ಜಮೀನುಗಳಲ್ಲಿ ಅರಣ್ಯ ಕೃಷಿ ಮಾಡಿ


Team Udayavani, Jan 25, 2021, 6:55 PM IST

Perform forest farming on land

ಗದಗ: ಕಾಡಿನ ಸಂರಕ್ಷಣೆಯೊಂದಿಗೆ ಕೃಷಿ ಜಮೀನುಗಳಲ್ಲಿ ಅರಣ್ಯ ಕೃಷಿ ಮಾಡಬೇಕು. ಈ ಮೂಲಕ ಉತ್ತರ ಕರ್ನಾಟಕದ ಬಯಲುಸೀಮೆಯನ್ನು ಬರದ ನಾಡಿನ ಬದಲಿಗೆ ಮರದ ನಾಡನ್ನಾಗಿ ಪರಿವರ್ತಿಸಬೇಕು ಎಂದು ಪರಿಸರ ತಜ್ಞ ಶಿರಸಿಯ ಶಿವಾನಂದ ಕಳವೆ ರೈತರಿಗೆ ಕರೆ ನೀಡಿದರು.

ನಗರದ ಅಂಬೇಡ್ಕರ್‌ ಭವನದಲ್ಲಿ ನಡೆದ “ಕಪ್ಪತ್ತ ಉತ್ಸವ’ದಲ್ಲಿ ಬಯಲು ಬೆರಗು-ವನ ದರ್ಶನ ಕುರಿತ ವಿಷಯ ಮಂಡಿಸಿದ ಅವರು, ಇಂದಿನ ಪರಿಸ್ಥಿತಿಯಲ್ಲಿ ಸಾರ್ವಜನಿಕರಲ್ಲಿ ಜಲ ಮತ್ತು ಮನ ಸಾಕ್ಷರತೆ ಬಗ್ಗೆ ಜಾಗೃತಿ ಮೂಡಿಸಬೇಕಿದೆ. ಜಮೀನುಗಳ ಬದುವಿನಲ್ಲಿ ಮರ ಬೆಳೆಸುವುದರಿಂದ ಮಳೆ ಪ್ರಮಾಣ ಹೆಚ್ಚುವುದರೊಂದಿಗೆ ಜಮೀನುಗಳ ಮಣ್ಣಿನ ಸವಕಳಿಯೂ ತಪ್ಪಲಿದೆ.

ಮರಗಳ ಹಣ್ಣಿನ ಮಾರಾಟದಿಂದ ರೈತರ ಆದಾಯವೂ ಹೆಚ್ಚಲಿದೆ. ಆದರೆ, ನಾನಾ ಕಾರಣಗಳಿಂದ ಕಾಡನ್ನು ಸೋಲಿಸಿದ್ದಕ್ಕೆ ಕೃಷಿ ಬಡವಾಗಿದೆ ಎಂದು ವಿಷಾದ ವ್ಯಕ್ತಪಡಿಸಿದರು. ಬೆಟ್ಟಗುಡ್ಡದಲ್ಲಿ ಮರಗಳ ನಾಶದಿಂದ ವನ್ಯಜೀವಿಗಳಿಗೂ ತೊಂದರೆಯಾಗುತ್ತದೆ. ಕಾಡು ಕೃಷಿಯಿಂದ ಮಳೆಗಾಲದಲ್ಲಿ ಮಳೆ ಹೆಚ್ಚಿಸುವುದರಿಂದ ರೈತರಿಗೆ ಬೇಸಿಗೆಯಲ್ಲಿ ಹಣ್ಣು ಹಂಪಲುಗಳನ್ನು ಪಡೆಯಬಹುದು. ಕಲಬುರ್ಗಿ ಜಿಲ್ಲೆಯಲ್ಲಿ ಶೇರಿ ಬಿಕನಳ್ಳಿ ಅರಣ್ಯ, ಯಾದಗಿರಿ, ಕೋಲಾರ, ಬಾಗಲಕೋಟೆ ಭಾಗದ ಗುಡ್ಡಗಳಲ್ಲಿ ದಡ್ಡವಾದ ಅರಣ್ಯ ಬೆಳೆಯುತ್ತಿರುವುದು ಈ ಭಾಗದ ಜನರಿಗೆ ಮಾದರಿಯಾಗಿದೆ ಎಂದರು.

ವನ್ಯಜೀವಿ ತಜ್ಞ ಹಾಗೂ ಉಪನ್ಯಾಸಕ ಡಾ| ಸಮ್ಮದ್‌ ಕೊಟ್ಟೂರು ಮಾತನಾಡಿ, ದಖನ್‌ ಪ್ರಸ್ತಭೂಮಿ ಎಂದು ಕರೆಯಲಾಗುವ ಗದಗ, ಬಾಗಲಕೋಟೆ, ಚಿತ್ರದುರ್ಗ, ಬಳ್ಳಾರಿ ಜಿಲ್ಲೆಗಳು ಸಮುದ್ರ ಮಟ್ಟಕ್ಕಿಂತ ಸುಮಾರು ನಾಲ್ಕು ಸಾವಿರ ಅಡಿ ಎತ್ತರದಲ್ಲಿವೆ. ಇದೇ ಕಾರಣಕ್ಕೆ ಮಳೆ ಪ್ರಮಾಣ ಕಡಿಮೆಯಾಗಿದ್ದರೂ ಮಣ್ಣಿನ ಫಲವತ್ತತೆ ಮತ್ತು ಅಂತರ್ಜಲ ಮಟ್ಟ ಹೆಚ್ಚುತ್ತದೆ.

ಇದನ್ನೂ ಓದಿ:ಕನ್ನಡ ಸಾಹಿತ್ಯಕ್ಕಿದೆ ತನ್ನದೇ ಆದ ಗಟ್ಟಿತನ

ಉತ್ತರ ಕರ್ನಾಟಕ ವಿವಿಧ ಜಿಲ್ಲೆಗಳಲ್ಲಿ ಅರಣ್ಯ ಇಲಾಖೆ ಕೈಗೊಂಡಿರುವ ಕೆಲ ಉಪಕ್ರಮಗಳಿಂದಾಗಿ ಜಲ ಸಂರಕ್ಷಣೆಯೊಂದಿಗೆ ಜೀವವೈವಿಧ್ಯತೆ ಹೆಚ್ಚುತ್ತಿದೆ. ಸಂಡೂರಿನ ಕುಮಾರಸ್ವಾಮಿ ಕಾಡು ಪಶ್ಚಿಮ ಘಟ್ಟದಂತೆ ಕಾಡು ಕಂಡುಬರುತ್ತದೆ. ದರೋಜಿ ಕರಡಿಧಾಮ, ಯಲಬುರ್ಗ ಬಳಿ ತೋಳ ರಕ್ಷಿತ ಪ್ರದೇಶ ನಿರ್ಮಿಸಿದೆ.

ಹೊಸಪೇಟೆ-ಕೊಪ್ಪಳ ಮಧ್ಯೆ ನೀರು ನಾಯಿ ಸಂರಕ್ಷಿತ ಪ್ರದೇಶವನ್ನಾಗಿಸಿದ್ದರಿಂದ ಅಳಿವಿನಂಚಿನಲ್ಲಿರುವ ಜಲಚರಗಳು ಕಂಡುಬರುತ್ತಿವೆ. ಜೊತೆಗೆ 4 ಪ್ರಭೇದದ ಆಮೆ, 16 ಜಾತಿಯ ಮೀನುಗಳು ಹಾಗೂ 4 ಜಾತಿಯ ಕಪ್ಪೆಗಳು ಕಂಡು ಬಂದಿರುವುದು ವಿಶೇಷ. ಅದರಂತೆ ಸರಕಾರದೊಂದಿಗೆ ಸಾರ್ವಜನಿಕರು ಅರಣ್ಯ ಮತ್ತು ಜೀವವೈವಿಧ್ಯತೆ ರಕ್ಷಣಾ ಕಾರ್ಯದಲ್ಲಿ ಸ್ವಯಂ ಸೇವಕರಾಗಿ ತೊಡಗಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು. ಇದೇ ವೇಳೆ ಕಪ್ಪತ್ತಗುಡ್ಡ ವನ್ಯಜೀವಿಧಾಮ ವಿಷಯವಾಗಿ ಡಿಸಿಎಫ್‌ ಯಶಪಾಲ್‌ ಕ್ಷೀರಸಾಗರ ಉಪನ್ಯಾಸ ನೀಡಿದರು. ಕಕ್ಕೂರತಾಂಡದ ಲಮಾಣಿ ತಂಡದಿಂದ ನೃತ್ಯ ಪ್ರದರ್ಶನ ಹಾಗೂ ಸುಗಂ  ಗದಾಧರ ಮತ್ತು ರಾಣಾ ಬೇಲೂರು ಅವರ ಕರ್ನಾಟಕದ ಜಲಪಕ್ಷಿಗಳು ಕಿರುಚಿತ್ರ ಪ್ರದರ್ಶಿಸಲಾಯಿತು.

ಟಾಪ್ ನ್ಯೂಸ್

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.