ಸೋರುತಿಹುದು ಪಪಂ ಮೇಲ್ಛಾವಣಿ

ಮಳೆ ನೀರಿಗೆ ಕಡತಗಳು ನೆನೆಯುವ ಆತಂಕ

Team Udayavani, Oct 18, 2019, 12:35 PM IST

gadaga-tdy-1

ನರೇಗಲ್ಲ: ಪಟ್ಟಣ ಪಂಚಾಯತಿ ಕಟ್ಟಡ ಮಳೆಗೆ ಸೋರುತ್ತಿದ್ದು, ಕಾರ್ಯಾಲಯದಲ್ಲಿರುವ ಕಡತಗಳು ನೆನೆಯುವಂತಹ ಸ್ಥಿತಿ ನಿರ್ಮಾಣವಾಗಿದೆ. ಪಟ್ಟಣದ ಹೃದಯ ಭಾಗದ ಗದಗ ರಸ್ತೆಯಲ್ಲಿರುವ ಒಂದನೇ ಅಂತಸ್ತಿನ ಕಟ್ಟಡ ಇದಾಗಿದ್ದು, ಈ ಅಂತಸ್ತಿನ ಕಟ್ಟಡದಲ್ಲಿ ಉತಾರ ಕೊಡುವುದು ಸೇರಿದಂತೆ ವಿವಿಧ ಕೆಲಸ ಕಾರ್ಯಗಳು ನಡೆಯುತ್ತಿವೆ.

ಇಲ್ಲಿಗೆ ನಿತ್ಯ ನೂರಾರೂ ಸಾರ್ವಜನಿಕರು ಉತಾರ ಹಾಗೂ ವಿವಿಧ ಕಾರ್ಯಗಳಿಗೆ ಭೇಟಿ ನೀಡುವುದು ಸಹಜವಾಗಿದೆ. ಆದರೆ ಈಗ ಬಿಟ್ಟು ಬಿಡದೇ ಮಳೆ ಸುರಿಯುತ್ತಿರುವುದರಿಂದ ಆರ್‌ಸಿಸಿ ಕಟ್ಟಡ ಹಾಗೂ ಅಭಿಯಂತರರ ಕೊಠಡಿ ಸೋರುತ್ತಿದೆ. ಇದರಿಂದ ಸಾರ್ವಜನಿಕರು ಆಡಳಿತ ನಡೆಸುವ ಕಟ್ಟಡವೇ ಸೋರುತ್ತಿದೆ. ಅಂದರೇ ಅದರ ಗುಣಮಟ್ಟದ ಬಗ್ಗೆ ಚರ್ಚೆಯಾಗುತ್ತಿದೆ.

ಸುಮಾರು ನಾಲ್ಕೈದು ವರ್ಷಗಳ ಹಿಂದೆ 13ನೇ ಹಣಕಾಸಿಕ ಅಡಿಯಲ್ಲಿ ನಿರ್ಮಾಣವಾಗಿರುವ ಈ ಒಂದನೇ ಮಹಡಿಯ ಕಟ್ಟಡವು ಇಷ್ಟು ದೊಡ್ಡ ಪ್ರಮಾಣದಲ್ಲಿ ಮಳೆಯಾಗದೇ ಇರುವುದರಿಂದ ಇದರ ಗುಣಮಟ್ಟ ತಿಳಿದಿರಲಿಲ್ಲ. ಆದರೆ, ಈಗ ಸತತ ಮಳೆರಾಯನ ಆಗಮನದಿಂದ ಕಾಮಗಾರಿಯ ನಿಜ ಸ್ವರೂಪ ತಿಳಿದಿದೆ. ಇದನ್ನು ಕಟ್ಟಿಸಿದವರಿಗೆ ಇಲ್ಲವೇ ನಿರ್ಮಾಣ ಮಾಡಿದ ಗುತ್ತಿಗೆದಾರರ ನಿರ್ಲಕ್ಷವೋ ಕಾರಣ ತಿಳಿಯದಂತಾಗಿರುವುದರಿಂದ ಸೋರುತ್ತಿಹುದು ಕಚೇರಿಯ ಮಾಳಿಗೆ ಎನ್ನುವಂತಾಗಿದೆ.

ಕಟ್ಟಡದ ಗೋಡೆಗಳು ಮೇಲ್ಛಾವಣಿ ಆವರಣದ ಸಮಸ್ಯೆಯಿಂದ ಈ ರೀತಿಯಾಗಿ ಸೋರುತ್ತಿದೆ. ತಾರಸಿಯು ಸೋರುವುದಲ್ಲದೇ ಗೋಡೆಗಳಲ್ಲಿಯೂ ಸಹ ನೀರು ಬರಲು ಆರಂಭವಾಗಿದೆ. ಅಲ್ಲಿಂದ ಮಳೆ ನೀರು ತಂತುರು ಹನಿ ಹನಿಯಾಗಿ ಕಡತಗಳ ಮೇಲೆ ಬೀಳುತ್ತಿವೆ. ಕಚೇರಿಯಲ್ಲಿನ ಕಡತಗಳು ಹಾಗೂ ಸಾರ್ವಜನಿಕರಿಗೆ ಮತ್ತು ಅಲ್ಲಿ ಕೆಲಸ ಮಾಡುವ ಸಿಬ್ಬಂದಿಗೆ ತೊಂದರೆಯಾಗಿದೆ. ಇದರ ಕಡೆಗೆ ಯಾರು ಗಮನ ನೀಡದೇ ಇರುವುದು ಖೇದನೀಯ ಎಂದು ಇಲ್ಲಿನ ನಾಗರಿಕರು ವಿಷಾದಿಸಿದ್ದಾರೆ.

ಕಟ್ಟಡ ನಿರ್ಮಾಣ ಮಾಡುವ ಹಂತದಲ್ಲಿ ವಿವಿಧ ರೀತಿಯಲ್ಲಿ ಪರೀಕ್ಷೆಗಳು ನಡೆಯುತ್ತಿವೆ. ನಂತರದಲ್ಲಿ ಹಾಗೂ ಮುಕ್ತಾಯವಾಗುವ ಹಂತದಲ್ಲಿಯೂ ಪರೀಕ್ಷೆ ನಡೆಯುವುದು. ಇದು ಸರ್ಕಾರಿ ನಿಯಮ. ಆದರೆ ಇವೆಲ್ಲವುಗಳನ್ನು ಗಾಳಿಗೆ ತೂರಿ ಒಂದನೇಯ ಮಹಡಿಯನ್ನು ನಿರ್ಮಾಣ ಮಾಡಲಾಗಿದೆ.

ಇದಕ್ಕೆ ಗುತ್ತಿಗೆದಾರರು ಇಲ್ಲವೇ ಇಲಾಖೆಯ ಅಭಿಯಂತರರು ಹಾಗೂ ಸಂಬಂಧಿಸಿದ ಹಿರಿಯ ಹಾಗೂ ಕಿರಿಯ ಅಧಿ ಕಾರಿಗಳ ನಿಷ್ಕಾಳಜಿ ಕಾರಣ ಎನ್ನುವುದು ಇಲ್ಲಿನ ಜನತೆಯ ಆರೋಪವಾಗಿದೆ.

ನಾನು ಇಲ್ಲಿಗೆ ಬರುವುದಕ್ಕಿಂತ ಮುಂಚೆಯೇ ಕಟ್ಟಡ ನಿರ್ಮಾಣವಾಗದೆ. ಈಗ ಸತತವಾಗಿ ಮಳೆ ಬಂದಿದ್ದರಿಂದ ಕಟ್ಟಡ ಸೋರುತ್ತಿದೆ. ತಕ್ಷಣ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿ ಇದನ್ನು ಸರಿಪಡಿಸುವ ವ್ಯವಸ್ಥೆ ಮಾಡಲಾಗುವುದು. ಎಸ್‌.ಎಸ್‌. ಹುಲ್ಲಮ್ಮನವರ, ಪ.ಪಂ ಮುಖ್ಯಾಧಿಕಾರಿ.

 ಪಟ್ಟಣದ ಆಡಳಿತ ಯಂತ್ರದ ಮುಖ್ಯ ಕಚೇರಿಯಾಗಿರುವುದರಿಂದ ಇಲ್ಲಿಗೆ ನಿತ್ಯ ಸಾಕಷ್ಟು ಸಾರ್ವಜನಿಕರು ತಮ್ಮ ವಿವಿಧ ಕೆಲಸ ಕಾರ್ಯಗಳ ನಿಮಿತ್ತ ಆಗಮಿಸಿ ತಮ್ಮ ಕಾರ್ಯಗಳನ್ನು ಮಾಡಿಕೊಂಡು ಹೋಗುತ್ತಾರೆ. ಅಕ್ಕಪಕ್ಕದ ಹಳ್ಳಿಯ ಜನತೆ ಕಚೇರಿಗೆ ಬರುತ್ತಾರೆ. ಕಚೇರಿಯ ಗೋಡೆಗಳು ಹಾಗೂ ಮೇಲ್ಛಾವಣಿ ಸೋರುತ್ತಿರುವುದರಿಂದ ಹಳೆಯ ಕಾಗದ ಪತ್ರಗಳು ಹಾಗೂ ಕೆಲವು ಪ್ರಮುಖ ದಾಖಲೆಗಳಲ್ಲಿ ನೀರು ಸೇರಿ ಹಾಳಾಗುವ ಸಾಧ್ಯತೆ ಹೆಚ್ಚಿದೆ. –ಯಲ್ಲಪ್ಪ ಕುರಿ, ಸ್ಥಳೀಯ.

 

-ಸಿಕಂದರ ಎಂ. ಆರಿ

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.