ಕನ್ನಡಪರ ಸಂಘಟನೆಗಳ ಬಗ್ಗೆ ಶಾಸಕ ಯತ್ನಾಳ ಹೇಳಿಕೆ ಖಂಡಿಸಿ ಪ್ರತಿಭಟನೆ
Team Udayavani, Nov 21, 2020, 2:02 PM IST
ಗದಗ: ಕನ್ನಡಪರ ಸಂಘಟನೆಗಳ ಬಗ್ಗೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ನೀಡಿರುವ ಹೇಳಿಕೆಯನ್ನು ಖಂಡಿಸಿ ನಗರದಲ್ಲಿ ಕರವೇ ಕಾರ್ಯಕರ್ತರು ಪ್ರತಿಭಟನೆ ನಡೆಸಿ, ಆಕ್ರೋಶ ವ್ಯಕ್ತಪಡಿಸಿದರು.
ಇಲ್ಲಿನ ಮಹಾತ್ಮ ಗಾಂಧಿ ವೃತ್ತದಲ್ಲಿ ಜಮಾಯಿಸಿದ ಕರವೇ ಕಾರ್ಯಕರ್ತರು, ಶಾಸಕ ಬಸನಗೌಡ ಪಾಟೀಲ್ ಯತ್ನಾಳ ವಿರುದ್ಧ ಘೋಷಣೆ ಕೂಗಿದರು. ಯತ್ನಾಳ ಪ್ರತಿಕೃತಿ ದಹನಕ್ಕೆ ಅಡ್ಡಿಪಡಿಸಿದ ಪೊಲೀಸರೊಂದಿಗೆ ಹೋರಾಟಗಾರರು ವಾಗ್ವಾದ ನಡೆಸಿದರು.
ಮರಾಠಿಗರ ಮತಗಳನ್ನು ಸೆಳೆಯುವ ಉದ್ದೇಶದಿಂದ ಇತ್ತೀಚೆಗೆ ಬಿಜೆಪಿ ಸರಕಾರ ಮರಾಠ ಭಾಷಿಗರ ಅಭಿವೃದ್ಧಿ ಪ್ರಾಧಿಕಾರ ರಚಿಸಿದೆ. ಆದರೆ ದಶಕಗಳಿಂದ ಕನ್ನಡ ನಾಡು, ನುಡಿಗಾಗಿ ಕರವೇ ನಡೆಸುತ್ತಿರುವ ಪ್ರಾಮಾಣಿಕ ಹೋರಾಟ ಫಲವಾಗಿ ಇಂದಿಗೂ ಬೆಳಗಾವಿ ರಾಜ್ಯದಲ್ಲಿ ಉಳಿದಿದೆ. ಅದರಂತೆ ಗಡಿ ಜಿಲ್ಲೆಗಳಾದ ರಾಯಚೂರು, ಬೀದರ್, ಚಿಕ್ಕಬಳ್ಳಾಪುರ ಜಿಲ್ಕೆಗಳಲ್ಲಿ ಕನ್ನಡಿಗರ ಧ್ವನಿಯಾಗಿ ಕರವೇ ಹೋರಾಟ ನಡೆಸುತ್ತಿವೆ. ಆದರೆ ಶಾಸಕ ಯತ್ನಾಳ ಅವರು ಕನ್ನಡಪರ ಸಂಘಟನೆಗಳು ಡೋಂಗಿ ಎಂಬ ಹೇಳಿಕೆ ನೀಡಿ, ಕನ್ನಡಿಗರ ಭಾವನೆಗಳನ್ನು ಘಾಸಿಗೊಳಿಸಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಕನ್ನಡ ಪರ ಸಂಘಟನೆಗಳ ವಿರುದ್ಧ ಇಲ್ಲಸಲ್ಲದ ಆರೋಪ ಮಾಡಿರುವ ಯತ್ನಾಳ ತಕ್ಷಣ ಕ್ಷಮೆ ಕೇಳಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಕರವೇ ರಾಜ್ಯ ಉಪಾಧ್ಯಕ್ಷ ಎಚ್.ಎಸ್.ಸೋಂಪುರ, ಜಿಲ್ಲಾಧ್ಯಕ್ಷ ಹನುಮಂತ ಅಬ್ಬಿಗೇರಿ ಸೇರಿದಂತೆ ಮತ್ತಿತರರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ