ತಂತ್ರಜ್ಞಾನ ಬಳಕೆಯಿಂದ ಉದ್ಯಮದಲ್ಲಿ ಪ್ರಗತಿ

ಉದ್ಯಮಿಗಳು ಪ್ರಾಮಾಣಿಕವಾಗಿ ತೆರಿಗೆ ಪಾವತಿಸಿದರೆ ರಾಷ್ಟ್ರ ಆರ್ಥಿಕವಾಗಿ ಸುಭದ್ರ: ಎಚ್‌.ಕೆ. ಪಾಟೀಲ

Team Udayavani, May 12, 2022, 12:33 PM IST

10

ಗದಗ: ಕಾಲಕ್ಕೆ ತಕ್ಕಂತೆ ಆಗುತ್ತಿರುವ ತಂತ್ರಜ್ಞಾನ ಬಳಕೆಯಿಂದ ವ್ಯಾಪಾರ, ವ್ಯವಹಾರದಲ್ಲಿ ಪ್ರಗತಿ ಕಾಣಬೇಕು. ಆ ಮೂಲಕ ಬಲಿಷ್ಠ ರಾಷ್ಟ್ರ ನಿರ್ಮಾಣಕ್ಕೆ ಕೈ ಜೋಡಿಸಬೇಕೆಂದು ಶಾಸಕ ಎಚ್‌.ಕೆ.ಪಾಟೀಲ ಸಲಹೆ ನೀಡಿದರು.

ಟ್ಯಾಲಿ ಪ್ರೋ ಸಲ್ಯೂಷನ್ಸ್‌ ಆಶ್ರಯದಲ್ಲಿ ಜಿಲ್ಲಾ ವಾಣಿಜ್ಯೋದ್ಯಮ ಸಂಸ್ಥೆಯ ಸಭಾಂಗಣದಲ್ಲಿ ನಡೆದ ದತ್ತಿ ಉಪನ್ಯಾಸದಲ್ಲಿ ಇ-ವೇ ಬಿಲ್‌, ಇ-ಇನ್‌ವೈಸಿಂಗ್‌ ಟ್ಯಾಲಿಯಲ್ಲಿ ಲೆಕ್ಕ ಪತ್ರ ನಿರ್ವಹಣೆ ಕುರಿತ ಮಾಹಿತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಭಾರತ ಕೃಷಿ ಪ್ರಧಾನ ದೇಶವಾಗಿದ್ದರೂ ಡಿಜಿಟಲೀಕರಣದತ್ತ ಹೆಚ್ಚೆಚ್ಚು ತೆರೆದುಕೊಳ್ಳುತ್ತಿದೆ ಎಂದು ಹೇಳಿದರು.

ಇಂದಿನ ಆಧುನಿಕ ಯುಗದಲ್ಲಿ ಪ್ರತಿನಿತ್ಯ ಒಂದಿಲ್ಲೊಂದು ಹೊಸ ತಂತ್ರಜ್ಞಾನಗಳನ್ನು ಆವಿಷ್ಕರಿಸಲಾಗುತ್ತಿವೆ. ಅವುಗಳಿಂದಾಗಿ ವ್ಯಾಪಾರ, ವಹಿ ವಾಟು ಮತ್ತು ಸಂಪರ್ಕ ಮಾಧ್ಯಮಗಳಲ್ಲಿ ಭಾರೀ ಸುಧಾ ರಣೆ ಕಂಡಿವೆ. ಅದರ ಮುಂದುವರಿದ ಇ-ವೇ ಬಿಲ್‌, ಇನ್‌ವೈಸಿಂಗ್‌ ಟ್ಯಾಲಿ ಕುರಿತು ಸಪರ್ಕವಾಗಿ ಮಾಹಿತಿ ಪಡೆದುಕೊಳ್ಳಬೇಕು. ಅವುಗಳನ್ನು ಸಮರ್ಪಕವಾಗಿ ಬಳಸಿಕೊಂಡು ಸುಧಾರಣೆ ಕಾಣಬೇಕೆಂದರು.

ಉದ್ಯಮಿಗಳು ಪ್ರಾಮಾಣಿಕತೆಯಿಂದ ತೆರಿಗೆ ಪಾವತಿಸಬೇಕು. ಅಂದಾಗ ಮಾತ್ರ ಆರ್ಥಿಕವಾಗಿ ಸುಭದ್ರ ರಾಷ್ಟ್ರವನ್ನಾಗಿಸಲು ಸಾಧ್ಯವಾಗುತ್ತದೆ. ಸ್ವಾಭಿಮಾನ ವ್ಯವಹಾರಕ್ಕೆ, ಸ್ವಾಭಿಮಾನ ಉತ್ಪಾದನೆಗೆ ಚೇಂಬರ್‌ ಧ್ವನಿಯಾಗಬೇಕು. ದೇಶದ ವಾಣಿಜ್ಯ, ಉದ್ಯಮ ಮತ್ತು ಕೈಗಾರಿಕೆಯಲ್ಲಿ ಆಗಬೇಕಾದ ಬದಲಾವಣೆ, ಸುಧಾರಣೆಗಳ ಬಗ್ಗೆ ಚೇಂಬರ್‌ ಆಫ್‌ ಕಾಮರ್ಸ್‌ ಗಟ್ಟಿಯಾಗಿ ಧ್ವನಿ ಎತ್ತಬೇಕೆಂದು ಹೇಳಿದರು.

ಬೆಂಗಳೂರು ಮೂಲದ ಟ್ಯಾಲಿ ಹಿರಿಯ ವ್ಯವಸ್ಥಾಪಕ ಷಣ್ಮುಖ ಜಿ. ಉಪನ್ಯಾಸ ನೀಡಿ, ಇಂದಿನ ದಿನಗಳಲ್ಲಿ ಬಹುತೇಕ ಆರ್ಥಿಕ ವ್ಯವಹಾರಗಳು ತಂತ್ರಜ್ಞಾನ ಆಧಾರಿತವಾಗಿವೆ. ವ್ಯಾಪಾರಸ್ಥರು 50 ಸಾವಿರ ರೂ. ಮೇಲೆ ಇದ್ದರೆ ತಮ್ಮ ಗೂಡ್ಸ್‌ಗಳನ್ನು ಮಾರಾಟ ಮತ್ತು ಸಾಗಾಣಿಕೆ ಸಂದರ್ಭದಲ್ಲಿ ಇ-ವೇ ಬಿಲ್‌ ತೆಗೆದುಕೊಳ್ಳಬೇಕಾಗುತ್ತದೆ. ಅದರ ರಶೀದಿಯನ್ನು ವಾಹನದ ಜೊತೆಗೆ ತೆಗೆದುಕೊಂಡು ಹೋಗುವುದು ಕಡ್ಡಾಯ. ಚೆಕ್‌ಪೋಸ್ಟ್‌ ಸೇರಿದಂತೆ ಯಾವುದೇ ಭಾಗದಲ್ಲಿ ವಾಹನ ತಪಾಸಣೆಗೆ ಒಳಪಡಿಸಿದಾಗ ಇ-ವೇ ಬಿಲ್‌ ಪ್ರಸ್ತುತಪಡಿಸಬೇಕು. ಇಲ್ಲವೇ, ದಂಡ ಭರಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.

ಮತ್ತೋರ್ವ ಅತಿಥಿ ಉಪನ್ಯಾಸಕ ಟ್ಯಾಲಿ ವಿಶ್ಲೇಷಕ ಗೋಪಾಲ ಬಿ.ಐ. ಪ್ರಸ್ತಾವಿಕವಾಗಿ ಮಾತನಾಡಿ, ಟ್ಯಾಲಿ ಅವಳವಡಿಸಿಕೊಳ್ಳುವಿಕೆ, ಅದರಿಂದಾಗುವ ಪ್ರಯೋಜನಗಳ ಬಗ್ಗೆ ಸವಿಸ್ತಾರವಾಗಿ ವಿವರಿಸಿದರು. ಜಿಲ್ಲಾ ವಾಣಿಜ್ಯೋದ್ಯಮ ಸಂಸ್ಥೆ ಅಧ್ಯಕ್ಷ ರಾಮನ ಗೌಡ ಬಿ. ದಾನಪ್ಪಗೌಡ್ರ ಅಧ್ಯಕ್ಷತೆ ವಹಿಸಿದ್ದರು. ವೇದಿಕೆ ಮೇಲೆ ಸಂಸ್ಥೆಯ ಗೌರವ ಕಾರ್ಯದರ್ಶಿ ಹರೀಶಕುಮಾರ ಎಸ್‌. ಶಹಾ, ಟ್ಯಾಲಿ ಸಲ್ಯೂಷನ್‌ನ ಶ್ರೀನಿವಾಸ ಬಿ., ಸಂಸ್ಥೆಯ ಪದಾಧಿ ಕಾರಿಗಳು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

ನಮ್ಮದು ಬಡವರಿಗೆ ಬದುಕು ಕಟ್ಟಿ ಕೊಡುವ ಪ್ರಣಾಳಿಕೆ: ಬಸವರಾಜ ಬೊಮ್ಮಾಯಿ

Gadag; ನಮ್ಮದು ಬಡವರಿಗೆ ಬದುಕು ಕಟ್ಟಿ ಕೊಡುವ ಪ್ರಣಾಳಿಕೆ: ಬಸವರಾಜ ಬೊಮ್ಮಾಯಿ

1-wqeqweqwe

Panchmasali ಸಮಾಜಕ್ಕೆ ಬಿಜೆಪಿಯಿಂದ ಅನ್ಯಾಯ: ವಚನಾನಂದ ಸ್ವಾಮೀಜಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.