ಕಠಿಣ ಅಭ್ಯಾಸದಿಂದ ಭವಿಷ್ಯ ರೂಪಿಸಿಕೊಳ್ಳಿ
ವಿದ್ಯಾರ್ಥಿಗಳಿಗೆ ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲ ಸಲಹೆ
Team Udayavani, May 27, 2022, 12:34 PM IST
ನರಗುಂದ: ಇಂದಿನ ಆಧುನಿಕ ಜಗತ್ತಿನಲ್ಲಿ ಮಕ್ಕಳಿಗೆ ಉತ್ತಮ ಶಿಕ್ಷಣವೇ ನಿಜವಾದ ಆಸ್ತಿಯಾಗಿದೆ. ಆದ್ದರಿಂದ, ಮಕ್ಕಳು ಕೂಡ ಪರಿಶ್ರಮದಿಂದ ಕಠಿಣ ಅಭ್ಯಾಸ ಮಾಡಿ ಶಿಕ್ಷಣದಿಂದಲೇ ಉಜ್ವಲ ಭವಿಷ್ಯ ರೂಪಿಸಿಕೊಳ್ಳಬೇಕೆಂದು ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲ ಹೇಳಿದರು.
ಗುರುವಾರ ಪಟ್ಟಣದಲ್ಲಿ ತಮ್ಮ ಗೃಹ ಕಚೇರಿಯಲ್ಲಿ ಪ್ರಸಕ್ತ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಜಿಲ್ಲೆಗೆ ಕೀರ್ತಿ ತಂದ ತಾಲೂಕಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಆತ್ಮೀಯವಾಗಿ ಸತ್ಕರಿಸಿ ಸಚಿವರು ಮಾತನಾಡಿದರು.
ನಾನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವನಾಗಿದ್ದಾಗ ತಾಲೂಕಿಗೆ ಮೊರಾರ್ಜಿ ದೇಸಾಯಿ ವಸತಿ ಶಾಲೆ ತಂದು, ಅದಕ್ಕೆ ಸುಸಜ್ಜಿತ ಕಟ್ಟಡ ಕೂಡ ಮಂಜೂರು ಮಾಡಿಸಿದ್ದೆ. ಆ ಶಾಲೆಯ 6 ವಿದ್ಯಾರ್ಥಿಗಳು ಇಂದು ಜಿಲ್ಲೆಯಲ್ಲೇ ಅತೀ ಹೆಚ್ಚು ಅಂಕ ಗಳಿಸುವ ಮೂಲಕ ಸಾರ್ಥಕಗೊಳಿಸಿದ್ದಾರೆ ಎಂದು ಸಚಿವ ಸಿ.ಸಿ.ಪಾಟೀಲ ಮೆಚ್ಚುಗೆ ವ್ಯಕ್ತಪಡಿಸಿದರು.
ಸಾರ್ವಜನಿಕ ಶಿಕ್ಷಣ ಇಲಾಖೆ ಗದಗ ಜಿಲ್ಲಾ ಉಪನಿರ್ದೇಶಕ ಜಿ.ಎಂ.ಬಸಲಿಂಗಪ್ಪ ಅವರು ಮಾತನಾಡಿ, ಗದಗ ಜಿಲ್ಲೆಗೆ ಈ ಬಾರಿ 88.13ರಷ್ಟು ಫಲಿತಾಂಶ ದೊರೆತಿದೆ. ಇದರಲ್ಲಿ ಅತೀ ಹೆಚ್ಚು ಸಾಧನೆ ಮಾಡಿದ ನರಗುಂದ ತಾಲೂಕು ಜಿಲ್ಲೆಗೆ ಪ್ರಥಮವಾಗಿದೆ. ಜಿಲ್ಲೆಯ 13 ಜನ ಟಾಪರ್ಗಳಲ್ಲಿ ಅತ್ಯಧಿ ಕ 8 ವಿದ್ಯಾರ್ಥಿಗಳು ನರಗುಂದ ತಾಲೂಕಿನವರಾಗಿದ್ದಾರೆ ಎಂದರು.
ಇದೇ ಸಂದರ್ಭದಲ್ಲಿ ರಾಜ್ಯದ ಮೊರಾರ್ಜಿ ಶಾಲೆಗಳ ಫಲಿತಾಂಶದಲ್ಲಿ ಎರಡನೇ ಸ್ಥಾನದಲ್ಲಿರುವ ತಾಲೂಕಿನ ಬೆನಕನಕೊಪ್ಪ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಿಂದ ಜಿಲ್ಲೆಗೆ ಕೀರ್ತಿ ತಂದ ನವೀನಗೌಡ ಮಲ್ಲನಗೌಡ್ರ, ವಾಣಿಶ್ರೀ ಕುಲಕರ್ಣಿ,ಬಸವರಾಜ ಬಾರಕೇರ, ನವೀನ ಸಾಸಳ್ಳಿ, ನಿವೇದಿತಾ ಚಕ್ರಸಾಲಿ, ಲಿಂಗರಾಜ ತಳ್ಳಳ್ಳಿ ಅವರನ್ನು ಸಚಿವ ಸಿ.ಸಿ.ಪಾಟೀಲ ಸತ್ಕರಿಸಿ ಪ್ರೋತ್ಸಾಹಿಸಿದರು.
ಮೊರಾರ್ಜಿ ಶಾಲೆ ಪ್ರಾಚಾರ್ಯೆ ರೂಪಾ ನಾಯ್ಡು, ಶಿಕ್ಷಕರಾದ ಎಂ.ಕೆ.ಅಲ್ಲಿಭಾಯಿ, ನಿತಿನ್ ಕೇಸರಕರ, ಅಶ್ವಿನಿ ಹೂಲಿ, ಶೋಬಾ ಗದಗಿನ, ಮಂಜುನಾಥ ತಳವಾರ, ಶ್ರೀಶೈಲ ಮಾದರ ಅವರನ್ನು ಕೂಡ ಸಚಿವರು ಸತ್ಕರಿಸಿ, ಅವರ ಸೇವೆ ಸ್ಮರಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ಯುವ ನಾಯಕ ಉಮೇಶಗೌಡ ಪಾಟೀಲ, ಮಂಜು ಮೆಣಸಗಿ, ಗುರಪ್ಪ ಆದೆಪ್ಪನವರ, ರಾಜುಗೌಡ ಪಾಟೀಲ, ಅನಿಲ ಧರಿಯಣ್ಣವರ, ಡಾ|ಸಿ.ಕೆ.ರಾಚನಗೌಡ್ರ, ಸಿದ್ದೇಶ ಹೂಗಾರ ಮುಂತಾದವರಿದ್ದರು.
ಈ ಬಾರಿ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಮೊರಾರ್ಜಿ ಶಾಲೆಯ ಸಾಧನೆ ಬಹಳ ಖುಷಿ ತಂದಿದೆ. ಜಿಲ್ಲೆಯ ಫಲಿತಾಂಶ ಉತ್ತಮ ಸಾಧನೆಯ ಮೂಲಕ ರಾಜ್ಯಕ್ಕೆ ಜಿಲ್ಲೆ 14ನೇ ಸ್ಥಾನ ಪಡೆದುಕೊಂಡಿದ್ದು ಹೆಮ್ಮೆಯ ಸಂಗತಿ. ಇದು ಬೆಳಗಾವಿ ವಿಭಾಗದಲ್ಲಿ ಗದಗ ಜಿಲ್ಲೆ ಟಾಪ್ ಎನಿಸಿಕೊಂಡಿದ್ದು, ಜಿಲ್ಲೆಯ ಶಿಕ್ಷಣ ಇಲಾಖೆಯ ಎಲ್ಲ ಅಧಿಕಾರಿ ವರ್ಗ, ಶಿಕ್ಷಕರು, ಶಿಕ್ಷಕಿಯರು ಮತ್ತು ಶಿಕ್ಷಕೇತರ ಸಿಬ್ಬಂದಿಯನ್ನು ಹೃತ್ಪೂರ್ವಕವಾಗಿ ಅಭಿನಂದಿಸುತ್ತೇನೆ. ಸಿ.ಸಿ.ಪಾಟೀಲ, ಲೋಕೋಪಯೋಗಿ ಸಚಿವರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ
Gajendragad; ದಕ್ಷಿಣ ಕಾಶಿ ಕಾಲಕಾಲೇಶ್ವರ ಅದ್ದೂರಿ ರಥೋತ್ಸವ
Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’
Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ
Gadag; ಮನೆ ಮಗನಿಂದಲೇ ಸುಪಾರಿ; ನಾಲ್ವರ ಹತ್ಯೆ ಪ್ರಕರಣ ಬೇಧಿಸಿದ ಪೊಲೀಸರು; 8 ಜನರ ಬಂಧನ
MUST WATCH
ಹೊಸ ಸೇರ್ಪಡೆ
Shikaripur; ಸಂಭ್ರಮದ ಹುಚ್ಚರಾಯಸ್ವಾಮಿ ಬ್ರಹ್ಮ ರಥೋತ್ಸವ:ಯಡಿಯೂರಪ್ಪ ಕುಟುಂಬ ಭಾಗಿ
Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ
Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ
Dr Rajkumar: ಇಂದು ರಾಜ್ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ