ನಗರೋತ್ಥಾನ ಆಮೆವೇಗಕ್ಕೆ ಜನರ ಹಿಡಿಶಾಪ
Team Udayavani, Sep 23, 2019, 12:35 PM IST
ಗಜೇಂದ್ರಗಡ: ಕಳೆದೊಂದು ವರ್ಷದಿಂದ ಪಟ್ಟಣದ ವಿವಿಧ ವಾರ್ಡ್ಗಳಲ್ಲಿ ನಡೆಯುತ್ತಿರುವ ರಸ್ತೆ ಕಾಮಗಾರಿಗಳು ಕುಂಟುತ್ತ ಸಾಗುತ್ತಿವೆ.
ಇದರಿಂದಾಗಿ ಆಲ್ಲಿನ ಜನರು ಹಾಗೂ ವಾಹನ ಸವಾರರು ನಿತ್ಯ ಕಿರಿಕಿರಿ ಅನುಭವಿಸುತ್ತ ಅಧಿಕಾರಿಗಳಿಗೆ ಹಿಡಿಶಾಪ ಹಾಕುತ್ತಿದ್ದಾರೆ. ಪುರಸಭೆ ನಗರೋತ್ಥಾನ ಯೋಜನೆಯಡಿ 2016-17ನೇ ಸಾಲಿನಲ್ಲಿ ಮಂಜೂರಾದ 6.37 ಕೋಟಿ ವೆಚ್ಚದಲ್ಲಿ ಪಟ್ಟಣದ ವಿವಿಧ ವಾರ್ಡ್ಗಳಲ್ಲಿ ರಸ್ತೆ ಡಾಂಬರೀಕರಣ, ಚರಂಡಿ ನಿರ್ಮಾಣ ಕಾಮಗಾರಿಗಳು ಆರಂಭವಾಗಿ ವರ್ಷಗಳೇ ಉರುಳಿವೆ. ಆದರೆ ಕಾಮಗಾರಿಗಳು ಮಾತ್ರ ಮುಗಿದಿಲ್ಲ. ಪುರಸಭೆ ಅಧಿಕಾರಿಗಳು ಮೌನಕ್ಕೆ ಶರಣಾಗಿದ್ದಾರೆ.
ಪಟ್ಟಣದ ಹುಡೇದ ಮಹಾಲಕ್ಷ್ಮೀ ವೃತ್ತದಿಂದ ಉದ್ಯಾನವನ ವರೆಗಿನ ಮುಖ್ಯರಸ್ತೆ ಕಾಮಗಾರಿ ಕೈಗೆತ್ತಿಕೊಂಡು ಹಲವು ತಿಂಗಳುಗಳೇ ಕಳೆದಿವೆ. ಕಾಮಗಾರಿ ಅರ್ಧಕ್ಕೆ ನಿಂತಿದೆ. ಮುಖ್ಯರಸ್ತೆಯಲ್ಲಿ ದೊಡ್ಡ ಜಲ್ಲಿಕಲ್ಲು ಹಾಕಿ ಕೈಬಿಟ್ಟಿರುವ ಗುತ್ತಿಗೆದಾರರ ವಿಳಂಬ ನೀತಿಯಿಂದಾಗಿ ಅಲ್ಲಿ ಸಂಚರಿಸುವ ಬಹುತೇಕ ವಾಹನ ಸವಾರರು ಎದ್ದುಬಿದ್ದು ಸಾಗುವಂತಾಗಿದೆ. ಸರ್ಕಾರಗಳು ಕಚ್ಚಾರಸ್ತೆ ಮುಕ್ತ ಪಟ್ಟಣವನ್ನಾಗಿಸುವ ನಿಟ್ಟಿನಲ್ಲಿ ಕೋಟ್ಯಂತರ ಅನುದಾನ ಬಿಡುಗಡೆ ಮಾಡಿ, ಗುತ್ತಿಗೆದಾರರಿಗೆ ನಿಯಮಗಳನ್ನು ಹೇರುತ್ತದೆ. ಆದರೆ ಗುತ್ತಿಗೆದಾರರು ಮಾತ್ರ ಇದಕ್ಕೂ ನಮಗೂ ಸಂಬಂಧವಿಲ್ಲ ಎನ್ನುವಂತೆ ತಮಗೆ ತೋಚಿದಾಗ ಕಾಮಗಾರಿ ನಡೆಸುತ್ತಿರುವುದರಿಂದ ವರ್ಷ ಕಳೆದರೂ ರಸ್ತೆ ಕಾಮಗಾರಿಗಳು ಮುಗಿಯುತ್ತಿಲ್ಲ.
ಪಟ್ಟಣದ 21ನೇ ವಾರ್ಡ್ನ ಎರಡು ಪ್ರಮುಖ ರಸ್ತೆಗಳಲ್ಲಿ ಡಾಂಬರೀಕರಣಕ್ಕಾಗಿ ಜಲ್ಲಿಕಲ್ಲುಗಳನ್ನು ಹಾಕಿ ಹಲವು ತಿಂಗಳು ಕಳೆದಿವೆ. ಆದರೆ ಈವರೆಗೂ ಕಾಮಗಾರಿ ಆರಂಭಿಸಿಲ್ಲ. ಈದ್ಗಾ ಮೈದಾನ ಬಳಿ ಚರಂಡಿ ಕಾಮಗಾರಿಯೂ ಅರ್ಧಕ್ಕೆ ನಿಂತಿದೆ. ಇದರಿಂದ ಖಾಸಗಿಯವರ ಜಾಗೆಯಲ್ಲಿ ಚರಂಡಿ ನೀರು ಸಂಗ್ರಹವಾಗುತ್ತಿದೆ. ನಗರೋತ್ಥಾನ ಯೋಜನೆ ನಿಯಮಾವಳಿ ಪ್ರಕಾರ ಒಂಭತ್ತು ತಿಂಗಳಿಗೆ ಎಲ್ಲ ಕಾಮಗಾರಿಗಳೂ ಸಂಪೂರ್ಣವಾಗಿ ಪೂರ್ಣಗೊಳ್ಳಬೇಕು. ಆದರೆ ಇನ್ನೂ ಕೆಲ ವಾರ್ಡ್ಗಳಲ್ಲಿ ರಸ್ತೆ ಕಾಮಗಾರಿಯನ್ನೇ ಕೈಗೊಂಡಿಲ್ಲ. ಅಧಿಕಾರಿಗಳು ಮುಗುಮ್ಮಾಗಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಗದಗ: ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ
MUST WATCH
ಹೊಸ ಸೇರ್ಪಡೆ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು
Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ