ಅಪರಾಧ ತಡೆಗೆ ಜನರ ಸಹಕಾರವೂ ಅಗತ್ಯ
Team Udayavani, Jan 12, 2020, 12:17 PM IST
ನರಗುಂದ: ಅಪರಾಧ ಪ್ರಕರಣಗಳಿಂದ ಹೇಗೆ ಜಾಗೃತಿ ಹೊಂದಬೇಕು ಎಂಬಿತ್ಯಾದಿ ವಿಷಯಗಳ ಕುರಿತಂತೆ ಪೊಲೀಸ್ ಸಿಬ್ಬಂದಿಗಳೇ ಕಲಾವಿದರಾಗಿ ಜನಜಾಗೃತಿ ಮೂಡಿಸಿದರು.
ಶನಿವಾರ ಪೊಲೀಸ್ ಉಪವಿಭಾಗ, ಪೊಲೀಸ್ ಠಾಣೆ ವತಿಯಿಂದ ಪಟ್ಟಣದ ಬಸ್ ನಿಲ್ದಾಣ ಆವರಣದಲ್ಲಿ ಪೊಲೀಸರು ಅಪರಾಧ ತಡೆ ಮಾಸಾಚರಣೆ ಪ್ರಯುಕ್ತ ಬಹಿರಂಗ ರೂಪಕ ಪ್ರದರ್ಶನ ಏರ್ಪಡಿಸಿದ್ದರು.
ಜಿಲ್ಲಾ ಪೊಲೀಸ್ ಸೂಚನೆಯನ್ವಯ ರೂಪುಗೊಂಡ ಪೊಲೀಸ್ ಸಿಬ್ಬಂದಿಗಳೇ ಜಾನಪದ ಶೈಲಿಯ ರೂಪಕಗಳ ಪ್ರದರ್ಶನ ಮಾಡಿದರು. ಹಲವಾರು ಅಪರಾಧ ಪ್ರಕರಣಗಳಲ್ಲಿ ಕಳ್ಳಕಾಕರು ಹೇಗೆ ವರ್ತಿಸುತ್ತಾರೆ, ಏನು ಮುನ್ನೆಚ್ಚರಿಕೆ ವಹಿಸಬೇಕು ಇನ್ನಿತರ ವಿಷಯಗಳ ಕುರಿತು ಜನಜಾಗೃತಿ ಮೂಡಿಸಿದರು. ಕಲಾವಿದರಾದ ಪೊಲೀಸ್ ಸಿಬ್ಬಂದಿ ಎನ್.ಎಚ್. ಗುಡ್ಡದ ನೇತೃತ್ವದಲ್ಲಿ ಬಸವರಾಜ ಪವಾರ, ಹನಮಂತ, ಅನು ಹಾರನ್ನವರ, ಮಾಲತಿ ಸೀಗೆಹಳ್ಳಿ, ಭಾರತಿ ಚಳಗೇರಿ, ಭಾಷಾ ಹವಾಲ್ದಾರ, ದಶರಥ, ಚಂದ್ರಶೇಖರ ಬಾರಕೇರ, ರಾಜು ಅಲಮದಾರ, ಭಾನು, ಡ್ರಾಮಾ ಕಲಾವಿದ ಹರೀಶ ಪತ್ತಾರ ರೂಪಕ ಪ್ರದರ್ಶಿಸಿದರು.
ಡಿವೈಎಸ್ಪಿ ಶಿವಾನಂದ ಕಟಗಿ, ಸಿಪಿಐ ಡಿ.ಬಿ. ಪಾಟೀಲ, ಎಎಸ್ಐ ವಿ.ಜಿ. ಪವಾರ, ಸಾರಿಗೆ ಘಟಕ ವ್ಯವಸ್ಥಾಪಕ ಹಳ್ಳದ, ಸಿದ್ದೇಶ್ವರ ಕಾಲೇಜು ಪ್ರಾಧ್ಯಾಪಕ ಪ್ರೊ| ಪಿ.ಎಸ್.ಅಣ್ಣಿಗೇರಿ, ರವಿಕುಮಾರ ಮುಂತಾದವರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’
Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ
Gadag; ಮನೆ ಮಗನಿಂದಲೇ ಸುಪಾರಿ; ನಾಲ್ವರ ಹತ್ಯೆ ಪ್ರಕರಣ ಬೇಧಿಸಿದ ಪೊಲೀಸರು; 8 ಜನರ ಬಂಧನ
Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ
Gadag; ನಾಲ್ವರ ಬರ್ಬರ ಹತ್ಯೆ ಐವರು ದುಷ್ಕರ್ಮಿಗಳು ಮಾಡಿರುವ ಶಂಕೆ
MUST WATCH
ಹೊಸ ಸೇರ್ಪಡೆ
Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ
PM Modi:ನನ್ನ 90 ಸೆಕೆಂಡ್ ಭಾಷಣ ಕಾಂಗ್ರೆಸ್, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ
Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು
ಕೇಜ್ರಿವಾಲ್, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್
Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ