ಅಂಬೇಡ್ಕರ್‌-ಬಾಬೂಜಿ ಜಯಂತಿಗೆ ಸಿದ್ಧತೆ

ಇಬ್ಬರೂ ಮಹಾನ್‌ ನಾಯಕರ ಜಯಂತಿ ಅರ್ಥಪೂರ್ಣ ಆಚರಣೆ: ರಜನಿಕಾಂತ್‌ ಕೆಂಗೇರಿ

Team Udayavani, Mar 31, 2022, 4:00 PM IST

15

ಗಜೇಂದ್ರಗಡ: ಡಾ|ಬಿ.ಆರ್‌. ಅಂಬೇಡ್ಕರ್‌ ಹಾಗೂ ಡಾ|ಬಾಬು ಜಗಜೀವನರಾಂ ಅವರು ದೇಶಕ್ಕೆ ನೀಡಿದ ಕೊಡುಗೆ  ಅನರ್ಘ್ಯವಾಗಿದೆ. ಈ ನಿಟ್ಟಿನಲ್ಲಿ ಮಹಾನ್‌ ನಾಯಕರ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ತಹಶೀಲ್ದಾರ್‌ ರಜನಿಕಾಂತ್‌ ಕೆಂಗೇರಿ ಹೇಳಿದರು.

ಪಟ್ಟಣದ ಪುರಸಭೆ ಸಭಾಭವನದಲ್ಲಿ ಬುಧವಾರ ಡಾ|ಬಾಬು ಜಗಜೀವನರಾಂ ಮತ್ತು ಡಾ|ಬಿ.ಆರ್‌. ಅಂಬೇಡ್ಕರ್‌ ಜಯಂತಿ ಆಚರಣೆ ಕುರಿತು ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ದೇಶದ ಜನತೆ ಸುಭದ್ರವಾಗಿ ಬದುಕು ಕಟ್ಟಿಕೊಳ್ಳುವ ನಿಟ್ಟಿನಲ್ಲಿ ಇಡೀ ವಿಶ್ವವೇ ಮೆಚ್ಚುವಂತಹ ಸಂವಿಧಾನ ನೀಡಿದ ಡಾ| ಬಿ.ಆರ್‌. ಅಂಬೇಡ್ಕರ್‌ ಅವರ ವಿಚಾರಧಾರೆಗಳು ಒಂದೆಡೆಯಾದರೆ, ಸಮಾಜದಲ್ಲಿ ತುಳಿತಕ್ಕೊಳಗಾದವರ ಹಾಗೂ ಬಡವರ ಪರವಾಗಿ ಕೆಲಸ ಮಾಡಿದ ಜಗಜೀವನರಾಂ ಅವರು ದೇಶದ ಉಪ ಪ್ರಧಾನಿಯಾಗಿದ್ದ ಸಂದರ್ಭದಲ್ಲಿ ಜಾರಿಗೆ ತಂದ ಹಲವಾರು ಕಾರ್ಯಕ್ರಮಗಳು ಇಂದಿಗೂ ಜನಪರವಾಗಿವೆ. ಇಂತಹ ಮಹಾನ್‌ ನಾಯಕರ ಜಯಂತಿಗಳನ್ನು ಪ್ರತ್ಯೇಕವಾಗಿ ಮಾಡುವ ಬದಲು ಒಂದೇ ದಿನ ನಿಗದಿಗೊಳಿಸಿ, ಗಜೇಂದ್ರಗಡ ತಾಲೂಕಿನಲ್ಲಿ ಆಚರಿಸಲು ಎಲ್ಲರ ಸಲಹೆಯಂತೆ ಕ್ರಮ ಕೈಗೊಳ್ಳಲಾಗುವುದು ಎಂದರು.

ಕಾರ್ಮಿಕ ಮುಖಂಡ ಪೀರು ರಾಠೊಡ ಮಾತನಾಡಿ, ಇನ್ನೂ ಸಹ ಗ್ರಾಮೀಣ ಭಾಗದಲ್ಲಿ ಅಸ್ಪೃಶ್ಯತೆ ಇದೆ. ಇದನ್ನು ಹೋಗಲಾಡಿಸುವ ನಿಟ್ಟಿನಲ್ಲಿ ಸಮಾಜ ಕಲ್ಯಾಣ ಇಲಾಖೆಯಿಂದ ತಾಲೂಕಿನಲ್ಲಿ ವಿಶೇಷ ಅಭಿಯಾನ ಹಮ್ಮಿಕೊಂಡು ಜಾಗೃತಿ ಜಾಥಾ ನಡೆಸಲು ಮುಂದಾಗಬೇಕು. ಹಳ್ಳಿಗಳಲ್ಲಿ ಹಿಂದುಳಿದ ಸಮುದಾಯಕ್ಕೆ ಧೈರ್ಯ ತುಂಬುವ ಕೆಲಸ ಮಾಡಬೇಕಿದೆ. ಅಂದಾಗ ಮಾತ್ರ ಇಂತಹ ಆಚರಣೆಗಳಿಗೆ ಅರ್ಥ ಬರುತ್ತದೆ ಎಂದರು.

ದಲಿತ ಸಂಘಟನೆ ಮುಖಂಡ ಶರಣಪ್ಪ ಪೂಜಾರ ಮಾತನಾಡಿ, ಅಂಬೇಡ್ಕರ್‌ ಜಯಂತಿ ಕೇವಲ ಭಾವಚಿತ್ರ ಪೂಜೆಗೆ ಮಾತ್ರ ಸೀಮಿತಗೊಳಿಸುವ ಬದಲು, ಅಂಬೇಡ್ಕರ್‌ ಆಶಯಗಳನ್ನು ಈಡೇರಿಸುವ ನಿಟ್ಟಿನಲ್ಲಿ ಹಳ್ಳಿಗಳಲ್ಲಿ ಅನೈರ್ಮಲ್ಯತೆ ತೊಡೆಯಲು ಅರಿವು ಮೂಡಿಸಬೇಕು. ಜೊತೆಗೆ ಎಲ್ಲ ಸಮುದಾಯಗಳನ್ನು ಒಗ್ಗೂಡಿಸಿಕೊಂಡು ಜಯಂತಿ ಸಮಾರಂಭ ಆಚರಣೆಗೆ ಮುಂದಾಗಬೇಕು. ಕಾಟಾಚಾರದ ಕಾರ್ಯಕ್ರಮಕ್ಕೆ ಮುಂದಾದರೆ ಸಮಂಜಸವಲ್ಲ ಎಂದರು.

ಭೋವಿ ಸಮಾಜದ ಮುಖಂಡ ಬಸವರಾಜ ಬಂಕದ ಮಾತನಾಡಿ, ಏ.5 ರಂದು ಕಚೇರಿಗಳಲ್ಲಿ ಸರಳವಾಗಿ ಬಾಬು ಜಗಜೀವನರಾಂ ಅವರ ಜಯಂತಿ ಆಚರಿಸಿ, ಏ. 14 ರಂದು ಡಾ|ಬಿ. ಆರ್‌. ಅಂಬೇಡ್ಕರ್‌ ಜಯಂತಿ ದಿನವೇ ಉಭಯ ನಾಯಕರ ಭಾವಚಿತ್ರಗಳ ಭವ್ಯ ಮೆರವಣಿಗೆ ನಡೆಸಬೇಕು. ಚಿಂತಕರಿಂದ ಮಹಾನ್‌ ನಾಯಕರ ಆದರ್ಶಗಳ ಬಗ್ಗೆ ಸಮಾರಂಭ ಆಯೋಜನೆಗೆ ತಾಲೂಕು ಆಡಳಿತ ಮುಂದಾಗಬೇಕೆಂದರು.

ತಾಪಂ ಇಒ ಸಂತೋಷ ಪಾಟೀಲ, ಸಮಾಜ ಕಲ್ಯಾಣ ಇಲಾಖೆ ಅಧಿ ಕಾರಿ ಭೀಮಾಶಂಕರ ಬಿರಾದಾರ, ಕ್ಷೇತ್ರ ಶಿಕ್ಷಣಾಧಿಕಾರಿ ಗಾಯಿತ್ರಿ ಸಜ್ಜನರ, ಪುರಸಭೆ ಸ್ಥಾಯಿ ಸಮಿತಿ ಚೇರ್ಮನ್‌ ಯು.ಆರ್‌. ಚನ್ನಮ್ಮನವರ, ವೀರಣ್ಣ ಅಡಗತ್ತಿ, ಇಮಾಮ ಕಾಲಾನಾಯಕ್‌, ಶಿವಕುಮಾರ ಇಲ್ಲಾಳ, ಉಪನೋಂದಣಾಧಿ ಕಾರಿ ವಿರುಪಾಕ್ಷ ಚೌಕಿಮಠ, ಮೂಕಪ್ಪ ಗುಡೂರ, ಕನಕಪ್ಪ ಅರಳಿಗಿಡದ, ಉಮೇಶ ರಾಠೊಡ, ಮೂಕಪ್ಪ ನಿಡಗುಂದಿ, ಮುದಿಯಪ್ಪ ಮುಧೋಳ, ರುಪ್ಲೇಶ ರಾಠೊಡ, ಈರಪ್ಪ ರಾಠೊಡ, ಯಲ್ಲಪ್ಪ ಬಂಕದ, ದುರುಗಪ್ಪ ಮುಧೋಳ, ಶರಣಪ್ಪ ಚಳಗೇರಿ ಇನ್ನಿತರರು ಇದ್ದರು.

ಟಾಪ್ ನ್ಯೂಸ್

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

1-gadaga

Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ

Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ

Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.