ಕೋವಿಡ್‌ ನಿಯಮ ಮರೆತ ಜನ

ಎಲ್ಲೋ ಒಬ್ಬಿಬ್ಬರು ಮಾತ್ರ ಮಾಸ್ಕ್ ಧರಿಸಿದವರು ಕಾಣಸಿಗುತ್ತಾರೆ

Team Udayavani, Nov 29, 2021, 6:10 PM IST

ಕೋವಿಡ್‌ ನಿಯಮ ಮರೆತ ಜನ

ಗದಗ: ಎಲ್ಲೆಡೆ ಕೋವಿಡ್‌ ರೂಪಾಂತರಿ ತಳಿ ಒಮಿಕ್ರಾನ್‌ ಆತಂಕ ಸೃಷ್ಟಿಸಿರುವ ಬೆನ್ನಲ್ಲೇ ನೆರೆಯ ಧಾರವಾಡ ಜಿಲ್ಲೆಯಲ್ಲಿ ಕೋವಿಡ್‌ ಸೋಂಕು ಸ್ಫೋಟಗೊಂಡಿದೆ. ಜೊತೆಗೆ ಜಿಲ್ಲೆಯಲ್ಲೂ ಕಳೆದ ನಾಲ್ಕೈದು ದಿನಗಳಿಂದ ನಾಲ್ವರಲ್ಲಿ ಕೋವಿಡ್‌ ಸೋಂಕು ಪತ್ತೆಯಾಗಿರುವುದು ಆತಂಕಕಾರಿ ಬೆಳವಣಿಗೆ. ಆದರೆ ಜಿಲ್ಲೆಯ ಜನತೆ ಮಾತ್ರ ಕೋವಿಡ್‌ ನಿಯಮ ಪಾಲಿಸದಿರುವುದು ಅಪಾಯವನ್ನು ಆಹ್ವಾನಿಸುವಂತಿದೆ.

ಎರಡ್ಮೂರು ತಿಂಗಳಿಂದ ಜಿಲ್ಲೆಯಲ್ಲಿ ಕೋವಿಡ್‌ ಪ್ರಕರಣಗಳು ಗಣನೀಯವಾಗಿ ಇಳಿಕೆಯಾಗಿದ್ದರಿಂದ ಜನರು ಮಾಸ್ಕ್ ಮತ್ತು ಸಾಮಾಜಿಕ ಅಂತರ ಮರೆತಿದ್ದಾರೆ. ಅಲ್ಲದೇ ಕಳೆದ ಅ. 9ರಿಂದ ಇತ್ತೀಚಿನವರೆಗೆ ಒಂದೇ ಒಂದು ಪ್ರಕರಣವಿಲ್ಲದೇ, ಜಿಲ್ಲೆಯಲ್ಲಿ ಕೋವಿಡ್‌ ಶೂನ್ಯಕ್ಕಿಳಿದು ಜಿಲ್ಲೆಯ ಸಾರ್ವಜನಿಕರು ಮತ್ತು ಜಿಲ್ಲಾಡಳಿತ ನಿಟ್ಟುಸಿರು ಬಿಡುವಂತಾಗಿತ್ತು. ಆದರೆ ಮೂರ್‍ನಾಲ್ಕು ದಿನಗಳಿಂದೀಚೆಗೆ ನಾಲ್ವರಲ್ಲಿ ಕೋವಿಡ್‌ ಸೋಂಕು ಪತ್ತೆಯಾಗಿರುವುದು ಮತ್ತೆ ಕೋವಿಡ್‌ ಆತಂಕ ಶುರುವಾಗಿದೆ.

ಮಾಸ್ಕ್ ಮರೆತ ಜನ: ಜಿಲ್ಲೆಯಲ್ಲಿ ಶೂನ್ಯಕ್ಕಿಳಿದಿದ್ದ ಕೋವಿಡ್‌ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿವೆ. ಹೀಗಾಗಿ ಜಿಲ್ಲಾಡಳಿತ ಮತ್ತು ಸರಕಾರ ಕೋವಿಡ್‌ ನಿಯಂತ್ರಣಕ್ಕಾಗಿ ಅನುಸರಿಸಬೇಕಾದ ಕ್ರಮಗಳನ್ನು ಪಾಲಿಸುವಂತೆ ಸಾಕಷ್ಟು ಜಾಗೃತಿ ಮೂಡಿಸಿದರೂ ಜನ ಕಿವಿಗೊಡುತ್ತಿಲ್ಲ.  ಬಟ್ಟೆ, ತರಕಾರಿ ಸೇರಿದಂತೆ ವಿವಿಧ ವಸ್ತುಗಳ ಖರೀದಿಸಲು ಇಲ್ಲಿನ ಗ್ರೇನ್‌ ಮಾರುಕಟ್ಟೆ, ಬ್ಯಾಂಕ್‌ ರೋಡ್‌, ಸ್ಟೇಷನ್‌ ರೋಡ್‌ನ‌ಲ್ಲಿ ನಿತ್ಯ ಜನ ಸಂದಣಿಯಿಂದ ಇರುತ್ತದೆ. ಈ ವೇಳೆ ಎಲ್ಲಿಯೂ ಸಾಮಾಜಿಕ ಆಂತರ ಕಂಡು ಬರುತ್ತಿಲ್ಲ. ಎಲ್ಲೋ ಒಬ್ಬಿಬ್ಬರು ಮಾತ್ರ ಮಾಸ್ಕ್ ಧರಿಸಿದವರು ಕಾಣಸಿಗುತ್ತಾರೆ. ಇನ್ನುಳಿದಂತೆ ಬಸ್‌ ಮತ್ತು ಬಸ್‌ ನಿಲ್ದಾಣಗಳ ಪರಿಸ್ಥಿತಿ ಇದಕ್ಕಿಂತ ಭಿನ್ನವಾಗಿಲ್ಲ.

ಐದು ಪ್ರಕರಣಗಳು ಸಕ್ರಿಯ: ಜಿಲ್ಲೆಯಲ್ಲಿ ನ. 20ರ ನಂತರ ಒಂದು ಕೋವಿಡ್‌ ಪ್ರಕರಣ ಕಂಡು ಬಂದಿತ್ತಾದರೂ, ನಾಲ್ಕು ದಿನಗಳಿಂದೀಚೆಗೆ ಪ್ರಕರಣಗಳು ತೀವ್ರವಾಗಿವೆ. ಶನಿವಾರ ಮತ್ತಿಬ್ಬರಿಗೆ ಹೊಸದಾಗಿ ಕೋವಿಡ್‌ ಸೋಂಕು ಪತ್ತೆಯಾಗಿದೆ. ನರಗುಂದ ಮತ್ತು ಶಿರಹಟ್ಟಿ ತಾಲೂಕಿನ ತಲಾ ಒಬ್ಬರಲ್ಲಿ ಸೋಂಕು ಕಂಡು ಬಂದಿದೆ. ಇದರಿಂದಾಗಿ ಸಕ್ರಿಯ ಪ್ರಕರಣಗಳ ಸಂಖ್ಯೆ 5ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ ಇಲ್ಲಿವರೆಗೆ 6,48,141 ಜನರನ್ನು ತಪಾಸಣೆಗೆ ಒಳಪಡಿಸಿದ್ದು,
26,071 ಜನರಿಗೆ ಸೋಂಕು ತಗುಲಿತ್ತು. ಆ ಪೈಕಿ 25,747 ಜನರು ಗುಣಮುಖರಾಗಿದ್ದಾರೆ. ಚಿಕಿತ್ಸೆ ಫಲಿಸದೇ 319 ಜನರು ಮೃತಪಟ್ಟಿದ್ದಾರೆ ಎಂದು ಜಿಲ್ಲಾ ಆರೋಗ್ಯ ಇಲಾಖೆ ಮೂಲಗಳು ತಿಳಿಸಿವೆ.

ಕೇರಳ ಸೇರಿದಂತೆ ಹೊರ ರಾಜ್ಯದಿಂದ ಆಗಮಿಸುವವರಿಗೆ ಆರ್‌ಟಿಪಿಸಿಆರ್‌ ಪರೀಕ್ಷೆ ಕಡ್ಡಾಯಗೊಳಿಸಿದ ಬೆನ್ನಲ್ಲೇ ಇಲ್ಲಿನ ಜಿಮ್ಸ್‌ ಆಡಳಿತ ಸನ್ನದ್ಧವಾಗಿದೆ. ಯಾವುದೇ ಪರಿಸ್ಥಿತಿ ಎದುರಿಸಲು ಅಗತ್ಯ ಸಿದ್ಧತೆ ಮಾಡಿಕೊಂಡಿದೆ.

ನಮ್ಮಲ್ಲಿ ಐದು ಕೋವಿಡ್‌ ಪ್ರಕರಣಗಳು ಸಕ್ರಿಯವಾಗಿವೆ. ಇಲ್ಲಿವರೆಗೆ ಒಮಿಕ್ರಾನ್‌ ನಂತಹ ರೂಪಾಂತರಿ ವೈರಸ್‌ ಕಂಡು ಬಂದಿಲ್ಲ. ಯಾವುದೇ ಪರಿಸ್ಥಿತಿ ಎದುರಿಸಲು ತಜ್ಞ ವೈದ್ಯರು ಸೇರಿದಂತೆ ಸಿಬ್ಬಂದಿಯನ್ನು ಈಗಾಗಲೇ ಅಲರ್ಟ್‌ ಮಾಡಲಾಗಿದೆ. ಜಿಮ್ಸ್‌ ಮೆಡಿಕಲ್‌ ಕಾಲೇಜು ಆರಂಭಗೊಂಡಿದ್ದರಿಂದ ಹೊರ ರಾಜ್ಯದಿಂದ ಯಾವುದೇ ವಿದ್ಯಾರ್ಥಿ ಆಗಮಿಸಿಲ್ಲ. ಹೊರ ರಾಜ್ಯದಿಂದ ಬರುವವರಿಗೆ ಕೋವಿಡ್‌ ತಪಾಸಣೆ ನಡೆಸುತ್ತೇವೆ. ಅಲ್ಲದೇ, ಕೋವಿಡ್‌ ಲಕ್ಷಣಗಳನ್ನು
ಹೊಂದಿದ ರೋಗಿಗಳ ಬಗ್ಗೆ ವಿಶೇಷವಾಗಿ ಕಾಳಜಿ ವಹಿಸಲಾಗುತ್ತಿದೆ.
∙ಡಾ| ಪಿ.ಎಸ್‌. ಭೂಸರಡ್ಡಿ, ಜಿಮ್ಸ್‌ ನಿರ್ದೇಶಕ

ಈಗಾಗಲೇ ಎರಡು ಬಾರಿ ಕೋವಿಡ್‌ ಎದುರಿಸಿದ್ದೇವೆ. ಮತ್ತೆ ಅಂತಹ ಸನ್ನಿವೇಶನಕ್ಕೆ ಅವಕಾಶ ನೀಡದೇ, ಜನರು ಕೋವಿಡ್‌ ತಡೆಗಟ್ಟಲು ಸರಕಾರ ಸೂಚಿಸಿದ ಮುನ್ನೆಚ್ಚರಿಕೆಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಪ್ರತಿಯೊಬ್ಬರೂ ಕೋವಿಡ್‌ ಲಸಿಕೆ ಪಡೆದುಕೊಳ್ಳಬೇಕು.
ಡಾ| ಜಗದೀಶ್‌ ನುಚ್ಚಿನ್‌, ಜಿಲ್ಲಾ ಆರೋಗ್ಯಾಧಿಕಾರಿ(ಪ್ರಭಾರಿ)

ಟಾಪ್ ನ್ಯೂಸ್

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

ನಮ್ಮದು ಬಡವರಿಗೆ ಬದುಕು ಕಟ್ಟಿ ಕೊಡುವ ಪ್ರಣಾಳಿಕೆ: ಬಸವರಾಜ ಬೊಮ್ಮಾಯಿ

Gadag; ನಮ್ಮದು ಬಡವರಿಗೆ ಬದುಕು ಕಟ್ಟಿ ಕೊಡುವ ಪ್ರಣಾಳಿಕೆ: ಬಸವರಾಜ ಬೊಮ್ಮಾಯಿ

1-wqeqweqwe

Panchmasali ಸಮಾಜಕ್ಕೆ ಬಿಜೆಪಿಯಿಂದ ಅನ್ಯಾಯ: ವಚನಾನಂದ ಸ್ವಾಮೀಜಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.