ಸ್ಥಳೀಯ ಈರುಳ್ಳಿ ಮಾರಾಟಕ್ಕೆ ಆದ್ಯತೆ ನೀಡಿ: ಹಿರೇಮಠ
Team Udayavani, May 3, 2020, 3:54 PM IST
ಗದಗ: ಜಿಲ್ಲೆಯ ಎಪಿಎಂಸಿಯಲ್ಲಿ ಹೊರ ರಾಜ್ಯಗಳಿಂದ ಬರುತ್ತಿರುವ ಈರುಳ್ಳಿಯಿಂದಾಗಿ ಸ್ಥಳೀಯ ರೈತರು ಬೆಳೆದ ಈರುಳ್ಳಿಗೆ ಯೋಗ್ಯ ದರ ದೊರೆಯುತ್ತಿಲ್ಲ. ಈಗಾಗಲೇ ಜಿಲ್ಲೆಯ ಲಾಕ್ಡೌನ್ನಿಂದಾಗಿ ಸಂಕಷ್ಟದಲ್ಲಿದ್ದಾರೆ. ವರ್ತಕರು ಜಿಲ್ಲೆಯ ರೈತರು ಬೆಳೆದ ಈರುಳ್ಳಿಯನ್ನು ಯೋಗ್ಯ ಬೆಲೆಗೆ ಖರೀದಿಸಬೇಕು ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಸೂಚಿಸಿದರು.
ಇಲ್ಲಿನ ಜಿಲ್ಲಾಡಳಿತ ಭವನದಲ್ಲಿ ಶನಿವಾರ ಅಧಿಕಾರಿಗಳು ಹಾಗೂ ವರ್ತಕರೊಂದಿಗೆ ಸಭೆ ನಡೆಸಿದ ಅವರು, ನಾನಾ ಕಾರಣಗಳಿಂದಾಗಿ ಜಿಲ್ಲೆಗೆ ಹೊರ ರಾಜ್ಯದಿಂದ ಈರುಳ್ಳಿ ಬರುತ್ತಿದೆ. ಸ್ಥಳೀಯವಾಗಿ ಈರುಳ್ಳಿ ಬೆಳೆದ ರೈತರಿಗೆ ಸೂಕ್ತವಾದ ಬೆಲೆ ದೊರೆಯದಂತಾಗಿದೆ. ಯಾವುದೇ ಕಾರಣಕ್ಕೂ ವ್ಯಾಪಾರಸ್ಥರು ಹೊರ ರಾಜ್ಯದ ಈರುಳ್ಳಿ ಖರೀದಿಸದೇ, ಸ್ಥಳೀಯ ರೈತರ ಬೆಳೆಯನ್ನು ಯೋಗ್ಯ ಬೆಲೆ ದೊರಕಿಸಿಕೊಡಬೇಕು ಎಂದು ಮನವಿ ಮಾಡಿದರು.
ತೋಟಗಾರಿಕೆ ಇಲಾಖೆ ಉಪನಿರ್ದೇಶಕ ಶಶಿಕಾಂತ ಕೋಟಿಮನಿ ಮಾತನಾಡಿ, ಜಿಲ್ಲೆಯಲ್ಲಿ 600 ಹೆಕ್ಟೇರ್ನಲ್ಲಿ ಅಂದಾಜು 10ಸಾವಿರ ಮೆಟ್ರಿಕ್ ಟನ್ ಈರುಳ್ಳಿ ಉತ್ಪಾದನೆ ಆಗಿದೆ ಎಂದು ಮಾಹಿತಿ ನೀಡಿದರು.
ಸಭೆಯಲ್ಲಿ ಕೃಷಿ ಮಾರಾಟ ಇಲಾಖೆ ಸಹಾಯಕ ನಿರ್ದೇಶಕ ಎಸ್.ಎಲ್. ಲಮಾಣಿ, ಗದಗ ಎಪಿಎಂಸಿಯ ಸಹಾಯಕ ಕಾರ್ಯದರ್ಶಿ ಎಂ.ಆರ್. ನದಾಫ್ ಹಾಗೂ ಎಪಿಎಂಸಿ ವ್ಯಾಪಾರಸ್ಥರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು
Honeybee Attack: ಹೆಜ್ಜೇನು ದಾಳಿ: ಓರ್ವ ಮೃತ್ಯು, ಏಳು ಮಂದಿಗೆ ಗಾಯ
ಮತ್ತೆ ಎಲ್ಲೆಡೆ ಕಾಂಗ್ರೆಸ್ ಬಾವುಟ ರಾರಾಜಿಸುವುದು ಸೂರ್ಯ ಚಂದ್ರರಷ್ಟೇ ಸತ್ಯ: ಎಚ್.ಕೆ. ಪಾಟೀಲ
Gadag; ಬಸವರಾಜ ಬೊಮ್ಮಾಯಿ ಹಿಂದೆ ದೊಡ್ಡದೊಂದು ಲಗೇಜ್ ಇದೆ: ಎಚ್.ಕೆ.ಪಾಟೀಲ್
Gadag; ಹಾವೇರಿ ಲೋಕಸಭಾ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಅವರಿಂದ ಟೆಂಪಲ್ ರನ್
MUST WATCH
ಹೊಸ ಸೇರ್ಪಡೆ
ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು
Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್
Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೇಟಿಯಾದ ಜಗದೀಶ್ ಶೆಟ್ಟರ್
ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ
Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ