ಅಜಗುಂಡಿ ರಸ್ತೆಯಲ್ಲಿ ನಿತ್ಯ ಪರದಾಟ


Team Udayavani, Sep 14, 2019, 11:41 AM IST

gadaga-tdy-3

ನರಗುಂದ: ನರಗುಂದ-ರಾಮದುರ್ಗ ತಾಲೂಕುಗಳ ಗಡಿಭಾಗದಲ್ಲಿರುವ ಅಜಗುಂಡಿ ರಸ್ತೆ ಹದಗೆಟ್ಟಿರುವುದು.

ನರಗುಂದ: ಪೂರಕವಾಗಿ ನರಗುಂದ ಮತ್ತು ರಾಮದುರ್ಗ ತಾಲೂಕುಗಳ ಗಡಿಭಾಗದ ಅಜಗುಂಡಿ ರಸ್ತೆಯ ಅವ್ಯವಸ್ಥೆಯಿಂದ ಈ ಭಾಗದ ಅನ್ನದಾತರು ನಿತ್ಯ ಪರದಾಡುವಂತಾಗಿದೆ.

ನರಗುಂದ ತಾಲೂಕು ಬೆಳ್ಳೇರಿ ಗ್ರಾಮದಿಂದ 1 ಕಿಮೀ ದೂರಕ್ಕೆ ತಾಲೂಕು ಹದ್ದು ಮುಗಿದು ರಾಮದುರ್ಗ ತಾಲೂಕು ಹದ್ದು ಪ್ರಾರಂಭವಾಗುತ್ತದೆ. ಈ ಗಡಿಭಾಗದಲ್ಲಿ ರಾಮದುರ್ಗ ತಾಲೂಕಿನ ಕಲಹಾಳ ಗ್ರಾಮದ ಅಂಚಿಗಿದೆ ಅಜಗುಂಡಿ ರಸ್ತೆ. ಅಜಗುಂಡಿ ರಸ್ತೆಯ ಎರಡೂ ಕಡೆಗೆ ನರಗುಂದ ಮತ್ತು ರಾಮದುರ್ಗ ಹದ್ದು ಬರುತ್ತದೆ. ಈ ರಸ್ತೆ ನರಗುಂದ ವ್ಯಾಪ್ತಿಗೆ ಬರುತ್ತದೆ. ಎರಡು ತಿಂಗಳ ಹಿಂದೆ ರಸ್ತೆಯ ಪಕ್ಕದ ಸರುವಿನಲ್ಲಿ ನೀರು ಹರಿದು ರಸ್ತೆ ಎಲ್ಲೆಂದರಲ್ಲಿ ಕೊರೆದಿದೆ. ಇದರಿಂದ ರೈತರ ಸಂಚಾರಕ್ಕೆ ತೊಂದರೆಯಾಗಿದೆ.

ಅಜಗುಂಡಿ ರಸ್ತೆಗೆ ಹೊಂದಿಕೊಂಡು ನರಗುಂದ ತಾಲೂಕಿನ ವಾಸನ, ಬೆಳ್ಳೇರಿ, ಕೊಣ್ಣೂರ ಮತ್ತು ರಾಮದುರ್ಗ ತಾಲೂಕಿನ ಕಲಹಾಳ ಗ್ರಾಮಗಳ 600ಕ್ಕೂ ಹೆಚ್ಚು ಎಕರೆ ಕೃಷಿ ಪ್ರದೇಶವಿದೆ. ಈ ಭಾಗದ ರೈತರಿಗೆ ಇದೇ ಪ್ರಮುಖ ರಸ್ತೆಯಾಗಿದ್ದರಿಂದ ರಸ್ತೆ ಅವ್ಯವಸ್ಥೆ ತೊಂದರೆಗೀಡು ಮಾಡಿದೆ.

ರೈತರ ಕೋರಿಕೆ ಮೇರೆಗೆ ವಾಸನ ಗ್ರಾಮ ಪಂಚಾಯತ್‌ ವತಿಯಿಂದ 4-5 ವರ್ಷಗಳ ಹಿಂದೆ ರಸ್ತೆ ಸುಧಾರಣೆ ಮಾಡಲಾಗಿತ್ತು ಎನ್ನುತ್ತಾರೆ ರೈತರು. ಈಗ ಮತ್ತೆ ರಸ್ತೆ ಹದಗೆಟ್ಟು ಕೃಷಿ ಚಟುವಟಿಕೆಗಳಿಗೆ ಸಾಗಲು ಸಾಕಷ್ಟು ಕಷ್ಟಪಡುವಂತಾಗಿದೆ. ಕೂಡಲೇ ರಸ್ತೆ ದುರಸ್ತಿ ಮಾಡಿ ರೈತರ ನೆರವಿಗೆ ಧಾವಿಸಬೇಕು ಎಂದು ರೈತರಾದ ಹನಮಂತ ಮಡಿವಾಳರ, ಸಿದ್ದಲಿಂಗಪ್ಪ ಜಗ್ಗಲ, ಭರಮಪ್ಪ ಜಗ್ಗಲ, ಎಚ್.ವಿ. ಪಾಟೀಲ, ಗುರನಗೌಡ ಪಾಟೀಲ, ಎಸ್‌.ವಿ. ಪಾಟೀಲ, ಸಿದ್ದಲಿಂಗಪ್ಪ ಅರಳಿಸೀಮಿ ಆಗ್ರಹಿಸಿದರು.

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮದು ಬಡವರಿಗೆ ಬದುಕು ಕಟ್ಟಿ ಕೊಡುವ ಪ್ರಣಾಳಿಕೆ: ಬಸವರಾಜ ಬೊಮ್ಮಾಯಿ

Gadag; ನಮ್ಮದು ಬಡವರಿಗೆ ಬದುಕು ಕಟ್ಟಿ ಕೊಡುವ ಪ್ರಣಾಳಿಕೆ: ಬಸವರಾಜ ಬೊಮ್ಮಾಯಿ

1-wqeqweqwe

Panchmasali ಸಮಾಜಕ್ಕೆ ಬಿಜೆಪಿಯಿಂದ ಅನ್ಯಾಯ: ವಚನಾನಂದ ಸ್ವಾಮೀಜಿ

ವೀರೇಶ್ವರ ಪುಣ್ಯಾಶ್ರಮಕ್ಕೆ ಭೇಟಿ ನೀಡಿ ಗದ್ದುಗೆಯ ದರ್ಶನಾಶೀರ್ವಾದ ಪಡೆದ ಶ್ರೀರಾಮುಲು

Gadag; ವೀರೇಶ್ವರ ಪುಣ್ಯಾಶ್ರಮಕ್ಕೆ ಭೇಟಿ ನೀಡಿ ಗದ್ದುಗೆಯ ದರ್ಶನಾಶೀರ್ವಾದ ಪಡೆದ ಶ್ರೀರಾಮುಲು

Naregal; ಪ್ರೇಮಿಯೊಂದಿಗೆ ನೇಣಿಗೆ ಶರಣಾದ ನವವಿವಾಹಿತೆ!

Naregal; ಪ್ರೇಮಿಯೊಂದಿಗೆ ನೇಣಿಗೆ ಶರಣಾದ ನವವಿವಾಹಿತೆ!

ವಚನಾನಂದ ಶ್ರೀಗಳ ಮಾತನ್ನು ಗಂಭೀರವಾಗಿ ಪರಿಗಣಿಸುತ್ತೇವೆ: ಬಸವರಾಜ ಬೊಮ್ಮಾಯಿ

Gadag; ವಚನಾನಂದ ಶ್ರೀಗಳ ಮಾತನ್ನು ಗಂಭೀರವಾಗಿ ಪರಿಗಣಿಸುತ್ತೇವೆ: ಬಸವರಾಜ ಬೊಮ್ಮಾಯಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.