನಪದ ಕಲಾ ತಂಡಗಳು, ಮಹಿಳೆಯರ ಪೂರ್ಣಕುಂಭದೊಂದಿಗೆ ಪಟ್ಟಣದ ಪ್ರಮುಖ ಮಾರ್ಗಗಳಲ್ಲಿ ಮೆರವಣಿಗೆ ನಡೆಯಲಿದೆ ಎಂದರು.

ಮೆರವಣಿಗೆ ಬಳಿಕ ನಡೆಯುವ ಸಭಾ ಕಾರ್ಯಕ್ರಮವನ್ನು ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲ ಉದ್ಘಾಟಿಸುವರು. ಬೃಹತ್‌ ಮತ್ತು ಮಧ್ಯಮ ಕೈಗಾರಿಕೆ ಸಚಿವ ಮುರಗೇಶ ನಿರಾಣಿ ಕಿತ್ತೂರ ರಾಣಿ ಚನ್ನಮ್ಮನವರ ಭಾವಚಿತ್ರ ಅನಾವರಣಗೊಳಿಸುವರು. ಸಕ್ಕರೆ ಮತ್ತು ಜವಳಿ ಖಾತೆ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಮತ್ತು ಸಂಸದ ಸಂಗಣ್ಣ ಕರಡಿ ಅವರು ಸ್ಮರಣ ಸಂಚಿಕೆ ಬಿಡುಗಡೆಗೊಳಿಸುವರು. ಶಾಸಕರಾದ ಕಳಕಪ್ಪ ಬಂಡಿ ಮತ್ತು ವಿರೂಪಾಕ್ಷಪ್ಪ ಬಳ್ಳಾರಿ ಚನ್ನಮ್ಮಶ್ರೀ ಹರಶ್ರೀ ಗೌರವಾರ್ಪಣೆ ನೆರವೇರಿಸುವರು.

ಶಾಸಕರಾದ ಅರುಣಕುಮಾರ ಪೂಜಾರ, ರಾಮಣ್ಣ ಲಮಾಣಿ, ಮಾಜಿ ಶಾಸಕ ಜಿ.ಎಂ. ಮಹಾಂತಶೆಟ್ಟರ, ರಾ.ವೀ.ಲಿಂ.ಪಂ. ಸಂಘದ ರಾಜ್ಯಾಧ್ಯಕ್ಷ ಜಿ.ಪಿ.ಪಾಟೀಲ, ಬಾವಿ ಬೆಟ್ಟಪ್ಪ, ಬಿ.ಸಿ. ಉಮಾಪತಿ, ಬಸವರಾಜ ದಿಂಡೂರ, ವಸಂತಾ ಹುಲ್ಲತ್ತಿ, ನಾಗರಾಜ ಕುಂಕೋದ್‌, ಈರಣ್ಣ ಕರಿಬಿಷ್ಟಿ, ಎಸ್‌.ವಿ. ಪಾಟೀಲ, ಸಿ.ಕೆ. ರಾಚನಗೌಡ್ರ, ಅನಿಲಕುಮಾರ ಪಲ್ಲೇದ, ಸಿದ್ದು ಪಾಟೀಲ, ಸುರೇಶ ಕಾಜಗಾರ, ಬಿ.ಡಿ. ಪಲ್ಲೇದ, ಅನ್ನಪೂರ್ಣ ಮಹಾಂತಶೆಟ್ಟರ, ರಾಜ್ಯ, ಜಿಲ್ಲಾ, ತಾಲೂಕು ಘಟಕಗಳ ವಿವಿಧ ವಿಭಾಗಗಳ ಪದಾಧಿಕಾರಿಗಳು, ವಿವಿಧ ಸಮಾಜಗಳ ಅಧ್ಯಕ್ಷರು, ಹಿರಿಯರು ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದರು.

ಸಮಾಜದ ಬಡ ಮಕ್ಕಳ ಶಿಕ್ಷಣ, ಉದ್ಯೋಗ, ಮಹಿಳಾ ಸಬಲೀಕರಣ, ರೈತರ ಆರ್ಥಿಕ ಅಭಿವೃದ್ಧಿ, ನೌಕರರ ಪದೋನ್ನತಿ, ರಾಜಕೀಯ ಅವಕಾಶ ಸೇರಿದಂತೆ ಪಂಚಮಸಾಲಿ ಸಮಾಜದ ಸರ್ವತೋಮುಖ ಪ್ರಗತಿಗಾಗಿ ಮೀಸಲಾತಿಯ ನಮ್ಮ ಹಕ್ಕನ್ನು ಪಡೆಯುವ ನಿಟ್ಟನಲ್ಲಿ ಸರ್ಕಾರದ ಗಮನ ಸೆಳೆಯುವುದು ಸಮಾವೇಶದ ಉದ್ದೇಶ ವಾಗಿದೆಯೇ ಹೊರತಾಗಿ, ಬೇರೆ ಯಾವುದೇ ಸಮಾಜದವರ ಮೀಸಲಾತಿ ಕಸಿಯುವ ಹಕ್ಕೊತ್ತಾಯ ನಮ್ಮ ಸಮಾಜದ್ದಲ್ಲ ಎಂದರು.

ಸಮಾವೇಶದ ಯಶಸ್ಸಿಗಾಗಿ ಕಳೆದ ಹತ್ತಾರು ದಿನಗಳಿಂದ ಜಿಲ್ಲೆಯ 7 ತಾಲೂಕುಗಳ 135 ಗ್ರಾಮಗಳಿಗೆ ತೆರಳಿ ಆಮಂತ್ರಣ ಪತ್ರಿಕೆ ನೀಡಿ, ಸಭೆ ಮಾಡಿ ಪ್ರಚಾರ ಕಾರ್ಯ ಕೈಗೊಳ್ಳಲಾಗಿದೆ. ತಾಲೂಕಿನಾದ್ಯಂತ ಮಹಿಳೆಯರ ಮನೆಗಳಿಗೆ ತೆರಳಿ ಅರಿಷಿಣ-ಕುಂಕುಮ, ಬಳೆ, ಅಡಕೆ- ವೀಳ್ಯದೆಲೆ ನೀಡಿ ಗೌರವದಿಂದ ಆಮಂತ್ರಿಸಲಾಗಿದೆ. ಲಕ್ಷ್ಮೇಶ್ವರ ಸುತ್ತಲಿನ ಹಾಗೂ ನೆರೆಯ ಕುಂದಗೋಳ ತಾಲೂಕಿನ ಜನರೂ ಆಗಮಿಸಲಿದ್ದಾರೆ.

ಒಟ್ಟಾರೆ, ಸಮಾವೇಶಕ್ಕೆ ವಿವಿಧ ಜಿಲ್ಲೆ, ತಾಲೂಕುಗಳಿಂದ 25 ಸಂಖ್ಯೆ ಜನ ಸೇರಲಿದ್ದಾರೆ. ಪಂಚಮಸಾಲಿ ಸಂಘದ ರೈತ ಘಟಕ, ಯುವ ಘಟಕ, ಮಹಿಳಾ ಘಟಕ, ನಗರ ಘಟಕ, ವಾರ್ಡ್‌ ಘಟಕ, ಗ್ರಾಮ ಘಟಕಗಳ ಪದಾಧಿಕಾರಿಗಳು, ಜಿಲ್ಲೆಯ ಎಲ್ಲಾ ತಾಲೂಕು, ಗ್ರಾಮಗಳ ಪಂಚಮಸಾಲಿ ಸಮಾಜದ ಗುರು-ಹಿರಿಯರು, ಮಹಿಳೆಯರು, ಯುವಕರು ಈ ಬೃಹತ್‌ ಜನಜಾಗೃತಿ ಸಮಾವೇಶದಲ್ಲಿ ಪಾಲ್ಗೊಂಡು ಸರ್ಕಾರದ ಗಮನ ಸೆಳೆಯುವಲ್ಲಿ ಕಾರಣೀಭೂತರಾಗೋಣ ಎಂದರು.

ಈ ವೇಳೆ ವೀರೇಂದ್ರ ಕಟಗಿ, ಚನ್ನವೀರಪ್ಪ ದಾನಿ, ಮಾದೇವಪ್ಪ ಕಟಗಿ, ಪರಮೇಶ ಕಿತ್ಲಿ, ಮಂಜುನಾಥ ಗೌರಿ, ಸುನೀಲ ಮುಳಳುಂದ, ಬಸವರಾಜ ಗೋಡಿ, ಗಂಗಾಧರ ಗೋಡಿ, ಮಹಾಂತೇಶ ಗೋಡಿ, ಪ್ರಕಾಶ ಜಾವೂರ, ರಾಜು ಲಿಂಬಿಕಾಯಿ, ಮಂಜುನಾಥ ಕರಿಗೌಡ್ರ, ಬಸವರಾಜ ಮೇಟಿ, ನಾಗರಾಜ ಅಣ್ಣಿಗೇರಿ, ಗಂಗಾಧರ ಬೆಲ್ಲದ, ಗುರುನಾಥಗೌಡ ಪಾಟೀಲ, ಶೇಖಣ್ಣ ಹುರಕಡ್ಲಿ, ವಸಂತಗೌಡ ಬಾಗೇವಾಡಿ, ಪರಮೇಶ್‌ ಕಿತ್ಲಿ, ಸೋಮಣ್ಣ ಮುಳಗುಂದ, ಭರಮಪ್ಪ ಕೊಡ್ಲಿ, ಗಂಗಾಧರ ಗೋಡಿ, ಬಸವರಾಜ ಗೋಡಿ, ಪ್ರಕಾಶ ಜಾವೂರ, ಮುತ್ತು ಹೆಬ್ಟಾಳ, ಅನಿಲ ಹೆಬ್ಟಾಳ, ಶೇಖರಗೌಡ ನರಸಮ್ಮನವರ, ಬಸವಣ್ಣೆಪ್ಪ ಮತ್ತೂರ, ವಿವಿಧ ಘಟಕಗಳ ಪದಾಧಿಕಾರಿಗಳು, ಸದಸ್ಯರು ಹಾಜರಿದ್ದರು.

ಟಾಪ್ ನ್ಯೂಸ್

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

1-gadaga

Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು1

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.