ಡಿಬಿಒಟಿ ಪ್ಲಾಂಟ್ಲ್ಲಿ ಸಸ್ಯಪಾಲನೆ!

• 13 ಪ್ಲಾಂಟ್‌ಗಳಲ್ಲಿ ನೂರಾರು ಸಸಿ ನೆಟ್ಟು ವನಮಹೋತ್ಸವ • ಪಂಪ್‌ಹೌಸ್‌ನಲ್ಲಿ ಸುಂದರ ಉದ್ಯಾನ ನಿರ್ಮಾಣ

Team Udayavani, Jun 7, 2019, 9:16 AM IST

gadaga-tdy-2..

ನರಗುಂದ: ಪಂಪ್‌ಹೌಸ್‌ ಒಳಾಂಗಣದಲ್ಲಿ ವಿಶ್ವ ಪರಿಸರ ದಿನ ನಿಮಿತ್ತ ಸಸಿ ನೆಡಲಾಯಿತು.

ನರಗುಂದ: ನರಗುಂದ-ರೋಣ ತಾಲೂಕುಗಳ ಜನರಿಗೆ ಶುದ್ಧ ಕುಡಿಯುವ ನೀರು ಒದಗಿಸುವ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಇದೀಗ ಪರಿಸರ ಸಂರಕ್ಷಣೆಗೂ ತನ್ನ ಪಾತ್ರ ಕಾಯ್ದುಕೊಂಡಿದೆ. ಯೋಜನೆ 13 ಪ್ಲಾಂಟ್‌ಗಳಲ್ಲಿ 25 ಲಕ್ಷ ರೂ. ವೆಚ್ಚದಲ್ಲಿ ಸಸ್ಯ ಪಾಲನೆ ಮಾಡಲಾಗುತ್ತಿದೆ.

ಕುಡಿಯುವ ನೀರು ಸರಬರಾಜು ಇಲಾಖೆ ಯೋಜನೆಯಡಿ 2 ತಾಲೂಕುಗಳ 128 ಗ್ರಾಮಗಳಿಗೆ ನವಿಲುತೀರ್ಥ ಜಲಾಶಯದಿಂದ ಪೈಪ್‌ಲೈನ್‌ ಮೂಲಕ ಶುದ್ಧೀಕರಿಸಿದ ನೀರು ಒದಗಿಸುವ ಯೋಜನೆ ಪಂಪ್‌ಹೌಸ್‌ ತಾಲೂಕಿನ ಚಿಕ್ಕನರಗುಂದ ಬಳಿ ಸ್ಥಾಪಿಸಲಾಗಿದೆ.

428 ಕೋಟಿ ವೆಚ್ಚದಲ್ಲಿ ಜಲಾಶಯದಿಂದ 25 ಕಿಮೀ ಪೈಪ್‌ಲೈನ್‌ನಿಂದ‌ ನೀರು ತಂದು ತಾಲೂಕಿನ 30, ರೋಣ ತಾಲೂಕಿನ 98 ಗ್ರಾಮಗಳಿಗೆ ಶುದ್ಧ ನೀರು ಪೂರೈಸಲು ಒಟ್ಟು 600 ಕಿಮೀ ಪೈಪ್‌ಲೈನ್‌ ಜೋಡಣೆ ಮಾಡಲಾಗಿದೆ. 1 ವರ್ಷದಿಂದ ಯೋಜನೆ ಕಾರ್ಯಾರಂಭ ಮಾಡಿದೆ. ಕುಡಿಯುವ ನೀರು ಸರಬರಾಜು ಇಲಾಖೆ ನಿರ್ದೇಶನ ಮೇರೆಗೆ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕೈಗೆತ್ತಿಕೊಂಡ ಇಸ್ರೇಲ್ ಮೂಲದ ತಹಾಲ್ ಗ್ರೂಪ್‌ ಸಸ್ಯಪಾಲನೆ ಕೈಗೊಂಡಿದೆ.

ನವಿಲುತೀರ್ಥ ಜಲಾಶಯ, ಪಂಪ್‌ಹೌಸ್‌, ತಾಲೂಕಿನ ಚಿಕ್ಕನರಗುಂದ, ಭೈರನಹಟ್ಟಿ, ರೋಣ ತಾಲೂಕಿನ ಮಲ್ಲಾಪುರ, ಅಬ್ಬಿಗೇರಿ, ಕೊತಬಾಳ, ರೋಣ ಪಟ್ಟಣ, ಬೆಳಗೋಡ, ರಾಜೂರ, ಕಾಲಕಾಲೇಶ್ವರ, ಬೈರಾಪುರ, ಜಿಗೇರಿ ಸೇರಿ 13 ಪ್ಲಾಂಟ್‌ಗಳಲ್ಲಿ 25 ಲಕ್ಷ ವೆಚ್ಚದಲ್ಲಿ 125ಕ್ಕೂ ಹೆಚ್ಚು ತಳಿಗಳ ಸಸ್ಯಪಾಲನೆ ಮಾಡಲಾಗಿದೆ.

ಧಾರವಾಡ ಕೃವಿವಿಯಿಂದ ಹಣ್ಣಿನ ಸಸಿಗಳು, ಹೈದರಾಬಾದ್‌ ರಾಜಮಂಡ್ರಿಯಿಂದ ಲಾನ್‌(ಹುಲ್ಲಿನ ಹಾಸು), ನರೇಂದ್ರದ ನಡಕಟ್ಟಿ ಫಾರ್ಮ್ನಿಂದ ಹೂವಿನ ಸಸಿಗಳನ್ನು ತರಲಾಗಿದೆ. 13 ಪ್ಲಾಂಟ್‌ಗಳಲ್ಲಿ 200 ಚಿಕ್ಕು, 100 ಸೀತಾಫಲ, 100 ಪೇರಲ, 100 ಪಪ್ಪಾಯಿ ಸಸಿ ನೆಡಲಾಗಿದೆ. ಎಲ್ಲ ಸಸಿಗಳಿಗೆ ಹನಿ ನೀರಾವರಿ ಮತ್ತು ಕಾರಂಜಿಯಿಂದ ನೀರು ಪೂರೈಸಲಾಗುತ್ತಿದೆ. ಡ್ರಾಗನ್‌ ಫ್ರುಟ್ಸ್‌, ಬಾದಾಮಿ, ಬೆಳವಲಕಾಯಿ, ನೇರಳೆ, ಲಿಂಬಿ, ನುಗ್ಗಿ, ಬಿದಿರು, ಅಡಿಕೆ, ಮಾವು, ತೆಂಗು, ಬಾಳೆ, ಚೆರ್ರಿ ಹಾಗೂ ಹೂವಿನ ಸಸಿಗಳಾದ ಕನಗಲಿ, ಆಂಥೋರಿಯಂ, ಪಾಮ್‌, ಅಶ್ವಗಂಧ, ಪೈಕಾಸ್‌, ದುಬೈ ಪಾಮ್‌, ಕ್ರೋಟಾನ್ಸ್‌, ಮಲ್ಲಿಗೆ ಸಸಿಗಳನ್ನು ನೆಡಲಾಗಿದೆ. ಎಇಇ ಎಸ್‌.ಬಿ. ಪೊಲೀಸ್‌ಪಾಟೀಲ, ಯುವರಾಜ, ಮಂಜುನಾಥ ಅಗಸಿಮನಿ, ತಹಾಲ್ ಗ್ರೂಪ್‌ನ ಯೋಜನಾ ವ್ಯವಸ್ಥಾಪಕ ದೇವರಾಜ ದೇಸಾಯಿ, ಪ್ಲಾಂಟ್ ಅಭಿಯಂತ ಶಂಕರಾನಂದ ಸಂಕಧಾಳ, ಕೆ. ಮಂಜುನಾಥ, ಸಂತೋಷ ಕಮ್ಮಾರ ಇದ್ದರು.

ಟಾಪ್ ನ್ಯೂಸ್

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

Loan: ಸಾಲ ಪಡೆಯಲು ಸತ್ತ ವ್ಯಕ್ತಿಯನ್ನೇ ಬ್ಯಾಂಕಿಗೆ ಕರೆತಂದ ಮಹಿಳೆ… ಕೊನೆಗೆ ಆದದ್ದೇ ಬೇರೆ

Loan: ಸತ್ತ ವ್ಯಕ್ತಿಯನ್ನು ಕರೆತಂದು ಸಾಲ ಪಡೆಯಲು ಮುಂದಾದ ಮಹಿಳೆ… ಕೊನೆಗೆ ಆದದ್ದೇ ಬೇರೆ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ನೆಟ್‌ಫ್ಲಿಕ್ಸ್

Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ನೆಟ್‌ಫ್ಲಿಕ್ಸ್

Rohit Sharma spoke about team selection for T20 World Cup

T20 WC; ‘ಎಲ್ಲವೂ ಸುಳ್ಳು…’: ತಂಡದ ಆಯ್ಕೆ ಬಗ್ಗೆ ಮಹತ್ವದ ಅಪ್ಡೇಟ್ ನೀಡಿದ ರೋಹಿತ್ ಶರ್ಮಾ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮದು ಬಡವರಿಗೆ ಬದುಕು ಕಟ್ಟಿ ಕೊಡುವ ಪ್ರಣಾಳಿಕೆ: ಬಸವರಾಜ ಬೊಮ್ಮಾಯಿ

Gadag; ನಮ್ಮದು ಬಡವರಿಗೆ ಬದುಕು ಕಟ್ಟಿ ಕೊಡುವ ಪ್ರಣಾಳಿಕೆ: ಬಸವರಾಜ ಬೊಮ್ಮಾಯಿ

1-wqeqweqwe

Panchmasali ಸಮಾಜಕ್ಕೆ ಬಿಜೆಪಿಯಿಂದ ಅನ್ಯಾಯ: ವಚನಾನಂದ ಸ್ವಾಮೀಜಿ

ವೀರೇಶ್ವರ ಪುಣ್ಯಾಶ್ರಮಕ್ಕೆ ಭೇಟಿ ನೀಡಿ ಗದ್ದುಗೆಯ ದರ್ಶನಾಶೀರ್ವಾದ ಪಡೆದ ಶ್ರೀರಾಮುಲು

Gadag; ವೀರೇಶ್ವರ ಪುಣ್ಯಾಶ್ರಮಕ್ಕೆ ಭೇಟಿ ನೀಡಿ ಗದ್ದುಗೆಯ ದರ್ಶನಾಶೀರ್ವಾದ ಪಡೆದ ಶ್ರೀರಾಮುಲು

Naregal; ಪ್ರೇಮಿಯೊಂದಿಗೆ ನೇಣಿಗೆ ಶರಣಾದ ನವವಿವಾಹಿತೆ!

Naregal; ಪ್ರೇಮಿಯೊಂದಿಗೆ ನೇಣಿಗೆ ಶರಣಾದ ನವವಿವಾಹಿತೆ!

ವಚನಾನಂದ ಶ್ರೀಗಳ ಮಾತನ್ನು ಗಂಭೀರವಾಗಿ ಪರಿಗಣಿಸುತ್ತೇವೆ: ಬಸವರಾಜ ಬೊಮ್ಮಾಯಿ

Gadag; ವಚನಾನಂದ ಶ್ರೀಗಳ ಮಾತನ್ನು ಗಂಭೀರವಾಗಿ ಪರಿಗಣಿಸುತ್ತೇವೆ: ಬಸವರಾಜ ಬೊಮ್ಮಾಯಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

19-rcb

RCB: ಈ  ಸಲ ಕಪ್‌ ನಮ್ಮದು…

18

Honesty: ಪ್ರಾಮಾಣಿಕರಿಗಿದು ಕಾಲವಲ್ಲ…

Loan: ಸಾಲ ಪಡೆಯಲು ಸತ್ತ ವ್ಯಕ್ತಿಯನ್ನೇ ಬ್ಯಾಂಕಿಗೆ ಕರೆತಂದ ಮಹಿಳೆ… ಕೊನೆಗೆ ಆದದ್ದೇ ಬೇರೆ

Loan: ಸತ್ತ ವ್ಯಕ್ತಿಯನ್ನು ಕರೆತಂದು ಸಾಲ ಪಡೆಯಲು ಮುಂದಾದ ಮಹಿಳೆ… ಕೊನೆಗೆ ಆದದ್ದೇ ಬೇರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.