ಗ್ರಾಮೀಣ ಪ್ರದೇಶಗಳ ಮೂಲ ಸೌಲಭ್ಯಕ್ಕೆ ಆದ್ಯತೆ
Team Udayavani, Feb 23, 2020, 1:50 PM IST
ಲಕ್ಷ್ಮೇಶ್ವರ: ಗ್ರಾಮೀಣ ಪ್ರದೇಶಗಳ ಜನರಿಗೆ ಮೂಲ ಸೌಲಭ್ಯ ಕಲ್ಪಿಸುವುದು ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರದ ಆದ್ಯತೆಯಾಗಿದೆ ಎಂದು ಶಾಸಕ ರಾಮಣ್ಣ ಲಮಾಣಿ ಹೇಳಿದರು.
ಶನಿವಾರ ಸಮೀಪದ ಬೂದಿಹಾಳ ಗ್ರಾಮದಲ್ಲಿ 67 ಲಕ್ಷ ರೂ.ಗಳ ಶಾಸಕರ ವಿಶೇಷ ಕ್ಷೇತ್ರಾಭಿವೃದ್ಧಿ ಅನುದಾನದಲ್ಲಿ ಕಾಂಕ್ರಿಟ್ ರಸ್ತೆ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು. ಕೊಕ್ಕರಗುಂದಿ ಗ್ರಾಮ ಮತ್ತು ಬೂದಿಹಾಳ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ದೊಡ್ಡ ಹಳ್ಳಕ್ಕೆ ಸೇತುವೆ ನಿರ್ಮಾಣಕ್ಕೆ ಮುಂದಿನ ದಿನಗಳಲ್ಲಿ ಚಾಲನೆ ನೀಡುವ ಮೂಲಕ ಈ ಭಾಗದ ಜನರ ಬಹುದಿನ ಬೇಡಿಕೆ ಈಡೇರಿಸುವಲ್ಲಿ ಕ್ರಮ ಕೈಗೊಳ್ಳಲಾಗಿದೆ. ಅಲ್ಲದೆ ಬೂದಿಹಾಳ ಗ್ರಾಮದಲ್ಲಿನ ರಸ್ತೆಗಳನ್ನು ಸುಧಾರಣೆ ಮಾಡುವ ಮೂಲಕ ಸುಂದರ ಗ್ರಾಮವನ್ನಾಗಿ ಮಾಡುವಲ್ಲಿ ಸುಮಾರು 2 ಕೋಟಿ ವೆಚ್ಚದ ಕಾಮಗಾರಿ ಮಾಡಲು ಉದ್ದೇಶಿಸಲಾಗಿದೆ ಎಂದು ಹೇಳಿದ ಅವರು, ತಾಲೂಕಿನ ಗ್ರಾಮೀಣ ಪ್ರದೇಶಗಳ ರಸ್ತೆಗಳ ಸುಧಾರಣೆಗೆ 100 ಕೋಟಿಗೂ ಹೆಚ್ಚು ಅನುದಾನ ನೀಡಲಾಗಿದ್ದು, ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚು ರಸ್ತೆಗಳನ್ನು ಮೇಲ್ದರ್ಜೆಗೆ ಎರಿಸುವ ಗುರಿ ಹಾಕಿಕೊಳ್ಳಲಾಗಿದೆ ಎಂದು ಹೇಳಿದರು.
ಚಿದಾನಂದ ಹಡಪದ, ರಾಮಶೆಟ್ಟಿ ರಾಮಶೆಟ್ಟರ, ಸುರೇಶ ಚೆಬ್ಬಿ, ಗಂಗಾಧರ ಮೆಣಸಿನಕಾಯಿ, ಸೋಮನಗೌಡ ಪಾಟೀಲ, ಕೊಟೆಪ್ಪ ಚಳ್ಳಕೇರಿ, ಕುಮಾರ ಪಾಟೀಲ, ಶ್ರೀಶೈಲಗೌಡ ಪಾಟೀಲ, ಶರಣು ಬಡ್ನಿ, ಮಹೇಶ ಮೇಟಿ, ಶರಣಪ್ಪ ಚೆಳ್ಳಕೇರಿ, ಮಂಜುನಾಥ ನಾಯಕ್, ಲಕ್ಷ್ಮಣ ಲಮಾಣಿ ಸಂಗಮೇಶ ಬೆಳವಲಕೊಪ್ಪ, ಶರೀಫ್ಸಾಬ ಚೆಬ್ಬಿ, ಸೋಮು ಲಮಾಣಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಗದಗ: ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ
MUST WATCH
ಹೊಸ ಸೇರ್ಪಡೆ
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್