ರೇಷ್ಮೆ ನೂಲು ಬಿಚ್ಚಾಣಿಕೆ ಘಟಕಕ್ಕೆ ವಿದ್ಯುತ್‌ ಕಟ್‌

ರೇಷ್ಮೆ ನೂಲು ಬಿಚ್ಚುವ ರೀಲರ್‌ಗಳು ಇಲಾಖೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

Team Udayavani, Jan 31, 2022, 6:23 PM IST

ರೇಷ್ಮೆ ನೂಲು ಬಿಚ್ಚಾಣಿಕೆ ಘಟಕಕ್ಕೆ ವಿದ್ಯುತ್‌ ಕಟ್‌

ಶಿರಹಟ್ಟಿ: ಶಿರಹಟ್ಟಿಯ ಸರಕಾರಿ ರೇಷ್ಮೆ ಗೂಡು ಮಾರುಕಟ್ಟೆ ಹಲವಾರು ವರ್ಷಗಳಿಂದ ವಹಿವಾಟು ನಡೆಸುತ್ತಿದೆ. ನಿತ್ಯವೂ 14-15 ಜಿಲ್ಲೆಗಳಿಂದ ರೈತರು ತಾವು ಬೆಳೆದಂತಹ ರೇಷ್ಮೆ ಗೂಡನ್ನು  ಇಲ್ಲಿಗೆ ತಂದು ಮಾರಾಟ ಮಾಡುತ್ತಾರೆ. ಹೀಗೆ ಬರುವಂತಹ ರೈತರಿಗೆ ಸದಾ ಒಂದಿಲ್ಲೊಂದು ಸಂಕಷ್ಟ ಎದುರಾಗುತ್ತಿದ್ದು, ಇದೀಗ ಸರಕಾರಿ ಸಾಮೂಹಿಕ ರೇಷ್ಮೆ ನೂಲು ಬಿಚ್ಚುವ ಘಟಕಗಳ ಪವರ್‌ ಕಟ್‌ ಆಗಿರುವುದರಿಂದ ಸರಕಾರದಿಂದ ಪರವಾನಗಿ ಪಡೆದ ರೀಲರ್‌ ಗಳು ರೇಷ್ಮೆ ಇಲಾಖೆಯ ನಿರ್ಲಕ್ಷ್ಯಕ್ಕೆ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ವಿದ್ಯುತ್‌ ಬಿಲ್‌ ಪಾವತಿಸದ್ದಕ್ಕೆ ಪವರ್‌ ಕಟ್‌:
ಶಿರಹಟ್ಟಿ ರೇಷ್ಮೆ ಇಲಾಖೆಯ ಸರಕಾರಿ ಸಾಮೂಹಿಕ ರೇಷ್ಮೆ ನೂಲು ಬಿಚ್ಚುವ ಘಟಕಗಳಲ್ಲಿ ಸುಮಾರು 10-11ಜನ ಸರಕಾರದಿಂದ ಪರವಾನಗಿ ಪಡೆದ ಫಲಾನುಭವಿಗಳು ರೇಷ್ಮೆ ರೀಲಿಂಗ್‌ ನಡೆಸುತ್ತಿದ್ದು, ಈ ಘಟಕಗಳಿಗೆ ರೀಲರ್‌ಗಳು ವಿದ್ಯುತ್‌ ಬಿಲ್‌ ತುಂಬುತ್ತಾರೆ. ರೇಷ್ಮೆ ಇಲಾಖೆಯಿಂದ ಪಾವತಿಸಬೇಕಾದ ಬೋರ್‌ವೆಲ್‌ ಹಾಗೂ ಹಾಟ್‌ ಅಂಡ್‌ ಡ್ರೆ„ ಘಟಕಗಳ ವಿದ್ಯುತ್‌ ಬಿಲ್‌ ಬಾಕಿ ಇರುವುದರಿಂದ ಇಡೀ ಸಂಕೀರ್ಣದ ವಿದ್ಯುತ್‌ ಸರಬರಾಜು ಕಡಿತಗೊಂಡಿದೆ. ಇದರಿಂದ ಸಹಜವಾಗಿಯೇ ರೇಷ್ಮೆ ನೂಲು ಬಿಚ್ಚುವ ರೀಲರ್‌ಗಳು ಇಲಾಖೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ನಷ್ಟ ಭರಿಸೋರು ಯಾರು?: ರೇಷ್ಮೆ ಗೂಡು ಖರೀದಿ ಮಾಡಿದ ನಂತರ ಸಮಯಕ್ಕೆ ಸರಿಯಾಗಿ ಗೂಡು ಬಿಚ್ಚಾಣಿಕೆ ಮಾಡದೇ ಹೋದರೆ ಗೂಡಿನಲ್ಲಿ ಚಿಟ್ಟೆ ಹೊರಬರುವ ಸಾಧ್ಯತೆ ಇರುತ್ತದೆ. ಇದರಿಂದಾಗುವ ನಷ್ಟವನ್ನು ನಮಗೆ ಯಾರು ಭರಿಸಿಕೊಡುತ್ತಾರೆ. ಘಟಕಗಳ ಉಸ್ತುವಾರಿ ನೋಡಿಕೊಳ್ಳಬೇಕಾದ ಅಧಿಕಾರಿಗಳು ವಾರಕ್ಕೆ ಒಮ್ಮೆಯಾದರೂ ಭೇಟಿ ನೀಡದೇ ಇದ್ದುದರಿಂದ ಇಂತಹ ಸಮಸ್ಯೆಗಳು ಉದ್ಭವಿಸುತ್ತಿವೆ ಎಂದು ಇಲ್ಲಿಯ ಬಹುತೇಕ ರೀಲರ್‌ಗಳು ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ.

ರೈತರಿಗೂ ತೊಂದರೆ: ನೂಲು ಬಿಚ್ಚುವ ಘಟಕಗಳಲ್ಲಿ ಪವರ್‌ ಕಟ್‌ ಆಗಿರುವುದರಿಂದ ಕಳೆದ 4-5 ದಿನಗಳಿಂದ ದೂರದ ಜಿಲ್ಲೆಗಳಿಂದ ರೇಷ್ಮೆ ಗೂಡು ಮಾರುಕಟ್ಟೆಗೆ ರೈತರು ಆಗಮಿಸುತ್ತಿದ್ದು, ರೇಷ್ಮೆ ಗೂಡು ಖರೀದಿಸಲು ರೀಲರ್‌ಗಳು ಸಹ ಮುಂದೆ ಬರುತ್ತಿಲ್ಲ. ಇದರಿಂದ ರೈತರು ಅನಿವಾರ್ಯವಾಗಿ ಇಲ್ಲಿಯ ಅವ್ಯವಸ್ಥೆಗೆ ಹಿಡಿಶಾಪ ಹಾಕಿ ಬಂದ ದಾರಿಗೆ ಸುಂಕವಿಲ್ಲ ಎಂಬಂತೆ ಬೇರೆ ಕಡೆಗೆ ತೆರಳುತ್ತಿದ್ದಾರೆ.

ಸರಕಾರ ಸಮಸ್ಯೆ ನಿವಾರಿಸಲಿ: ಅಕ್ಕಿ ಈ ಕುರಿತು ಪ್ರತಿಕ್ರಿಯಿಸಿದ ರೀಲರ್‌ ಸಂಘದ ಅಧ್ಯಕ್ಷ ಚಂದ್ರಕಾಂತ ಅಕ್ಕಿ, ರೇಷ್ಮೆ ಇಲಾಖೆ ಅಧಿಕಾರಿಗಳು ನೂಲು ಬಿಚ್ಚುವ ಘಟಕಗಳಿಗೆ ಸರಿಯಾಗಿ ಭೇಟಿ ನೀಡದೇ ಇದ್ದುದರಿಂದ ಅವರ ನಿರ್ಲಕ್ಷ್ಯ ಹಾಗೂ ವಿದ್ಯುತ್‌ ಬಿಲ್‌ ಪಾವತಿ ಮಾಡದ್ದರಿಂದ ರೀಲರ್‌ಗಳು ಸಂಕಷ್ಟ ಎದುರಿಸುತ್ತಿದ್ದಾರೆ. ಇದರಿಂದ ರೈತರಿಗೂ ತೊಂದರೆಯಾಗುತ್ತಿದೆ. ಸರಕಾರ ಇದನ್ನು ಸರಿಪಡಿಸಬೇಕೆಂದು ಆಗ್ರಹಿಸಿದರು.

ಬೇಡಿಕೆಯ ಶೇ.50ರಷ್ಟು ಅನುದಾನ ವಿಳಂಬವಾಗಿ ಬಂದಿದೆ. ಈಗಾಗಲೇ ಹೆಸ್ಕಾಂಗೆ ಬಿಲ್‌ ಭರಣಾ ಮಾಡಲಾಗಿದೆ. ನಾಳೆಯೇ ಖುದ್ದಾಗಿ ಹೆಸ್ಕಾಂ ಕಚೇರಿಗೆ ಭೇಟಿ ನೀಡಿ ಚರ್ಚಿಸಿ ವಿದ್ಯುತ್‌ ಸಂಪರ್ಕ ಕಲ್ಪಿಸಲಾಗುವುದು. 4 ಕಡೆ ಚಾರ್ಜ್‌ ಇರುವುದರಿಂದ ಅವಶ್ಯಕತೆಗನುಗುಣವಾಗಿ ಭೇಟಿ ನೀಡಲಾಗುತ್ತಿದೆ.
ಬಿ.ಆರ್‌.ಅಂಗಡಿ, ರೇಷ್ಮೆ ಇಲಾಖೆ ಸಹಾಯಕ ನಿರ್ದೇಶಕ, ಹಾವೇರಿ

ಟಾಪ್ ನ್ಯೂಸ್

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Honeybee Attack: ಹೆಜ್ಜೇನು ದಾಳಿ: ಓರ್ವ ಮೃತ್ಯು, ಏಳು ಮಂದಿಗೆ ಗಾಯ

Honeybee Attack: ಹೆಜ್ಜೇನು ದಾಳಿ: ಓರ್ವ ಮೃತ್ಯು, ಏಳು ಮಂದಿಗೆ ಗಾಯ

ಮತ್ತೆ ಎಲ್ಲೆಡೆ ಕಾಂಗ್ರೆಸ್ ಬಾವುಟ ರಾರಾಜಿಸುವುದು ಸೂರ್ಯ ಚಂದ್ರರಷ್ಟೇ ಸತ್ಯ: ಎಚ್.ಕೆ. ಪಾಟೀಲ

ಮತ್ತೆ ಎಲ್ಲೆಡೆ ಕಾಂಗ್ರೆಸ್ ಬಾವುಟ ರಾರಾಜಿಸುವುದು ಸೂರ್ಯ ಚಂದ್ರರಷ್ಟೇ ಸತ್ಯ: ಎಚ್.ಕೆ. ಪಾಟೀಲ

ಬಸವರಾಜ ಬೊಮ್ಮಾಯಿ ಹಿಂದೆ ದೊಡ್ಡದೊಂದು ಲಗೇಜ್ ಇದೆ: ಎಚ್.ಕೆ.ಪಾಟೀಲ್

Gadag; ಬಸವರಾಜ ಬೊಮ್ಮಾಯಿ ಹಿಂದೆ ದೊಡ್ಡದೊಂದು ಲಗೇಜ್ ಇದೆ: ಎಚ್.ಕೆ.ಪಾಟೀಲ್

Gadag; ಹಾವೇರಿ ಲೋಕಸಭಾ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಅವರಿಂದ ಟೆಂಪಲ್ ರನ್

Gadag; ಹಾವೇರಿ ಲೋಕಸಭಾ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಅವರಿಂದ ಟೆಂಪಲ್ ರನ್

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

18-

Book Brahma ಸ್ವಾತಂತ್ರ‍್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು

Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ

Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.