ಗಜೇಂದ್ರಗಡದಲ್ಲಿ ಕರವೇ ಅದ್ಧೂರಿ ಮೆರವಣಿಗೆ
Team Udayavani, Jan 28, 2021, 3:05 PM IST
ಗಜೇಂದ್ರಗಡ: ಕರ್ನಾಟಕ ರಕ್ಷಣಾ ವೇದಿಕೆ (ನಾರಾಯಣಗೌಡ ಬಣ) ವತಿಯಿಂದ ಸಂಗೊಳ್ಳಿ ರಾಯಣ್ಣನವರ ಹುತಾತ್ಮ ದಿನಾಚರಣೆ ಹಾಗೂ ಬೆಳಗಾವಿ ವಿಭಾಗ ಮಟ್ಟದ ಕರವೇ ಸಮಾವೇಶ ಪ್ರಯುಕ್ತ ಬುಧವಾರ ಭರ್ಜರಿ ಮೆರವಣಿಗೆ ನಡೆಯಿತು.
ಪಟ್ಟಣದ ಮೈಸೂರ ಮಠದಿಂದ ಸಂಗೊಳ್ಳಿ ರಾಯಣ್ಣರವರ ಭಾವಚಿತ್ರ ಮೆರವಣಿಗೆಗೆ ಕಸಾಪ ತಾಲೂಕಾಧ್ಯಕ್ಷ ಐ.ಎ. ರೇವಡಿ ಚಾಲನೆ ನೀಡಿದರು. ತೆರೆದ ವಾಹನದಲ್ಲಿ ಕರವೇ ರಾಜ್ಯಾಧ್ಯಕ್ಷ ಟಿ.ಎ. ನಾರಾಯಣಗೌಡ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಜಿ.ಎಸ್. ಪಾಟೀಲ, ಕರವೇ ಮಹಿಳಾ ರಾಜ್ಯ ಉಪಾಧ್ಯಕ್ಷೆ ಅಶ್ವನಿಗೌಡ, ಕರವೇ ರಾಜ್ಯ ಉಪಾಧ್ಯಕ್ಷ ಎಚ್. ಎಸ್. ಸೋಂಪೂರ ಸಾಗಿದರು. ಮೆರವಣಿಯಲ್ಲಿ ಡೊಳ್ಳು, ನಗಾರಿ, ಗೆಜ್ಜೆ ಕುಣಿತ ಸೇರಿದಂತೆ ವಿವಿಧ ಸಾಂಸ್ಕೃತಿಕ ಕಲಾ ತಂಡಗಳು ಮೇಳೈಸಿದವು.
ಇದನ್ನೂ ಓದಿ:ರೈತರು ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿಲ್ಲ: ಸತೀಶ
ಮೆರವಣಿಗೆಯುದ್ದಕ್ಕೂ ಕನ್ನಡದ ಬಾವುಟಗಳು ರಾರಾಜಿಸಿದವು. ಕನ್ನಡ ಘೋಷವಾಕ್ಯಗಳು ಮಾರ್ಧನಿಸಿದವು. ಮೆರವಣಿಗೆಯು ದುರ್ಗಾ ವೃತ್ತ, ಜೋಡು ರಸ್ತೆ, ಕಾಲಕಾಲೇಶ್ವರ ವೃತ್ತದ ಮೂಲಕ ಎಪಿಎಂಸಿ ಬಯಲುಜಾಗೆಯಲ್ಲಿನ ಸಮಾರಂಭದ ಸ್ಥಳ ತಲುಪಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ
Gajendragad; ದಕ್ಷಿಣ ಕಾಶಿ ಕಾಲಕಾಲೇಶ್ವರ ಅದ್ದೂರಿ ರಥೋತ್ಸವ
Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’
Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ
Gadag; ಮನೆ ಮಗನಿಂದಲೇ ಸುಪಾರಿ; ನಾಲ್ವರ ಹತ್ಯೆ ಪ್ರಕರಣ ಬೇಧಿಸಿದ ಪೊಲೀಸರು; 8 ಜನರ ಬಂಧನ