ಬ್ಯಾಂಕ್ ಅವ್ಯವಸ್ಥೆ ವಿರುದ್ಧ ಪ್ರತಿಭಟನೆ
Team Udayavani, Jun 19, 2019, 2:55 PM IST
ಗದಗ: ಲಕ್ಕುಂಡಿ ಸಿಂಡಿಕೇಟ್ ಬ್ಯಾಂಕ್ ಅವ್ಯವಸ್ಥೆ ವಿರುದ್ಧ ಗ್ರಾಹಕರು ಪ್ರತಿಭಟನೆ ನಡೆಸಿದರು.
ಗದಗ: ತಾಲೂಕಿನ ಲಕ್ಕುಂಡಿ ಗ್ರಾಮದ ಸಿಂಡಿಕೇಟ್ ಬ್ಯಾಂಕಿನ ಅವ್ಯವಸ್ಥೆ ಖಂಡಿಸಿ ಗ್ರಾಹಕರು ಬ್ಯಾಂಕಿಗೆ ಬೀಗ ಜಡಿದು ಪ್ರತಿಭಟನೆ ನಡೆಸಿದರು.
ಪ್ರತಿಭಟನೆ ನೇತೃತ್ವ ವಹಿಸಿ ಮಾತನಾಡಿದ ಮಾಜಿ ಸೈನಿಕ ಹಾಗೂ ಪ್ರಗತಿಪರ ರೈತ ಡಿ.ವಿ. ಜೋಶಿ, ಕಳೆದ ಆರು ತಿಂಗಳಿಂದ ಬ್ಯಾಂಕಿನಲ್ಲಿ ವ್ಯವಸ್ಥಾಪಕರಿಲ್ಲದೇ ರೈತರು, ವ್ಯಾಪಾರಸ್ಥರು, ಸ್ತ್ರೀ ಶಕ್ತಿ ಸಂಘ-ಸಂಸ್ಥೆಗಳಿಗೆ ಸಾಲ ದೊರೆಯುತ್ತಿಲ್ಲ. ಈಗಾಗಲೇ ಸಾಲ ಮರು ಪಾವತಿ ಮಾಡಿದವರಿಗೂ ಮರು ಸಾಲ ನೀಡುತ್ತಿಲ್ಲ. ಬ್ಯಾಂಕಿನ ಎಟಿಎಂನಲ್ಲಿ ಸದಾ ಹಣ ಇರುವುದಿಲ್ಲ. ತಮ್ಮ ಖಾತೆಯಲ್ಲಿರುವ ಹಣವನ್ನು ಹಿಂಪಡೆಯಲು ಗಂಟೆಗಟ್ಟಲೆ ಸರದಿ ಸಾಲಿನಲ್ಲಿ ನಿಲ್ಲಬೇಕು. 50 ಸಾವಿರಕ್ಕಿಂತ ಮುಂಚೆ ಹಣ ಬೇಕಿದ್ದರೆ, ಒಂದು ದಿನ ಮುಂಚಿತವಾಗಿ ತಿಳಿಸಬೇಕು ಎಂಬ ನಿಯಮಗಳಿಂದ ಗ್ರಾಹಕರಿಗೆ ತೀವ್ರ ತೊಂದರೆಯಾಗುತ್ತಿದೆ ಎಂದು ದೂರಿದರು. ಬ್ಯಾಂಕ್ ಪಾಸ್ಬುಕ್ ಎಂಟ್ರಿಗೆ ಸರ್ವರ್ ಸಮಸ್ಯೆ, ಪ್ರಿಂಟರ್ ರಿಪೇರಿ ಸೇರಿದಂತೆ ಹತ್ತಾರು ಸಮಸ್ಯೆಗಳನ್ನು ಮುಂದಿಡುತ್ತಿದ್ದಾರೆ. ನಿಗದಿತ ಸಮಯದೊಳಗೆ ಸಾಲ ಮರುಪಾವತಿ ಮಾಡದಿದಲ್ಲಿ ಶೇ. 4ರಷ್ಟು ಇದ್ದ ಬಡ್ಡಿ ದರ ಶೇ. 12ರಷ್ಟು ಪಾವತಿ ಮಾಡುವ ಪರಿಸ್ಥಿತಿ ಬಂದಿದೆ ಎಂದು ದೂರಿದರು.
ಈ ವೇಳೆ ಪ್ರತಿಭಟನೆ ಸುದ್ದಿ ತಿಳಿದ ಬ್ಯಾಂಕಿನ ಎಜಿಎಂ ಗೋವಿಂದ ನಾಯ್ಕ ಪ್ರತಿಭಟನಾಕರರೊಂದಿಗೆ ದೂರವಾಣಿಯಲ್ಲಿ ಮಾತನಾಡಿ, ಎಲ್ಲ ಸಮಸ್ಯೆಗಳನ್ನು ಒಂದು ವಾರದಲ್ಲಿ ಬಗೆಹರಿಸಲಾಗುವುದು ಎಂದು ಭರವಸೆ ನೀಡಿದರು. ತಾ.ಪಂ. ಮಾಜಿ ಸದಸ್ಯ ಮಹೇಶ ಮುಸ್ಕಿನಬಾವಿ, ಯುವ ಧುರೀಣ ಬಸವರಾಜ ಮುಳ್ಳಾಳ, ಬಸವರಾಜ ಅರಹುಣಶಿ, ನಿಂಗಪ್ಪ ದೊಡ್ಡಮನಿ, ಈರಣ್ಣ ಜಕ್ಕಲಿ, ಸೀಮವ್ವ ಎಣ್ಣೆ, ಶಿವಪ್ಪ ಭಜೆಂತ್ರಿ ಸೇರಿದಂತೆ ನೂರಾರು ಗ್ರಾಹಕರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Gadag; ನಮ್ಮದು ಬಡವರಿಗೆ ಬದುಕು ಕಟ್ಟಿ ಕೊಡುವ ಪ್ರಣಾಳಿಕೆ: ಬಸವರಾಜ ಬೊಮ್ಮಾಯಿ
Panchmasali ಸಮಾಜಕ್ಕೆ ಬಿಜೆಪಿಯಿಂದ ಅನ್ಯಾಯ: ವಚನಾನಂದ ಸ್ವಾಮೀಜಿ