ಖಾತ್ರಿ ಕೂಲಿಗಾಗಿ ಪ್ರತಿಭಟನೆ

•ಕಾರ್ಮಿಕರಿಂದ ಅಡರಕಟ್ಟಿ ಗ್ರಾಪಂಗೆ ಬೀಗ ಜಡಿದು ಆಕ್ರೋಶ

Team Udayavani, Jun 16, 2019, 11:24 AM IST

gadaga-tdy-2..

ಲಕ್ಷ್ಮೇಶ್ವರ: ಅಡರಕಟ್ಟಿ ಗ್ರಾಪಂ ಎದುರು ಎನ್‌ಆರ್‌ಇಜಿಯಡಿ ಕೂಲಿಗಾಗಿ ಆಗ್ರಹಿಸಿ ಕೂಲಿಕಾರರು ಪ್ರತಿಭಟನೆ ನಡೆಸಿದರು.

ಲಕ್ಷ್ಮೇಶ್ವರ: ತಾಲೂಕಿನ ಅಡರಕಟ್ಟಿ ಗ್ರಾಪಂನಲ್ಲಿ ಎನ್‌ಆರ್‌ಇಜಿ ಯೋಜನೆಯಡಿ ಸಮರ್ಪಕ ಉದ್ಯೋಗ ನೀಡುವಂತೆ ಆಗ್ರಹಿಸಿ ಶನಿವಾರ ನೂರಾರು ಕೂಲಿ ಕಾರ್ಮಿಕರು ಗ್ರಾಪಂಗೆ ಬೀಗ ಜಡಿದು ಪ್ರತಿಭಟನೆ ನಡೆಸಿದರು.

ಕಳೆದ ಮೂರ್‍ನಾಲ್ಕು ದಿನಗಳಿಂದ ಗ್ರಾಮದ ಜನರಿಗೆ ಉದ್ಯೋಗ ನೀಡಲಾಗಿತ್ತು. ಆದರೆ ಶನಿವಾರ ದಿಢೀರನೆ ಇವತ್ತು ಕೆಲಸ ಬೇಡ ಎನ್ನುತ್ತಿದ್ದಾರೆ ಎಂಬ ಗುಮಾನಿ ಹಿನ್ನೆಲೆಯಲ್ಲಿ ಕೆಲಸಕ್ಕೆ ಹೋಗಲು ಸಿದ್ಧತೆಯಲ್ಲಿ ಬಂದಿದ್ದ ಕಾರ್ಮಿಕರೆಲ್ಲರೂ ಕೆರಳಿ ನೇರವಾಗಿ ಗ್ರಾಪಂ ಎದುರು ಪ್ರತಿಭಟನೆ ಆರಂಭಿಸಿದರು.

ಇದರಿಂದ ಗ್ರಾಮದಲ್ಲಿ ಕೆಲ ಕಾಲ ಗೊಂದಲದ ವಾತಾವರಣ ಸೃಷ್ಟಿಯಾಯಿತು. ಅನೇಕರು ಇದೇ ಸಂದರ್ಭದಲ್ಲಿ ಗ್ರಾಪಂ ವಿರುದ್ಧ ಹರಿಹಾಯ್ದರು. ಸತತ ಬರಗಾಲದಿಂದ ಕೃಷಿ ಕೆಲಸವಿಲ್ಲದೇ ಪರದಾಡುತ್ತಿದ್ದೇವೆ. ಇಂತಹ ಸಂದರ್ಭದಲ್ಲಿ ಎನ್‌ಆರ್‌ಇಜಿಯಡಿ ಕೆಲಸ ಕೊಡಿ ಎಂದು ಕೇಳಿದರೆ ಇಲ್ಲ ಎನ್ನುತ್ತೀರಿ. ಎಲ್ಲರೂ ಕೂಡಿ ಜೆಸಿಬಿ ಹಚ್ಚಿ ಕೆಲಸ ಮಾಡಿಸುತ್ತಿರಿ. ನಾವೆಲ್ಲಿಗೆ ಹೋಗೋಣ ಎಂದು ಸದಸ್ಯರ ವಿರುದ್ಧ ಜಾಬ್‌ ಕಾರ್ಡ್‌ದಾರರು ಆಕ್ರೋಶ ವ್ಯಕ್ತಪಡಿಸಿದರು. ಅಧಿಕಾರಿಗಳು ಮತ್ತು ಗಾಪಂನ ಎಲ್ಲ ಸದಸ್ಯರು ಸ್ಥಳಕ್ಕೆ ಬಂದು ಸಮರ್ಪಕ ಉದ್ಯೋಗ ಭರವಸೆ ಮತ್ತು ಸೂಕ್ತ ಮಾಹಿತಿ ಕೊಡಬೇಕು ಎಂದು ಪಟ್ಟು ಹಿಡಿದು ಗುದ್ದಲಿ, ಬುಟ್ಟಿ, ಸಲಕೆ ಸಮೇತ ಗ್ರಾಪಂ ಎದುರು ಕುಳಿತರು.

ಈ ಕುರಿತು ಗ್ರಾಪಂ ಅಧ್ಯಕ್ಷ ಪ್ರತಿಭಟನಾಕಾರರಿಗೆ ಸಮರ್ಪಕ ಉದ್ಯೋಗ ಮತ್ತು ಸಕಾಲಿಕ ಕೂಲಿ ಹಣ ನೀಡುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇವೆ. ನಿಮಗೆ ಇವತ್ತು ಕೂಲಿ ಇಲ್ಲ ಎಂದು ಯಾರೂ ತಪ್ಪು ಮಾಹಿತಿ ನೀಡಿದ್ದಾರೆ. ಯಾರೂ ಗೊಂದಲಕ್ಕೊಳಗಾಗಬಾರದು. ಕ್ರಿಯಾಯೋಜನೆಯಂತೆ ಮಂಜೂರಾದ ಅನುದಾನ ಮುಗಿಯುವರೆಗೂ ಕೆಲಸ ನೀಡುವ ಭರವಸೆ ನೀಡಿದರು.

ಗ್ರಾಪಂ ಸದಸ್ಯರಾದ ಸಿದ್ದು ಹವಳದ, ಸುರೇಶ ತೋಟದ, ಮುಖಂಡರಾದ ವೈ.ಸಿ. ರೊಳ್ಳಿ, ನಿಂಗಪ್ಪ ಪ್ಯಾಟಿ, ಕೂಲಿಕಾರರಾದ ಬಸವರಾಜ ಹರ್ಲಾಪುರ, ರೇಣಮ್ಮ ಅಳ್ಳಳ್ಳಿ, ಲಕ್ಷ್ಮವ್ವ ಮುಳಗುಂದ, ನಿರ್ಮಲವ್ವ ರೊಳ್ಳಿ, ನಾಗನಗೌಡ ಪಾಟೀಲ, ಕಲ್ಲಪ್ಪ ಗಂಗಣ್ಣವರ, ಗಂಗವ್ವ ಮೆಳ್ಳಿ, ನಂದಾ ಮಾಗಡಿ, ಶಿಲ್ಪಾ ಹಡಪದ, ಗಿರಿಜವ್ವ ಕುಂಬಾರ, ಹಾಲಮ್ಮ ಇಟಗಿ, ಲಕ್ಷ್ಮವ್ವ ಶಿರಹಟ್ಟಿ, ವಿಜಯಲಕ್ಷಿ ್ಮೕ ಹಡಪದ, ಪಾರವ್ವ ಚಕ್ರಸಾಲಿ ಸೇರಿ ಅನೇಕರಿದ್ದರು.

ಟಾಪ್ ನ್ಯೂಸ್

1-ewewqe

IPL; ಕೆಕೆಆರ್‌ ನೀಡಿದ 262 ರನ್ ಗುರಿ ತಲುಪಿ ದಾಖಲೆ ಬರೆದ ಪಂಜಾಬ್

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-ewewqe

IPL; ಕೆಕೆಆರ್‌ ನೀಡಿದ 262 ರನ್ ಗುರಿ ತಲುಪಿ ದಾಖಲೆ ಬರೆದ ಪಂಜಾಬ್

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.