ಕರುಣೆ ಬಾರದೇ ವರುಣ! ಜೂನ್‌ನಲ್ಲಿ ಮಳೆಗಾಗಿ ಪೂಜೆ ;ಈಗ ಮಳೆ ಬಿಡುವಿಗಾಗಿ ಪ್ರಾರ್ಥನೆ


Team Udayavani, Jul 19, 2022, 3:50 PM IST

18

ಲಕ್ಷ್ಮೇಶ್ವರ: ಕಳೆದ 15 ದಿನಗಳಿಂದ ಬಿಟ್ಟೂ ಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಎಲ್ಲ ವರ್ಗದ ಜನರ ಜೀವನದ ಮೇಲೆ ವ್ಯತಿರಿಕ್ತ ಪರಿಣಾಮ ಬೀರಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ.

ಮಳೆಗಾಗಿ ಜೂನ್‌ನಲ್ಲಿ ವಿವಿಧ ಪೂಜೆ ಮಾಡಿದ ರೈತರೀಗ ಮಳೆ ಬಿಡುವಿಗಾಗಿ ಪೂಜೆ-ಪ್ರಾರ್ಥನೆ ಮಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ತಮ್ಮ ದುಡಿಮೆಯ ಕೂಲಿಯಿಂದಲೇ ಬದುಕು ನಡೆಸುವ ಕೃಷಿ ಕೂಲಿಕಾರರ ಬದುಕಂತೂ ಚಿಂತಾಜನಕವಾಗಿದೆ. ಕೃಷಿ ಕೆಲಸ ಸಂಪೂರ್ಣ ಸ್ಥಗಿತಗೊಂಡಿವೆ. ಕೃಷಿ ಕೂಲಿಯನ್ನೇ ನಂಬಿ ಬದುಕುವವರಿಗೆ ಕೈಯಲ್ಲಿ ಕೆಲಸವಿಲ್ಲದೇ, ದುಡ್ಡಿಲ್ಲದೆ ಬದುಕು ನಡೆಸುವುದೇ ಕಷ್ಟವಾಗಿದೆ. ಕೈಯಲ್ಲಿದ್ದ ಬಿಡಿಗಾಸೆಲ್ಲ ಖರ್ಚು ಮಾಡಿದರೆ ನಾಳೆ ಹೇಗೆ? ಎಂಬ ಚಿಂತೆ ಕೃಷಿ ಕೂಲಿ ಕಾರ್ಮಿಕರನ್ನು ಕಾಡುತ್ತಿದೆ.

ಹೊಲದಲ್ಲಿ ದಿನವೂ ಕೆಲಸ ಮಾಡಿ ಬಂದ ಕೂಲಿ ಹಣದಿಂದಲೇ ಬದುಕು. ಕಳೆದ 2 ವಾರ ದಿಂದ ನಮ್ಮಂತಹ ಅನೇಕ ಕುಟುಂಬಗಳಿಗೆ ಕೆಲಸವೂ ಇಲ್ಲ, ಕೂಲಿಯೂ ಇಲ್ಲದ್ದರಿಂದ ಹೊಟ್ಟೆಗೆ ತಣ್ಣೀರು ಬಟ್ಟೆಯೇ ಗತಿಯಾಗಿದೆ. ದಿನಸಿ, ತರಕಾರಿ, ಜೋಳ ತರಲು ಕೂಲಿ ಮಾಡುವ ರೈತರ ಹತ್ತಿರ ಸಾಲಾ ಕೇಳಿದರೆ ಅವರ ಜೀವನವೂ ಕಷ್ಟದಲ್ಲಿಯೇ ಇದೆ. ನಮಗ್ಯಾರೂ ಸಾಲಾ ಕೊಡಲ್ಲ. ಮಳೆ ಹೀಗೆಯೇ ಮುಂದುವರಿದರೆ ಹೊತ್ತಿನ ಊಟಕ್ಕೂ ಕಷ್ಟಪಡ ಬೇಕಾ ಗುತ್ತದೆ ಎಂದು ದೇವಕ್ಕ ಹಂಪಣ್ಣವರ ನೊಂದು ನುಡಿಯುತ್ತಾರೆ.

ಬಟ್ಟೆಗಳು ಒಣಗುತ್ತಿಲ್ಲ

ಮಳೆ ಆರಂಭಗೊಂಡ 15 ದಿನಗಳಿಂದ ಬರೀ ಮೋಡ ಕವಿದ ವಾತಾವರಣ ಇರುವುದರಿಂದ, ಬಿಸಿಲೇ ಇರದ ಕಾರಣ ಒಗೆದು ಹಾಕಿದ ಬಟ್ಟೆಗಳು ಒಣಗುತ್ತಿಲ್ಲ. ಹೀಗಾಗಿ ದಿನವೂ ಶಾಲೆಗೆ ಹೋಗುವ ಮಕ್ಕಳು, ನೌಕರ ವರ್ಗದವರು ಹಳೆಯ ಬಟ್ಟೆಯನ್ನೇ ಧರಿಸಿಕೊಂಡು ಹೋಗುವ ಪರಿಸ್ಥಿತಿ ನಿರ್ಮಾಣವಾಗಿದೆ. ಮನೆಯ ಒಳಗಡೆಯೇ ಹಗ್ಗ ಕಟ್ಟಿ ಒಣ ಹಾಕಿರುವ ಬಟ್ಟೆಗಳು ನಾಲ್ಕೈದು ದಿನ ಕಳೆದರೂ ಒಣಗುತ್ತಿಲ್ಲ. ಹೊರ ಹೋಗಲು ಮಳೆ ಬಿಡುವು ನೀಡದ್ದರಿಂದ ಜರ್ಕಿನ್‌, ಸ್ವೀಟರ್‌, ಛತ್ರಿ, ಕ್ಯಾಪ್‌ ಬಳಕೆ ಸಾಮಾನ್ಯವಾಗಿದೆ. ಚಳಿಗಾಲದ ವಾತಾವರಣ ನಿರ್ಮಾಣವಾಗಿದೆ.

ಸೋರುತ್ತಿವೆ ಮನೆಗಳು

ನಿರಂತರ ಮಳೆಯಿಂದ ಮಣ್ಣಿನ ಮತ್ತು ಹಳೆಯದಾದ ಕಾಂಕ್ರೀಟ್‌ ಮನೆಗಳೂ ಸೋರುತ್ತಿವೆ. ಸೋರುವ ಮನೆಗಳಲ್ಲಿ ವಿದ್ಯುತ್‌ ಸಂಪರ್ಕ ಕಡಿತ ಮಾಡಿದ್ದರಿಂದ ಬೆಳಕಿಲ್ಲದ ಸೋರುವ ಮನೆಯಲ್ಲಿಯೇ ಜೀವನ ನಡೆಸುವ ಸ್ಥಿತಿ ನಿರ್ಮಾಣವಾಗಿದೆ. ಸಾವಿರಾರು ಖರ್ಚು ಮಾಡಿ ಪ್ಲಾಸ್ಟಿಕ್‌, ತಾಡಪತ್ರಿ ಖರೀದಿಸಿ ಮನೆ ಮೇಲೆ ಹೊದಿಸಿದ್ದರೂ ಸೋರುವುದು ತಪ್ಪುತ್ತಿಲ್ಲ. ಮಳೆಯೂ ನಿಲ್ಲುತ್ತಿಲ್ಲವಾದ್ದರಿಂದ ಜನತೆ ಪಡಬಾರದ ಯಾತನೆ ಅನುಭವಿಸುತ್ತಿದ್ದಾರೆ. ರೈತರಿಗೆ ಜಾನುವಾರುಗಳ ಪೋಷಣೆ ಕಷ್ಟವಾಗಿದೆ. ಸತತ ಮಳೆಯಿಂದ ಶಿಕ್ಷಣ, ವ್ಯಾಪಾರ, ಕೃಷಿ, ಉದ್ಯೋಗ, ಹೀಗೆ ಎಲ್ಲ ಕ್ಷೇತ್ರಗಳ ಮೇಲೂ ಗಂಭೀರ ಪರಿಣಾಮ ಬೀರಿದೆ. ಇದಕ್ಕೆಲ್ಲ ಮಳೆರಾಯನ ಬಿಡುವೊಂದೇ ಪರಿಹಾರವಾಗಿದೆ. ತಾಲೂಕಿನಾದ್ಯಂತ ಸಾವಿರಾರು ಮನೆಗಳು ಸೋರುತ್ತಿದ್ದು 20 ಕ್ಕೂ ಹೆಚ್ಚು ಮನೆಗಳು ಬಿದ್ದಿರುವ ಬಗ್ಗೆ ಸೋರುತ್ತಿವೆ ಮನೆಗಳು ತಾಲೂಕಾಡಳಿತ ಮಾಹಿತಿ ನೀಡಿದೆ.

ಹೆಚ್ಚಿನ ತೇವಾಂಶದಿಂದ ಕೃಷಿ ಜಮೀನುಗಳು ಹಾಳು-ಬೀಳು

ಸತತ ಮಳೆಯಿಂದ ಜಮೀನಿನಲ್ಲಿ ಕಾಲಿಡದ ಪರಿಸ್ಥಿತಿ ನಿರ್ಮಾಣವಾಗಿದೆ. ಬೆಳೆಯಲ್ಲಿ ನೀರು ನಿಂತು, ತೇವಾಂಶ ಹೆಚ್ಚಳವಾಗಿ ಬೆಳೆ ಹಳದಿಯಾಗಿದೆ. ಎಡೆ ಹೊಡೆಯುವುದು, ಕಳೆ ತೆಗೆಯುವ ಕಾರ್ಯ ಮಾಡಲಾಗದ ಸ್ಥಿತಿ ಇದೆ. ಬೆಳೆಯೊಂದಿಗೆ ವಿಪರೀತ ಕಳೆಯೂ ಬೆಳೆದಿದೆ. ರೋಗಬಾಧೆ ತಡೆಗಟ್ಟಲು ಕ್ರಿಮಿನಾಶಕ ಸಿಂಪಡಿಸಲಾಗದೇ, ರಸಗೊಬ್ಬರ ಹಾಕಲಾಗದೇ ಮುಂಗಾರಿನ ಬೆಳೆ ಕಾಪಾಡುವ ಚಿಂತೆ ರೈತರನ್ನು ಕಾಡುತ್ತಿದೆ. ಮುಂಗಾರಿನ ಪ್ರಮುಖ ವಾಣಿಜ್ಯ ಬೆಳೆ ಹೆಸರು ಹಳದಿ ರೋಗಕ್ಕೆ ತುತ್ತಾಗಿದೆ. ಗೋವಿನಜೋಳಕ್ಕೆ ಲದ್ದಿಹುಳು ಬಾಧೆ ಆವರಿಸಿದೆ. ಇತರೆ ಬೆಳೆಗಳು ತೇವಾಂಶ ಹೆಚ್ಚಳದಿಂದ ಹಾಳಾಗುತ್ತಿವೆ. ಮಳೆ ಬಿಡುವ ಲಕ್ಷಣಗಳೇ ಕಾಣದ್ದರಿಂದ ರೈತರ ಮುಂಗಾರಿನ ಬೆಳೆಗಳ ನಿರೀಕ್ಷೆ ಹುಸಿಯಾಗುವ ಸಾಧ್ಯತೆಯನ್ನು ತಳ್ಳಿ ಹಾಕುವಂತಿಲ್ಲ ಎನ್ನುತ್ತಾರೆ ರೈತ ಶಿವಾನಂದ ಲಿಂಗಶೆಟ್ಟಿ.

ಟಾಪ್ ನ್ಯೂಸ್

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮದು ಬಡವರಿಗೆ ಬದುಕು ಕಟ್ಟಿ ಕೊಡುವ ಪ್ರಣಾಳಿಕೆ: ಬಸವರಾಜ ಬೊಮ್ಮಾಯಿ

Gadag; ನಮ್ಮದು ಬಡವರಿಗೆ ಬದುಕು ಕಟ್ಟಿ ಕೊಡುವ ಪ್ರಣಾಳಿಕೆ: ಬಸವರಾಜ ಬೊಮ್ಮಾಯಿ

1-wqeqweqwe

Panchmasali ಸಮಾಜಕ್ಕೆ ಬಿಜೆಪಿಯಿಂದ ಅನ್ಯಾಯ: ವಚನಾನಂದ ಸ್ವಾಮೀಜಿ

ವೀರೇಶ್ವರ ಪುಣ್ಯಾಶ್ರಮಕ್ಕೆ ಭೇಟಿ ನೀಡಿ ಗದ್ದುಗೆಯ ದರ್ಶನಾಶೀರ್ವಾದ ಪಡೆದ ಶ್ರೀರಾಮುಲು

Gadag; ವೀರೇಶ್ವರ ಪುಣ್ಯಾಶ್ರಮಕ್ಕೆ ಭೇಟಿ ನೀಡಿ ಗದ್ದುಗೆಯ ದರ್ಶನಾಶೀರ್ವಾದ ಪಡೆದ ಶ್ರೀರಾಮುಲು

Naregal; ಪ್ರೇಮಿಯೊಂದಿಗೆ ನೇಣಿಗೆ ಶರಣಾದ ನವವಿವಾಹಿತೆ!

Naregal; ಪ್ರೇಮಿಯೊಂದಿಗೆ ನೇಣಿಗೆ ಶರಣಾದ ನವವಿವಾಹಿತೆ!

ವಚನಾನಂದ ಶ್ರೀಗಳ ಮಾತನ್ನು ಗಂಭೀರವಾಗಿ ಪರಿಗಣಿಸುತ್ತೇವೆ: ಬಸವರಾಜ ಬೊಮ್ಮಾಯಿ

Gadag; ವಚನಾನಂದ ಶ್ರೀಗಳ ಮಾತನ್ನು ಗಂಭೀರವಾಗಿ ಪರಿಗಣಿಸುತ್ತೇವೆ: ಬಸವರಾಜ ಬೊಮ್ಮಾಯಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qwqeqewq

Kunigal:ನವಮಿಯಂದು ಪಾನಕ ಕುಡಿದ 60 ಮಂದಿ ಅಸ್ವಸ್ಥ, ಮೂವರು ಗಂಭೀರ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.