ನೌಕರರಿಗೆ ನೇರ ವೇತನ ನೀಡಿ; ಹೊರಗುತ್ತಿಗೆ ನೌಕರರ ಧರಣಿ
ಪೌರಕಾರ್ಮಿಕರ ಎರಡನೇ ಹಂತದ ನೇಮಕಾತಿಗೆ ಒತ್ತಾಯಿಸಲಾಗಿತ್ತು.
Team Udayavani, Jul 2, 2022, 6:19 PM IST
ಗದಗ: ನಗರಸಭೆ, ಪುರಸಭೆ, ಪಟ್ಟಣ ಪಂಚಾಯತ್ ಹೊರಗುತ್ತಿಗೆ ಕಸ ಸಾಗಿಸುವ ವಾಹನ ಚಾಲಕರು, ವಾಟರ್ ಮನ್, ಡಾಟಾ ಆಪರೇಟರ್, ಕಸ ನಿರ್ವಹಣೆ ಸಹಾಯಕರು, ಒಳಚರಂಡಿ ಕಾರ್ಮಿಕರು, ಸ್ಮಶಾನ ಕಾವಲುಗಾರರು, ಸ್ಯಾನಿಟರಿ ಸೂಪರ್ ವೈಸರ್ಗಳನ್ನು ಪೌರಕಾರ್ಮಿಕರ ಮಾದರಿಯಲ್ಲಿ ನೇರ ವೇತನ ಜಾರಿಗೊಳಿಸುವಂತೆ ಆಗ್ರಹಿಸಿ ಹೊರಗುತ್ತಿಗೆ ನೌಕರರು ನಗರಸಭೆ ಎದುರು ಧರಣಿ ನಡೆಸಿದರು.
ಹೊರಗುತ್ತಿಗೆ ನೌಕರರ ಸಂಘದ ಜಿಲ್ಲಾಧ್ಯಕ್ಷ ಶಿವಪ್ಪ ಜಂಬಲದಿನ್ನಿ ಮಾತನಾಡಿ, ಮೇ 19ರಂದು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಏಕಕಾಲಕ್ಕೆ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಯವರಿಗೆ ಮನವಿ ಸಲ್ಲಿಸಿ ನಗರ ಸ್ಥಳೀಯ ಸಂಸ್ಥೆಗಳ ಹೊರಗುತ್ತಿಗೆ ನೌಕರರನ್ನು ಪೌರಕಾರ್ಮಿಕರ ಮಾದರಿಯಲ್ಲಿ ನೇರ ವೇತನಕ್ಕೊಳಪಡಿಸುವಂತೆ ಹಾಗೂ ಪೌರಕಾರ್ಮಿಕರ ಎರಡನೇ ಹಂತದ ನೇಮಕಾತಿಗೆ ಒತ್ತಾಯಿಸಲಾಗಿತ್ತು. ಜುಲೈಗೂ ಮುನ್ನವೇ ಬೇಡಿಕೆ ಕುರಿತು ಸಕಾರಾತ್ಮಕ ತೀರ್ಮಾನ ಕೈಗೊಳ್ಳುವುದಾಗಿ ಹೇಳಿದ್ದ ಮುಖ್ಯಮಂತ್ರಿಗಳು ಈವರೆಗೆ ಯಾವುದೇ ಕ್ರಮ ಜರುಗಿಸಿಲ್ಲ ಎಂದು ಹೇಳಿದರು.
ರಾಜ್ಯದ ಎಲ್ಲ 312 ನಗರ ಸ್ಥಳೀಯ ಸಂಸ್ಥೆಗಳಲ್ಲಿ ನಗರಗಳ ಸ್ವತ್ಛತೆ ಕುಡಿಯುವ ನೀರಿನ ಸಮರ್ಪಕ ನಿರ್ವಹಣೆಯಲ್ಲಿ 10 ಸಾವಿರಕ್ಕೂ ಹೆಚ್ಚು ಗುತ್ತಿಗೆ ನೌಕರರು ತೊಡಗಿಕೊಂಡಿದ್ದಾರೆ. ಕಸ ಸಾಗಿಸುವ ವಾಹನ ಚಾಲಕರು ಕಸ ನಿರ್ವಹಣೆಯ ಸಹಾಯಕರು ವಾಟರ್ ಮನ್ ಒಳಚರಂಡಿ ಕಾರ್ಮಿಕರು, ಡಾಟಾ ಆಪರೇಟರ್ಗಳು, ಸ್ಮಶಾನ ಕಾವಲುಗಾರರು ಸೇರಿ ನಾನಾ ವಿಭಾಗಗಳಲ್ಲಿ ಕಳೆದ 30ವರ್ಷಗಳಿಂದ ಪೌರಕಾರ್ಮಿಕರೊಟ್ಟಿಗೆ ದುಡಿಯುತ್ತಾ ಬಂದಿದ್ದಾರೆ.
ಅವರನ್ನು ಸಂಪೂರ್ಣವಾಗಿ ಖಾಯಂಗೊಳಿಸಲಿಲ್ಲ. ಈ ಕುರಿತು ಕಳೆದ ಐದು ವರ್ಷಗಳಿಂದ ಹಂತ ಹಂತವಾಗಿ ಹೋರಾಟ ನಡೆಸಿಕೊಂಡು ಬರಲಾಗಿದ್ದು ಈಗ ನಿರ್ಣಾಯಕ ಘಟ್ಟ ತಲುಪಿದೆ ಎಂದು ಹೇಳಿದರು. ಈ ವೇಳೆ ಹೊರಗುತ್ತಿಗೆ ನೌಕರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Gadag; ನಮ್ಮದು ಬಡವರಿಗೆ ಬದುಕು ಕಟ್ಟಿ ಕೊಡುವ ಪ್ರಣಾಳಿಕೆ: ಬಸವರಾಜ ಬೊಮ್ಮಾಯಿ
Panchmasali ಸಮಾಜಕ್ಕೆ ಬಿಜೆಪಿಯಿಂದ ಅನ್ಯಾಯ: ವಚನಾನಂದ ಸ್ವಾಮೀಜಿ
MUST WATCH
ಹೊಸ ಸೇರ್ಪಡೆ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ
Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು
Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್