ಕಾರಹುಣ್ಣಿಮೆ ಆಚರಣೆಗೆ ತಯಾರಿ ಜೋರು


Team Udayavani, Jun 17, 2019, 2:14 PM IST

gadaga-tdy-3..

ಗಜೇಂದ್ರಗಡ: ಕಾರ ಹುಣ್ಣಿಮೆ ಹಬ್ಬ ಪ್ರಯುಕ್ತ ಗಾಳಿಪಟ ಹಾರಾಟದ ದಾರ ತಯಾರಿಸುವಲ್ಲಿ ನಿರತರಾದ ಚಿಣ್ಣರು.

ಗಜೇಂದ್ರಗಡ: ಬೇಸಿಗೆ ಕಳೆದು ಮುಂಗಾರು ಹೊಸ್ತಿಲಿಗೆ ಆರಂಭವಾಗುವ ರೈತರ ಮೊದಲ ಹಬ್ಬ ಕಾರಹುಣ್ಣಿಮೆ ಆಚರಣೆಗೆ ಅನ್ನದಾತರು ಅಣಿಯಾಗುತ್ತಿದ್ದರೆ, ಚಿಣ್ಣರು ಬಾನಂಗಳಕ್ಕೆ ಗಾಳಿಪಟ ಹಾರಿ ಬಿಡಲು ಸನ್ನದ್ಧರಾಗಿದ್ದಾರೆ.

ಬಿತ್ತನೆ ಕಾರ್ಯಗಳು ಪೂರ್ಣಗೊಂಡಿಲ್ಲವಾದರೂ ಪಟ್ಟಣ ಸೇರಿದಂತೆ ಸುತ್ತಲಿನ ಗ್ರಾಮಗಳಲ್ಲಿನ ರೈತ ಸಮೂಹ ಹಬ್ಬದಾಚರಣೆಗೆ ಮುಂದಾಗಿದೆ. ಅನ್ನದಾತನೊಂದಿಗೆ ದುಡಿಯುವ ಎತ್ತುಗಳಿಗೆ ಧನ್ಯವಾದ ಹೇಳುವ ದಿನವಾದ ಕಾರ ಹುಣ್ಣಿಮೆಯಂದು ರಾಸುಗಳಿಗೆ ಸ್ನಾನ ಮಾಡಿಸಿ, ಔಷಧಿ ಗುಣವುಳ್ಳ ಘೊಟ್ಟ ಕುಡಿಸಿ, ಅಲಂಕಾರ ಮಾಡಿ ಹಬ್ಬದ ಆಚರಣೆಯಲ್ಲಿ ತೊಡಗಿಸಿಕೊಳ್ಳುವುದು ಸಂಪ್ರದಾಯ.

ಕಾರ ಹುಣ್ಣಿಮೆ ಹಬ್ಬವನ್ನು ವಿಶಿಷ್ಟ ರೀತಿಯಲ್ಲಿ ಆಚರಿಸಲಾಗುತ್ತದೆ. ರೈತರ ಮನೆಯಲ್ಲಿ ಅಂದು ಹೊಳಿಗೆ ಸೇರಿದಂತೆ ವಿವಿಧ ಖಾದ್ಯ ತಯಾರಿಸಿ ಭಕ್ತಿ ಸಮರ್ಪಣೆ ಮಾಡುವ ಮೂಲಕ ರಾಸುಗಳಿಗೆ ನಮಸ್ಕರಿಸುತ್ತಾರೆ. ಎತ್ತುಗಳ ಅಂದ ಚಂದದ ಶೃಂಗಾರಕ್ಕೆ ಬೇಕಾಗುವ ವಿವಿಧ ಬಣ್ಣಗಳ ಬಾಸಿಂಗ, ಜತ್ತಿಗೆ, ಹಣೆಕಟ್ಟು, ಹಗ್ಗ, ಬಾರಕೋಲ, ಕೊಬ್ಬರಿ, ಗೊಂಡೆ, ಗಾಜಮಕಡಿ, ಮಿಂಚು ಬಣ್ಣಗಳಿಂದ ಎತ್ತುಗಳನ್ನು ಶೃಂಗಾರ ಮಾಡಲಾಗುತ್ತದೆ.

ಕಾರ ಹಣ್ಣಿಮೆ ದಿನ ಅಲಂಕಾರ ಮಾಡಿದ ಜೋಡೆತ್ತುಗಳನ್ನು ಊರಿನ ಪ್ರಮುಖ ಸ್ಥಳಗಳಲ್ಲಿ ಮೆರವಣಿಗೆ ಮಾಡಿ ನಂತರ ರಾಸುಗಳನ್ನು ಓಡಿಸುವ (ಕರಿ ಹರಿಯುವ) ಸ್ಪರ್ಧೆ ನಡೆಸಲಾಗುತ್ತದೆ. ವೇಗವಾಗಿ ಓಡಿ ಅಗಸಿ ಬಾಗಿಲಿಗೆ ಬೇವಿನಸೊಪ್ಪು, ನೀರಳೆ ಹಣ್ಣು ಹಾಗೂ ಕೊಬ್ಬರಿಯಿಂದ ಕಟ್ಟಿದ ಸರವನ್ನು ಯಾವ ಎತ್ತು ಹರಿಯುತ್ತದೆಯೋ ಆ ಎತ್ತಿನ ಒಡೆಯನಿಗೆ ಬಹುಮಾನ ನೀಡುವ ಪದ್ಧತಿ ಇಂದಿಗೂ ಪ್ರಚಲಿತದಲ್ಲಿದೆ.

ಬಿಳಿ ಎತ್ತು ಕರಿ ಹರಿದರೆ ಆ ವರ್ಷ ಬಿಳಿ ಧಾನ್ಯಗಳು ಹೆಚ್ಚು ಬೆಳೆಯುತ್ತವೆ. ಅದರಂತೆ ಕಪ್ಪು, ಕಂದು ಬಣ್ಣದ ಎತ್ತುಗಳು ಜಯಶಾಲಿಯಾದರೆ ಆಯಾ ಬಣ್ಣದ ಧಾನ್ಯಗಳು ಹುಲುಸಾಗಿ ಬೆಳೆಯುತ್ತವೆ ಎನ್ನುವ ನಂಬಿಕೆ ರೈತಾಪಿ ವಲಯದಲ್ಲಿ ಕೇಳಿ ಬರುತ್ತದೆ. ಇಂತಹ ಜಾನಪದ ಸೊಗಡಿನ ಹಬ್ಬದಾಚರಣೆಗಳು ಆಧುನಿಕ ಭರಾಟೆಯ ಮಧ್ಯೆಯೂ ಉಳಿದಿರುವುದು ಹಲವು ವಿಶೇಷತೆಗಳಿಗೆ ಸಾಕ್ಷಿಯಾಗಿದೆ.

ಕಾರ ಹುಣ್ಣಿಮೆ ಬರುವಿಕೆಗೆ ವಾರದ ಮುಂಚೆಯೇ ಮಕ್ಕಳು ಗಾಳಿಪಟ ಹಾರಾಟಕ್ಕೆ ಬೇಕಾಗುವ ದಾರ ತಯಾರಿಸುವಲ್ಲಿ ನಿರತರಾಗಿದ್ದಾರೆ. ಯುವಕರು, ಮಹಿಳೆಯರು ಮನೆಯ ಮಾಳಿಗೆ ಮೇಲೆ ಗಾಳಿಪಟ ಹಾರಿಸುವ ಮೂಲಕ ಕಾರ ಹುಣ್ಣಿಮೆ ಹಬ್ಬವನ್ನು ಸಂಭ್ರಮಿಸಲು ತುದಿಗಾಲಲ್ಲಿ ನಿಂತಿದ್ದಾರೆ.

ಟಾಪ್ ನ್ಯೂಸ್

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

ಮತದಾನ ಮಾಡಿದ ನಿವೃತ್ತ ಯೋಧ ನಿಧನ

Mangaluru; ಮತದಾನ ಮಾಡಿದ ನಿವೃತ್ತ ಯೋಧ ನಿಧನ

Lok Sabha ಚುನಾವಣೆ ಕರ್ತವ್ಯಕ್ಕೆ 60ಕ್ಕೂ ಅಧಿಕ ಸರಕಾರಿ ಬಸ್‌

Lok Sabha ಚುನಾವಣೆ ಕರ್ತವ್ಯಕ್ಕೆ 60ಕ್ಕೂ ಅಧಿಕ ಸರಕಾರಿ ಬಸ್‌

ದಿ| ಜಾರ್ಜ್‌ ಫೆರ್ನಾಂಡಿಸ್‌ ಆದರ್ಶ, ಅವರೇ ಸ್ಫೂರ್ತಿ: ಕ್ಯಾ| ಬ್ರಿಜೇಶ್‌ ಚೌಟ

ದಿ| ಜಾರ್ಜ್‌ ಫೆರ್ನಾಂಡಿಸ್‌ ಆದರ್ಶ, ಅವರೇ ಸ್ಫೂರ್ತಿ: ಕ್ಯಾ| ಬ್ರಿಜೇಶ್‌ ಚೌಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

1-gadaga

Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ

Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ

Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

ಮತದಾನ ಮಾಡಿದ ನಿವೃತ್ತ ಯೋಧ ನಿಧನ

Mangaluru; ಮತದಾನ ಮಾಡಿದ ನಿವೃತ್ತ ಯೋಧ ನಿಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.