ಶಾಲೆ ಶುರುವಾಗುವವರೆಗೂ ಸಂಬಳ ನೀಡಿ
Team Udayavani, May 27, 2020, 6:26 AM IST
ರೋಣ: ಬಿಸಿಯೂಟ ಕಾರ್ಯಕರ್ತೆಯರಿಗೆ ಶಾಲೆ ಪ್ರಾರಂಭವಾಗುವವರೆಗೆ ಪೂರ್ಣ ವೇತನ ಹಾಗೂ ಜೀವನ ನಿರ್ವಹಣೆಗೆ ಪರಿಹಾರ ಒದಗಿಸಬೇಕು ಎಂದು ಅಕ್ಷರ ದಾಸೋಹ ನೌಕರರ ಸಂಘದ ತಾಲೂಕು ಸಮಿತಿ ವತಿಯಿಂದ ಮಂಗಳವಾರ ತಾಪಂ ಇಒ ಸಂತೋಷ ಪಾಟೀಲ ಹಾಗೂ ಅಕ್ಷರ ದಾಸೋಹ ಅಧಿಕಾರಿ ಬಸವರಾಜ ಅಂಗಡಿ ಅವರ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು.
ಈ ವೇಳೆ ಅಕ್ಷರ ದಾಸೋಹ ನೌಕರರ ಸಮಿತಿ ತಾಲೂಕು ಅಧ್ಯಕ್ಷೆ ಸುನಂದಾ ಘಂಟಿ ಮಾತನಾಡಿ, ಕೋವಿಡ್ ಹಿನ್ನೆಲೆಯಲ್ಲಿ ಶಾಲೆಗಳಿಗೆ ರಜೆ ನೀಡಲಾಗಿದೆ. ಆಹಾರ ಧಾನ್ಯಗಳನ್ನು ಮಕ್ಕಳ ಮನೆಗೆ ತಲುಪಿಸಲಾಗಿದೆ. ಲಾಕ್ಡೌನ್ ಸಂದರ್ಭದಲ್ಲಿ ಸಂಕಷ್ಟಕ್ಕೆ ಒಳಗಾದವರಿಗೆ ಸರ್ಕಾರ ಸಹಾಯಹಸ್ತ ನೀಡಿದೆ. ಅದರಂತೆ ಬಿಸಿಯೂಟ ನೌಕರರಿಗೂ ಪರಿಹಾರ ನೀಡಬೇಕು. ಜೊತೆಗೆ ಏಪ್ರಿಲ್ ತಿಂಗಳಿನಿಂದ ಶಾಲೆ ಪ್ರಾರಂಭವಾಗುವವರೆಗೂ ಸಂಪೂರ್ಣ ವೇತನ ನೀಡಬೇಕು ಎಂದು ಆಗ್ರಹಿಸಿದರು.
ಗಂಗಮ್ಮ ಪೂಜಾರ, ರೋಷನಬೀ ಕುರಹಟ್ಟಿ, ಮಮತಾಜಬೇಗಂ ಹೊಸಮನಿ, ಪ್ರೇಮಾ ಜಾಧವ, ನೀಲಮ್ಮ ಬೀರನೂರ, ಸರೋಜಾ ಬೀತನೂರ, ಲಕ್ಷ್ಮೀ ಗಾಣಿಗೇರ, ಎಸ್.ಎ. ಹೊಂಬಳ, ಬಿ.ಎಚ್. ಬಾವಿ, ಎಸ್.ಎ. ತೊಂಡಿಹಾಳ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’
Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ
Gadag; ಮನೆ ಮಗನಿಂದಲೇ ಸುಪಾರಿ; ನಾಲ್ವರ ಹತ್ಯೆ ಪ್ರಕರಣ ಬೇಧಿಸಿದ ಪೊಲೀಸರು; 8 ಜನರ ಬಂಧನ
Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ
Gadag; ನಾಲ್ವರ ಬರ್ಬರ ಹತ್ಯೆ ಐವರು ದುಷ್ಕರ್ಮಿಗಳು ಮಾಡಿರುವ ಶಂಕೆ
MUST WATCH
ಹೊಸ ಸೇರ್ಪಡೆ
Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು
Kannada Cinema; ಹೊಸ ಚಿತ್ರದಲ್ಲಿ ಖಡಕ್ ಪೊಲೀಸ್ ಆದ ನೆನಪಿರಲಿ ಪ್ರೇಮ್
Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ
Reliance Jio Profit; ರಿಲಯನ್ಸ್ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ
Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್