ಕಾಲಮಿತಿಯಲ್ಲಿ ಅರ್ಜಿ ವಿಲೇವಾರಿಗೆ ಸೂಚನೆ


Team Udayavani, Mar 24, 2021, 2:11 PM IST

ಕಾಲಮಿತಿಯಲ್ಲಿ ಅರ್ಜಿ ವಿಲೇವಾರಿಗೆ ಸೂಚನೆ

ಗದಗ: ಸಕಾಲದಡಿ ಒಟ್ಟು 258 ಸೇವೆಗಳನ್ನು ವಿವಿಧ ಇಲಾಖೆಗಳಲ್ಲಿ ಒದಗಿಸಲಾಗುತ್ತಿದೆ. ಇವುಗಳಲ್ಲಿ178 ಸೇವೆಗಳಿಗೆ ಮಾತ್ರ ಜಿಲ್ಲೆಯಲ್ಲಿ ಅರ್ಜಿಗಳು ಸ್ವೀಕೃತವಾಗಿದ್ದು, ಇನ್ನುಳಿದ ಸೇವೆಗಳಿಗೂ ಸಕಾಲದಡಿಅರ್ಜಿಗಳನ್ನು ಸ್ವೀಕರಿಸಬೇಕು. ಕಾಲಮಿತಿಯಲ್ಲಿಅರ್ಜಿಗಳನ್ನು ವಿಲೇವಾರಿ ಮಾಡಬೇಕು ಎಂದು  ಜಿಲ್ಲಾಧಿಕಾರಿ ಎಂ. ಸುಂದರೇಶ್‌ ಬಾಬು ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸಕಾಲ ಯೋಜನೆ ಪ್ರಗತಿ ಪರಿಶೀಲನಾ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲೆಯ ವಿವಿಧಇಲಾಖೆಗಳ ವಿವಿಧ ಹಂತದ ಒಟ್ಟು 528 ಕಚೇರಿಗಳಪೈಕಿ 125 ಕಚೇರಿಗಳಲ್ಲಿ ಸಕಾಲದಡಿ ಅರ್ಜಿಸ್ವೀಕರಿಸದಿರುವುದು ಗಮನಕ್ಕೆ ಬಂದಿದೆ. ವಾ.ಕ.ರ.ಸಾ.ಸಂ. ಗದಗ ವಿಭಾಗದಲ್ಲಿ ಅರ್ಜಿ ಸ್ವೀಕರಿಸಿನಿಗದಿತ ಕಾಲಮಿತಿಯೊಳಗೆ ವಿಲೇವಾರಿ ಮಾಡದೇಇರುವ 5000ಕ್ಕೂ ಹೆಚ್ಚು ಅರ್ಜಿಗಳು ಬಾಕಿಯಿದ್ದು,ಇದರಿಂದ ಜಿಲ್ಲೆಯ ಸಕಾಲ ಪ್ರಗತಿ ಕುಂಠಿತವಾಗಿದೆ.ಇನ್ನೆರಡು ದಿನದಲ್ಲಿ ಅಂತಹ ಇಲಾಖೆಗಳ ಮುಖ್ಯಸ್ಥರುಸಕಾಲದಡಿ ಅರ್ಜಿಗಳ ಸ್ವೀಕಾರಕ್ಕೆ ಕ್ರಮ ವಹಿಸಬೇಕು.ಇಲ್ಲದಿದ್ದಲ್ಲಿ ಶಿಸ್ತು ಕ್ರಮ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.

ಆರೋಗ್ಯ ಇಲಾಖೆಯ 59 ಕಚೇರಿಗಳ ಪೈಕಿ 35ಕಚೇರಿಗಳಲ್ಲಿ ಮಾತ್ರ ಸಕಾಲದಡಿ ಅರ್ಜಿ ಸ್ವೀಕೃತವಾಗಿದ್ದು,ಉಳಿದ ಕಚೇರಿಗಳಲ್ಲೂ ಸಕಾಲ ಕುಂಠಿತವಾಗಿದೆ. ಶಿಕ್ಷಣಇಲಾಖೆಯ 30 ಕಚೇರಿಗಳ ಪೈಕಿ 21 ಕಚೇರಿಗಳಲ್ಲಿಇವರೆಗೂ ಅರ್ಜಿ ಸ್ವೀಕೃತವಾಗಿಲ್ಲ. ಇದರಿಂದ ಜಿಲ್ಲೆಯಅಭಿವೃದ್ಧಿಗೆ ಹಿನ್ನಡೆಯಾಗುತ್ತದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಪ್ರಶಾಂತ ವರಗಪ್ಪನವರ ಮಾತನಾಡಿ, ಪರಿಶಿಷ್ಟಜಾತಿ ವಿಶೇಷ ಘಟಕ ಯೋಜನೆಯಡಿ ಜಿಲ್ಲೆಯಆಯ್ದ ಇಲಾಖೆಗಳಲ್ಲಿ ಜಿಲ್ಲಾ, ರಾಜ್ಯ ಹಾಗೂ ಕೇಂದ್ರವಲಯಗಳಲ್ಲಿ ಒಟ್ಟಾರೆ 2021 ಫೆಬ್ರುವರಿ ಮಾಹೆಯಅಂತ್ಯದವರೆಗೆ 14365.56 ಲಕ್ಷ ರೂ. ಅನುದಾನನಿಗದಿಪಡಿಸಿದ್ದು, ಈವರೆಗೆ ಒಟ್ಟಾರೆ 7663.75 ಲಕ್ಷರೂ. ಅನುದಾನ ಬಿಡುಗಡೆಯಾಗಿದೆ. ಒಟ್ಟಾರೆ6772 ಲಕ್ಷ ರೂ. ವ್ಯಯಿಸಲಾಗಿದೆ. ಬಿಡುಗಡೆಯಾದ ಅನುದಾನದಲ್ಲಿ ಶೇ. 88 ರಷ್ಟು ಆರ್ಥಿಕ ಪ್ರಗತಿ ಸಾಧಿಸಿದೆ. 1,01,170 ನಿಗದಿಪಡಿಸಿದ ಫಲಾನುಭವಿಗಳಪೈಕಿ 42,232 ಫಲಾನುಭವಿಗಳು ಸೌಲಭ್ಯ ಪಡೆದಿದ್ದಾರೆ. 235 ಕಾಮಗಾರಿಗಳನ್ನು ಕೈಗೊಂಡಿದ್ದು, ಆ ಪೈಕಿ 163 ಕಾಮಗಾರಿಗಳನ್ನು ಪೂರ್ಣಗೊಳಿಸಲಾಗಿದೆ ಎಂದರು.

ಗಿರಿಜನ ಉಪಯೋಜನೆಯಡಿ(ಟಿಎಸ್‌ಪಿ) ಜಿಲ್ಲಾ, ರಾಜ್ಯ ಹಾಗೂ ಕೇಂದ್ರ ವಲಯದಲ್ಲಿ ಒಟ್ಟಾರೆ ಜನವರಿಅಂತ್ಯದವರೆಗೆ 5482.70 ಲಕ್ಷ ರೂ. ಅನುದಾನ ನಿಗದಿಪಡಿಸಿದ್ದು, ಈ ವರೆಗೆ 2604.93 ಲಕ್ಷ ರೂ.ಅನುದಾನ ಬಿಡುಗಡೆಯಾಗಿದ್ದು, 2288.80 ಲಕ್ಷರೂ. ವ್ಯಯಿಸಲಾಗಿದೆ. ಒಟ್ಟಾರೆ ಬಿಡುಗಡೆಯಾದಅನುದಾನದಲ್ಲಿ ಶೇ. 88ರಷ್ಟು ಆರ್ಥಿಕ ಪ್ರಗತಿಸಾಧಿಸಿದಂತಾಗಿದೆ. 40,977 ನಿಗದಿಪಡಿಸಿದಫಲಾನುಭವಿಗಳ ಪೈಕಿ 18,088 ಫಲಾನುಭವಿಗಳುಸೌಲಭ್ಯ ಪಡೆದಿರುತ್ತಾರೆ. ಅದರಂತೆ ಒಟ್ಟಾರೆ 152ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದ್ದು, ಆ ಪೈಕಿ 114ಕಾಮಗಾರಿಗಳು ಪೂರ್ಣಗೊಂಡಿವೆ ಎಂದು ಸಭೆಗೆ ಮಾಹಿತಿ ನೀಡಿದರು.

ಇದೇ ವೇಳೆ ಶಿಷ್ಟಾಚಾರ ಕುರಿತು ಜರುಗಿದ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಎಂ. ಸತೀಶ್‌ ಕುಮಾರಮಾತನಾಡಿ, ಜಿಲ್ಲಾಮಟ್ಟದ ಎಲ್ಲ ಅಧಿಕಾರಿಗಳುಯಾವುದೇ ಕಾಮಗಾರಿ, ಕಾರ್ಯಕ್ರಮಗಳನ್ನುಆಯೋಜಿಸುವ ಮುನ್ನ ಕಾರ್ಯಕ್ರಮದ ಆಹ್ವಾನ ಪತ್ರಿಕೆಮುದ್ರಣಕ್ಕೂ ಮುನ್ನ ಜಿಲ್ಲಾಡಳಿತದಿಂದ ಅನುಮೋದನೆ ಪಡೆಯಬೇಕು. ಕಾರ್ಯಕ್ರಮದಲ್ಲಿ ಶಿಷ್ಟಾಚಾರಉಲ್ಲಂಘನೆಗೆ ಅವಕಾಶ ನೀಡಬಾರದು. ಶಿಷ್ಟಾಚಾರ ಉಲ್ಲಂಘನೆ ಕುರಿತು ದೂರಗಳು ಬಂದಲ್ಲಿ ಆಯಾಇಲಾಖಾ ಮುಖ್ಯಸ್ಥರನ್ನೇ ಹೊಣೆ ಮಾಡಲಾಗುವುದು ಎಂದು ಸೂಚಿಸಿದರು.

ಜಿ.ಪಂ. ಸಿಇಒ ಭರತ್‌ ಎಸ್‌., ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಪ್ರಶಾಂತ ವರಗಪ್ಪನವರ, ನಗರಸಭೆ ಪೌರಯುಕ್ತ ರಮೇಶ ಜಾದವ, ಜಂಟಿ ಕೃಷಿ ನಿರ್ದೇಶಕ ಟಿ.ಎಸ್‌. ರುದ್ರೇಶಪ್ಪ, ನಗರಾಭಿವೃದ್ಧಿಕೋಶದ ಕಾರ್ಯಪಾಲಕ ಅಭಿಯಂತರಅನೀಲಕುಮಾರ ಮುದ್ದಾ ಮತ್ತಿತರೆ ಇಲಾಖೆಗಳ ಅಧಿಕಾರಿ ಹಾಗೂ ಸಿಬ್ಬಂದಿ ಇದ್ದರು.

ನೋಡಲ್‌ ಅಧಿಕಾರಿಗಳ ನೇಮಕ :

ಸಕಾಲ ಯೋಜನೆಗೆ ಸಂಬಂಧಿತ ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿ ಸಂಬಂಧಪಟ್ಟಇಲಾಖೆಗಳ ಇಲಾಖಾ ಮುಖ್ಯಸ್ಥರನ್ನುನೋಡಲ್‌ ಅಧಿಕಾರಿಗಳೆಂದು ನೇಮಕಮಾಡಲಾಗಿದ್ದು, ಸಂಬಂಧಿತ ಎಲ್ಲ ಇಲಾಖೆಗಳಕಾರ್ಯಾಲಯದಲ್ಲಿ ಸಾರ್ವಜನಿಕರಿಗೆಮಾಹಿತಿಗಾಗಿ ಸಕಾಲ ಯೋಜನೆಯಸೂಚನಾ ಫಲಕ ಅಳವಡಿಸಬೇಕು. ಜಿಲ್ಲೆಯಸಂಬಂಧಿಸಿದ ಇಲಾಖೆಗಳ ಕಾರ್ಯಾಲಯಗಳಿಗೆಯಾವುದೇ ಸಮಯದಲ್ಲಿ ಭೇಟಿ ನೀಡಿಸಕಾಲ ಯೋಜನೆಯಡಿ ಪ್ರಗತಿಯ ತಪಾಸಣೆನಡೆಸಲಾಗುವುದು ಎಂದು ಜಿಲ್ಲಾಧಿಕಾರಿಗಳು ಎಚ್ಚರಿಸಿದರು.

ಟಾಪ್ ನ್ಯೂಸ್

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

1-gadaga

Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.