ಐತಿಹಾಸಿಕ ದೇವಸ್ಥಾನಗಳ ರಕ್ಷ ಣೆಗೆ ಆಗ್ರಹಿಸಿ ಪ್ರತಿಭಟನೆ


Team Udayavani, May 24, 2022, 2:32 PM IST

17

ಮುಂಡರಗಿ: ಶಿಂಗಟಾಲೂರ ಏತ ನೀರಾವರಿ ಯೋಜನೆಯ ನೀರು ನಿಲುಗಡೆಯಿಂದ ಮುಳುಗಡೆಯಾಗುವ ಬಿದರಳ್ಳಿಯ ಬಿದರಳ್ಳೆಮ್ಮ (ರೇಣುಕಾದೇವಿ) ದೇವಸ್ಥಾನ, ಗುಮ್ಮಗೋಳದ ಗೋಣಿಬಸವೇಶ್ವರ ದೇವಸ್ಥಾನ, ವಿಠ್ಠಲಾಪುರದ ರಸಲಿಂಗ ದೇವಸ್ಥಾನಗಳ ಉಳುವಿಗಾಗಿ ಹಾಗೂ ದೇವಸ್ಥಾನಗಳ ಅಭಿವೃದ್ಧಿಗೆ ಆಗ್ರಹಿಸಿ ಗ್ರಾಮಸ್ಥರು ಹಾಗೂ ದೇವಸ್ಥಾನದ ಭಕ್ತರು ತಹಶೀಲ್ದಾರ್‌ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಹೋರಾಟದ ನೇತೃತ್ವ ವಹಿಸಿದ್ದ ವೈ.ಎನ್‌. ಗೌಡರ ಮಾತನಾಡಿ, ಶಿಂಗಟಾಲೂರ ಏತ ನೀರಾವರಿ ಯೋಜನೆಯ ಹಿನ್ನೀರಿನಿಂದ ಮುಳುಗಡೆ ಆಗುವ ಗುಮ್ಮಗೋಳದ ಗೋಣಿಬಸವೇಶ್ವರ ದೇವಾಲಯ, ಬಿದರಳ್ಳಿಯ ಬಿದರಳ್ಳೆಮ್ಮ (ರೇಣುಕಾದೇವಿ) ದೇವಸ್ಥಾನ ಹಾಗೂ ವಿಠ್ಠಲಾಪುರದ ರಸಲಿಂಗ ದೇವಸ್ಥಾನಗಳು ಪುರಾತನ ದೇವಸ್ಥಾನಗಳು. ಸರ್ಕಾರ ಕೂಡಲ ಸಂಗಮದ ಮಾದರಿಯಲ್ಲಿ ತಡೆಗೋಡೆ ನಿರ್ಮಿಸಿ ದೇವಸ್ಥಾನ ಸಂರಕ್ಷಿಸಬೇಕು ಎಂದರು.

ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಶಾಸಕ ರಾಮಣ್ಣ ಲಮಾಣಿ ಅವರೊಂದಿಗೆ ಬಿದರಹಳ್ಳಿ, ಗುಮ್ಮಗೋಳ ಹಾಗೂ ವಿಠ್ಠಲಾಪುರ ಗ್ರಾಮಸ್ಥರು ವಾಗ್ವಾದಕ್ಕೆ ಇಳಿದರು. ಸರ್ಕಾರ 2010ರಲ್ಲಿ ಏತ ನೀರಾವರಿ ಯೋಜನೆಗೆ ರೈತರ ಭೂಮಿ ಹಾಗೂ ಗುಮ್ಮಗೋಳ, ಬಿದರಹಳ್ಳಿ, ಹಾಗೂ ಹೂವಿನ ಹಡಗಲಿ ತಾಲೂಕಿನ ಅಲ್ಲಿಪುರ ಗ್ರಾಮಗಳನ್ನು ಸಹ ಸ್ವಾಧೀನ ಪಡಿಸಿಕೊಂಡು ನಂತರ 2012ರಲ್ಲಿ ಪರಿಹಾರ ನೀಡಿದೆ. ಆದರೆ ನೀರಿನಲ್ಲಿ ಮುಳುಗುವ ದೇವಸ್ಥಾನಗಳ ಸಂರಕ್ಷಣೆಗಾಗಿ ಶಾಸಕರಾದ ನಿಮಗೆ ಅನೇಕ ಬಾರಿ ಮನವಿ ಮಾಡಿಕೊಂಡಿದ್ದೇವೆ, ಅಧಿಕಾರಿಗಳಿಗೂ ಮನವಿ ಮಾಡಿಕೊಂಡಿದ್ದೇವೆ. ಆದರೆ ತಾವೇ ಮೂರು ಗ್ರಾಮಸ್ಥರು ಒಮ್ಮೆ ಬೆಂಗಳೂರಿಗೆ ಬನ್ನಿ ಮುಖ್ಯಮಂತ್ರಿಗಳೊಂದಿಗೆ ಹಾಗೂ ನೀರಾವರಿ ಮಂತ್ರಿಗಳೊಂದಿಗೆ ಮಾತನಾಡೋಣವೆಂದು ಹೇಳಿ ಇಲ್ಲಿಂದ ನಮ್ಮನ್ನು ಬೆಂಗಳೂರಿಗೆ ಕರೆಯಿಸಿಕೊಂಡು, ಫೋನ್‌ ಮಾಡಿದರು ಸಹ ಯಾವುದೇ ಸ್ಪಂದನೆ ಮಾಡಲಿಲ್ಲ. ವಿನಾಕಾರಣ ನಿಮ್ಮ ಮಾತು ನಂಬಿ ಬೆಂಗಳೂರಿಗೆ ಹಣ ಖರ್ಚು ಮಾಡಿಕೊಂಡು ಹೋಗಿ ಬಂದೆವು, ಕಳೆದ 4 ವರ್ಷಗಳಿಂದ ಬರಿ ಸುಳ್ಳು ಹೇಳುತ್ತಿದ್ದೀರಿ, ಮುಳುಗಡೆ ಪ್ರದೇಶವೆಂದು ಮೂರು ಗ್ರಾಮಗಳಲ್ಲಿ ಯಾವುದೇ ಅಭಿವೃದ್ಧಿ ಕೆಲಸಗಳು ನಡೆಯುತ್ತಿಲ್ಲ ಎಂದು ಆರೋಪಿಸಿದರು.

ಶಾಸಕ ರಾಮಣ್ಣ ಲಮಾಣಿ ಪ್ರತಿಕ್ರಿಯಿಸಿ, ಬಿದರಳ್ಳಿಯ ಬಿದರಳ್ಳೆಮ್ಮ (ರೇಣುಕಾದೇವಿ) ದೇವಸ್ಥಾನ, ಗುಮ್ಮಗೋಳದ ಗೋಣಿಬಸವೇಶ್ವರ ದೇವಸ್ಥಾನಗಳ ಸಂರಕ್ಷಣೆಗಾಗಿ ಆಯಾ ಗ್ರಾಮದ ಜನರ ಅಭಿಪ್ರಾಯದಂತೆ ಎರಡು ದೇವಸ್ಥಾನಗಳಿಗೆ ತಡೆಗೋಡೆ ನಿರ್ಮಿಸುವುದಕ್ಕೆ ಏತ ನೀರಾವರಿ ಇಲಾಖೆ ಅಧಿಕಾರಿಗಳಿಂದ ಸರ್ವೇ ಮಾಡಿಸಿ 35 ಕೋಟಿ ರೂ. ಅಂದಾಜು ಪ್ರತಿ ನೀಲನಕ್ಷೆ ತಯಾರಿಸಿ ಈಗಾಗಲೇ ಸಿಎಂ ಹಾಗೂ ಭಾರಿ ನೀರಾವರಿ ಸಚಿವರಿಗೆ ಸಲ್ಲಿಸಲಾಗಿದೆ. ಸಿಎಂ ಮತ್ತು ನೀರಾವರಿ ಸಚಿವರು ಸಹ ಆಶ್ವಾಸನೆ ನೀಡಿದ್ದಾರೆ. ಶೀಘ್ರವೇ ಸರ್ಕಾರದ ಅನುಮೋದನೆ ಪಡೆಯುವುದಕ್ಕೆ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದೇನೆ ಎಂದರು.

ಇದೇ ವೇಳೆ ಶಾಸಕ ರಾಮಣ್ಣ ಲಮಾಣಿ ಹಾಗೂ ತಹಶೀಲ್ದಾರ್‌ ಡಾ| ಆಶಪ್ಪ ಪೂಜಾರ, ಏತ ನೀರಾವರಿ ಇಲಾಖೆಯ ಪುನರ್‌ ವಸತಿ ವಿಭಾಗದ ಅಧಿಕಾರಿಗಳಾದ ಬಿ. ವಿನಯಕುಮಾರ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು.

ಗುಮ್ಮಗೋಳದ ಚಂದ್ರಶೇಖರ ಶಿವಾಚಾರ್ಯ ಸ್ವಾಮಿಗಳು, ರವೀಂದ್ರಗೌಡ ಪಾಟೀಲ, ಸತ್ಯಪ್ಪ ಕುರಗೋಡ, ಪರಸಪ್ಪ ಆಣೆಪ್ಪನವರ, ಸತ್ಯಪ್ಪ ನೀಲಗಾರ, ಮಂಜಪ್ಪ ಭಜಂತ್ರಿ, ಶರಣಪ್ಪ ಬಡ್ನಿ, ಪಕ್ಕಣ್ಣ ಗುಜ್ಜಲ, ನಿಂಗರಾಜ ಬಸೆಗೌಡ್ರ, ಕುಮಾರಗೌಡ ಪಾಟೀಲ, ಮಂಜಪ್ಪ ಹಾರೊಗೇರಿ, ಕುಮಾರ ಅಂಗಡಿ, ಚನ್ನಬಸಪ್ಪ ಹೂಗಾರ, ನಾಗರಾಜ ಮಾಗಳದ, ಡಿ.ಡಿ. ಮೋರನಾಳ, ದೃವಕುಮಾರ ಹೊಸಮನಿ, ಶ್ರೀಕಾಂತಗೌಡ ಪಾಟೀಲ, ಶಾಂತಪ್ಪ ರಾಟಿ, ವಿರೂಪಾಕ್ಷ ಜೋಗೇರ, ರಾಘವೇಂದ್ರ ಮತ್ತೂರು, ರಾಜು ಡಾವಣಗೇರಿ, ರಾಮು ಕಲಾಲ್‌, ರವೀಂದ್ರಗೌಡ ಪಾಟೀಲ, ಶೇಖಪ್ಪ ಕುರುಬರ, ಶಿವನಗೌಡ ಪಾಟೀಲ, ಶಿವಕುಮಾರಗೌಡ ಪಾಟೀಲ, ಶೇಖಪ್ಪ ಗುಜ್ಜಟ್ಟಿ, ರೇವಣಪ್ಪ ಬೂದಿಹಾಳ ಇನ್ನಿತರರಿದ್ದರು.

ಟಾಪ್ ನ್ಯೂಸ್

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

ನಮ್ಮದು ಬಡವರಿಗೆ ಬದುಕು ಕಟ್ಟಿ ಕೊಡುವ ಪ್ರಣಾಳಿಕೆ: ಬಸವರಾಜ ಬೊಮ್ಮಾಯಿ

Gadag; ನಮ್ಮದು ಬಡವರಿಗೆ ಬದುಕು ಕಟ್ಟಿ ಕೊಡುವ ಪ್ರಣಾಳಿಕೆ: ಬಸವರಾಜ ಬೊಮ್ಮಾಯಿ

1-wqeqweqwe

Panchmasali ಸಮಾಜಕ್ಕೆ ಬಿಜೆಪಿಯಿಂದ ಅನ್ಯಾಯ: ವಚನಾನಂದ ಸ್ವಾಮೀಜಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.