ಅಸ್ತಮಾಕ್ಕೆ ಔಷಧಿ ವಿತರಿಸಿದ್ದ ಪೇಜಾವರ ಶ್ರೀ
Team Udayavani, Dec 30, 2019, 12:32 PM IST
ಲಕ್ಷ್ಮೇಶ್ವರ: ಸರ್ವಧರ್ಮ ಸಹಿಷ್ಣು, ವಿಶ್ವ ಸಂತ ಪೇಜಾವರ ಮಠದ ವಿಶ್ವೇಶತೀರ್ಥ ಶ್ರೀಪಾದಂಗಳವರಿಗೂ ಲಕ್ಷ್ಮೇಶ್ವರಕ್ಕೂ ಅವಿನಾಭಾವ ಸಂಬಂಧವಿತ್ತು.
60 ವರ್ಷಗಳ ಹಿಂದೆಯೇ ಪಟ್ಟಣದಲ್ಲಿ ಸಂಘಟಿತವಾದ ಶ್ರೀ ಮಂತ್ರಾಲಯ ಪಾದಯಾತ್ರೆ ಸಂಘದೊಂದಿಗೆ ಪೂಜ್ಯರು ಕಳೆದ 30 ವರ್ಷಗಳಿಂದ ಒಡನಾಟ ಹೊಂದಿದ್ದರು. ಪ್ರತಿ ವರ್ಷ ಅಕ್ಟೋಬರ್ ತಿಂಗಳಲ್ಲಿ ಪಾದಯಾತ್ರಿಕರೊಂದಿಗೆ ಪಾಲ್ಗೊಂಡು ಯಾತ್ರಿಕರಿಗೆ ಧರ್ಮ ಸಂದೇಶ ನೀಡುತ್ತಿದ್ದರು.
ಲಕ್ಷ್ಮೇಶ್ವರದ ವೈದ್ಯ ಬಾಬುರಾವ್ ಪ್ರತಿವರ್ಷ ಮೃಗಶಿರ ನಕ್ಷತ್ರದ ದಿನ ಅಸ್ತಮಾಕ್ಕೆ ನೀಡುತ್ತಿದ್ದ ಉಚಿತ ಮಂತ್ರೌಷಧಿ ಕಾರ್ಯಕ್ರಮಕ್ಕೂ ಬಂದು ಸ್ವತಃ ಔಷಧಿ ವಿತರಿಸಿದ್ದರು. 2013ರಲ್ಲಿ ಪಟ್ಟಣದ ವೆಂಕಟೇಶ್ವರ ದೇವಸ್ಥಾನ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಮೂರ್ತಿ ಪ್ರತಿಷ್ಠಾಪನೆ ಮಾಡಿದ್ದರು.
ಎರಡು ದಿನಗಳ ಕಾರ್ಯಕ್ರಮದಲ್ಲಿ ಮೊದಲ ದಿನದ ಕಾರ್ಯಕ್ರಮ ಮುಗಿಸಿ ಉಡುಪಿಗೆ ತೆರಳಿ ಮಾರನೇ ದಿನವೂ ಯತಿಗಳು ಲಕ್ಷ್ಮೇಶ್ವರಕ್ಕೆ ಬಂದು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಪಟ್ಟಣ ಮತ್ತು ಸುತ್ತಲಿನ ಗ್ರಾಮಗಳ ಭಕ್ತರ ಮನೆಗೆ ತೆರಳಿ ಪಾದಪೂಜೆಯಲ್ಲಿ ಪಾಲ್ಗೊಂಡಿರುವುದು ಲಕ್ಷ್ಮೇಶ್ವರದ ಮೇಲೆ ಶ್ರೀಗಳಿಗಿದ್ದ ಅಭಿಮಾನಕ್ಕೆ ಸಾಕ್ಷಿಯಾಗಿದೆ. ಪಟ್ಟಣದ ದಿ. ವೈದ್ಯ ಬಾಬುರಾವ್ ಕುಲಕರ್ಣಿ ನಿಧನರಾದ ಹಿನ್ನೆಲೆಯಲ್ಲಿ ಕಳೆದ ಮಾರ್ಚ್ 25ರಂದು ಕುಲಕರ್ಣಿಯವರ ಮನೆಗೆ ಆಗಮಿಸಿ ಕುಟುಂಬಕ್ಕೆ ಸಾಂತ್ವನ ಹೇಳಿದ್ದರು.
ಭೂಕೈಲಾಸ ಮುಕ್ತಿಮಂದಿರ ಧರ್ಮಕ್ಷೇತ್ರ ದೊಂದಿಗೆ ಪೇಜಾವರ ಶ್ರೀಗಳಿಗೆ 50 ವರ್ಷಗಳ ಹಿಂದೆಯೇ ಸಂಪರ್ಕವಿತ್ತು. 1967ರಲ್ಲಿ ಲಿಂ.ಜಗದ್ಗುರು ವೀರಗಂಗಾಧರ ಶ್ರೀಗಳು ಸಂಘಟಿಸಿದ್ದ ಸರ್ವಧರ್ಮ ಸಮ್ಮೇಳನದಲ್ಲಿ ಪಾಲ್ಗೊಂಡು ವೀರಶೈವ ಲಿಂಗಾಯತ ಮತ್ತು ಬ್ರಾಹ್ಮಣ ಸಮಾಜದ ಸಂಬಂಧ ಮತ್ತಷ್ಟು ಗಟ್ಟಿಗೊಳಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಗದಗ: ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
MUST WATCH
ಹೊಸ ಸೇರ್ಪಡೆ
Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?
EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ
Vijay Mallya ಹಸ್ತಾಂತರಕ್ಕೆ ಫ್ರಾನ್ಸ್ನೊಂದಿಗೆ ಭಾರತ ಮಾತುಕತೆ
ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್ಕಮ್ ಹೊಟೇಲ್ನಲ್ಲಿ ವ್ಯವಸ್ಥೆ
VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್