ಆರ್ಥಿಕ ಗಣತಿಗೆ ಪೂರ್ವ ತಯಾರಿ

ಸಾಮಾನ್ಯ ಸೇವಾ ಕೇಂದ್ರದಿಂದ ಗಣತಿ ಕಾರ್ಯ•ಸಮನ್ವಯತೆಯಿಂದ ಕಾರ್ಯನಿರ್ವಹಿಸಲು ಸೂಚನೆ

Team Udayavani, Jun 30, 2019, 11:36 AM IST

gadaga-tdy-6..

ಗದಗ: ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಅಧ್ಯಕ್ಷತೆಯಲ್ಲಿ ಆರ್ಥಿಕ ಗಣತಿಯ ಜಿಲ್ಲಾಮಟ್ಟದ ಸಮನ್ವಯ ಸಮಿತಿ ಸಭೆ ಜರುಗಿತು.

ಗದಗ: ಜಿಲ್ಲೆಯಲ್ಲಿ ಜರುಗುವ ಆರ್ಥಿಕ ಗಣತಿಯನ್ನು ಸುಸೂತ್ರವಾಗಿ ಜರುಗಿಸಲು ಎಲ್ಲ ಇಲಾಖೆಗಳ ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಿ ಯಶಸ್ವಿಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಸೂಚಿಸಿದರು.

ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶನಿವಾರ ಜರುಗಿದ 7ನೇ ಆರ್ಥಿಕ ಗಣತಿಯ ಜಿಲ್ಲಾಮಟ್ಟದ ಸಮನ್ವಯ ಸಮಿತಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಸಾರ್ವಜನಿಕ ಹಾಗೂ ಖಾಸಗಿ ವಲಯದಲ್ಲಿರುವ ಸಂಘಟಿತ ಅಸಂಘಟಿತ ವಿಭಾಗಗಳಲ್ಲಿ ವಿವಿಧ ಆರ್ಥಿಕ ಚಟುವಟಿಕೆಗಳನ್ನು ಹೊಂದಿರುವ ಉದ್ಯಮಗಳ ಕುರಿತು ಆರ್ಥಿಕ ಗಣತಿ ಜರುಗಿಸಲಾಗುತ್ತಿದೆ. ಗಣತಿ ಕಾರ್ಯವನ್ನು ಸಾಮಾನ್ಯ ಸೇವಾ ಕೇಂದ್ರ ಜರುಗಿಸುತ್ತಿದ್ದು, ಈ ಸಂಸ್ಥೆಗೆ ಗಣತಿಯ ಪೂರ್ವಭಾವಿ ಸಿದ್ಧತೆಗಳಿಗೆ ಅಗತ್ಯವಾದ ನಗರ, ಗ್ರಾಮಗಳ ಪಟ್ಟಿ, ನಕ್ಷೆಗಳನ್ನು ಸಂಬಂಧಪಟ್ಟ ಇಲಾಖೆಗಳು ಒದಗಿಸಲು ಸೂಚನೆ ನೀಡಿದರು. ಗಣತಿದಾರರು ಮತ್ತು ಮೇಲ್ವಿಚಾರಕರು ಮಾಹಿತಿ ಸಂಗ್ರಹಣೆಗಾಗಿ ಕ್ಷೇತ್ರಕ್ಕೆ ಭೆಟಿ ನೀಡಿದಾಗ ಅವರುಗಳಿಗೆ ಪಿಡಿಒ, ತಾಪಂ ಇಒ ಹಾಗೂ ಗ್ರಾಮ ಲೆಕ್ಕಿಗರು ಅಗತ್ಯದ ಸಹಕಾರ ನೀಡಿ, ಗಣತಿ ಕಾರ್ಯವನ್ನು ಯಶಸ್ವಿಗೊಳಿಸಲು ಸೂಚಿಸಿದರು.

ಆರ್ಥಿಕ ಗಣತಿ ಅತ್ಯಂತ ಮಹತ್ವದಾಗಿದ್ದು, ಈ ಕಾರ್ಯವು ಮೊಬೈಲ್ ಆ್ಯಪ್‌ ಮೂಲಕ ಜರುಗುತ್ತಿದೆ. ಗಣತಿ ಕಾರ್ಯಕ್ಕೆ ನಿಯೋಜಿಸಲಾದ ಗಣತಿದಾರರು ಹಾಗೂ ಮೇಲ್ವಿಚಾರಕರಿಗೆ ಸಾಮಾನ್ಯ ಸೇವಾ ಕೇಂದ್ರದಿಂದ ಅಗತ್ಯದ ತರಬೇತಿ ನೀಡಿ ಗಣತಿ ಕಾರ್ಯದಲ್ಲಿ ಯಾವುದೇ ಲೋಪಗಳಾಗದಂತೆ ಅಗತ್ಯ ಎಚ್ಚರ ವಹಿಸುವಂತೆ ಸೂಚಿಸಿದರು.

ಆರ್ಥಿಕ ಗಣತಿ ಕಾರ್ಯದ ಕುರಿತು ವಿದ್ಯಾರ್ಥಿಗಳ ಮೂಲಕ ಪಾಲಕರಲ್ಲಿ ಜಾಗೃತಿ ಮೂಡಿಸಲು ಸಾರ್ವಜನಿಕ ಶಿಕ್ಷಣ ಇಲಾಖೆಯು ಕ್ರಮ ಜರುಗಿಸಲು ಸೂಚನೆ ನೀಡಿದ ಅವರು, ಆರ್ಥಿಕ ಗಣತಿ ಕಾರ್ಯದಲ್ಲಿ ಸಂಬಂಧಿತ ಎಲ್ಲ ಇಲಾಖೆಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕು. ಗಣತಿಯಲ್ಲಿ ಯಾವುದೇ ಲೊಪಗಳಾಗದಂತೆ ಯಶಸ್ವಿಗೊಳಿಸಬೇಕು ಎಂದು ನಿರ್ದೇಶನ ನೀಡಿದರು.

ಆರ್ಥಿಕ ಗಣತಿಗಾಗಿ ನಿಯೋಜಿಸಲಾದ ಗಣತಿದಾರರು ಹಾಗೂ ಮೇಲ್ವಿಚಾರಕರು ತಮಗೆ ವಹಿಸಿದ ಪ್ರದೇಶಗಳ ಗಣತಿ ಕಾರ್ಯವನ್ನು ಜವಾಬ್ದಾರಿಯುತವಾಗಿ ನಿರ್ವಹಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಶಿವಾನಚಿದ ಕರಾಳೆ ಸೂಚಿಸಿದರು.

ಜಿ.ಪಂ. ಉಪಕಾರ್ಯದರ್ಶಿ ಪ್ರಾಣೇಶರಾವ್‌, ಗದಗ ಸಾಮಾನ್ಯ ಸೇವಾ ಕೇಂದ್ರದ ಜಿಲ್ಲಾ ವ್ಯವಸ್ಥಾಪಕ ನಾಸೀರಹ್ಮದ ಪಾಪಣ್ಣವರ ಹಾಗೂ ಬಸವರಾಜ ಸೊರಟೂರ, ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿಗಳು ಸೇರಿದಂತೆ ವಿವಿಧ ಇಲಾಖೆಗೆ ಜಿಲ್ಲಾಮಟ್ಟದ ಅಧಿಕಾರಿಗಳು ಸಭೆಯಲ್ಲಿದ್ದರು.

ಪ್ರಥಮ ಬಾರಿಗೆ ಆರ್ಥಿಕ ಗಣತಿ:

7ನೇ ಆರ್ಥಿಕ ಗಣತಿಯನ್ನು ಪ್ರಾಥಮಿಕ, ಉತ್ಪಾದನೆ, ವಿದ್ಯುತ್‌, ಅನಿಲ, ನೀರು ಸರಬರಾಜು, ನಿರ್ಮಾಣ, ವ್ಯಾಪಾರ ಮತ್ತು ಸೇವೆಗಳಾಗಿ ಆರ್ಥಿಕ ಚಟುವಟಿಕೆ ಕ್ಷೇತ್ರಗಳನ್ನಾಗಿ ವಿಂಗಡಿಸಲಾಗಿದೆ. ಪ್ರಥಮ ಬಾರಿಗೆ ಆರ್ಥಿಕ ಗಣತಿಯಡಿ ಉದ್ಯಮಗಳ ಗಣತಿ ಕಾರ್ಯವನ್ನು ಸಾಮಾನ್ಯ ಸೇವಾ ಕೇಂದ್ರದವರು ಜರುಗಿಸುತ್ತಿದ್ದು, ಈಗಾಗಲೇ ನೇಮಕವಾಗಿರುವ ಗಣತಿದಾರರು ಹಾಗೂ ಮೇಲ್ವಿಚಾರಕರಿಂದ ಕೈಗೊಳ್ಳಲಾಗುವುದು. ಆರ್ಥಿಕ ಗಣತಿ ಕಾರ್ಯ ನಿರ್ವಹಿಸಲು ಜಿಲ್ಲೆಯಲ್ಲಿ ಒಟ್ಟು 400 ಜನ ಗಣತಿದಾರರನ್ನು ಹಾಗೂ 150 ಜನ ಮೇಲ್ವಿಚಾರಕರನ್ನು ನೇಮಕ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾ ಸಾಂಖ್ಯೀಕ ಅಧಿಕಾರಿ ಎ.ಎ. ಕಂಬಾಳಿಮಠ ಸಭೆಗೆ ಮಾಹಿತಿ ನೀಡಿದರು.

ಟಾಪ್ ನ್ಯೂಸ್

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ

Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ

Gajendragad; ದಕ್ಷಿಣ ಕಾಶಿ ಕಾಲಕಾಲೇಶ್ವರ ಅದ್ದೂರಿ ರಥೋತ್ಸವ

Gajendragad; ದಕ್ಷಿಣ ಕಾಶಿ ಕಾಲಕಾಲೇಶ್ವರ ಅದ್ದೂರಿ ರಥೋತ್ಸವ

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

1-gadaga

Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ

Gadag; ಮನೆ ಮಗನಿಂದಲೇ ಸುಪಾರಿ; ನಾಲ್ವರ ಹತ್ಯೆ ಪ್ರಕರಣ ಬೇಧಿಸಿದ ಪೊಲೀಸರು; 8 ಜನರ ಬಂಧನ

Gadag; ಮನೆ ಮಗನಿಂದಲೇ ಸುಪಾರಿ; ನಾಲ್ವರ ಹತ್ಯೆ ಪ್ರಕರಣ ಬೇಧಿಸಿದ ಪೊಲೀಸರು; 8 ಜನರ ಬಂಧನ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

1-C-brijesh

Dakshina Kannada; ಕ್ಯಾಪ್ಟನ್‌ ಬ್ರಿಜೇಶ್‌ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

1-JP-H

Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.