ಬಸ್ ಅವ್ಯವಸ್ಥೆ ಖಂಡಿಸಿ ಪ್ರತಿಭಟನೆ
Team Udayavani, Sep 10, 2019, 11:58 AM IST
ಗಜೇಂದ್ರಗಡ: ಸಮಯಕ್ಕೆ ಸರಿಯಾಗಿ ಬಸ್ ಬಿಡದಿರುವುದನ್ನು ಖಂಡಿಸಿ ಚಿಲಝರಿ ಗ್ರಾಮದ ವಿದ್ಯಾರ್ಥಿಗಳು ಬಸ್ ತಡೆದು ಪ್ರತಿಭಟನೆ ನಡೆಸಿದರು.
ಗಜೇಂದ್ರಗಡ: ಸಮೀಪದ ಚಿಲಝರಿ ಗ್ರಾಮದಿಂದ ಗಜೇಂದ್ರಗಡಕ್ಕೆ ಶಿಕ್ಷಣ ಪಡೆಯಲು ಹೋಗುವ ವಿದ್ಯಾರ್ಥಿಗಳಿಗೆ ಸಮಯಕ್ಕೆ ಸರಿಯಾಗಿ ಬಸ್ ಬಿಡದೇ ನಿರ್ಲಕ್ಷ್ಯ ತೋರುತ್ತಿರುವುದನ್ನು ಖಂಡಿಸಿ ವಿದ್ಯಾರ್ಥಿಗಳು ಗ್ರಾಮದಲ್ಲಿ ವಾಕರ ಸಾರಿಗೆ ಘಟಕ ಬಸ್ ತಡೆದು ಸೋಮವಾರ ಪ್ರತಿಭಟನೆ ನಡೆಸಿದರು.
ಸಮೀಪದ ಚಿಲಝರಿ ಗ್ರಾಮದಿಂದ ಗಜೇಂದ್ರಗಡಕ್ಕೆ ಶಿಕ್ಷಣ ಪಡೆಯಲು ನಿತ್ಯ 25ಕ್ಕೂ ಅಧಿಕ ವಿದ್ಯಾರ್ಥಿಗಳು ಸಾರಿಗೆ ಘಟಕದಿಂದ ಪಾಸ್ ಪಡೆದಿದ್ದಾರೆ. ಆದರೆ ಕಳೆದ ಎರಡು ತಿಂಗಳಿಂದ 10 ಗಂಟೆಗೆ ಬಸ್ ಬಿಡುತ್ತಿದ್ದಾರೆ. ಇದರಿಂದ ಶಾಲೆಗೆ ಹೋಗುವುದು ಕಷ್ಟಕರವಾಗಿದೆ. ಶಾಲಾ ವೇಳೆ 9 ಗಂಟೆಗೆ ಆದರೆ ಸಾರಿಗೆ ಘಟಕ ಅಧಿಕಾರಿಗಳು 10 ಗಂಟೆ ಮೇಲ್ಪಟ್ಟು ಬಸ್ ಗ್ರಾಮಕ್ಕೆ ಬರುತ್ತಿರುವುದರಿಂದ ತೀವ್ರ ತೊಂದರೆ ಅನುಭವಿಸುವಂತಾಗಿದೆ ಎಂದು ವಿದ್ಯಾರ್ಥಿಗಳು ಅಳಲು ತೋಡಿಕೊಂಡರು.
ಗ್ರಾಮದ 25ಕ್ಕೂ ಅಧಿಕ ವಿದ್ಯಾರ್ಥಿಗಳು ನಿತ್ಯ ಗ್ರಾಮದಲ್ಲಿ ಬಸ್ಗಾಗಿ ಕಾಯುವ ಪರಿಸ್ಥಿತಿ ನಿರ್ಮಾಣವಾಗಿದೆ. ಸಮಯಕ್ಕೆ ಸರಿಯಾಗಿ ಬಾರದ ಬಸ್ನಿಂದಾಗಿ ಹಣ ನೀಡಿ ಖಾಸಗಿ ವಾಹನಗಳಿಂದ ಗಜೇಂದ್ರಗಡಕ್ಕೆ ತೆರಳುವ ಅನಿವಾರ್ಯತೆ ಎದುರಾಗಿದೆ. ನೂರಾರು ರೂಪಾಯಿ ನೀಡಿ ಪಾಸ್ ಪಡೆದರೂ ನಿತ್ಯ ಖಾಸಗಿ ವಾಹನಗಳಿಗೆ ಹಣ ಕೊಟ್ಟು ಸಂಚರಿಸಬೇಕಾದ ಸ್ಥಿತಿ ಉದ್ಭವಿಸಿದೆ. ಆದರೆ ಸಾರಿಗೆ ಘಟಕ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಗೆ ಹಲವಾರು ಬಾರಿ ತಿಳಿಸಿದರೂ ಹಾರಿಕೆ ಉತ್ತರ ನೀಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಬಸ್ ಅನಾನುಕೂಲತೆಯಿಂದಾಗಿ ನಿತ್ಯ ಶಾಲೆಗೆ ತಡವಾಗಿ ಹೋಗುವಂತಾಗಿದೆ. ಶೈಕ್ಷಣಿಕ ಬದುಕಿಗೂ ಹಿನ್ನಡೆಯಾಗುತ್ತಿದೆ. ಹೀಗಾಗಿ ಸಂಬಂಧಪಟ್ಟ ಅಧಿಕಾರಿಗಳು ಸ್ಥಳಕ್ಕೆ ಆಗಮಿಸುವವರೆಗೂ ಬಸ್ ಬಿಡುವುದಿಲ್ಲ ಎಂದು ವಿದ್ಯಾರ್ಥಿಗಳು ಪಟ್ಟು ಹಿಡಿದು ಕುಳಿತರು.
ನಂತರ ಮಧ್ಯಾಹ್ನ 12ಕ್ಕೆ ವಾಕರ ಸಾರಿಗೆ ಘಟಕ ಪ್ರಭಾರಿ ವ್ಯವಸ್ಥಾಪಕ ರಾಜಶೇಖರ ಮಸ್ಕಿ ಸ್ಥಳಕ್ಕಾಗಮಿಸಿ ಪ್ರತಿಭಟನಾಕಾರರ ಅಹವಾಲು ಆಲಿಸಿದರು. ಬಳಿಕ ಮಾತನಾಡಿದ ಅವರು, ಗಣೇಶ ಚತುರ್ಥಿ ಹಬ್ಬದಿಂದಾಗಿ ಬಸ್ ತಡವಾಗಿದೆ. ಮುಂದಿನ ದಿನಗಳಲ್ಲಿ ಶಾಲಾ ವೇಳೆಗೆ ಬಸ್ ಬಿಡಲು ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದ ಬಳಿಕ ಪ್ರತಿಭಟನೆ ಹಿಂಪಡೆದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಗದಗ: ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ