ರಂಭಾಪುರಿ ಬಡಾವಣೆಯಲ್ಲಿ ಸಮಸ್ಯೆ ನೂರಾರು
Team Udayavani, Jan 2, 2020, 1:33 PM IST
ಲಕ್ಚ್ಮೇಶ್ವರ: ಪಟ್ಟಣದ ಪುರಸಭೆಯ 16ನೇ ವಾರ್ಡ್ ವ್ಯಾಪ್ತಿಗೊಳಪಡುವ ರಂಭಾಪುರಿ ಆಶ್ರಯ ಪ್ಲಾಟ್ನಲ್ಲಿ ಮೂಲಸೌಲಭ್ಯವಿಲ್ಲದೇ ಜನ ಪರದಾಡುವಂತಾಗಿದೆ.
ಬಡಾವಣೆಯಲ್ಲಿ ಬಡ ಮತ್ತು ಕೂಲಿಕಾರರ 150ಕ್ಕೂ ಹೆಚ್ಚು ಕುಟುಂಬಗಳು ಇಲ್ಲಿವೆ. ಆದರೆ 25 ವರ್ಷ ಕಳೆದರೂ ಈ ಬಡಾವಣೆಯಲ್ಲಿ ಮೂಲ ಸೌಲಭ್ಯಗಳಿಲ್ಲದೇ ಜನರು ತೊಂದರೆ ಅನುಭವಿಸುತ್ತಿದ್ದಾರೆ. ಮೂಲ ನಕ್ಷೆ ಕಡೆಗಣಿಸಿ ರಸ್ತೆ, ಚರಂಡಿಗಳ ಜಾಗದ ಮೇಲೆಯೇ ಮನೆ ನಿರ್ಮಿಸಿಕೊಂಡಿದ್ದರಿಂದ ಈಗ ಚರಂಡಿ, ರಸ್ತೆಗಳದ್ದೇ ಸಮಸ್ಯೆಯಾಗಿದೆ. ಇದರಿಂದಾಗಿ ಬಡಾವಣೆಯ ನೀರು ಎಲ್ಲೆಂದರಲ್ಲಿ ಹರಿದು ತಗ್ಗು ಪ್ರದೇಶವೊಂದಲ್ಲಿ ನಿಲ್ಲುವುದರಿಂದ ಇಡೀ ಪ್ರದೇಶ ಕೊಳಚೆಮಯವಾಗಿದೆ.
ಸಂಚಾರಕ್ಕೆ ಬಳಸುತ್ತಿರುವ ರಸ್ತೆಯೇ ಮೇಲೆ ನೀರು ನಿಂತು ಕಸ ಬೆಳೆದು ಸೊಳ್ಳೆ, ವಿಷಜಂತುಗಳು, ಹಂದಿಗಳ ತಾಣವಾಗಿ ಅನಾರೋಗ್ಯದ ತವರಾಗಿದೆ. ಹೊರವಲಯದಲ್ಲಿರುವ ಈ ಬಡಾವಣೆ ಪುರಸಭೆಯ ಮತ್ತು ಜನಪ್ರತಿನಿಧಿಗಳ ನಿರ್ಲಕ್ಷಕ್ಕೆ ಒಳಗಾಗಿದೆ. ಸ್ವಚ್ಛತೆ ಬಗ್ಗೆ ಇಲ್ಲಿನ ನಿವಾಸಿಗರು ದೂರಿದಾಗ ವರ್ಷದಲ್ಲಿ ಯಾವಾಗಲಾದರೊಮ್ಮೆ ಕಾಟಾಚಾರಕ್ಕೆಂಬಂತೆ ಬಂದು ಸ್ವತ್ಛತೆ ಶಾಸ್ತ್ರ ಮಾಡುತ್ತಾರೆ. ಮಳೆಗಾಲದಲ್ಲಂತೂ ಇಲ್ಲಿನ ಜನರ ಗೋಳು ಹೇಳತೀರದು. 2000ದಷ್ಟು ಜನಸಂಖ್ಯೆ ಹೊಂದಿದ್ದರೂ ಸಮರ್ಪಕ ಕುಡಿಯುವ ನೀರು, ಬೀದಿ ದೀಪ, ಸಾರ್ವಜನಿಕ ಶೌಚಾಲಯ, ಅಂಗನವಾಡಿ, ಆರೋಗ್ಯ ಸೇವೆ, ಬಸ್ ತಂಗುದಾಣ, ಪಡಿತರ, ಸಾರಿಗೆ ಹೀಗೆ ಹತ್ತಾರು ಮೂಲ ಸೌಲಭ್ಯಗಳಿಂದ ವಂಚಿತವಾಗಿದೆ. 6 ವರ್ಷಗಳ ಹಿಂದೆ ನೀರು ಸರಬರಾಜಿಗಾಗಿ ನಿರ್ಮಿಸಿದ ಒಂದು ನೀರಿನ ತೊಟ್ಟಿಗೆ ಇದುವರೆಗೂ ಹನಿ ನೀರು ಪೂರೈಕೆಯಾಗದೇ ಹೆಸರಿಗೆ ಮಾತ್ರ ಎನ್ನುವಂತಾಗಿದೆ.
ಬಡಾವಣೆಯ ಸುತ್ತಲೂ ಅಪಾರ ಪ್ರಮಾಣದ ಜಾಲಿಕಂಟಿ ಬೆಳೆದು ಜನರು ಹಗಲು ಹೊತ್ತಿನಲ್ಲೂ ವಿಷಜಂತುಗಳ ಭೀತಿಯಲ್ಲಿ ಕಾಲ ಕಳೆಯುವಂತಾಗಿದೆ. ಇಲ್ಲಿನ ಸಮಸ್ಯೆಗಳನ್ನು ಪರಿಹರಿಸುವಂತೆ ಮತ್ತು ನಾಗರಿಕ ಸೌಲಭ್ಯಗಳನ್ನು ಕಲ್ಪಿಸುವಂತೆ ಸಂಬಂಧಪಟ್ಟ ಎಲ್ಲರಿಗೂ ಅನೇಕ ಬಾರಿ ಮನವಿ ಮಾಡಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಕೇವಲ ಚುನಾವಣೆ ಸಂದರ್ಭದಲ್ಲಿ ಬಂದು ಆಶ್ವಾಸನೆ ಕೊಟ್ಟು ಹೋಗುವ ಜನಪ್ರತಿನಿಧಿಗಳು ಮತ್ತೆ ಇತ್ತ ತಿರುಗಿಯೂ ನೋಡುವುದಿಲ್ಲ ಎಂದು ಇಲ್ಲಿನ ನಿವಾಸಿಗರಾದ ಯಲ್ಲಪ್ಪ ಕೋರದಾಳ, ಮಂಜಪ್ಪ ಮಿಳ್ಳಿ, ಸಂತೋಷ ಸರ್ವದೆ, ಚನ್ನಪ್ಪ ಧರಮಂತರ ಅಸಮಾಧಾನ ವ್ಯಕ್ತಪಡಿಸುತ್ತಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ
Gajendragad; ದಕ್ಷಿಣ ಕಾಶಿ ಕಾಲಕಾಲೇಶ್ವರ ಅದ್ದೂರಿ ರಥೋತ್ಸವ
Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’
Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ
Gadag; ಮನೆ ಮಗನಿಂದಲೇ ಸುಪಾರಿ; ನಾಲ್ವರ ಹತ್ಯೆ ಪ್ರಕರಣ ಬೇಧಿಸಿದ ಪೊಲೀಸರು; 8 ಜನರ ಬಂಧನ
MUST WATCH
ಹೊಸ ಸೇರ್ಪಡೆ
Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ
Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್ ನಲ್ಲಿ ಬಂಧನ
ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್ ಹೆಗ್ಡೆ: ವಿಠಲ ಹೆಗ್ಡೆ
Dakshina Kannada; ಕ್ಯಾಪ್ಟನ್ ಬ್ರಿಜೇಶ್ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ
Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್ ಗೆಲುವು ಕಾಣುವಾಸೆ..