ಗಜೇಂದ್ರಗಡದಲ್ಲಿ ಕ್ರಿಮಿನಾಶಕ ಸಿಂಪಡಣೆ
Team Udayavani, Mar 25, 2020, 4:17 PM IST
ಗಜೇಂದ್ರಗಡ: ಪಟ್ಟಣದಲ್ಲಿ ಪುರಸಭೆ ವತಿಯಿಂದ ಸ್ಥಳೀಯ ಪ್ರಮುಖ ರಸ್ತೆಗಳಲ್ಲಿ ಮಂಗಳವಾರ ಕ್ರಿಮಿನಾಶಕ ಸಿಂಪಡಿಸಲಾಯಿತು.
ಕೋವಿಡ್ 19 ವೈರಸ್ ಸೋಂಕಿತರು ಜಿಲ್ಲೆಗೆ ಯಾರೂ ಬರದಂತೆ ತಡೆಗಟ್ಟುವ ನಿಟ್ಟಿನಲ್ಲಿ ಜಿಲ್ಲಾಡಳಿತ ಇನ್ನಿಲ್ಲದ ಕಸರತ್ತನ್ನು ಮಾಡುತ್ತಿದೆ. ಇದಕ್ಕೆ ಗಜೇಂದ್ರಗಡ ಪುರಸಭೆಯೂ ಹೊರತಾಗಿಲ್ಲ. ಒಂದಿಲ್ಲೊಂದು ರೀತಿಯಲ್ಲಿ ಕೋವಿಡ್ 19 ವೈರಸ್ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವುದಲ್ಲದೇ, ಮುಂಜಾಗೃತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ತೆಗೆದುಕೊಳ್ಳುತ್ತಿದೆ. ಈ ಹಿನ್ನೆಲೆಯಲ್ಲಿ ಪಟ್ಟಣದಲ್ಲಿ ಮಂಗಳವಾರ ಸಂಪೂರ್ಣ ಬಂದ್ ಆಚರಣೆಯಲ್ಲಿದ್ದ ಕಾರಣದಿಂದಾಗಿ ಪುರಸಭೆ ಫಾಗಿಂಗ್ ಮಾಡಿದರು.
ಸ್ಥಳೀಯ ಬಸವೇಶ್ವರ ವೃತ್ತ, ಕಮ್ಮಾರ ಸಾಲು, ಕೊಳ್ಳಿಯವರ ಕತ್ರಿ, ಕಟ್ಟಿಬಸವೇಶ್ವರ ರಂಗಮಂದಿರ, ದುರ್ಗಾ ವೃತ್ತ, ಜೋಡು ರಸ್ತೆ, ಶ್ರೀ ಕಾಲಕಾಲೇಶ್ವರ ವೃತ್ತ, ಬಸ್ ನಿಲ್ದಾಣ ರಸ್ತೆ, ಕುಷ್ಟಗಿ ರಸ್ತೆ, ರೋಣ ರಸ್ತೆ ಮತ್ತು ಬಸ್ ನಿಲ್ದಾಣದಲ್ಲಿ ಕ್ರಿಮಿನಾಶಕ ಸಿಂಪರಣೆ ಮಾಡುವ ಮೂಲಕ ಕೊರೊನಾ ವೈರಸ್ ವಿರುದ್ಧ ಹೋರಾಡಲು ಅಣಿಯಾಗಿದೆ. ಈಗಾಗಲೇ ಪಟ್ಟಣದ ವಿವಿಧ ಬಡಾವಣೆಗಳಲ್ಲಿ ಸ್ವತ್ಛತೆ ಮತ್ತು ನೈರ್ಮಲ್ಯ ಕಾಪಾಡುವ ನಿಟ್ಟಿನಲ್ಲಿ ಕ್ರಿಮಿನಾಶಕ ಸಿಂಪರಣೆ ಮಾಡಲಾಗುತ್ತಿದೆ.
ಗಜೇಂದ್ರಗಡ ಲಾಕ್ಡೌನ್ ಇದ್ದ ಕಾರಣದಿಂದ ಪ್ರಮುಖ ರಸ್ತೆಯಲ್ಲಿ ಫಾಗಿಂಗ್ ಮಾಡಲಾಗಿದೆ ಎಂದು ಪುರಸಭೆಯ ಆರೋಗ್ಯ ಅಧಿಕಾರಿ ರಾಘವೇಂದ್ರ ಮಂತಾ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಗದಗ: ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ
MUST WATCH
ಹೊಸ ಸೇರ್ಪಡೆ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು