ನವರಾತ್ರಿ; ದೇವಿ ದೇಗುಲಗಳಲ್ಲಿ ಭರದ ಸಿದ್ಧತೆ


Team Udayavani, Oct 5, 2021, 3:49 PM IST

ghhjyt

ಗದಗ: ನವರಾತ್ರಿ ಹಿನ್ನೆಲೆಯಲ್ಲಿ ಶಕ್ತಿದೇವತೆಗಳ ಆರಾಧನೆಗಾಗಿ ಅವಳಿನಗರದ ಪ್ರಮುಖ ದೇಗುಲಗಳಲ್ಲಿ ಪೂರ್ವಸಿದ್ಧತೆಗಳು ಭರದಿಂದ ಸಾಗಿದ್ದು, ಕೆಲ ದೇವಸ್ಥಾನಗಳು ವಿದ್ಯುತ್‌ ದೀಪಾಲಂಕಾರದಿಂದ ಕಂಗೊಳಿಸುತ್ತಿವೆ.

ಕಳೆದೆರಡು ವರ್ಷದಿಂದ ಕೋವಿಡ್‌ ಆವರಿಸಿದ್ದರಿಂದ ದಸರಾ ಸೇರಿದಂತೆ ಬಹುತೇಕ ಎಲ್ಲ ಹಬ್ಬಗಳು ಸರಳ ಹಾಗೂ ಸಂಕ್ಷಿಪ್ತವಾಗಿ ಆಚರಿಸುವಂತಾಗಿತ್ತು. ಪುರಾಣ ಪ್ರವಚನ, ಪಾರಾಯಣ, ಪಲ್ಲಕ್ಕಿ ಉತ್ಸವ ಹಾಗೂ ಧಾರ್ಮಿಕ ಸಭೆಗಳಿಗೂ ಅವಕಾಶವಿಲ್ಲದಂತಾಗಿತ್ತು. ಆದರೆ, ಇತ್ತೀಚೆಗೆ ಕೋವಿಡ್‌ ಸೋಂಕಿನ ಪ್ರಮಾಣ ಗಣನೀಯವಾಗಿ ಇಳಿಕೆಯಾಗಿದ್ದರಿಂದ ಈ ಬಾರಿ ದಸರಾ ಅದ್ಧೂರಿ ಆಚರಣೆಗೆ ಜನ ಉತ್ಸುಕರಾಗಿದ್ದಾರೆ.

ಅವಳಿನಗರದ ಸರಾಫ್‌ ಬಜಾರ್‌ನಲ್ಲಿರುವ ಅಂಬಾಭವಾನಿ ದೇವಸ್ಥಾನ, ಮುಳಗುಂದ ರಸ್ತೆಯ ನಿಸರ್ಗ ಬಸ್‌ ನಿಲ್ದಾಣ ಸಮೀಪದ ಅಂಬಾಭವಾನಿ ಸನ್ನಿಧಾನ, ಬೆಟಗೇರಿಯ ಅಂಬಾಭವಾನಿ ದೇಗುಲ, ಐತಿಹಾಸಿಕ ಬನಶಂಕರಿ ದೇವಸ್ಥಾನ, ಉಡಚಮ್ಮ ದೇವಿ, ಬನ್ನಿ ಮಹಾಂಕಾಳಿ, ಕನ್ನಿಕಾಪರಮೇಶ್ವರಿ, ದುರ್ಗಾದೇವಿ, ಹುಲಿಗೆಮ್ಮ, ಮಹಾಲಕ್ಷ್ಮೀ, ಅಂಬಾಭವಾನಿ, ಬನಶಂಕರಿ, ತುಳಜಾಭವಾನಿ. ಕರೆಮ್ಮ ದೇವಿ, ರಾಜೀವಗಾಂ ಧಿ ನಗರದ ಶ್ರೀದೇವಿ, ಹರ್ಲಾಪು ರದ ದಾನಮ್ಮದೇವಿ, ಬೆಟಗೇರಿಯ ಹಳೇ ಬನಶಂಕರಿ, ಡೋಹರ ಗಲ್ಲಿಯ ಶ್ರೀದೇವಿ, ಅಮರೇಶ್ವರ ನಗರದ ಬನ್ನಿ ಮಹಾಂಕಾಳಿ ದೇವಸ್ಥಾನ, ಅಡವೀಂದ್ರ ಸ್ವಾಮಿ ಮಠದ ಅನ್ನಪೂರ್ಣೇಶ್ವರಿ ಮಂದಿರ ಹಾಗೂ ಅಕ್ಕನ ಬಳಗ ಸೇರಿದಂತೆ ಹಲವು ದೇವಸ್ಥಾನಗಳಲ್ಲಿ ಸುಣ್ಣ-ಬಣ್ಣ ಹಾಗೂ ಸ್ವತ್ಛತಾ ಕಾರ್ಯಗಳು ಬರದಿಂದ ಸಾಗಿವೆ.

ನವರಾತ್ರಿ ನಿಮಿತ್ತ ವಿಶೇಷ ಪೂಜೆ: ಅವಳಿನಗರ ಸೇರಿದಂತೆ ಬಹುತೇಕ ಶಕ್ತಿ ದೇವತೆಗಳ ಸನ್ನಿಧಾನಗಳಲ್ಲಿ ಅ.7ರಂದು ಸಂಜೆ ದೇವಿಗೆ ಅಲಂಕಾರ ಸೇವೆ ಹಾಗೂ ಘಟಸ್ಥಾಪನೆ, ಅ.10ರಂದು ಲಲಿತ ಪಂಚಮಿ ಆಚರಣೆ, ಅ.13ರಂದು ದುರ್ಗಾಷ್ಟಮಿ, ಅ.14ರಂದು ಮಹಾನವಮಿ ನಿಮಿತ್ತ ಆಯುಧ ಪೂಜೆ ನೆರವೇರಿಸಲಾಗುತ್ತದೆ. ಅ.15ರಂದು ವಿಜಯದಶಮಿ ನಿಮಿತ್ತ ಜಗನ್ಮಾತೆಗೆ ವಿಶೇಷ ಪೂಜೆ ಹಾಗೂ ಸಂಜೆ ಬನ್ನಿ ಮುಡಿಯುವ ಕಾರ್ಯಕ್ರಮ ನೆರವೇರಿಸಲಾಗುತ್ತದೆ.

ಝಗಮಗಿಸುವ ದೀಪಾಲಂಕಾರ: ಇಲ್ಲಿನ ಗಂಗಾಪುರ ಸರ್ಕಲ್‌ನಲ್ಲಿರುವ ದುರ್ಗಾ ದೇವಿ ಸನ್ನಿಧಾನ ಮತ್ತು ಶತಮಾನ ಕಂಡಿರುವ ಬೆಟಗೇರಿಯ ಅಂಬಾಭವಾನಿ ಸನ್ನಿಧಾನ ನವರಾತ್ರಿ ಸ್ವಾಗತಕ್ಕೆ ಸಿದ್ಧಗೊಂಡಿವೆ. ಅಮಾವಾಸ್ಯೆಗೂ ಎರಡು ದಿನಗಳ ಮುನ್ನವೇ ಬಣ್ಣ ಬಣ್ಣದ ವಿದ್ಯುತ್‌ ದೀಪಗಳಿಂದ ಝಗಮಗಿಸುತ್ತಿವೆ.

ಅಂಬಾರಿ ಮೆರವಣಿಗೆಗೆ ಚಿಂತನೆ: ನವರಾತ್ರಿ ಕೊನೆ ದಿನ ವಿಜಯದಶಮಿ ನಿಮಿತ್ತ ಸರಾಫ್‌ ಬಜಾರ್‌ನಲ್ಲಿರುವ ಅಂಬಾ ಭವಾನಿ ದೇಗುಲದಿಂದ ಬೆಳ್ಳಿ ಅಂಬಾರಿ ಅದ್ಧೂರಿ ಮೆರವಣಿಗೆ ನಡೆಸಲಾಗುತ್ತಿತ್ತು. ಆದರೆ, ಕಳೆದ ವರ್ಷ ಕೋವಿಡ್‌ನಿಂದ ಮೆರವಣಿಗೆ ಕೈಬಿಡಲಾಗಿತ್ತು. ಆದರೆ, ಈ ಬಾರಿ ಸೋಂಕಿನಲ್ಲಿ ಇಳಿಕೆಯಾಗಿದ್ದು, ಮೆರವಣಿಗೆಗೆ ಎಸ್‌ ಎಸ್‌ಕೆ ಸಮಾಜದ ಪ್ರಮುಖರು ಚಿಂತಿಸುತ್ತಿರುವುದಾಗಿ ಪ್ರಮುಖ ಶ್ರೀಕಾಂತ ಕಟವಟೆ ತಿಳಿಸಿದರು.

ಟಾಪ್ ನ್ಯೂಸ್

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

29

Hassan Lok sabha Constituency: ಪ್ರಜ್ವಲ್‌ ರೇವಣ್ಣ ನಾಮಪತ್ರ ಸಲ್ಲಿಕೆ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

1-qweqwew

Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

29

Hassan Lok sabha Constituency: ಪ್ರಜ್ವಲ್‌ ರೇವಣ್ಣ ನಾಮಪತ್ರ ಸಲ್ಲಿಕೆ

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

1-aaa

Ex-IPS officer ಸಂಜೀವ್ ಭಟ್‌ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.